Breaking News

ಅಂತರಾಷ್ಟ್ರೀಯ

ಕೋವಿಡ್ ಕೇರ್ ಸೆಂಟರನ್ನು ಸಂಸದ ಜಿ.ಎಂ. ಸಿದ್ದೇಶ್ವರ ಉದ್ಘಾಟನೆ ಮಾಡಿದರು

ದಾವಣಗೆರೆ: ಕೋವಿಡ್ ಸೋಂಕಿತರಿಗಾಗಿ ದಾವಣಗೆರೆ-ಶಿರಮಗೊಂಡನಹಳ್ಳಿ ಮಾರ್ಗದಲ್ಲಿರುವ ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಆಗಿ ವ್ಯವಸ್ಥೆಗೊಳಿಸಲಾಗಿದ್ದು, ಶನಿವಾರ ಸಂಸದ ಜಿ.ಎಂ. ಸಿದ್ದೇಶ್ವರ ಅದಕ್ಕೆ ಚಾಲನೆ ನೀಡಿದರು. ‘ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿತರಿಂದ ಇತರರಿಗೆ ರೋಗ ಹರಡುವುದನ್ನು ತಡೆಗಟ್ಟಲು ಜಿಲ್ಲೆಯಲ್ಲಿ ವಿವಿಧೆಡೆ ವ್ಯವಸ್ಥಿತವಾಗಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಲಾಗುತ್ತಿದೆ. ತರಳಬಾಳು ವಿದ್ಯಾರ್ಥಿನಿಯರ ವಸತಿನಿಲಯವನ್ನು ಕೋವಿಡ್ ಕೇರ್ ಸೆಂಟರ್ ಮಾಡಲು ತರಳಬಾಳು ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರಿಗೆ …

Read More »

ಲಾಕ್‌ಡೌನ್‌ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು.

ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ಸರ್ಕಾರ ಸೆಮಿ ಲಾಕ್‌ಡೌನ್‌ ಜಾರಿಗೊಳಿಸಿ ಇಷ್ಟು ದಿನಗಳಾದರೂ ರಸ್ತೆಗಳಲ್ಲಿ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡಬೇಕಾಗಿತ್ತು. ಆದರೆ ತೌಕ್ಟೆ ಚಂಡಮಾರುತ ಶನಿವಾರ ಚಿತ್ರಣವನ್ನೇ ಬದಲಿಸಿದ್ದರಿಂದ ರಾಜ್ಯದ ಏಳೆಂಟು ಜಿಲ್ಲೆಗಳಲ್ಲಿ ಜನ ರಸ್ತೆಗಿಳಿಯಲು ಮನಸ್ಸನ್ನೇ ಮಾಡಲಿಲ್ಲ. ಇನ್ನುಳಿದಂತೆ ಬಹುತೇಕ ಜಿಲ್ಲೆಗಳಲ್ಲೂ ಅಗತ್ಯ ವಸ್ತುಗಳನ್ನು ಖರೀದಿಸಿ 10 ಗಂಟೆ ವೇಳೆ ಮನೆ ಸೇರಿಕೊಂಡಿದ್ದರಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಜನ ಸಂಚಾರ, ವಾಹನ ಸಂಚಾರ ಬಹುತೇಕ ವಿರಳವಾಗಿತ್ತು. ದಕ್ಷಿಣ ಕನ್ನಡದಲ್ಲಿ …

Read More »

ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನವದೆಹಲಿ: ಅರಬ್ಬೀ ಸಮುದ್ರದಲ್ಲಿ ವಾಯಭಾರ ಕುಸಿತದಿಂದ ಸೃಷ್ಟಿಯಾಗಿರುವ ತೌಕ್ಟೆಚಂಡಮಾರುತ, ಶನಿವಾರ ಮತ್ತಷ್ಟುಪ್ರಬಲವಾಗಿದ್ದು, ದಕ್ಷಿಣದ ಹಲವು ರಾಜ್ಯಗಳಲ್ಲಿ ಭಾರೀ ಮಳೆ ಸುರಿಸಿದೆ. ಜೊತೆಗೆ ಮುಂದಿನ 12 ಗಂಟೆಗಳಲ್ಲಿ ಚಂಡಮಾರುತ ಇನ್ನಷ್ಟುಗಂಭೀರವಾಗಲಿದೆ. ಮೇ 18ರಂದು ಗುಜರಾತ್‌ನ ಪೋರಬಂದರ್‌ ಮತ್ತು ನಲಿಯಾ ನಡುವಿನ ಕರಾವಳಿ ತೀರದ ಮೇಲೆ ಚಂಡಮಾರುತ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಚಂಡಮಾರುತದ ಪ್ರಭಾವದಿಂದಾಗಿ ಲಕ್ವದ್ವೀಪ, ಕೇರಳದಲ್ಲಿ ಶುಕ್ರವಾರ ರಾತ್ರಿಯಿಂದಲೂ ಭಾರೀ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಭಾರೀ …

Read More »

ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ.

ಬೆಳಗಾವಿ: ಕೊರೊನಾ ಎರಡನೇ ಅಲೆ ಹರಡುವಿಕೆ ತೀವ್ರಗತಿಯದ್ದಾಗಿದೆ. ಸೋಂಕಿತರ ಸಂಖ್ಯೆ ಕೂಡ ದಿನೇ ದಿನೇ ಹೆಚ್ಚುತ್ತಿದೆ. ಅಲ್ಲದೇ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಹೀಗಾಗಿ ಸರ್ಕಾರ ಪರಿಸ್ಥಿತಿಯನ್ನು ಹತೋಟಿಗೆ ತರಲು ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದ್ದು, ಕೊವಿಡ್ ಕೇರ್ ಸೆಂಟರ್ ವ್ಯವಸ್ಥೆ ಕೂಡ ಮಾಡುತ್ತಿದೆ. ಅಷ್ಟೇ ಅಲ್ಲದೇ ಅನೇಕ ಸೆಲೆಬ್ರಿಟಿಗಳು ಕೂಡ ಆಕ್ಸಿಜನ್ ವ್ಯವಸ್ಥೆ ಮಾಡುತ್ತಿದ್ದಾರೆ. ಆದರೆ ಕೊರೊನಾ ಸೋಂಕಿತರಿಗೆ ಮಾತ್ರ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗುತ್ತಿಲ್ಲ. ಈ …

Read More »

ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ದಿನ ಡ್ಯೂಟಿ ಮಾಡಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿಯಾಗಿದ್ದಾರೆ.

ಬೆಳಗಾವಿ: ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ದಿನ ಡ್ಯೂಟಿ ಮಾಡಿದ್ದ ಉಪ ತಹಶೀಲ್ದಾರ್ ಕೊರೊನಾಗೆ ಬಲಿಯಾಗಿದ್ದಾರೆ. 52 ವರ್ಷದ ವಿಜಯಶ್ರೀ ನಾಗನೂರೆ ಸೋಂಕಿಗೆ ಬಲಿಯಾದ ಅಧಿಕಾರಿ. ಇವರು ಬೆಳಗಾವಿ ನಗರದ ಯಮನಾಪುರ ನಿವಾಸಿ. ವಿಜಯಶ್ರೀ ನಾಗನೂರೆಗೆ ಮೇ 3 ರಂದು ಕೊರೊನಾ ಸೋಂಕು ದೃಢವಾಗಿತ್ತು. ಕಳೆದ ಹನ್ನೆರಡು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು (ಮೇ 15) ಬೆಳಗಿನ ಜಾವ ಸಾವನ್ನಪ್ಪಿದ್ದಾರೆ. ವಿಜಯಶ್ರೀ ಸದ್ಯ …

Read More »

ರೋಡಿಗೆ ಇಳಿದಿರುವ ಬೈಕ್ ಸವಾರರ ಮೇಲೆ ಲಾಠಿ ಚಾರ್ಜ್ ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ

ಗೋಕಾಕ:ರಸ್ತೆಗಿಳಿದವರ ಮೇಲೆ ಲಾಠಿ ಏಟು, ಪೊಲೀಸರ ವರ್ತನೆಗೆ ಸಾರ್ವಜನಿಕರ ವ್ಯಾಪಕ ಆಕ್ರೋಶ ಲಾಕ್‌ಡೌನ್ ಸಂದರ್ಭದಲ್ಲಿ ರಸ್ತೆಗಿಳಿದವರ ಮೇಲೆ ಪೊಲೀಸರು ಲಾಠಿಯಲ್ಲಿ ಹಿಗ್ಗಾಮುಗ್ಗ ಥಳಿಸುತ್ತಿರುವುದರ ವಿರುದ್ಧ ವ್ಯಾಪಕ ಆಕ್ರೋಶಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿವೆ. ಸಾಮಾಜಿಕ ಹೋರಾಟಗಾರರು, ಬರಹಗಾರರು ಮಾತ್ರವಲ್ಲದೆ ಸಾರ್ವಜನಿಕರು ಪೊಲೀಸರ ನಡೆಯನ್ನು ಖಂಡಿಸುತ್ತಿದ್ದಾರೆ.     ಕೋವಿಡ್ ಕಠಿಣ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಜನಸಾಮಾನ್ಯರನ್ನು ಅಪರಾಧಿಗಳಂತೆ ನಡೆಸಿಕೊಂಡು ಶಿಕ್ಷೆ ಕೊಡಲು ಪೊಲೀಸರಿಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸುತ್ತಿದ್ದಾರೆ. ‘ಪೊಲೀಸರಿಗೆ ಶಿಕ್ಷಿಸುವ …

Read More »

ಲಾಠಿ ಪ್ರಹಾರಕ್ಕೆ ಬ್ರೇಕ್ ಹಾಕಿದ ಕಮಲ್ ಪಂತ್

ಬೆಂಗಳೂರು: ಕೊರೊನಾದಿಂದ ಲಾಕ್‍ಡೌನ್ ಘೋಷಿಸಿದ್ದರು ರಸ್ತೆಗಳಿದವರ ಮೇಲೆ ಬಲ ಪ್ರಯೋಗ ಮಾಡಿದ್ದರಿಂದ ಜನರು ಪೊಲೀಸರ ಮೇಲೆ ಆಕ್ರೋಶಗೊಂಡಿದ್ದಾರೆ. ಹೀಗಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್‍ರವರು ಸಾರ್ವಜನಿಕರ ಮೇಲೆ ಪೊಲೀಸರು ಯಾವುದೇ ರೀತಿಯ ಬಲಪ್ರಯೋಗ ಮಾಡಬಾರದು ಸೂಚಿಸಿದ್ದಾರೆ. ಈ ಬಗ್ಗೆ ಕಮಲ್ ಪಂತ್‍ರವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಒಂದು ವೇಳೆ ಸಾರ್ವಜನಿಕರು ಲಾಕ್‍ಡೌನ್ ಮಾರ್ಗಸೂಚಿ ಉಲ್ಲಂಘಿಸಿದ್ದು ಕಂಡುಬಂದಲ್ಲಿ ಮಾತ್ರ ಕಾನೂನಿನ ಅಡಿಯಲ್ಲಿ ಬೆಂಗಳೂರು ನಗರ ಪೊಲೀಸ್ ಸಿಬ್ಬಂದಿ ಕ್ರಮ ಕೈಗೊಳ್ಳಬೇಕು ಹೊರತು …

Read More »

ಕುಂಟು ನೆಪ ಹೇಳಿ ರಸ್ತೆಗಿಳಿದವ್ರಿಗೆ ಬಿಸಿ ಮುಟ್ಟಿಸುತ್ತಿರೋ ಪೊಲೀಸ್​, ಸಾಲು ಸಾಲು ವಾಹನಗಳು ಸೀಜ್

ರಾಜ್ಯದಲ್ಲಿ ಇಂದಿನಿಂದ 14 ದಿನಗಳ ಲಾಕ್​ಡೌನ್ ಜಾರಿಯಾಗಿದೆ. ಅಗತ್ಯವಸ್ತುಗಳ ಖರೀದಿಗೆ ಬೆಳಗ್ಗೆ 6ರಿಂದ 10 ಗಂಟೆವರೆಗೆ ಮಾತ್ರ ಅವಕಾಶ ನೀಡಲಾಗಿದೆ. ಸುಖಾಸುಮ್ಮನೆ ವಾಹನಗಳಲ್ಲಿ ರಸ್ತೆಗಿಳಿಯದಂತೆ ಸೂಚಿಸಲಾಗಿದೆ. ಆದ್ರೂ ನಿಯಮ ಉಲ್ಲಂಘಿಸಿ ಕುಂಟು ನೆಪಗಳನ್ನ ಹೇಳಿಕೊಂಡು ರಸ್ತೆಗಿಳಿದವರಿಗೆ ಪೊಲೀಸರು ಲಾಠಿ ರುಚಿ ತೋರಿಸುತ್ತಿದ್ದಾರೆ. ಜೊತೆಗೆ ವಾಹನಗಳನ್ನ ಸೀಜ್ ಮಾಡ್ತಿದ್ದಾರೆ. ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಫೀಲ್ಡಿಗಳಿದು ಪರಿಶೀಲನೆ ನಡೆಸುತ್ತಿದ್ದಾರೆ. ಈ ಮಧ್ಯೆ ಕೆಲ ಜನರು ಅನಾವಶ್ಯಕ ಓಡಾಡೋದಲ್ಲದೆ ಪೊಲೀಸರ ಜೊತೆ ವಾಗ್ವಾದ ಮಾಡ್ತಿದ್ದಾರೆ. …

Read More »

ಆತ್ಮಹತ್ಯೆ ಮಾಡಿಕೊಂಡ ಮಗಳ ಶವವನ್ನು ಹೊತ್ತು 35 ಕಿಮೀ ಕಾಲ್ನಡಿಗೆಯಲ್ಲೇ ಕ್ರಮಿಸಿ ಆಸ್ಪತ್ರೆ ತಲುಪಿದ ತಂದೆ; ವಿಡಿಯೋ ವೈರಲ್​

ಭೋಪಾಲ್​: ಆತ್ಮಹತ್ಯೆ ಮಾಡಿಕೊಂಡ ಮಗಳ ಮೃತದೇಹವನ್ನು ತಂದೆ ಮಂಚದ ಮೇಲೆ ಮಲಗಿಸಿ, ಕಟ್ಟಿಕೊಂಡು ಸುಮಾರು 35 ಕಿಮೀ ಹೊತ್ತು ನಡೆದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿಯಲ್ಲಿ ನಡೆದಿದೆ. ಮಗಳ ಶವವನ್ನು ಪೋಸ್ಟ್​ಮಾರ್ಟಮ್​​ಗೆ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕಿತ್ತು. ಆದರೆ ಶವವನ್ನು ಸಾಗಿಸಲು ಒಂದು ವಾಹನದ ವ್ಯವಸ್ಥೆ ಮಾಡಲು ಸಾಧ್ಯವಾಗದೆ ಮಗಳ ಶವವನ್ನು ಹೊತ್ತು 35 ಕಿಮೀ ದೂರವನ್ನು ಏಳು ಗಂಟೆಗಳಲ್ಲಿ ಕ್ರಮಿಸಿದ್ದಾರೆ. ಇವರೊಂದಿಗೆ ಹಳ್ಳಿಯ ಕೆಲವರೂ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೋ …

Read More »

ಆಮೆರಿಕಾದಿಂದ ಭಾರತಕ್ಕೆ ಆಕ್ಸಿಜನ್ ಕಾನ್ಸೆಂಟ್ರೇಟರ್​ ನೆರವು; ಕರ್ನಾಟಕಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರವಾನೆ

ದೆಹಲಿ: ಆಮೆರಿಕಾದಿಂದ ಭಾರತಕ್ಕೆ 2200 ಆಕ್ಸಿಜನ್ ಕಾನ್ಸೆಂಟ್ರೇಟರ್​​ ನೆರವು ಒದಗಿಬಂದಿದೆ. ಜೊತೆಗೆ 10 ಸಾವಿರ ಆಕ್ಸಿಮೀಟರ್ ಸಹ ಭಾರತಕ್ಕೆ ರವಾನೆಯಾಗಿದೆ. ಕೇಂದ್ರ ಸರ್ಕಾರವು ಇವುಗಳನ್ನ ತಕ್ಷಣ ಕೆಲ ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಕೇಂದ್ರ ನೀತಿ ಆಯೋಗ (National Institution for Transforming India-NITI Aayog) ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಅದರಲ್ಲಿ ಕರ್ನಾಟಕಕ್ಕೆ ಹೆಚ್ಚು ಪಾಲು ಸಂದಾಯವಾಗಿದೆ ಎಂಬುದು ಸಮಧಾನಕರ ವಿಷಯ. ಕೊರೊನಾ ಸಂಕಷ್ಟ ಕಾಲದಲ್ಲಿ ಅಮರಿಕದಿಂದ ಬಂದಿಳಿದಿರುವ ವೈದ್ಯಕೀಯ …

Read More »