Breaking News

ಘಟಪ್ರಭಾ

ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ …

Read More »

ಹಿರಿಯರ ಸ್ಮರಣಾರ್ಥ ಆಹಾರ ಕಿಟ್ ವಿತರಣೆ

  ಘಟಪ್ರಭಾ: ದಿ.ಜಾನ್ ಆರ್.ಕಲಾರಕೊಪ್ಪ, ಹಾಗೂ ದಿ.ಎಂ.ಬಿ.ಐಹೊಳಿ ಅವರ ಸ್ಮರನಾರ್ಥ ದೈಹಿಕ ಶಿಕ್ಷಕ ಡಿ.ಜೆ.ಕಲಾರಕೊಪ್ಪ ಅವರಿಂದ ಸರ್ಕಾರಿ ಶಾಲೆಗಳ ಬಿಸಿ ಊಟ ಸಿಬ್ಬಂದಿಗೆ ಆಹಾರ ಧಾನ್ಯ ಕಿಟ್‌ಗಳನ್ನು ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿತಿರಿಸಲಾಯಿತು.   ಸಮಾರಂಭಕ್ಕೆ ಮುಖ್ಯ ಅತಿಥಿಗಾಳಗಿ ಆಗಮಿಸಿದ ಮೂಡಲಗಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಅವರು ಮಲ್ಲಾಪೂರ ಪಿ.ಜಿ ಹಾಗೂ ಶಿಂದಿಕುರಬೇಟ ಸಿ.ಆರ್.ಸಿ ವ್ಯಾಪ್ತಿಯ ಸರ್ಕಾರಿ ಶಾಲೆಗಳ 30 ಕ್ಕೂ ಹೆಚ್ಚು ಬಿಸಿ …

Read More »

ರಾಜಾಪೂರ ಕೊಲೆ ಪ್ರಕರಣ ಭೇದಿಸಿದ ಘಟಪ್ರಭಾ ಪೋಲಿಸರು, ಮೂವರು ಆರೋಪಿಗಳ ಬಂಧನ

ಘಟಪ್ರಭಾ: ಜೂನ್ 10 ರಂದು ರಾಜಾಪೂರ ಗ್ರಾಮದಲ್ಲಿ ನಡೆದ ಮಹಾಯುದ್ಧ ಯೂಟ್ಯೂಬ ಚಾನಲ್ ಸಂಪಾದಕ ಶಿವಾನಂದ ಬಸಪ್ಪಾ ಕಾಚಾಗೋಳ (27) ಎಂಬಾತನ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಮೂವರು ಆರೋಪಿಗಳನ್ನು ಘಟಪ್ರಭಾ ಪೊಲೀಸರು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿತರಾದ ಜೋತೆಪ್ಪಾ ವಿಠ್ಠಲ ಮಗದುಮ್ (27) , ಬೀರಪ್ಪಾ ನಿಂಗಪ್ಪಾ ಬಾನಸಿ (27) , ವಸಂತ ಬಮ್ಮಪ್ಪಾ ಬಮ್ಮವ್ವಗೋಳ (27) ಮೂವರು ರಾಜಾಪೂರ ಗ್ರಾಮದ ನಿವಾಸಿಯಾಗಿದ್ದು, ಕೊಲೆಯಾದ ಶಿವಾನಂದನ ಪರಿಚಯಸ್ಥರಾಗಿದ್ದಾರೆ. ಕೊಲೆಗೆ ನಿಖರವಾರದ ಕಾರಣ …

Read More »

ಕನ್ನಡ ದ್ರೋಹಿ MES ನಿಷೇಧಿಸಿ: ಶುಭಂ ಸೆಳಕೆ ಗಡಿಪಾರು ಮಾಡಿ ಎಂದು ಕನ್ನಡ ಸಂಘಟನೆ ಆಗ್ರಹ..

ಘಟಪ್ರಭಾ: ಬೆಳಗಾವಿಯಲ್ಲಿ ಇರುವ ಕನ್ನಡ ನಾಡ ದ್ರೋಹಿ ಶುಭಂ ಸೆಳಕೆ ಇತನು ಕನ್ನಡದ ಶಾಲು ಹಾಕಿಕೊಂಡು ಅಲೆದಾಡುವವರ ವಿರುದ್ಧ ಅಟ್ಟಿಸಿಕೊಂಡು ಹೊಡೆಯುವ ಕನ್ನಡಿಗರಿಗೆ ಬೆದರಿಕೆ ಹಾಕಿದ್ದಾನೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶಿಸಿ ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಮೃತ್ಯುಂಜಯ ಸರ್ಕಲನಲ್ಲಿ ಪ್ರತಿಭಟನೆ ಮಾಡಲಾಯಿತು. ಶ್ರೀಶೈಲ ಬ್ಯಾಕೂಡ ನಿರೀಕ್ಷಕರು, ಘಟಪ್ರಭಾ ಪೋಲಿಸ್ ಠಾಣೆ ಇವರ ಮುಖಾಂತರ ಲಕ್ಷ್ಮಣ ಣ ನಿಂಬರಗಿ ಪೋಲಿಸ್ ಅಧಿಕ್ಷಕರು ಬೆಳಗಾವಿ ಅವರಿಗೆ ಮನವಿ …

Read More »

ಮಾಸಿಕ ಸುವಿಚಾರ ಚಿಂತನ ಕಾರ್ಯಕ್ರಮ

ಘಟಪ್ರಭಾ: ಸಮೀಪದ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದ ಶ್ರೀ ಸಿದ್ದಲಿಂಗ ಸಮುದಾಯ ಭವನದಲ್ಲಿ ದಿ.13 ರಂದು ಮುಂಜಾನೆ 12 ಗಂಟೆಗೆ 128 ನೇ ಮಾಸಿಕ ಸುವಿಚಾರ ಚಿಂತನ ಗೋಷ್ಠಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಶ್ರೀ ಮಠದ ಪೀಠಾಧಿಕಾರಿ ಶ್ರೀ ನಿಜಗುಣ ದೇವರು, ಅಧ್ಯಕ್ಷತೆಯನ್ನು ಚಿಕ್ಕಹಂಚಿನಾಳ ಶಿವಾನಂದ ಮಠದ ಶಾಂತಾನಂದ ಸ್ವಾಮಿಗಳು ವಹಿಸುವರು. ಶ್ರೀಗಳ ಕಿರೀಟ ಮಹಾಪೂಜೆ ಜರಗುವುದು. ಅನ್ನ ದಾಸೋಹವನ್ನು ಗುರುಸಿದ್ದ ಕರಬನ್ನಿ ಹಾಗೂ …

Read More »

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು …

Read More »

ಸಪ್ತಾಹ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮ

ಸಪ್ತಾಹ ನಿಮಿತ್ಯ ಸಾಂಸ್ಕøತಿಕ ಕಾರ್ಯಕ್ರಮ ಘಟಪ್ರಭಾ: ಸಮೀಪದ ಶಿಂದಿಕುರಬೇಟ ಗ್ರಾಮದ ಶ್ರೀ ಶಿವಶರಣ ಹರಳಯ್ಯನವರ ಹಾಗೂ ಬುದ್ಧ,ಬಸವ,ಅಂಬೇಡಕರರ 79 ನೇ ವಾರ್ಷಿಕೋತ್ಸವದ ಸಪ್ತಾಹ ಸಮಾರಂಭವು ದಿ.7 ಮತ್ತು 8 ರಂದು ನಡೆಯಲಿದೆ. ದಿ.7ರಂದು ಅಭಿಷೇಕ ಕಾರ್ಯಕ್ರಮವು ಸಿದ್ದಯ್ಯಸ್ವಾಮಿ ಹಿರೇಮಠ ಇವರಿಂದ ಜರುಗಲಿದೆ. ಸಂಜೆ 5 ಗಂಟೆಗೆ ಸಾಧಕರಿಗೆ ಮತ್ತು ಗ್ರಾಮ ಪಂಚಾಯತ ನೂತನ ಸದಸ್ಯರುಗಳಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಶಿಂದಿಕುರಬೇಟ ಐಡಿಯಲ್ ಅರ್ಪಿಸುವ ಎಸ್.ಬಿ.ಇವೆಂಟ್ಸ್ ಮುರಗೋಡ ಇವರಿಂದ ಸಾಂಸ್ಕøತಿಕ ಕಾರ್ಯಕ್ರಮ …

Read More »

ರಾಜಾಪೂರದಲ್ಲಿ 8.17 ಕೋಟಿ ರೂ. ವೆಚ್ಚದ ಜಲಜೀವನ ಮಿಷನ್ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಘಟಪ್ರಭಾ : ಜಲಜೀವನ ಮಿಷನ್ ಕಾಮಗಾರಿಗಾಗಿ ರಾಜಾಪೂರ, ತುಕ್ಕಾನಟ್ಟಿ, ದಂಡಾಪೂರ, ದುರದುಂಡಿ ಹಾಗೂ ಬಡಿಗವಾಡ ಗ್ರಾಮ ಪಂಚಾಯತಿಗಳಿಗೆ 8.17 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಇದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯಕ್ಕೆ ಮತ್ತಷ್ಟು ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಇಲ್ಲಿಗೆ ಸಮೀಪದ ರಾಜಾಪೂರ ಗ್ರಾಮದಲ್ಲಿ 8.17 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ …

Read More »

ಗೋಕಾಕ : ಇಬ್ಬರು ಮಕ್ಕಳೊಂದಿಗೆ ಘಟಪ್ರಭಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ !

ಗೋಕಾಕ : ಮನೆಯಲ್ಲಿ ಜಗಳವಾಡಿ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದ ಮಹಿಳೆ ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಗೋಕಾಕ ತಾಲ್ಲೂಕಿನ ಅರಭಾಂವಿಯ ಸಾವಿತ್ರಿ ರಾಜು ಬನಾಜ(30), ಪೂಜಾ (4) ಲಕ್ಷ್ಮಿ (2), ಮೃತರು. ಮನೆಯಲ್ಲಿ ಜಗಳವಾಡಿ ತಮ್ಮಇಬ್ಬರು ಮಕ್ಕಳನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ, ಕಾಣೆಯಾಗಿದ್ದರು. ಈ ಬಗ್ಗೆ ಗಂಡನ ಮನೆಯವರು ಪೊಲೀಸ್ ಠಾಣೆಗೆ ಶುಕ್ರವಾರ ದೂರು ನೀಡಿದ್ದರು. ಆದ್ರೆ ಭಾನುವಾರ ಬೆಳಿಗ್ಗೆ ಗೋಕಾಕ …

Read More »

ಗೋಕಾಕ : ಅರಭಾವಿ ಬಳಿ ಕ್ರೂಸರ್ ವಾಹನ ಪಲ್ಟಿ : 6 ಜನರಿಗೆ ಗಾಯ !

ಗೋಕಾಕ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ, 6 ಜನರು ಗಾಯಗೊಂಡಿರುವ ಘಟನೆ ಅರಭಾವಿ ಗ್ರಾಮದ ಬಳಿ ಬುಧವಾರ ನಡೆದಿದೆ.   ಸಂಕೇಶ್ವರ -ಅರಬಾವಿ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕ್ರೂಸರ್ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ತಕ್ಷಣ ಸ್ಥಳೀಯರು ಧಾವಿಸಿ, ಕಾರ್ ನಲ್ಲಿ ಸಿಲುಕಿಕೊಂಡವರನ್ನು ಹೊರ ತೆಗೆಯಲಾಗಿದೆ. ಅದೃಷ್ಟವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. …

Read More »