ಬೆಳಗಾವಿ: ಜಿಲ್ಲೆಯಲ್ಲಿ ಹೊಸದಾಗಿ 276 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಡಳಿತ ಶನಿವಾರ ತಿಳಿಸಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮೂವರು ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. 536 ಮಂದಿ ಗುಣಮುಖರಾಗಿದ್ದು, ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.
Read More »ಕೊರೋನಾ ಆತಂಕ: ಹಳ್ಳಿಗಳು, ಸಣ್ಣ ಪಟ್ಟಣಗಳಲ್ಲಿ ಮಿಂಚಿನ ವೇಗದಲ್ಲಿ ಹರಡುತ್ತಿದೆ ಸೋಂಕು!
ಬೆಂಗಳೂರು: ಕೋವಿಡ್ -19 ರ ಪಟ್ಟಿಯಲ್ಲಿ ಕರ್ನಾಟಕವು ಮೂರು ಲಕ್ಷ ಗಡಿ ದಾಟುತ್ತಿದ್ದಂತೆ – ತಿಂಗಳಾರಂಭದಲ್ಲಿ 1.29 ಲಕ್ಷ ಸಕಾರಾತ್ಮಕ ಪ್ರಕರಣಗಳಿಂದ ಭಾರಿ ಜಿಗಿತ ಕಂಡಿದೆ. ಸಣ್ಣ ಪಟ್ಟಣಗಳು ಮತ್ತು ಹಳ್ಳಿಗಳಲ್ಲಿ ಈ ವೈರಸ್ ವೇಗವಾಗಿ ಹರಡುತ್ತಿದೆ. ಶನಿವಾರ, ರಾಜ್ಯವು 8,324 ಹೊಸ ಪ್ರಕರಣಗಳನ್ನು ವರದಿ ಮಾಡಿದೆ, ಇದುವರೆಗೆ ರಾಜ್ಯದಲ್ಲಿ 32,7076 ಪ್ರಕರಣಗಳು ವರದಿಯಾಗಿದೆ. ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಿಸಿದ ನಂತರ ಜನ ಮುಕ್ತ ಸಂಚಾರ, ನಗರಗಳಿಗೆ ಮರಳುವಿಕೆಮತ್ತು ಪರೀಕ್ಷೆಗಳ ಸಂಖ್ಯೆಯಲ್ಲಿನ …
Read More »ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಬೆನ್ನಾಳಿ ಗ್ರಾಮದ ವಿಶ್ವಕರ್ಮ ಸಮುದಾಯದ 10 ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು.
ಬೆಳಗಾವಿ: ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಬೆನ್ನಾಳಿ ಗ್ರಾಮದ ವಿಶ್ವಕರ್ಮ ಸಮುದಾಯದ 10 ಕ್ಕೂ ಹೆಚ್ಚು ಬಿಜೆಪಿ ಮುಖಂಡರು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಸೇರ್ಪಡೆಯಾದರು. ಬೆನ್ನಾಳಿ ಗ್ರಾಮದ ಮೌನೇಶ್ವರ ನಗರದಲ್ಲಿ ಶಾಸಕ ಸತೀಶ ಜಾರಕಿಹೊಳಿ ಬಿಜೆಪಿ ಮುಖಂಡರನ್ನು ಪಕ್ಷಕ್ಕೆ ಬರ ಮಾಡಿಕೊಂಡು, ಹೂವಿನ ಹಾರ ಹಾಕಿ ಸನ್ಮಾನಿಸಿದರು. ಬಳಿಕ ಮಾತನಾಡಿದ ಶಾಸಕ ಸತೀಶ, 10 ವರ್ಷಗಳಿಂದ ಯಮಕನಮರಡಿ ಕ್ಷೇತ್ರದಲ್ಲಿ ಶಿಕ್ಷಣ ಸೇರಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ …
Read More »ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಲ ಕ್ರಮ: ರಮೇಶ್ ಜಾರಕಿಹೊಳಿ
ಬೆಳಗಾವಿ: ಬೆಳಗಾವಿಯ ಪೀರನವಾಡಿಯಲ್ಲಿ ಸ್ಥಾಪಿಸಲಾಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಕುರಿತು ಗೆಜೆಟ್ ನೋಟಿಫಿಕೇಶನ್ ಹೊರಡಿಸಲು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಜಲಸಂಪನ್ಮೂಲ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ (Ramesh jarakiholi) ಹೇಳಿದರು. ಬೆಳಗಾವಿ ಸಮೀಪದ ಪೀರನವಾಡಿಯಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಸಂಗೊಳ್ಳಿ ರಾಯಣ್ಣ ಪ್ರತಿಮೆ (Sangolli Rayanna statue) ವಿವಾದ ನಿನ್ನೆಯೇ ಸುಖಾಂತ್ಯವಾಗಿರುವುದು ಒಳ್ಳೆಯ ಬೆಳವಣಿಗೆ. ಸಂಗೊಳ್ಳಿ ರಾಯಣ್ಣ ಮತ್ತು ಛತ್ರಪತಿ ಶಿವಾಜಿ ಇಬ್ಬರೂ ದೇಶದ …
Read More »ಕರುಣಾಜನಕ ಕತೆ.. ಕೊರೊನಾ Bad Timeನಲ್ಲಿ ಮಾರಾಟವಾಗಿದ್ದ ಮಗು ತಾಯಿ ಮಡಿಲಿಗೆ!
ಮನೆ ಬಾಡಿಗೆ ಕಟ್ಟಲು ಸಹ ಹಣವಿಲ್ಲದೆ 3 ವರ್ಷದ ಹೆಣ್ಣು ಮಗುವನ್ನ 11,000 ರುಪಾಯಿಗೆ ಷರತ್ತುಬದ್ದ ಮಾರಾಟ ಮಾಡಲಾಗಿತ್ತು. ಷರತ್ತಿನ ಪ್ರಕಾರ ಮಗುವನ್ನ ತಾಯಿಗೆ ನೋಡಲು ಬಿಡದಿದ್ದಕ್ಕೆ ಠಾಣೆ ಮೆಟ್ಟಿಲೇರಿದ ನೊಂದ ಮಾತೃ ಹೃದಯ.. ಮುಂದೆ ಓದಿ. ನೆಲಮಂಗಲ: ಕೊರೋನಾ ಎಂಬ ಮಹಾಮಾರಿ ಜನರ ಆರ್ಥಿಕ ಪರಿಸ್ಥಿತಿಯನ್ನ ನೆಲ ಕಚ್ಚಿಸಿದ್ದು, ಲಕ್ಷಾಂತರ ಜನ ಬೆಂಗಳೂರಿನಲ್ಲಿ ಮನೆ ಬಾಡಿಗೆ ಸಹ ಕಟ್ಟಲಾಗದೆ ಬೆಂಗಳೂರು ತೊರೆದು ಹಳ್ಳಿಗಳ್ಳತ್ತ ಗಂಟು ಮೂಟೆ ಕಟ್ಟಿಕೊಂಡು ಹೊರಟೇ …
Read More »ಪಠ್ಯದಲ್ಲಿಲ್ಲದ ಪ್ರಶ್ನೆ ಇದ್ದರೆ ಕೃಪಾಂಕ; ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಡಿಸಿಎಂ ಆಭಯ
ಬೆಂಗಳೂರು: ಎಂಜಿನಿಯರಿಂಗ್ ಪರೀಕ್ಷೆಯಲ್ಲಿ ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾದ ವಿಷಯ ಸರಕಾರದ ಗಮನಕ್ಕೆ ಬಂದಿದ್ದು, ಈ ಬಗ್ಗೆ ವಿದ್ಯಾರ್ಥಿಗಳಿಗೆ ಹಿತಕ್ಕೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು. ಬೆಂಗಳೂರಿನಲ್ಲಿ ಶುಕ್ರವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಿಷಯಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಉಪ ಕುಲಪತಿ ಪ್ರೊ. ಕರಿಸಿದ್ದಪ್ಪ ಅವರೊಂದಿಗೆ …
Read More »ನೂತನ ಶಿಕ್ಷಣ ನೀತಿ ಜಾರಿ; ರಾಜ್ಯಪಾಲರ ಜತೆ ಡಿಸಿಎಂ ಮಹತ್ವದ ಚರ್ಚೆ
ಬೆಂಗಳೂರು: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದಲ್ಲಿ ಜಾರಿಗೆ ತರುವ ನಿಟ್ಟಿನಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ, ರಾಜ್ಯಪಾಲ ವಜೂಭಾಯಿ ವಾಲ ಅವರ ಜತೆ ಮಹತ್ವದ ಮಾತುಕತೆ ನಡೆಸಿದರು. ಶುಕ್ರವಾರ ಬೆಂಗಳೂರಿನಲ್ಲಿ ರಾಜಭವನಕ್ಕೆ ಭೇಟಿ ನೀಡಿದ ಡಿಸಿಎಂ, ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ಈವರೆಗೆ ಸರಕಾರ ಕೈಗೊಂಡಿರುವ ಕ್ರಮಗಳು, ಕಾರ್ಯಪಡೆ ರಚನೆ, ಆ ಕಾರ್ಯಪಡೆ ಜತೆ ನಡೆಸಿರುವ ಸಭೆಗಳು, ವಿಚಾರ ವಿನಿಮಯ ಇತ್ಯಾದಿ …
Read More »ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಪ್ರಕರಣ ಸೌಹಾರ್ದತೆಯಿಂದ ಇತ್ಯರ್ಥವಾಗಿದೆ.
ಪೀರನವಾಡಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಪ್ರಕರಣ ಸೌಹಾರ್ದತೆಯಿಂದ ಇತ್ಯರ್ಥವಾಗಿದೆ. ಇಬ್ಬರು ಮಹಾನ್ ನಾಯಕರಿಗೆ ಅಗೌರವ ಆಗದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ನಿನ್ನೆಯ ಮೂರ್ತಿ ಪ್ರತಿಷ್ಠಾಪನೆ ಹಾಗೂ ಲಾಠಿ ಚಾರ್ಜ್ ಕುರಿತು ದಾಖಲಾಗಿರುವ ಪ್ರಕರಣಗಳನ್ನ ವಾಪಸ್ ಪಡೆಯುವ ಕುರಿತು ಸಿಎಂ ಜತೆಗೆ ಚರ್ಚಿಸಿ ತೀರ್ಮಾನ ಮಾಡಲಾಗುವುದು ಎಂದ್ರು. ಕನ್ನಡ ಪರ ಹೋರಾಟಗಾರರ ಮೇಲೆ ಕೇಸ್ ವಿಚಾರ ಹಿಂಪಡೆಯಬೇಕೆಂಬ ಒತ್ತಡಗಳ …
Read More »ಪರೀಕ್ಷೆ ನಡೆಸದೆ ಪದವಿ ಇಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ಗಳ ಅಂತಿಮ ಸೆಮಿಸ್ಟರ್ ಪರೀಕ್ಷೆ ನಡೆಸದೆ, ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಮತ್ತು ವಿಶ್ವವಿದ್ಯಾಲಯಗಳಿಗೆ ಇಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಸೆಪ್ಟೆಂಬರ್ 30ರ ಒಳಗೆ ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ಗಳ ಅಂತಿಮ ಪರೀಕ್ಷೆಗಳನ್ನು ನಡೆಸಿ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಜುಲೈ 6ರಂದು ಹೊರಡಿಸಿದ್ದ ಮಾರ್ಗಸೂಚಿಯನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಆದರೆ, …
Read More »ಬೆಂಗಳೂರಿನಲ್ಲಿ ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ಪ್ರದರ್ಶನ
ನವದೆಹಲಿ: ಫೆಬ್ರವರಿ 3ರಿಂದ ಬೆಂಗಳೂರಿನಲ್ಲಿ ಏರೋ ಇಂಡಿಯಾ ಪ್ರದರ್ಶನ ನಡೆಯಲಿದೆ. ಏಷ್ಯಾದ ಅತಿದೊಡ್ಡ ಏರೋ ಸ್ಪೇಸ್ ಪ್ರದರ್ಶನವಾಗಿರುವ ಏರೋ ಇಂಡಿಯಾವನ್ನು ಬೆಂಗಳೂರಿನಲ್ಲಿ ನಡೆಸಲು ರಕ್ಷಣಾ ಸಚಿವಾಲಯ ತೀರ್ಮಾನ ಕೈಗೊಂಡಿದೆ. 2021ರ ಫೆಬ್ರವರಿ 3 ರಿಂದ 5 ರವರೆಗೆ ಏರೋ ಇಂಡಿಯಾ ಪ್ರದರ್ಶನ ನಡೆಯಲಿದ್ದು ಫೆಬ್ರವರಿ 6, 7 ರಂದು ಸಾರ್ವಜನಿಕರಿಗೆ ಪ್ರವೇಶ ನೀಡಲಾಗುವುದು. ದೆಹಲಿಯಲ್ಲಿ ಕೇಂದ್ರ ರಕ್ಷಣಾ ಖಾತೆ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ …
Read More »
Laxmi News 24×7