ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಪುರಾಣ ಪ್ರಸಿದ್ಧ ಮಾಣೇಶ್ವರ ದೇವಾಲಯದ ಬಳಿ ಗುಡ್ಡ ಕುಸಿತವಾಗಿದ್ದು, ಅದೃಷ್ಟವಶಾತ್ ದೇವಸ್ಥಾನಕ್ಕೆ ಯಾವುದೇ ಹಾನಿ ಸಂಭವಿಸಿಲ್ಲ. ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಗೋಕರ್ಣದ ಮಾಣೇಶ್ವರ ದೇವಸ್ಥಾನದ ಮೇಲ್ಭಾಗದಲ್ಲಿರುವ ಗುಡ್ಡ ಕುಸಿದಿದ್ದು, ಈ ವೇಳೆ ದೊಡ್ಡ ಕಲ್ಲುಬಂಡೆ ಜಾರಿದೆ. ಆದರೆ ಪಕ್ಕದಲ್ಲೇ ಬೃಹದಾಕಾರದ ಮರವಿದ್ದ ಕಾರಣ ಗುಡ್ಡದಿಂದ ಜಾರಿದ ಕಲ್ಲುಬಂಡೆ ಮರದ ಬಳಿ ನಿಂತಿದ್ದು, ದೊಡ್ಡ ಅನಾಹುತ …
Read More »ಜೋಯಿಡಾ ತಹಶೀಲ್ದಾರ್ ಕಚೇರಿಗೆ ಎಸಿಬಿ ದಾಳಿ – ಲಂಚ ಪಡೆಯುತ್ತಿದ್ದ ಅಧಿಕಾರಿ ಬಲೆಗೆ
ಕಾರವಾರ: ಲಂಚ ಸ್ವೀಕರಿಸುತಿದ್ದ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಮೇಲೆ ಎಸಿಬಿ ದಾಳಿ ನೆಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಹಶೀಲ್ದಾರ್ ಕಚೇರಿಯಲ್ಲಿ ನಡೆದಿದೆ.ಎಸಿಬಿ ಡಿವೈಎಸ್ಪಿ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಜೋಯಿಡಾ ತಹಶೀಲ್ದಾರ್ ಕಚೇರಿಯ ದ್ವಿತೀಯ ದರ್ಜೆ ಸಹಾಯಕ ಮಂಜುನಾಥ್ ಹುಚ್ಚಣ್ಣನವರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. ಆತನ್ನು ವಶಕ್ಕೆ ಪಡೆದು ತನಿಖೆ ಮಾಡಲಾಗುತ್ತಿದೆ. ಗೋಪಿಕಾ ಶಾಂತ ಸಾವಂತ್ ಇವರ ಹೆಸರು ಬದಲಾವಣೆಗೆ ಇವರ ಸಂಬಂಧಿ ಮೋಹನ್ ದೇಸಾಯಿ …
Read More »ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ
ಕಾರವಾರ: ಕಪ್ಪೆಗಳನ್ನು ಹಾವು ನುಂಗುವುದು ಸಾಮಾನ್ಯ. ಹಾಗೆಯೇ ಅಪರೂಪಕ್ಕೆ ಕಪ್ಪೆಗಳೇ ಹಾವನ್ನು ನುಂಗಿದ ಘಟನೆ ಕೂಡ ನಡೆದಿದೆ. ಆದರೆ ಕಪ್ಪೆಯೊಂದು ತನ್ನದೇ ಜಾತಿಯ ಮತ್ತೊಂದು ಕಪ್ಪೆಯನ್ನು ನುಂಗಿದ ಅಪರೂಪದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕಡವಾಡ ಗ್ರಾಮದಲ್ಲಿ ನಡೆದಿದೆ. ಗೋಂಕರು ಕಪ್ಪೆ ಸಂಶೋಧಕರು ಹೇಳುವಂತೆ ಸುಮಾರು ಏಳು ಕೆಜಿ ತೂಕದ ವರೆಗೆ ದೂಡ್ಡ ಗಾತ್ರದಲ್ಲಿ ಬೆಳೆಯುತ್ತವೆ. ಈ ಕಪ್ಪೆಗಳು ನಿತ್ಯ ಹರಿದ್ವರ್ಣ ಕಾಡುಗಳಲ್ಲಿ ಹೆಚ್ಚು ಕಾಣಸಿಗುತ್ತವೆ. …
Read More »ವಿವಾಹಿತ ಮಹಿಳೆಯನ್ನ ಕರ್ಕೊಂಡು ಬಂದಿದ್ದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ
ಕಾರವಾರ: ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಬೆಳೆಸಿ ಕರೆದುಕೊಂಡು ಬಂದಿದ್ದ ಯುವಕನಿಗೆ ಮಹಿಳೆಯ ಪತಿ ಹಾಗೂ ಸಂಬಂಧಿಕರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆದಿದೆ ಧಾರವಾಡ ಮೂಲದ ಮುತ್ತು ಥಳಿತಕ್ಕೊಳಗಾದ ಯುವಕ. ಮುತ್ತು ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಅಲ್ಲದೇ ಈತ ಧಾರವಾಡದಿಂದ ಮಹಿಳೆಯನ್ನು ಕರೆದುಕೊಂಡು ಕಾರವಾರಕ್ಕೆ ಬಂದಿದ್ದನು. ಜಿಲ್ಲಾಧಿಕಾರಿ ಕಚೇರಿ ಬಳಿ ಮಹಿಳೆಯೊಂದಿಗೆ ಮುತ್ತು ನಿಂತಿದ್ದನು. ಇತ್ತ ಕಾರವಾರಕ್ಕೆ ಬಂದ ವಿಷಯ …
Read More »ಬಡ ಮಕ್ಕಳ ಹಸಿವಿಗೆ ತುತ್ತು ನೀಡಿದ ಮಾದರಿ ಶಿಕ್ಷಕ
ಕಾರವಾರ: ಇದು ಬಡ ಮಕ್ಕಳ ಹಸಿವಿಗೆ ತುತ್ತು ನೀಡಿದ ಮಾದರಿ ಶಿಕ್ಷಕರ ಕಥೆ. ಪಾಠದ ಜೊತೆಗೆ ಬೆಳಗ್ಗೆ ಹಸಿವಿನಿಂದ ಶಾಲೆಗೆ ಬರುವ ಮಕ್ಕಳಿಗೆ ತಮ್ಮ ಸ್ವಂತ ಹಣದಲ್ಲಿಯೇ ಬೆಳಗಿನ ಉಪಹಾರದ ವ್ಯವಸ್ಥೆಯನ್ನ ಮಾಡಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಗಣಪತಿಗಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ರಾಮಚಂದ್ರ ನಾಯ್ಕ್ ಬಡ ಮಕ್ಕಳಿಗಾಗಿ ಉಪಹಾರ ಆರಂಭಿಸಿದ್ದಾರೆ. ಈ ಶಾಲೆಗೆ ಬರುವ ಮಕ್ಕಳು ಬಡ ಕುಟುಂಬದವರು. ವಿದ್ಯಾರ್ಥಿಗಳು ಬೆಳಗ್ಗೆ ಉಪಹಾರ ಸೇವಿಸದೇ ಬರುತ್ತಿರೋದು ರಾಮಚಂದ್ರ …
Read More »ಹಾಲಿನಂತೆ ಧುಮ್ಮಕ್ಕುವ ಅಣಶಿ ಜಲಪಾದದ ನರ್ತನ ನೋಡಿ ಪ್ರವಾಸಿಗರು ಮಾರು ಹೋಗದಿದ್ದಾರೆ.
ಕಾರವಾರ: ಮಳೆಗಾಲ ಮುಗಿಯುತ್ತಿದ್ದಂತೆ ಉತ್ತರ ಕನ್ನಡ ಜಿಲ್ಲೆಯ ಹಸಿರು ಕಾನನಗಳ ಮಧ್ಯೆ ಜಲಪಾತಗಳಿಗೇನೂ ಕಮ್ಮಿ ಇಲ್ಲ. ಅದೇ ರೀತಿ ಇದೀಗ ಬಂಡೆಗಳನ್ನು ಸೀಳಿಕೊಂಡು ಹಾಲಿನಂತೆ ಧುಮ್ಮಕ್ಕುವ ಅಣಶಿ ಜಲಪಾದದ ನರ್ತನ ನೋಡಿ ಪ್ರವಾಸಿಗರು ಮಾರು ಹೋಗದಿದ್ದಾರೆ. ರಸ್ತೆ ಪಕ್ಕದಲ್ಲೇ ಇರುವುದರಿಂದ ಪ್ರವಾಸಿಗರಿಗೆ ಎಂಜಾಯ್ ಮಾಡಲು ಇನ್ನೂ ಅನುಕೂಲವಾಗಿದೆ.ಜಿಲ್ಲೆಯ ಕಾರವಾರ-ಜೋಯಿಡಾ ಘಟ್ಟ ಪ್ರದೇಶದ ಅಣಶಿ ಬಳಿ ಮಳೆ ನಿಲ್ಲುತಿದ್ದಂತೆ ಜಲಪಾತ ದುಮ್ಮಿಕ್ಕಿ ಹರಿಯುತಿದ್ದು, ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ಕಾರವಾರದಿಂದ 40 ಕಿಲೊಮೀಟರ್ …
Read More »ಜೂಜಾಟ ಆಡುತ್ತಿದ್ದ 17 ಜನರನ್ನು ಕಾರವಾರದ ಹಳಿಯಾಳದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಕಾರವಾರ: ಜೂಜಾಟ ಆಡುತ್ತಿದ್ದ 17 ಜನರನ್ನು ಕಾರವಾರದ ಹಳಿಯಾಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ದುಸಗಿ ಬ್ರಿಡ್ಜ್ ನ ಕೆಳಭಾಗದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ 17 ಜನರನ್ನು ಕಾರವಾರದ ಡಿ.ಸಿ.ಐ.ಬಿ ಅಧೀಕ್ಷಕ ನಿಶ್ಚಲ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ 1,43,650 ರಪಾಯಿಯನ್ನು ಹಾಗೂ ಇಸ್ಪೀಟ್ ಕಾರ್ಡ್ ವಶಕ್ಕೆ ಪಡೆದು ಬಂಧಿಸಿದೆ.ಜಿಲ್ಲೆಯ ಹಳಿಯಾಳದಲ್ಲಿ ಹಲವು ದಿನಗಳಿಂದ ಇಸ್ಪೀಟ್ ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಪಡೆದ ಡಿಸಿಐಬಿ ತಂಡ …
Read More »ಬಿಎಸ್ಎನ್ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು: ಅನಂತಕುಮಾರ್ ಹೆಗಡೆ
ಕಾರವಾರ: ಬಿಎಸ್ಎನ್ಎಲ್ ಸಂಸ್ಥೆಯಲ್ಲಿರುವವರು ದೇಶದ್ರೋಹಿಗಳು, ದೇಶದ್ರೋಹಿಗಳೇ ಆ ಸಂಸ್ಥೆಯಲ್ಲಿ ತುಂಬಿಕೊಂಡಿದ್ದಾರೆ ಎಂದು ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ಅನಂತಕುಮಾರ್ ಹೆಗಡೆ ಕಿಡಿ ಕಾರುವ ಮೂಲಕ ವಿವಾದಿತ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ ಕುಮಟಾದಲ್ಲಿ ಇಂದು ಸಂಸದರ ಹಾಗೂ ಕೇಂದ್ರ ಸರ್ಕಾರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್ಎನ್ಎಲ್ ಸರಿಪಡಿಸಲು ನಮ್ಮ ಸರ್ಕಾರದಿಂದಲೂ ಸಾಧ್ಯವಾಗಿಲ್ಲ. ಸಮರ್ಪಕ ಸೇವೆ ನೀಡಲು ಬಿಎಸ್ಎನ್ಎಲ್ ಸಂಸ್ಥೆಯ ನೌಕರರಿಂದ ಸಾಧ್ಯವಾಗೋದಿಲ್ಲ. ಈಗಾಗಲೇ 85 …
Read More »ಚಾರ್ಮಾಡಿಯ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ ಆವರಿಸಿದೆ.
ಕರಾವಳಿಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಘಟ್ಟ ಪ್ರದೇಶ, ಚಿಕ್ಕಮಗಳೂರು ಭಾಗಳಿಂದ ಹರಿದು ಬರುತ್ತಿರುವ ನೀರಿನಿಂದಾಗಿ ಚಾರ್ಮಾಡಿಯ ತಪ್ಪಲಿನ ಗ್ರಾಮಗಳಲ್ಲಿ ನೆರೆ ಭೀತಿ ಆವರಿಸಿದೆ. ಚಾರ್ಮಾಡಿಯ ಅಂತರ, ಕೊಳಂಬೆ, ಅರಣೆಪಾದೆ, ಪರ್ಲಾಣಿ, ಹೊಸಮನೆ, ಕುಕ್ಕಾವು, ಕಕ್ಕೆನಾಜೆಯಲ್ಲಿ ಮೃತ್ಯುಂಜಯ ಹೊಳೆ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಸೇತುವೆಗಳು ಮತ್ತು ಕಿಂಡಿ ಅಣೆಕಟ್ಟುಗಳಲ್ಲಿ ಬೃಹತ್ ಮರದ ದಿಮ್ಮಿಗಳು, ಕಸ ಬಂದು ಸಿಲುಕುತ್ತಿದೆ. ಇದರಿಂದಾಗಿ ಸೇತುವೆಯ ಅಂಚಿನ ಮಣ್ಣು ರಸ್ತೆ ಸಮೇತ ಕೊಚ್ಚಿಕೊಂಡು ಹೋಗಿದೆ. …
Read More »ರೈಲ್ವೆ ಸುರಂಗ ಗೋಡೆ ಕುಸಿತ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಮಾರ್ಗ ಸಂಚಾರ ಬಂದ್
ಕಾರವಾರ: ಮುಂಡ್ರೆ -ಪೆರ್ಣೆ ಮಾರ್ಗದಲ್ಲಿ ರೈಲ್ವೆ ಸುರಂಗ ಗೋಡೆ ಕುಸಿತ ಹಿನ್ನೆಲೆಯಲ್ಲಿ ಕೊಂಕಣ ರೈಲ್ವೆ ಮಾರ್ಗ ಸಂಚಾರ ಬಂದ್ ಮಾಡಲಾಗಿದೆ.ಇಂದಿನಿಂದ ಮುಂದಿನ ಆದೇಶ ಬರುವವರೆಗೂ ಎರ್ನಾಕುಲಮ್ -ಹಜರತ್ ನಿಜಾಮುದ್ದೀನ್ ಸೂಪರ್ ಪಾಸ್ಟ್ ಟ್ರೈನ್ (ಮಡಗಾಂ, ಮೀರಜ್, ಪುಣೆ, ಪನ್ನವೇಲ್ ಮಾರ್ಗ) ತಿರುವಂತಪುರಂ ಲೋಕಮಾನ್ಯ ತಿಲಕ್ ಟ್ರೈನ್ (ಮಡಗಾಂ, ಲೋಂಡ, ನೀರಜ್, ಪುಣೆ, ಪನ್ನವೇಲ್ ಮಾರ್ಗ), ನ್ಯೂ ಡೆಲ್ಲಿ ತಿರುವನಂತಪುರಂ ಸೆಂಟ್ರಲ್ ರಾಜಧಾನಿ ಎಕ್ಸ್ ಪ್ರೆಸ್(ಪನ್ನವೇಲ್, ಪುಣೆ, ಮೀರಜ್ ,ಲೋಂಡ, ಮಡಗಾಂ …
Read More »
Laxmi News 24×7