Breaking News

ಜಿಲ್ಲೆ

ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ – ಯೋಗೇಶ್‌ ಗೌಡ ಕೊಲೆ ಕೇಸ್‌ ತೀರ್ಪು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ  ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಾಳೆ ಪ್ರಕಟಿಸಲಿದೆ. ಕಳೆದ 6 ತಿಂಗಳಿಂದ ಪ್ರಕರಣದ ವಿಚಾರಣೆ ನಡೆಸುತ್ತಾ ಇದ್ದ ನ್ಯಾಯಾಲಯ ಸಂಪೂರ್ಣ ವಾದ-ಪ್ರತಿವಾದ ಆಲಿಸಿತ್ತು. ಮಾರ್ಚ್ ಕೊನೆಯ ವಾರದಲ್ಲಿ ವಾದ ಸಂಪೂರ್ಣವಾಗಿ ಆಲಿಸಿದ್ದ ನ್ಯಾಯಾಲಯ ಪ್ರಾಸಿಕ್ಯೂಷನ್ ಮತ್ತು ಆರೋಪಿಗಳ ಪರ ವಕೀಲರಿಗೆ ಹೆಚ್ಚುವರಿ ಲಿಖಿತ ವಾದ ಸಲ್ಲಿಕೆ ಮಾಡಲು ಅವಕಾಶ ನೀಡಿತ್ತು. ಏಪ್ರಿಲ್ 2 ರಂದು ಎಲ್ಲರೂ …

Read More »

ನೀರು ಕೇಳಿ ಪ್ರತಿಭಟಿಸಿದ್ದ 80 ಮಂದಿ ವಿರುದ್ಧ ಎಫ್‌ಐಆರ್

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಸರ್ಜಾಪುರ  ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಹಾಕಿ, ಪ್ರತಿಭಟನೆ ಮಾಡಿದ್ದ 80 ಜನರ ವಿರುದ್ಧ ಎಫ್‌ಐಆರ್  ದಾಖಲಾಗಿದೆ. ಪಿಡಿಓ ಅವರು ಪೊಲೀಸ್ ಠಾಣೆಯಲ್ಲಿ ನೀರು ಕೇಳಿದ 80 ಜನ ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಈ ಹಿನ್ನೆಲೆ ತನಿಖೆ ನಡೆಸಿ ವರದಿ ನೀಡುವಂತೆ ಸಚಿವ ಶರಣಪ್ರಕಾಶ್ ಪಾಟೀಲ್ ಆದೇಶಿಸಿದ್ದಾರೆ. ರಾಯಚೂರಿನಲ್ಲಿಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕುರಿತು …

Read More »

ಕದಂಬರ ಉಪರಾಜಧಾನಿ ಹಲಸಿಯಲ್ಲಿ ಮಹಾಲಕ್ಷ್ಮೀ ಜಾತ್ರೆ: ಭಕ್ತಿ ಭಾವದ ಹೊನ್ನಾಟದಲ್ಲಿ ಮಿಂದೆದ್ದ ಭಕ್ತಸಾಗರ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಐತಿಹಾಸಿಕ ಪ್ರಸಿದ್ಧ ಹಲಸಿ ಗ್ರಾಮದಲ್ಲಿ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಅತ್ಯಂತ ಅದ್ಧೂರಿಯಾಗಿ ನೆರವೇರುತ್ತಿದೆ. ಕದಂಬರ ಕಾಲದ ಈ ಉಪರಾಜಧಾನಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ದೇವಿಯ ಹೊನ್ನಾಟ ನಡೆಯುವ ಮೂಲಕ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ಸಿಕ್ಕಿದ್ದು, ಗ್ರಾಮದಾದ್ಯಂತ ಹಬ್ಬದ ವಾತಾವರಣ ಮನೆಮಾಡಿದೆ. ಖಾನಾಪುರ ತಾಲೂಕಿನ ಕದಂಬರ ಕಾಲದ ಐತಿಹಾಸಿಕ ಉಪರಾಜಧಾನಿ ಹಲಸಿ ಗ್ರಾಮದಲ್ಲಿ ಮಹಾಲಕ್ಷ್ಮೀ ಜಾತ್ರೆಯು ಅತ್ಯಂತ ಸಡಗರ ಹಾಗೂ ಭಕ್ತಿ ಭಾವದಿಂದ ಪ್ರಾರಂಭವಾಯಿತು. ಇಂದು ಬೆಳ್ಳಂಬೆಳಿಗ್ಗೆ …

Read More »

ಬೆಳಗಾವಿ ಜಿಲ್ಲೆಯಲ್ಲಿ ಜಲಕ್ಷಾಮದ ಭೀತಿ: ಬೇಸಿಗೆ ಆರಂಭದಲ್ಲೇ ಘಟಪ್ರಭಾ ನದಿ ಖಾಲಿ ಖಾಲಿ!

ಉತ್ತರ ಕರ್ನಾಟಕದ ರೈತರ ಮತ್ತು ಸಾರ್ವಜನಿಕರ ಜೀವನಾಡಿ ಘಟಪ್ರಭಾ ನದಿ ಈಗ ಬರಿದಾಗುತ್ತಿದೆ. ಮಹಾರಾಷ್ಟ್ರದಲ್ಲಿ ಹುಟ್ಟಿ ಕರುನಾಡಿನಾದ್ಯಂತ ಹರಿಯುವ ಈ ನದಿ, ಬೇಸಿಗೆಯ ಆರಂಭದಲ್ಲೇ ಬತ್ತಿ ಹೋಗುತ್ತಿರುವುದು ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಜನರಲ್ಲಿ ಆತಂಕ ಮೂಡಿಸಿದೆ. ಹಿಡಕಲ್ ಜಲಾಶಯದ ನೀರಿನ ಮಟ್ಟದಲ್ಲೂ ಗಣನೀಯ ಇಳಿಕೆಯಾಗಿದ್ದು, ಮುಂದಿನ ದಿನಗಳು ಕಷ್ಟಕರವಾಗುವ ಮುನ್ಸೂಚನೆ ಸಿಗುತ್ತಿದೆ. ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳ ಸಹಸ್ರಾರು ಹಳ್ಳಿಗಳಿಗೆ ಕುಡಿಯುವ ನೀರು ಹಾಗೂ ಕೃಷಿಗೆ ಆಧಾರವಾಗಿರುವ ಘಟಪ್ರಭಾ …

Read More »

ಅಶೋಕ ಚಂದರಗಿ ನೇತೃತ್ವದ ಕನ್ನಡ ಸಂಘಟನೆಗಳ ಹೋರಾಟಕ್ಕೆ ಸಂದ ಜಯ ರಾಜ್ಯೋತ್ಸವ ಅನುದಾನ ದುರ್ಬಳಕೆ ತನಿಖೆಗೆ ಸರ್ಕಾರ ಆದೇಶ

ಬೆಳಗಾವಿಯ ಹಿರಿಯ ಹೋರಾಟಗಾರ ಅಶೋಕ ಚಂದರಗಿ ನೇತೃತ್ವದಲ್ಲಿ ನಡೆದ ಕನ್ನಡ ಸಂಘಟನೆಗಳ ಹೋರಾಟಕ್ಕೆ ಕೊನೆಗೂ ದೊಡ್ಡ ಯಶಸ್ಸು ಸಿಕ್ಕಿದೆ. ರಾಜ್ಯೋತ್ಸವದ 50 ಲಕ್ಷ ರೂಪಾಯಿ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಬೆಳಗಾವಿ ಪ್ರಾದೇಶಿಕ ಆಯುಕ್ತರಿಗೆ ತನಿಖೆ ನಡೆಸಿ ವರದಿ ನೀಡುವಂತೆ ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶಿಸಿದೆ. ಬೆಳಗಾವಿ ಜಿಲ್ಲಾಡಳಿತವು ಕನ್ನಡ ಸಂಘಟನೆಗಳ ಸಲಹೆಗಳನ್ನು ಕಡೆಗಣಿಸಿ ಹಾಗೂ ಸರ್ಕಾರದ ಶರತ್ತುಗಳನ್ನು ಉಲ್ಲಂಘಿಸಿ ಕಾರ್ಯಕ್ರಮ ಆಯೋಜಿಸಿದ್ದರ ವಿರುದ್ಧ ಅಶೋಕ ಚಂದರಗಿ ಅವರ …

Read More »

ನಿರ್ಮಲಾ ಪ್ರಕಾಶ ಅವರಿಗೆ ರಂಗಸೃಷ್ಟಿಯ ರಂಗಗೌರವ ಪ್ರದಾನ

ಬೆಳಗಾವಿ: ವಿಶ್ವರಂಗಭೂಮಿ ದಿನಾಚರಣೆಯ ಹಿನ್ನೆಲೆಯಲ್ಲಿ ಹಿರಿಯ ರಂಗಕರ್ಮಿ ನಿರ್ಮಲಾ ಪ್ರಕಾಶ ಅವರಿಗೆ ಸೋಮವಾರ ರಂಗಸೃಷ್ಟಿಯ ಈ ವರ್ಷದ ರಂಗಗೌರವ ನೀಡಿ ಗೌರವಿಸಲಾಯಿತು. ಕನ್ನಡ ಸಾಹಿತ್ಯ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಗ ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ಮಲಾ ಪ್ರಕಾಶ, ಜೀವನದಲ್ಲಿ ಒಳ್ಳೆಯದನ್ನು ಕಲಿಯಲು ಸಿಕ್ಕ ಅವಕಾಶ ಕಳೆದುಕೊಳ್ಳಬಾರದು. ನನ್ನ ಜೀವನದಲ್ಲಿ ಅದನ್ನು ಸದಾ ಅಳವಡಿಸಿಕೊಂಡಿದ್ದೇನೆ ಎಂದರು. ತಮ್ಮ ದೀರ್ಘ ರಂಗ ಅನುಭವವನ್ನು ಅವರು ಹಂಚಿಕೊಂಡರು. ಮುಖ್ಯ ಅತಿಥಿಯಾಗಿ ಆಗಿ ಆಗಮಿಸಿದ್ದ ಹಿರಿಯ …

Read More »

43 ವರ್ಷಗಳ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವ ದೇವಿಯ ಮಂಟಪ ಸ್ಥಳದಲ್ಲಿ ಚನ್ನರಾಜ ಹಟ್ಟಿಹೊಳಿ ಪೂಜೆ

ಬೆಳಗಾವಿ: ಸುಮಾರು 43 ವರ್ಷಗಳ ದೀರ್ಘ ವಿರಾಮದ ಬಳಿಕ ಕಂಗ್ರಾಳಿ ಬಿಕೆ ಗ್ರಾಮದಲ್ಲಿ ನಡೆಯಲಿರುವ ಶ್ರೀ ಮಹಾಲಕ್ಷ್ಮಿ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ, ಗ್ರಾಮದಲ್ಲಿ ಧಾರ್ಮಿಕ ಉತ್ಸಾಹ ಮತ್ತು ಭಕ್ತಿಭಾವದ ವಾತಾವರಣ ನಿರ್ಮಾಣವಾಗಿದೆ. ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ದೇವಿಯ ಮಂಟಪ ಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಿಯ ಅನುಗ್ರಹದಿಂದ ಜಾತ್ರಾ ಮಹೋತ್ಸವವು ಯಾವುದೇ ಅಡಚಣೆಗಳಿಲ್ಲದೆ, ಭಕ್ತಿಪೂರ್ವಕವಾಗಿ …

Read More »

ಬೆಳಗಾವಿಯ ಯೆಳ್ಳೂರ ಫಲಕ ವಿವಾದ: 10 ವರ್ಷಗಳ ಸುದೀರ್ಘ ಹೋರಾಟಕ್ಕೆ ಸಿಕ್ಕಿತು ಜಯ; ಎಲ್ಲಾ ಆರೋಪಿಗಳು ನಿರ್ದೋಷಿ ಮುಕ್ತ!

ಬೆಳಗಾವಿಯ ಯೆಳ್ಳೂರಿನಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ‘ಮಹಾರಾಷ್ಟ್ರ ರಾಜ್ಯ ಯೆಳ್ಳೂರ’ ಫಲಕ ವಿವಾದಕ್ಕೆ ಸಂಬಂಧಿಸಿದಂತೆ ಈಗ ಮಹತ್ವದ ತೀರ್ಪು ಹೊರಬಿದ್ದಿದೆ. ಅಂದು ಗ್ರಾಮಸ್ಥರ ಮೇಲೆ ದಾಖಲಾಗಿದ್ದ ಎಲ್ಲಾ ಏಳು ಪ್ರಕರಣಗಳಲ್ಲಿಯೂ ಇದೀಗ ನ್ಯಾಯಾಲಯವು ಎಲ್ಲರನ್ನೂ ನಿರ್ದೋಷಿಗಳೆಂದು ಘೋಷಿಸಿದ್ದು, ಮರಾಠಿ ಭಾಷಿಕರ ಕಾನೂನು ಹೋರಾಟಕ್ಕೆ ದೊಡ್ಡ ಯಶಸ್ಸು ಸಿಕ್ಕಂತಾಗಿದೆ. ಜುಲೈ 27, 2014 ರಂದು ಯೆಳ್ಳೂರಿನಲ್ಲಿ ‘ಮಹಾರಾಷ್ಟ್ರ ರಾಜ್ಯ’ ಎಂಬ ಫಲಕವನ್ನು ತೆರವುಗೊಳಿಸಿದ ಹಿನ್ನಲೆ ದೊಡ್ಡ ಮಟ್ಟದ ಗದ್ದಲ ನಡೆದಿತ್ತು. …

Read More »

ಬೆಳಗಾವಿಯಲ್ಲಿ 107ನೇ ವರ್ಷದ ಶಿವಜಯಂತಿ ಸಂಭ್ರಮ: ಏಪ್ರಿಲ್ 21ಕ್ಕೆ ಭವ್ಯ ರೂಪಕಗಳ ಮೆರವಣಿಗೆ!

ಬೆಳಗಾವಿಯ ಐತಿಹಾಸಿಕ ಹಾಗೂ ಸಾಂಪ್ರದಾಯಿಕ ಶಿವಜಯಂತಿ ಉತ್ಸವದ ಪೂರ್ವಸಿದ್ಧತೆಗಾಗಿ ಶಹಾಪುರ ಕೇಂದ್ರವರ್ತಿ ಶ್ರೀ ಶಿವಜಯಂತಿ ಉತ್ಸವ ಮಹಾಮಂಡಳದ ಮಹತ್ವದ ಸಭೆ ಜರುಗಿತು. 107 ವರ್ಷಗಳ ಇತಿಹಾಸವಿರುವ ಈ ಬಾರಿಯ ಉತ್ಸವದಲ್ಲಿ ಏಪ್ರಿಲ್ 19 ರಂದು ಶಿವಜಯಂತಿ ಹಾಗೂ ಏಪ್ರಿಲ್ 21 ರಂದು ಭವ್ಯ ರೂಪಕಗಳ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ. ಶಹಾಪುರದ ಸಾಯಿಗಣೇಶ ಸೊಸೈಟಿ ಸಭಾಂಗಣದಲ್ಲಿ ಅಧ್ಯಕ್ಷ ನೇತಾಜಿ ಜಾಧವ್ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು. ಈ ವೇಳೆ ಮಾತನಾಡಿದ …

Read More »

ನಂದಗಡ ಆಸ್ಪತ್ರೆಯಲ್ಲಿ ವೈದ್ಯರ ಗೈರು: ರೋಗಿಗಳ ಅಳಲು ಕೇಳುವವರೇ ಇಲ್ಲ!

ಖಾನಾಪೂರ ತಾಲೂಕಿನ ನಂದಗಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ. ಚಿಕಿತ್ಸೆಗಾಗಿ ಬರುವ ರೋಗಿಗಳು ಗಂಟೆಗಟ್ಟಲೆ ಕಾಯುವಂತಾಗಿದ್ದು, ಕೇಳುವವರು ಯಾರೂ ಇಲ್ಲದಂತಾಗಿದೆ. ಖಾನಾಪೂರ ತಾಲೂಕಿನ ನಂದಗಡದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಬರುವ ಸಾರ್ವಜನಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಮುಖ್ಯವಾಗಿ ಇಲ್ಲಿನ ಪೀಡಿಯಾಟ್ರಿಷಿಯನ್ (ಮಕ್ಕಳ ವೈದ್ಯರು) ಲಭ್ಯವಿಲ್ಲದ ಕಾರಣ, ಜ್ವರ ಮತ್ತು ಇತರೆ ಕಾಯಿಲೆಗಳಿಂದ ಬಳಲುತ್ತಿರುವ ನೂರಾರು ಮಕ್ಕಳು ಸರಿಯಾದ ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆಯೆಂಬಂತೆ, ತಮಗೆ …

Read More »