ಬೆಂಗಳೂರು : ರಾಜ್ಯದಲ್ಲಿ ಮಳೆರಾಯ ತನ್ನ ಅಟ್ಟಹಾಸ ಮುಂದುವರೆಸಿದ್ದಾನೆ. ಹಲವೆಡೆ ಮಳೆರಾಯನ ಅವಾಂತರಕ್ಕೆ ಜನರು ಕಂಗಾಲಾಗಿದ್ದಾರೆ. ಅಲ್ಲದೇ, ರಾಜ್ಯದಲ್ಲಿ ವರುಣನ ಅಬ್ಬರ ಇನ್ನೂ ಮುಂದುವರೆಯಲಿದೆ. ಹೀಗಾಗಿ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದ್ದು ಭಾರಿ ಮಳೆಯಾಗಲಿದೆ. ಹವಾಮಾನ ಇಲಾಖೆಯು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಇಂದು ಕೂಡ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ …
Read More »ಬೆಳಗಾವಿ ಜಿಲ್ಲೆಗೆ ಘಟಪ್ರಭಾ ಜಲಕಂಟಕ..!
ಬೆಳಗಾವಿ: ಘಟಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಕಳೆದ ವರ್ಷ ಭೀಕರ ಪ್ರಳಯಕ್ಕೆ ತತ್ತರಿಸಿದ್ದ ಗೋಕಾಕ್ ನಗರ ಈ ವರ್ಷವೂ ಪ್ರವಾಹ ಪರಿಸ್ಥಿತಿಯನ್ನ ಅನುಭವಿಸುತ್ತಿದೆ. ಬೆಳಗಾವಿ ಜಿಲ್ಲೆಯ ನಗರಕ್ಕೆ ಘಟಪ್ರಭಾ ಕಂಟಕ ಎದುರಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಗೋಕಾಕ್ನ ಮಹಾಲಿಂಗೇಶ್ವರ ನಗರಕ್ಕೆ ನೀರು ನುಗ್ಗಿದ್ದು, 3 ಕಾಲೋನಿಗಳು ಸಂಪೂರ್ಣ ಜಲಾವೃತವಾಗಿವೆ. ಮನೆಗಳು, ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ ಹಿನ್ನೆಲೆ ಸ್ಥಳಾಂತರಕ್ಕೆ ಜನ ಪರಾಡುತ್ತಿರುವ ಪರಸ್ಥಿತಿ ಎದುರಾಗಿದೆ. …
Read More »ದೇಶದಲ್ಲಿ 27 ಲಕ್ಷ ಗಡಿದಾಟಿದ ಕೋವಿಡ್ 19 ಸೋಂಕಿತರ ಸಂಖ್ಯೆ
ನವದೆಹಲಿ: ದೇಶದಲ್ಲಿ ಕೋವಿಡ್ 19 ಸೋಂಕಿತ ಸಂಖ್ಯೆ ದಿನ ದಿನೇ ಹೆಚ್ಚಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 55,079 ಹೊಸ ಕೇಸ್ಗಳು ಬೆಳಕಿಗೆ ಬಂದಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 27,02,743ಕ್ಕೆ ಏರಿಕೆಯಾಗಿದ್ರೆ, 876 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಇಲ್ಲಿಯವರೆಗೆ ಬಲಿಯಾದವರ ಸಂಖ್ಯೆ 51,797ಕ್ಕೆ ಬಂದು ನಿಂತಿದೆ. 27,02,743 ಮಂದಿ ಸೋಂಕಿತರ ಪೈಕಿ ಒಟ್ಟು ಗುಣಮುಖರಾದವರ ಸಂಖ್ಯೆ 19,77,780ಕ್ಕೆ ತಲುಪಿದೆ. ಪ್ರಸ್ತುತ ದೇಶದಲ್ಲಿನ್ನೂ 6,73,166 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಆರೋಗ್ಯ …
Read More »ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ ಕೋವಿಡ್ ಸೋಂಕಿಗೆ 3,030 ಮಂದಿ ಬಲಿ
ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ತಿಂಗಳಲ್ಲಿ ಸರಿಸುಮಾರು ಮೂರು ಸಾವಿರದಷ್ಟು ಕೋವಿಡ್ ವೈರಸ್ ಸೋಂಕಿತರ ಸಾವಾಗಿದೆ. ಈ ಮೂಲಕ ಒಟ್ಟಾರೆ ಸೋಂಕಿಗೆ ಬಲಿಯಾದವರ ಸಂಖ್ಯೆ ನಾಲ್ಕು ಸಾವಿರ ಗಡಿದಾಟಿದೆ. ಸೋಮವಾರ 115 ಮಂದಿ ಸೋಂಕು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ವರದಿಯಾಗಿದ್ದು, ಒಟ್ಟಾರೆ ಸಂಖ್ಯೆ 4062ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದಷ್ಟೆ (ಜುಲೈ 16ಕ್ಕೆ) ಸೋಂಕಿತರ ಸಾವಿನ ಸಂಖ್ಯೆ ಒಂದು ಸಾವಿರ ಗಡಿದಾಟಿತ್ತು. ಆ ನಂತರ ನಿತ್ಯ ಸರಾಸರಿ ನೂರು ಸೋಂಕಿತರು ಸಾವು …
Read More »ಹಿಡಕಲ್ ಜಲಾಶಯಿಂದ 40 ಸಾವಿರ ಕ್ಯೂಸೆಕ್ಸ ನೀರು ಘಟಪ್ರಭಾ ನದಿಗೆ ಬಿಡುಗಡೆ- ಗ್ರಾಮಸ್ಥರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗೋಕಾಕ ತಹಶಿಲ್ದಾರ ಸೂಚನೆ.
ಬೆಳಗಾವಿ: ಪಶ್ಚಿಮ ಗಟ್ಟದಲ್ಲಿ ಧಾರಾಕಾರು ಮಳೆಯಾಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳ ಹರಿಯುವ ಹೆಚ್ಚಾಗಿದ್ದು ಜಲಾಶಯದಿಂದ ಇಂದು 40000 ಕ್ಯೂಸೆಕ್ಸ ನೀರು ಹೊರ ಬಿಡಲಾಗಿದೆ . ಹಿಡಕಲ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು ಒಳಹರಿಯುವ 18052 ಕ್ಯೂಸೆಕ್ಸ ಇದ್ದು ಈ ಒಳ ಹರಿವಿನ ಪ್ರಮಾಣವನ್ನು ದೃಷ್ಟಿಯಲ್ಲಿಟ್ಟುಕೊಂಡು ಜಲಾಶಯದ ಕ್ರಷ್ಟ ಗೇಟುಗಳು ಮೂಲಕ ಘಟಪ್ರಭಾ ನದಿಗೆ ನೀರು ಹರಿದು ಬಿಡಲಾಗಿದೆ. ಬಾನುವಾರ ಸಂಜೆ 5:30 ಕ್ಕೆ 40 ಸಾವಿರ ಕ್ಯೂಸೆಕ್ಸ ನೀರು ನದಿಗೆ …
Read More »ಲಡಾಖ್ ಹುತಾತ್ಮ ಕರ್ನಲ್ ಸಂತೋಷ್ ಬಾಬು ಪತ್ನಿಗೆ ಡೆಪ್ಯುಟಿ ಕಲೆಕ್ಟರ್ ಹುದ್ದೆ
ಹೈದರಾಬಾದ್: ಭಾರತ-ಚೀನಾ ಗಡಿಯಲ್ಲಿ ಇತ್ತೀಚೆಗೆ ಸಂಭವಿಸಿದ ಹಿಂಸಾತ್ಮಕ ಸಂಘರ್ಷದಲ್ಲಿ ಮೃತಪಟ್ಟ ಕರ್ನಲ್ ಸಂತೋಷ್ ಬಾಬು ಅವರ ಪತ್ನಿ ತೆಲಂಗಾಣ ಸರ್ಕಾರದ ಡೆಪ್ಯುಟಿ ಕಲೆಕ್ಟರ್ ಆಗಿ ಅಧಿಕೃತವಾಗಿ ವರದಿ ಮಾಡಿಕೊಂಡಿದ್ದಾರೆ. ಸಂತೋಷ್ ಬಾಬು ಪತ್ನಿ ಸಂತೋಷಿ ಅವರನ್ನು ಡೆಪ್ಯುಟಿ ಕಲೆಕ್ಟರ್ ಹುದ್ದೆಗೆ ನೇಮಕ ಮಾಡಲಾಗಿದೆ. ಸಂತೋಷಿ ಅವರು ಹೈದರಾಬಾದ್ನ ಬಿಆರ್ಕೆಆರ್ ಭವನದಲ್ಲಿ ಮುಖ್ಯ ಕಾರ್ಯದರ್ಶಿ ಸೋಮೇಶ್ ಕುಮಾರ್ ಅವರಿಗೆ ವರದಿ ಪತ್ರವನ್ನು ನೀಡಿದ್ದಾರೆ ಎಂದು ಅಧಿಕೃತ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ. ಮುಖ್ಯಮಂತ್ರಿ ಕೆ. …
Read More »ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಡಿ.ಜೆ.ಹಳ್ಳಿ,ಕೆ.ಜಿ.ಹಳ್ಳಿಯಲ್ಲಿ ದುಷ್ಕೃತ್ಯ ನಡೆಸಿದ್ದಾರೆ
ಹಾವೇರಿ, : ಅಯೋಧ್ಯೆಯಲ್ಲಿ ರಾಮಮಂದಿರ ಶಿಲಾನ್ಯಾಸ ಸಹಿಸದ ದುಷ್ಕರ್ಮಿಗಳು ಡಿ.ಜೆ.ಹಳ್ಳಿ,ಕೆ.ಜಿ.ಹಳ್ಳಿಯಲ್ಲಿ ದುಷ್ಕೃತ್ಯ ನಡೆಸಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೇಕೆರೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಸಿ ಪಾಟೀಲ್,ಪ್ರಧಾನಿ ಮೋದಿ ಹಾಗೂ ಕರ್ನಾಟಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲೆಂದು ಪೂರ್ವನಿಯೋಜಿತವಾಗಿಯೇ ಈ ದುಷ್ಕೃತ್ಯವೆಸಗಲಾಗಿದೆ ಎಂದು ಆರೋಪಿಸಿದರು. ಬೆಂಗಳೂರು ಗಲಭೆಗೆ ನವೀನ್ ಪೋಸ್ಟ್ ನೆಪಮಾತ್ರ; ಹಿಂದೆ ಇತ್ತು ದೊಡ್ಡ ಸ್ಕೆಚ್..! ಗಲಭೆಯಲ್ಲಿ ಬಂಧಿಸಿದವರನ್ನು ಕಾಂಗ್ರೆಸ್ನವರು ಅಮಾಯಕರು ಎನ್ನುತ್ತಿದ್ದಾರೆಯೋ ಅವರು ನಿಜವಾಗಿಯೂ ಅಮಾಯಕರಲ್ಲ.ರಾಜಕೀಯ ಪಿತೂರಿ ಕಾರಣಕ್ಕಾಗಿಯೇ …
Read More »ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ: ಕೆನಡಾದಲ್ಲಿ ತಿರಂಗ ಕಾರು ರ್ಯಾಲಿ!
ಕೆನಡ: 74ನೇ ಸ್ವಾತಂತ್ರ್ಯ ದಿನಾಚರಣೆಗೆ ಭಾರತದಲ್ಲಿ ಮಾರ್ಗಸೂಚಿ ಪ್ರಕಟಿಸಲಾಗಿತ್ತು. ಹೀಗಾಗಿ ಅದ್ಧೂರಿ ಸ್ವಾತಂತ್ರ್ಯ ದಿನಾಚರೆ ಸಾಧ್ಯವಾಗಿಲ್ಲ. ಕೊರೋನಾ ವೈರಸ್ ಕಾರಣ ನಿಯಮ ಮೀರದಂತೆ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಇನ್ನು ವಿದೇಶಗಳಲ್ಲೂ ಭಾರತದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗಿದೆ. ಅದರಲ್ಲೂ ಕೆನಡಾದಲ್ಲಿ ತಿರಂಗ ಕಾರು ರ್ಯಾಲಿ ಮೂಲಕ ಆಚರಿಸಲಾಗಿದೆ. ಫ್ರೀಡಂ ಡ್ರೈವ್; ಸ್ವಾತಂತ್ರ್ಯ ದಿನಾಚರಣೆಗೆ ಹ್ಯುಂಡೈ ವಿಶೇಷ ಆಫರ್! ಕೆನಡದಲ್ಲಿನ ಭಾರತೀಯರು ಭಾರತದ ಸ್ವಾತಂತ್ರ್ಯ ದಿನಾಚರಣೆಗೆ ತಿರಂಗ ಕಾರು ರ್ಯಾಲಿ ಆಯೋಜಿಸಿದ್ದರು. …
Read More »1 ಸಾವಿರ ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.
ಬೆಂಗಳೂರು: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ 1 ಸಾವಿರ ಕೋಟಿ ರೂಪಾಯಿಗಳು ಬಿಡುಗಡೆಯಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ. ಈ ಯೋಜನೆಯಿಂದಾಗಿ 50 ಲಕ್ಷ ರೈತರಿಗೆ ಅನುಕೂಲವಾಗಲಿದ್ದು, ನೇರವಾಗಿ ರೈತರ ಖಾತೆಗೇ ಜಮೆಯಾಗಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಫೇಸ್ಬುಕ್ ಲೈವ್ನಲ್ಲಿ ರಾಜ್ಯದ ರೈತ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಸಚಿವರು, ರೈತ ಬಾಂಧವರು ತಮ್ಮ ಖಾತೆಯನ್ನು ಪರಿಶೀಲಿಸಬೇಕೆಂದು ಮನವಿ ಮಾಡಿದ್ದಾರೆ. 2019-20ನೇ ಸಾಲಿನ ಬೆಳೆವಿಮೆ ಬರುವ ಮಂಗಳವಾರದಿಂದ ರೈತರ ಖಾತೆಗೆ …
Read More »ಮುಸುಕಿನ ಜೋಳ ಬೆಳೆದು ಆರ್ಥಿಕ ಸಂಕಷ್ಟಕೊಳಗಾದ ರೈತರು
ಹಾಸನ : ಕೋವಿಡ್-19ನ ಲಾಕ್ಡೌನ್ ಸಮಸ್ಯೆಯಿಂದ ಮುಸುಕಿನ ಜೋಳ ಬೆಳೆದು ಆರ್ಥಿಕ ಸಂಕಷ್ಟಕೊಳಗಾದ ಪ್ರತಿ ರೈತರಿಗೆ ನೇರವಾಗಿ 5,000 ರು.ಗಳನ್ನು ನೇರ ನಗದು ವರ್ಗಾವಣೆ ಮಾಡುವ ಯೋಜನೆಯಾಗಿದ್ದು, ಹಾಸನ ಜಿಲ್ಲೆಯಲ್ಲಿ ಒಟ್ಟು 48,255 ರೈತರಿಗೆ ನೇರ ನಗದು ವರ್ಗಾವಣೆ ಮಾಡಿರುವುದಾಗಿ ಸಚಿವ ಗೋಪಾಲಯ್ಯ ಹೇಳಿದರು. ಜಿಲ್ಲಾ ಪಂಚಾಯತ್ ವತಿಯಿಂದ ಒಟ್ಟು 22 ಇಲಾಖೆಗಳಿಗೆ ಈಗಾಗಲೇ 112 ಕೋಟಿ ರು. ಬಿಡುಗಡೆಯಾಗಿದ್ದು, 105 ಕೋಟಿ ರು. ವೆಚ್ಚ ಮಾಡಲಾಗಿದೆ. 2019-20ನೇ ಸಾಲಿನಲ್ಲಿ …
Read More »
Laxmi News 24×7