Breaking News

ಅಂತರಾಷ್ಟ್ರೀಯ

ಪ್ರತಿ ವರ್ಷ ಕೊರೊನಾ ಕಾಡುವ ಸಾಧ್ಯತೆ ಇದೆ ಎಂದ ಚೀನಾ ವಿಜ್ಞಾನಿಗಳು……

ಬೀಜಿಂಗ್: ಮಹಾಮಾರಿ ಕೊರೊನಾ ಅಟ್ಟಹಾಸ ಇಲ್ಲಿಗೇ ಮುಗಿಯುವುದಿಲ್ಲ ಪ್ರತಿ ವರ್ಷವೂ ಕಾಡುವ ಸಾಧ್ಯತೆ ಇದೆ ಎಂಬ ಭಯಾನಕ ಅಂಶವನ್ನು ಚೀನಾ ವಿಜ್ಞಾನಿಗಳು ತಿಳಿಸಿದ್ದಾರೆ. ಚೀನಾದ ಬೀಜಿಂಗ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಶೋಧಕರು ಈ ಆಘಾತಕಾರಿ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಕೊರೊನಾ ವೈರಸನ್ನು ಓಡಿಸಿದರೆ ಮುಗಿಯಿತು ಮತ್ತೆ ಬರಲ್ಲ ಎಂದುಕೊಳ್ಳುವಂತಿಲ್ಲ. ವಿಶ್ವವ್ಯಾಪಿ ಇದರ ಬೆಳವಣಿಗೆಯನ್ನು ಗಮನಿಸಿದಾಗ ಕೊರೊನಾ ಪ್ರತಿ ವರ್ಷ ಬರುವ ಸಾಧ್ಯತೆ ಇದ್ದು, ಜ್ವರದ ರೂಪದಲ್ಲಿ ಜನರನ್ನು ಕಾಡಲಿದೆ ಎಂದು ಹೇಳಿದ್ದಾರೆ. ಇದು …

Read More »

ಕೊರೋನಾದಿಂದ ಬಚಾವಾದ ಚೀನಾ, ವಿಶ್ವದಾದ್ಯಂತ ನಿಲ್ಲದ ಮರಣಮೃದಂಗ..!

ವಾಷ್ಟಿಂಗ್ಟನ್/ಬೀಜಿಂಗ್, ಏ.27- ಇಡೀ ವಿಶ್ವಕ್ಕೆ ಕಿಲ್ಲರ್ ಕೊರೊನಾವನ್ನು ಕೊಡುಗೆಯಾಗಿ ನೀಡಿ ಎರಡು ಲಕ್ಷಕ್ಕೂ ಅಧಿಕ ಸಾವಿಗೆ ಕಾರಣವಾದ ಚೀನಾ ಈಗ ಕೋವಿಡ್-19 ವೈರಾಸ್‍ನಿಂದ ಬಚಾವ್ ಆಗಿದೆ. ಆದರೆ ಡೆಡ್ಲಿ ಕೊರೊನಾ ಇಡೀ ಜಗತ್ತಿಗೆ ಕಾಡುತ್ತಿರುವ ಮಹಾಮಾರಿಯಾಗಿ ಪರಿಣಮಿಸಿದೆ. ಕೊರೊನಾ ವೈರಾಣುವಿನ ಉಗಮ ಬಿಂದು ವುಹಾನ್ ನಗರಿ ಸೋಂಕಿನಿಂದ ಸಂಪೂರ್ಣ ಮುಕ್ತವಾಗಿದ್ದು, ಅಲ್ಲಿ ಕಟ್ಟಕಡೆಯ ಸೋಂಕಿನ ಸಂಪೂರ್ಣ ಗುಣಮುಖನಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಆದರೆ ಪ್ರಪಂಚದ 250ಕ್ಕೂ ಹೆಚ್ಚು ದೇಶಗಳು .ಈ ಹೆಮ್ಮಾರಿಯ …

Read More »

ಕಿಮ್ ಜಾಂಗ್-ಉನ್ ಆರೋಗ್ಯ ಗಂಭೀರ – ಉ.ಕೊರಿಯಾಗೆ ಬಂದಿಳಿದ ಚೀನಾ ವೈದ್ಯರು

ಬೀಜಿಂಗ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್-ಉನ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಚಿಕಿತ್ಸೆ ನೀಡಲು ಚೀನಾದ ನುರಿತ ವೈದ್ಯರ ತಂಡ ಉತ್ತರ ಕೊರಿಯಾಗೆ ಬಂದಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ಸುದ್ದಿ ಮಾಡಿವೆ. ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ಅಂತರರಾಷ್ಟ್ರೀಯ ಸಂಪರ್ಕ ವಿಭಾಗದ ಹಿರಿಯ ಸದಸ್ಯರ ನೇತೃತ್ವದಲ್ಲಿ ವೈದ್ಯರ ನಿಯೋಗವು ಬೀಜಿಂಗ್‍ನಿಂದ ಪ್ಯೊಂಗ್ಯಾಂಗ್‍ಗೆ ಗುರುವಾರ ಹೋಗಿದೆ ಎನ್ನಲಾಗಿದೆ. ಕಿಮ್ ಜಾಂಗ್-ಉನ್ ಚೈನ್ ಸ್ಮೋಕರ್ ಆಗಿದ್ದು, ಅವರ ದೇಹದ ತೂಕ ಜಾಸ್ತಿಯಾಗಿದೆ. …

Read More »

ಚೀನಿಯರು ಇದೇನಪ್ಪಾ ಮಾಡಿದ್ರು..?’- ಲಾಕ್‍ಡೌನ್ ಬಗ್ಗೆ ರೋಹಿತ್ ಶರ್ಮಾ ಬೇಸರ

ಮುಂಬೈ: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಆದಾಗಲೇ 2020ರ ಐಪಿಎಲ್ ಆವೃತ್ತಿ ಆರಂಭವಾಗಿ ಅಭಿಮಾನಿಗಳಿಗೆ ಭರಪೂರ ಮನರಂಜನೆ ಲಭಿಸುತ್ತಿತ್ತು. ಆದರೆ ಕೊರೊನಾ ಕಾರಣದಿಂದ ಟೂರ್ನಿ ಮುಂದೂಡಲಾಗಿದ್ದು, ಅಭಿಮಾನಿಗಳು ಸೇರಿದಂತೆ ಹಲವು ಕ್ರಿಕೆಟ್ ಆಟಗಾರರು ಈ ಕುರಿತು ಬೇಸರಗೊಂಡಿದ್ದಾರೆ. ಲಾಕ್‍ಡೌನ್‍ನಿಂದಾಗಿ ಮನೆಯಲ್ಲೇ ಉಳಿದಿರುವ ಹಲವು ಆಟಗಾರು ಸಾಮಾಜಿಕ ಜಾಲತಾಣಗಳ ಮೂಲಕ ಅಭಿಮಾನಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಇತ್ತ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ ಇನ್‍ಸ್ಟಾ ಮೂಲಕ ಅಭಿಮಾನಿಗಳೊಂದಿಗೆ ಸಾಕಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತೀಚೆಗೆ …

Read More »

ಐಪಿಎಲ್‍ಗಾಗಿ ಏಷ್ಯಾಕಪ್ ಮುಂದೂಡಲು ಸಾಧ್ಯವೇ ಇಲ್ಲ: ಪಿಸಿಬಿ

ಇಸ್ಲಾಮಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ಗಾಗಿ ಏಪ್ಯಾಕಪ್ ಮುಂದೂಡಲು ಸಾಧ್ಯವೇ ಇಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿದೆ. ಪಿಸಿಬಿ ಈ ತಿಂಗಳಲ್ಲಿ ಎರಡನೇ ಬಾರಿಗೆ ಏಷ್ಯಾ ಕಪ್ ಮತ್ತು ಐಪಿಎಲ್ ಬಗ್ಗೆ ಹೇಳಿಕೆ ನೀಡಿದೆ. ಏಷ್ಯಾಕಪ್‍ನಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಪಿಸಿಬಿ ಸಿಇಒ ವಾಸಿಮ್ ಖಾನ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೊರೊನೊ ವೈರಸ್ ಬಿಕ್ಕಟ್ಟು ಕಡಿಮೆಯಾದರೆ ಯುಎಇಯಲ್ಲಿ ಏಪ್ಯಾಕಪ್ ಟೂರ್ನಿಯು ಸೆಪ್ಟೆಂಬರ್‍ನಲ್ಲಿ ನಡೆಯಲಿದೆ. ಆದರೆ ಟೂರ್ನಿಯನ್ನು ಐಪಿಎಲ್‍ಗಾಗಿಯೇ ಮುಂದೂಡಲು …

Read More »

ಮರಣಶಯ್ಯೆಯಲ್ಲಿ ಏಷ್ಯಾ ಹಿಟ್ಲರ್, ಡೆತ್ ಡಿಕ್ಟೇಟರ್ ಕಿಮ್ ಸತ್ತರೆ ಮುಂದೇನು..?

ಪಯೋಂಗ್‍ಯಾಂಗ್/ಸಿಯೋಲ್, ಏ.24- ಏಷ್ಯಾದ ಅತ್ಯಂತ ನಿರ್ದಯಿ ಸರ್ವಾಧಿಕಾರಿ ಎಂದೇ ಕುಖ್ಯಾತಿ ಪಡೆದಿರುವ ಉತ್ತರ ಕೊರಿಯಾದ ಸುಪ್ರೀಂ ಲೀಡರ್ ಕಿಮ್ ಜಾಂಗ್ ಯುನ್ ಸಾವಿನ ಸನಿಹದಲ್ಲಿದ್ದು, ಮುಂದೇನು ಎಂಬ ಪ್ರಶ್ನೆ ಅವರ ಪರಮಾಪ್ತ ಬೆಂಬಲಿಗರನ್ನು ಕಾಡುತ್ತಿದೆ. ಕೇವಲ 36 ವರ್ಷದ ಕಿಮ್ ಯಾವುದೋ ಗಂಭೀರ ಅನಾರೋಗ್ಯ ಸಮಸ್ಯೆಯಿಂದ ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿದ್ದು, ಸಾವಿನ ಸನಿಹದಲ್ಲಿದ್ದಾರೆ ಎಂಬ ವರದಿಗಳಿವೆ. ಆದರೆ, ಈವರೆಗೆ ಇದರ ಬಗ್ಗೆ ಯಾವುದೇ ಸುಳಿವು ಲಭಿಸಿಲ್ಲ ಇಡೀ ವಿಶ್ವವನ್ನೇ ಬೆಚ್ಚಿಬೀಳಿಸಿದ್ದ …

Read More »

BREAKING : ಈ ಚಿಕಿತ್ಸೆಯಿಂದ ಕೇವಲ 30 ಸೆಕೆಂಡ್‍ಗಳಲ್ಲಿ ಫಿನಿಶ್ ಆಗಲಿದೆ ಕೊರೋನಾ ವೈರಸ್..!

ವಾಷಿಂಗ್ಟನ್, ಏ.24-ವಿಶ್ವಕ್ಕೇ ಕಂಟಕವಾಗಿರುವ ಕಿಲ್ಲರ್ ಕೊರೊನಾ ನಿಗ್ರಹಕ್ಕಾಗಿ ವಿಶ್ವಾದ್ಯಂತ ಹೊಸ ಹೊಸ ಪ್ರಯೋಗಗಳು ಮುಂದುವರಿದಿರುವಾಗಲೇ ಕೋವಿಡ್-19 ಪ್ರಕರಣ ತಡೆಗಟ್ಟುವಲ್ಲಿ ಸೂರ್ಯನ ಕಿರಣ ಸಹಕಾರಿ ಎಂಬ ಸಂಗತಿ ಬೆಳಕಿಗೆ ಬಂಧಿದೆ. ಸೂರ್ಯರಶ್ಮಿ, ತಾಪಮಾನ ಮತ್ತು ವಾತಾವರಣದ ಆದ್ರ್ರತೆ (ಬೇಸಿಗೆಯಂಥ ವಾತಾವರಣ) ಕೊರೊನಾ ವೈರಸ್ ಹರಡುವಿಕೆಯನ್ನು ಕ್ಷೀಣಿಸಬಲ್ಲದು ಎಂದು ಅಮೆರಿಕದ ಆರೋಗ್ಯ ಇಲಾಖೆಯ ಉನ್ನತಾಧಿಕಾರಿಯೊಬ್ಬರು ಹೇಳಿದ್ದಾರೆ. ಭಾರತದಲ್ಲೀಗ ಬೇಸಿಗೆ ಕಾಲ. ಸೂರ್ಯನ ಬಿಸಿಲು ಪ್ರಖರವಾಗಿರುವುದರಿಂದ ಇದು ಭಾರತೀಯರಿಗೆ ಶುಭ ಸುದ್ದಿಯಾಗಿದೆ. ಸೂರ್ಯನ ಪ್ರಖರ …

Read More »

ಕೊರೊನಾ ವಿರುದ್ಧ 26 ಗಂಟೆ ಹೋರಾಡಿ ಪ್ರಾಣಬಿಟ್ಟ 6 ತಿಂಗಳ ಕಂದಮ್ಮ…

ಚಂಡೀಗಢ: ಮಹಾಮಾರಿ ಕೊರೊನಾ ವಿರುದ್ಧ 26 ಗಂಟೆಗಳ ಹೋರಾಡಿ 6 ತಿಂಗಳ ಕಂದಮ್ಮವೊಂದು ಮೃತಪಟ್ಟ ಮನಕಲಕುವ ಘಟನೆ ಇಂದು ಚಂಡೀಗಢದಲ್ಲಿ ನಡೆದಿದೆ. ಹೃದಯ ರಂಧ್ರದ ಚಿಕಿತ್ಸೆಗಾಗಿ 6 ತಿಂಗಳ ಹೆಣ್ಣು ಮಗುವನ್ನು ಚಂಡೀಗಢದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮಗುವಿಗೆ ಸೋಂಕ ತಗುಲಿರುವುದು ದೃಢಪಡುತ್ತಿದ್ದಂತೆ ಅಂದ್ರೆ ಬುಧವಾರ ಬೆಳಗ್ಗೆ 11 ಗಂಟೆಗೆ ಕೋವಿಡ್-19 ವಾರ್ಡಿಗೆ ದಾಖಲಿಸಲಾಗಿತ್ತು. ರಾತ್ರಿಯಿಂದಲೇ ಮಗುವನ್ನು ವೆಂಟಿಲೇಟರ್ ಮತ್ತು ಗ್ಲೂಕೋಸ್‍ನಲ್ಲಿ ಇಡಲಾಗಿತ್ತು. ಆದರೆ ಸೋಂಕು ತೀವ್ರವಾಗಿ ಏರಿಕೆ …

Read More »

ಕ್ಯಾನ್ಸರ್ ವಿರುದ್ಧ ಡಿಂಕೊ ಸಿಂಗ್ ಹೋರಾಟ- ಬಾಕ್ಸರ್ ಬೆಂಬಲಕ್ಕೆ ನಿಂತ ಸ್ಪೈಸ್ ಜೆಟ್

ಇಂಫಾಲ್: ಪಿತ್ತಜನಕಾಂಗದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಭಾರತೀಯ ಬಾಕ್ಸರ್ ಡಿಂಕೊ ಸಿಂಗ್ ಅವರನ್ನು ಸ್ಪೈಸ್‍ ಜೆಟ್ ಏರ್ ಅಂಬುಲೆಂನ್ಸ್ ಮೂಲಕ ದೆಹಲಿಯ ಆಸ್ಪತ್ರೆಗೆ ಶಿಫ್ಟ್ ಮಾಡಲು ಸಿದ್ಧತೆ ನಡೆದಿದೆ. ಡಿಂಕೊ ಸಿಂಗ್ ಭಾರತದ ಪರ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಮಣಿಪುರದ ರಾಜಧಾನಿ ಇಂಫಾಲ್‍ನಲ್ಲಿ ವಾಸಿಸುತ್ತಿರುವ 41 ವರ್ಷದ ಡಿಂಕೊ ಅವರಿಗೆ ಲಾಕ್‍ಡೌನ್‍ನಿಂದಾಗಿ ವಿಕಿರಣ ಚಿಕಿತ್ಸೆ ಸಿಗುತ್ತಿಲ್ಲ. ಚಿಕಿತ್ಸೆಗಾಗಿ ಅವರನ್ನು ಸ್ಪೈಸ್ ಜೆಟ್‍ನ ಏರ್ ಅಂಬುಲೆನ್ಸ್ ಮೂಲಕ ಇಂಫಾಲ್‍ನಿಂದ …

Read More »

ಮೊಬೈಲಿನಿಂದ ಹರಡುತ್ತೆ ಕೊರೊನಾ – ವೈದ್ಯಕೀಯ ಸಿಬ್ಬಂದಿಗೆ ಫೋನ್ ಬಳಕೆಗೆ ನಿಷೇಧ

ಕೋಲ್ಕತ್ತಾ: ಕೊರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟಲು ರಾಜ್ಯಗಳು ಅನೇಕ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿವೆ. ಈ ನಡುವೆ ಪಶ್ಚಿಮ ಬಂಗಾಳ ಸರ್ಕಾರ ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ವೈದ್ಯಕೀಯ ಸಿಬ್ಬಂದಿ, ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಆಸ್ಪತ್ರೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಿದೆ. ಕೊರೊನಾ ವೈರಸ್ ತಡೆಯುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‍ಒ)ಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಕೊರೊನಾ ವೈರಸ್ ಮೊಬೈಲ್ …

Read More »