Breaking News

ಅಂತರಾಷ್ಟ್ರೀಯ

ನಮ್ಮ ಆಸ್ಪತ್ರೆಗೆ ಕೊರೊನಾ ಶಂಕಿತನೊಬ್ಬ ಬಂದಿದ್ದ ಎಂದು ಹೇಳಿ ಕೆಲಸ ಕಳೆದು ಕೊಂಡ ವೈದ್ಯೆ

ತ್ರಿಶೂರ್: ನಮ್ಮ ಆಸ್ಪತ್ರೆಗೆ ಕೊರೊನಾ ಶಂಕಿತನೊಬ್ಬ ಬಂದಿದ್ದ ಎಂದು ಹೇಳಿದ್ದ ವೈದ್ಯೆಯನ್ನು ಆಸ್ಪತ್ರೆಯ ಆಡಳಿತ ಮಂಡಳಿ ಕೆಲಸದಿಂದ ವಜಾ ಮಾಡಿರುವ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯ ತಳಿಕುಳಂ ನಲ್ಲಿ ನಡೆದಿದೆ. ಡಾ.ಶಿನು ಶ್ಯಾಮಲನ್ ಕೆಲಸ ಕಳೆದುಕೊಂಡಿರುವ ವೈದ್ಯೆಯಾಗಿದ್ದು, ಈಕೆ ಕೊರೊನಾ ವೈರಸ್ ಇದೆ ಎಂದು ಶಂಕಿತ ವ್ಯಕ್ತಿಯೋರ್ವ ನಮ್ಮ ಆಸ್ಪತ್ರೆಗೆ ಬಂದಿದ್ದ. ಬಳಿಕ ಆ ವ್ಯಕ್ತಿ ಕತಾರ್ ಗೆ ಹೋಗಿದ್ದ ಎಂದು ಶಿನು ಶ್ಯಾಮಲನ್ ತಮ್ಮ ಫೇಸ್‍ಬುಕ್ ನಲ್ಲಿ ಬರೆದುಕೊಂಡಿದೆ, …

Read More »

ಫೋನ್​ ಮಾಡಿದ ತಕ್ಷಣ ಕೆಮ್ಮುವ ಧ್ವನಿ ಕೇಳ್ತಿದ್ದೀರಾ..? ಅದು ಕೊರೊನಾ ಕಾಲರ್​ಟ್ಯೂನ್..!

ನಿನ್ನೆ ಮೊನ್ನೆಯಿಂದ ಯಾರಿಗಾದ್ರೂ ಫೋನ್​ ಮಾಡಿದ ತಕ್ಷಣ ಆ ಕಡೆಯಿಂದ ಕೆಮ್ಮುವ ಧ್ವನಿಯನ್ನ ಹಲವರು ಕೇಳಿರಬಹುದು. ಇದನ್ನ ಕೇಳಿದ ಅನೇಕರು ಅರೇ ಇದೇನಪ್ಪಾ ಇನ್ನೂ ರಿಂಗ್​ ಆಗಿಲ್ಲ ಆಗ್ಲೇ ಯಾರೋ ಕೆಮ್ಮುತ್ತಿದ್ದಾರಲ್ಲ ಅಂತಲೂ ಅಂದುಕೊಂಡಿರಬಹುದು.? ಇದಕೆಲ್ಲಾ ಕಾರಣ ಬೇರೇನೂ ಅಲ್ಲ. ಸದ್ಯ, ವಿಶ್ವಕ್ಕೇ ತಲೆನೋವಾಗಿ ಪರಿಣಮಿಸಿರೋ ಕೊರೊನಾವೈರಸ್ ಹೌದು. ಕೊರೊನಾವೈರಸ್​ ಬಗ್ಗೆ ಜಾಗೃತಿ ಮೂಡಿಸಲು ಕೇಂದ್ರ ದೂರ ಸಂಪರ್ಕ ಇಲಾಖೆ ಈ ರೀತಿಯ ವಿಭಿನ್ನ ಪ್ರಯತ್ನ ಮಾಡಿದೆ. ಮೊಬೈಲ್​ ಬಳಕೆದಾರರ …

Read More »

ಬ್ರೇಕಿಂಗ್‌: ಭಾರತದಲ್ಲಿ ಕೊರೊನಾವೈರಸ್‌ಗೆ ಮೊದಲ ಬಲಿ!?

ನವದೆಹಲಿ: ಕೊರೊನಾವೈರಸ್‌ನಿಂದ ಶಂಕಿತ ಸಾವು ವರದಿಯಾಗಿದೆ, ಇದು ವೈರಸ್ ಹರಡಿದ ನಂತರದ ಭಾರತದ ಮೊದಲ ಸಾವಿನ ಪ್ರಕರಣವಾಗಿರಬಹುದು ಎನ್ನಲಾಗುತ್ತಿದೆ. ಭಾನುವಾರ ಬೆಳಿಗ್ಗೆ, ಲಡಾಖ್‌ನ ಸೋನಮ್ ನಾರ್ಬು ಆಸ್ಪತ್ರೆಗೆ ದಾಖಲಾದ ರೋಗಿಯೊಬ್ಬರು ಅನುಮಾನಾಸ್ಪದ ಪರಿಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ,ಹೀಗಾಗಿ ಅವರು ಕರೋನವೈರಸ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ. ಲೇಹ್‌ನ ಯೌಕುಮಾ ಚೋಚುಕ್ ಗ್ರಾಮದವರಾಗಿದ್ದ 73 ವರ್ಷದ ಅಲಿ ಮೊಹಮ್ಮದ್ ಅವರು ತೀವ್ರ ಜ್ವರದಿಂದ ಮಾರ್ಚ್ 7 ರಂದು ಆಸ್ಪತ್ರೆಗೆ ದಾಖಲಾಗಿದ್ದರು, ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ ಎನ್ನಲಾಗಿದೆ. …

Read More »

ಐಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರೆಗೆ ದಾಖಲೆಯಾಗಿ ಶಿಶುವಿಗೆ ಜನ್ಮ ನೀಡಿದ್ದಾರೆ.

ರಾಂಚಿ,ಮಾ.2- ರಾಜಕಾರಣಿಗಳು, ದೊಡ್ಡ ದೊಡ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರೂ ಸಹ ಸರ್ಕಾರಿ ಆಸ್ಪತ್ರೆಗಳೆಂದರೆ ಮೂಗು ಮುರಿಯುವಂತಹ ಸಂದರ್ಭದಲ್ಲಿ ಇಲ್ಲಿನ ಐಎಎಸ್ ಅಧಿಕಾರಿಯೊಬ್ಬರು ಸರ್ಕಾರಿ ಆಸ್ಪತ್ರೆಗೆ ದಾಖಲೆಯಾಗಿ ಶಿಶುವಿಗೆ ಜನ್ಮ ನೀಡಿದ್ದಾರೆ. ಜಾರ್ಖಂಡ್‍ನ ಗೊಡ್ಡಾ ಪ್ರದೇಶದ ಐಎಎಸ್ ಅಧಿಕಾರಿಯಾಗಿರುವ ಗೊಡ್ಡಾ ಡಿಸಿ ಕಿರಣ್‍ಕುಮಾರಿ ಪಾಸಿ ಅವರು ಖಾಸಗಿ ಆಸ್ಪತ್ರೆಯನ್ನು ಆಯ್ಕೆ ಮಾಡಿಕೊಳ್ಳದೇ ಸರ್ಕಾರಿ ಆಸ್ಪತ್ರೆಯಲ್ಲೇ ತಮ್ಮ ಮಗುವಿಗೆ ಜನ್ಮ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿರುವ ಐಎಐಸ್ ಅಧಿಕಾರಿ ತಮ್ಮ …

Read More »

ದೆಹಲಿಯಲ್ಲಿ ಗಲಾಟೆ ನಡೆದಿದ್ದು, ಕೇಂದ್ರ ಸರ್ಕಾರದ ಇಂಟಲಿಜೆನ್ಸಿ ವೈಫಲ್ಯವಾಗಿದೆ : ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು

ಬೆಂಗಳೂರು, ಫೆ.28- ಅಮೆರಿಕ ಅಧ್ಯಕ್ಷರ ಭಾರತ ಭೇಟಿ ಸಂದರ್ಭದಲ್ಲಿ ದೆಹಲಿಯಲ್ಲಿ ಗಲಾಟೆ ನಡೆದಿದ್ದು, ಕೇಂದ್ರ ಸರ್ಕಾರದ ಇಂಟಲಿಜೆನ್ಸಿ ವೈಫಲ್ಯವಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಯುತ್ತಿದ್ದವು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೆಚ್ಚಾಗಿದೆ. ಟ್ರಂಪ್ ಕಡೆ ಕೇಂದ್ರ ಸರ್ಕಾರ ಹೆಚ್ಚು ಗಮನಹರಿಸಿತು. ಗಲಾಟೆ ವಿಚಾರದಲ್ಲಿ ಇಂಟೆಲಿಜೆನ್ಸಿ ವಿಫಲವಾಗಿದೆ ಎನಿಸುತ್ತದೆ ಎಂದು ಹೇಳಿದರು ಮಹದಾಯಿ …

Read More »

ಸಬರಮತಿ ಆಶ್ರಮದಲ್ಲಿ ಗಾಂಧಿ ಚರಕದಿಂದ ನೂಲು ನೇಯ್ದ ಟ್ರಂಪ್ ದಂಪತಿ

ಅಹಮದಾಬಾದ್, ಫೆ.24- ಭಾರತ ಪ್ರವಾಸ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಥಮ ಮಹಿಳೆ ಮಲೇನಿಯಾ ಟ್ರಂಪ್ ಅಹಮದಾಬಾದ್‍ನಲ್ಲಿರುವ ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಸಬರ್‍ಮತಿ ಆಶ್ರಮಕ್ಕೆ ಭೇಟಿ ನೀಡಿದರು.ಮೋದಿಯವರೊಂದಿಗೆ ಇಂದು ಮಧ್ಯಾಹ್ನ ಆಶ್ರಮಕ್ಕೆ ತೆರಳಿದ ಟ್ರಂಪ್ ದಂಪತಿ ಬಾಪು ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು ಟ್ರಂಪ್ ದಂಪತಿಗಳಿಗೆ ಮಾರ್ಗದರ್ಶಕರಾಗಿದ್ದ ಟ್ರಂಪ್ ಆಶ್ರಮದ ಮಹತ್ವ ಮತ್ತು ಅಲ್ಲಿ ಗಾಂಧೀಜಿಯವರು ಬಳಸುತ್ತಿದ್ದ ವಸ್ತುಗಳ ಬಗ್ಗೆ ವಿವರಿಸಿದರು.ಆಶ್ರಮದಲ್ಲಿದ್ದ ಗಾಂಧೀಜಿ ಮತ್ತು …

Read More »

ರಾಷ್ಟ್ರಾಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಎರಡೂ ರಾಷ್ಟ್ರಗಳ ಗೆಳೆತನವನ್ನು ಮತ್ತಷ್ಟು ಗಟ್ಟಿಗೊಳಿಸುವುದಕ್ಕೆ ಮುನ್ನುಡಿ ಬರೆದಿದ್ದಾರೆ.

ಅಹಮದಾಬಾದ್, ಫೆ.24-ಉಭಯ ದೇಶಗಳಲ್ಲೂ ಭಾರೀ ಸಂಚಲನ ಸೃಷ್ಟಿಸಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ಭಾರತ ಭೇಟಿಯಿಂದಾಗಿ ವಿಶ್ವದ ಎರಡು ಬೃಹತ್ ಪ್ರಜಾಪ್ರಭುತ್ವ ದೇಶಗಳ ಬಾಂಧವ್ಯ ಬಲವರ್ಧನೆಯಲ್ಲಿ ಹೊಸ ಅಧ್ಯಾಯ ಆರಂಭವಾಗಿದೆ. ರಾಷ್ಟ್ರಾಧ್ಯಕ್ಷ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಎರಡೂ ರಾಷ್ಟ್ರಗಳ ಗೆಳೆತನವನ್ನು ಮತ್ತಷ್ಟು ಗಟ್ಟಿಗೊಳಿಸುವುದಕ್ಕೆ ಮುನ್ನುಡಿ ಬರೆದಿದ್ದಾರೆ. ಭವ್ಯ ಸ್ವಾಗತ : ವಾಷಿಂಗ್ಟನ್‍ನಿಂದ ಏರ್‍ಪೊರ್ಸ್ ಒನ್ ವಿಶೇಷ ವಿಮಾನದಲ್ಲಿ ಗುಜರಾತ್‍ನ ಅಹಮದಾಬಾದ್‍ನ ಸರ್ದಾರ್ ವಲ್ಲಭ್ ಭಾಯಿ ಪಟೇಲ್ …

Read More »

ಭೂಗತ ಪಾತಕಿ ರವಿ ಪೂಜಾರಿಯನ್ನು ಬೆಂಗಳೂರಿಗೆ ಕರೆತಂದ ಪೊಲೀಸರು

ಬೆಂಗಳೂರು,ಫೆ.24- ಹಫ್ತಾ ವಸೂಲಿ, ಸುಲಿಗೆ, ಬೆದರಿಕೆ ಸೇರಿದಂತೆ ಭೂಗತ ಚಟುವಟಿಕೆಗಳಲ್ಲಿ ಭಾಗಿಯಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ನಟೋರಿಯಸ್ ರವಿ ಪೂಜಾರಿಯನ್ನು ಸ್ವದೇಶಕ್ಕೆ ಕರೆತಂದು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಮುಂಜಾನೆ ಸೆನೆಗಲ್‍ನಿಂದ ಬೆಂಗಳೂರಿಗೆ ರವಿ ಪೂಜಾರಿಯನ್ನು ಕರೆತರಲಾಗಿದ್ದು, ಮಡಿವಾಳದಲ್ಲಿರುವ ಇಂಟರಾಗೇಷನ್ ಕಚೇರಿಯಲ್ಲಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ಪಡೆಯಲಾಗಿದೆ. ಎಡಿಜಿಪಿ ಅಮರ್‍ಕುಮಾರ್ ಪಾಂಡೆ ನೇತೃತ್ವದ ತಂಡ ರವಿ ಪೂಜಾರಿಯನ್ನು ವಿಚಾರಣೆಗೊಳಪಡಿಸಿದ್ದಾರೆ. ಕರ್ನಾಟಕದಲ್ಲಿ ರವಿಪೂಜಾರಿ ವಿರುದ್ಧ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ರಾಜಕಾರಣಿಗಳಿಗೆ …

Read More »

ಜೈಲಲ್ಲಿ ನಿರ್ಭಯಾ ಹಂತಕನ ಹೈಡ್ರಾಮ- ಗೋಡೆಗೆ ತಲೆ ಚಚ್ಚಿಕೊಂಡ ವಿನಯ್ ಶರ್ಮಾ

ನವದೆಹಲಿ: ನಿರ್ಭಯಾ ಅತ್ಯಾಚಾರ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೆ ಒಳಗಾಗಿರುವ ಅಪರಾಧಿಗಳ ಪೈಕಿ ಒಬ್ಬನಾಗಿರುವ ವಿನಯ್ ಶರ್ಮಾ ತಿಹಾರ್ ಜೈಲಿನಲ್ಲಿ ಹೈ ಡ್ರಾಮಾ ನಡೆಸಿದ್ದು, ಗೋಡೆಗೆ ತಲೆ ಚಚ್ಚಿಕೊಳ್ಳುವ ಮೂಲಕ ನಾಟಕವಾಡಿದ್ದಾನೆ. ಈ ಕುರಿತು ಜೈಲಿನ ಮೂಲಗಳು ಮಾಹಿತಿ ನೀಡಿದ್ದು, ಫೆಬ್ರವರಿ 16ರಂದು ಈ ಘಟನೆ ನಡೆದಿದೆ. ತಕ್ಷಣವೇ ಜೈಲು ಅಧಿಕಾರಿಗಳು ತಡೆದಿದ್ದಾರೆ. ಗೋಡೆಗೆ ಬಲವಾಗಿ ತಲೆ ಚಚ್ಚಿಕೊಂಡಿದ್ದರಿಂದ ವಿನಯ್ ಶರ್ಮಾಗೆ ಗಾಯವಾಗಿದೆ. ಚಿಕಿತ್ಸೆ ಕೊಡಿಸಲಾಗಿದೆ ಎಂದು ತಿಳಿದು ಬಂದಿದೆ. ನಿರ್ಭಯಾ ಅತ್ಯಾಚಾರಿಗಳ …

Read More »

5ನೇ ಮಗಳ ಜನನದ ಖುಷಿ ಹಂಚಿಕೊಂಡ ಅಫ್ರಿದಿ ಕಾಲೆಳೆದ ನೆಟ್ಟಿಗರು

ಇಸ್ಲಾಮಾಬಾದ್: ಪಾಕಿಸ್ತಾನದ ಕ್ರಿಕೆಟ್ ತಂಡದ ಮಾಜಿ ಆಲ್‍ರೌಂಡರ್ ಶಾಹಿದ್ ಅಫ್ರಿದಿ ತಮಗೆ ಐದನೇ ಹೆಣ್ಣು ಮಗು ಜನಿಸಿರುವ ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅಫ್ರಿದಿ ಅವರು 2018ರಲ್ಲಿ ತಮ್ಮ ತಾಯಿಯ ಸೋದರಸಂಬಂಧಿ ನಾಡಿಯಾ ಅಫ್ರಿದಿ ಅವರೊಂದಿಗೆ ಮದುವೆಯಾಗಿದ್ದು, ಅಫ್ರಿದಿ ದಂಪತಿಗೆ ಅಕ್ಸಾ, ಅನ್‍ಷಾ, ಅಜ್ವಾ ಹಾಗೂ ಅಸ್ಮರಾ ಎಂಬ ನಾಲ್ಕು ಜನ ಹೆಣ್ಣು ಮಕ್ಕಳಿದ್ದಾರೆ. ಈಗ ನಾಡಿಯಾ ಅವರು 5ನೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಕುರಿತು ಫೋಟೋ ಟ್ವೀಟ್ ಮಾಡಿರುವ …

Read More »