ಉಡುಪಿ : ಸಂಶಯದ ಸುಳಿಯಲ್ಲಿ ಯುವಕನ ಆತ್ಮಹತ್ಯೆ? ಮದುವೆಯಾಗಿ ಒಂದೇ ತಿಂಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತ ಸುದೀಪ್ ಶೆಟ್ಟಿ ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನಲ್ಲಿ ನಡೆದ ಘಟನೆ ಮೃತ ಸುದೀಪ್ ಮೂಲತಃ ನೆಲ್ಯಾಡಿ ನಿವಾಸಿ. ಮೃತನ ಪತ್ನಿಯ ವಿರುದ್ಧ ದೂರು ನೀಡಿದ ಸುದೀಪ್ ತಂದೆ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾಳೆ ಎಂದು ಸೊಸೆಯ ವಿರುದ್ಧವೇ ದೂರು ರಿಜಿಸ್ಟರ್ ಮ್ಯಾರೇಜ್ ಆಗಿದ್ದ ಸುದೀಪ್ ಹಾಗೂ ಸೌಮ್ಯ ಶೆಟ್ಟಿ ನಾಟಕ ಕಲಾವಿದೆ ಹಾಗೂ ಮೇಕಪ್ …
Read More »ರಾಜ್ಯದ ಕರಾವಳಿ ಭಾಗದಲ್ಲಿ ಇಂದೇ ರಂಜಾನ್ ಹಬ್ಬ ಆಚರಣೆ : ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ
ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಹಿಂದೆ ರಂಜಾನ್ ಹಬ್ಬ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಭಾಗದಲ್ಲಿ ರಂಜಾನ್ ಹಬ್ಬದ ಸಂಭ್ರಮ ಕಳೆಕಟ್ಟಿದೆ. ಕಳೆದ ಒಂದು ತಿಂಗಳಿಂದ ಮುಸ್ಲಿಮರು ಉಪವಾಸ ಆಚರಿಸಿದ್ದರು. ಇಂದು ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ಮೂಲಕ ಹಬ್ಬ ಆಚರಣೆ ಮಾಡುತ್ತಾರೆ. ಹೌದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಅತ್ಯಂತ …
Read More »ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್ಐ ಸಾವು
ಉಡುಪಿ: ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್ಐ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಇಂದು ಪೊಲೀಸ್ ಇಲಾಖೆ ಮ್ಯಾರಥಾನ್ ಆಯೋಜಿಸಿತ್ತು. ‘ಜಿಲ್ಲಾ ಪೊಲೀಸ್ ನಮ್ಮ ಪೊಲೀಸ್ ನಮ್ಮ ಹೆಮ್ಮೆ’ ಘೋಷ ವಾಕ್ಯದೊಂದಿಗೆ ಮ್ಯಾರಥಾನ್ ಆಯೋಜಿಸಲಾಗಿತ್ತು. ಡ್ರಗ್ಸ್ ಮುಕ್ತ ಕರ್ನಾಟಕ ಧ್ಯೇಯದೊಂದಿಗೆ ಓಟ ಆರಂಭಗೊಂಡಿತ್ತು. ನಗರದ ತಾಲೂಕು ಪಂಚಾಯತ್ ಮುಂಭಾಗದ ರಸ್ತೆಯಲ್ಲಿ ಎಸ್ಐ …
Read More »ನಗರಸಭೆಯ ಆಸ್ತಿ ತೆರಿಗೆ ಹಣ ದುರ್ಬಳಕೆ: ಇಬ್ಬರ ಬಂಧನ
ಉಡುಪಿ: ನಗರಸಭೆಯ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಸರಕಾರಕ್ಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ನಗರಸಭೆ ಕಚೇರಿ ಹೊರಗಡೆ ತೆರಿಗೆ ಸಲಹೆಗಾರ್ತಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬನ್ನಂಜೆ ನಿವಾಸಿ ಶಾಲಿನಿ ಹಾಗೂ ಕುಕ್ಕಿಕಟ್ಟೆಯ ಗಣೇಶ್ ಎಂದು ಗುರುತಿಸಲಾಗಿದೆ. ಆನಂದ ಸುವರ್ಣ ಎಂಬವರು ಕಲ್ಮಾಡಿಯಲ್ಲಿರುವ ತನ್ನ ಕಟ್ಟಡಕ್ಕೆ ಸಂಬಂಧಪಟ್ಟಂತೆ 2025ರ ಅ.16ರಂದು 12 ವರ್ಷಗಳ ಆಸ್ತಿ ತೆರಿಗೆ ಮೊತ್ತ ಒಟ್ಟು 34,730 ರೂ. ಹಣವನ್ನು …
Read More »ಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಕೊಲೆಗಳು ಆಗಬಾರದು: ಪ್ರಮೋದ್ ಮುತಾಲಿಕ್
ಉಡುಪಿ, ಜು.29: ಸುರತ್ಕಲ್ ನಲ್ಲಿ ಯುವಕನೋರ್ವನ ಕೊಲೆ ಯಾವ ಕಾರಣಕ್ಕೆ ಆಗಿದೆಯೆಂಬುದು ಗೊತ್ತಿಲ್ಲ. ಆದರೆ ಕ್ರಿಯೆಗೆ ಪ್ರತಿಕ್ರಿಯೆ ಎಂಬಂತೆ ಕೊಲೆಗಳಾಗಬಾರದು. ಹಿಂದು ಮತ್ತು ಮುಸ್ಲಿಮ್ ಧಾರ್ಮಿಕ ಮುಖಂಡರು ಒಟ್ಟು ಸೇರಿ ಇಂತಹ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಉಡುಪಿಯಲ್ಲಿಂದು ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದ.ಕ. ಜಿಲ್ಲೆಯ ಸುಳ್ಯದಲ್ಲಿ ನಡೆದ ಪ್ರವೀಣ್ ಹತ್ಯೆ ಅತ್ಯಂತ ದುರದೃಷ್ಟಕರ. ಬಿಜೆಪಿಗರು ಕಾರ್ಯಕರ್ತರ ಕಷ್ಟ ಸುಖಕ್ಕೆ …
Read More »ಗಂಡನನ್ನ ಕೊಲೆ ಮಾಡಿ ಹೋಮ ಕುಂಡದಲ್ಲಿ ಸುಟ್ಟ ತಾಯಿ ಮಕ್ಕಳಿಗೆ ಜೀವಾವಧಿ ಶಿಕ್ಷೆ…
ಉಡುಪಿ, : ಉಡುಪಿ ಮೂಲದ ಅನಿವಾಸಿ ಭಾರತೀಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಆರೋಪಿಗಳಿಗೆ ಆರೋಪಿಗಳಿಗೆ ಜೀವಿತಾವಧಿ ಶಿಕ್ಷೆ ಪ್ರಕಟವಾಗಿದೆ. ಕರಾವಳೀ ಭಾಗದಲ್ಲಿ ಈ ಕೊಲೆ ಭಾರೀ ಸಂಚಲನ ಸೃಷ್ಟಿಸಿತ್ತು. ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ ನಂತರ ಹೋಮಕುಂಡದಲ್ಲಿ ಸುಟ್ಟಿದ್ದ ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ ಹಾಗೂ ರಾಜೇಶ್ವರಿ ಗೆಳೆಯ ನಿರಂಜನ ಭಟ್ಗೆ ಶಿಕ್ಷೆ ಪ್ರಕಟವಾಗಿದೆ. ಮೂವರು ಪ್ರಮುಖ ಆರೋಪಿಗಳಿಗೆ …
Read More »ಬ್ಲ್ಯಾಕ್ ಫಂಗಸ್ ಚಿಕಿತ್ಸೆ:ಕನ್ನಡಿಗ ಬಾಂಡ್ಯ ಶ್ರೀಕಾಂತ ಪೈ ಸಂಶೋಧನೆ
ಗಂಗೊಳ್ಳಿ (ಉಡುಪಿ): ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅತ್ಯಂತ ಪರಿಣಾಮಕಾರಿ ಎನಿಸಿರುವ ‘ಲೈಪೊಸೊಮನ್ ಆಂಪೊಟೆರಿಸಿನ್ ಬಿ ಔಷಧವನ್ನು ಭಾರತ್ ಸೀರಮ್ಸ್ ಆಯಂಡ್ ವ್ಯಾಕ್ಸಿನ್ಸ್ ಲಿಮಿಟೆಡ್ ಕಂಪನಿ ಸಂಶೋಧಿಸಿದ್ದು, ಕರಾವಳಿ ಕನ್ನಡಿಗ ಬಾಂಡ್ಯ ಶ್ರೀಕಾಂತ ಪೈ ಸಂಶೋಧನಾ ತಂಡದ ನೇತೃತ್ವ ವಹಿಸಿದ್ದರೆಂಬ ಹೆಮ್ಮೆಯ ವಿಚಾರ ಬೆಳಕಿಗೆ ಬಂದಿದೆ. ಶ್ರೀಕಾಂತ ಪೈ ನೇತೃತ್ವದ ತಂಡವು ವಿಭಿನ್ನ ಪರಿಣಾಮಕಾರಿತ್ವ, ಸುರಕ್ಷತೆ ಮತ್ತು ವಿಷತ್ವ ಪ್ರೊಫೈಲ್ಗಳನ್ನು ಹೊಂದಿರುವ 4 ಉತ್ಪನ್ನಗಳನ್ನು ಅಭಿವೃದ್ಧಿಪಡಿಸಿದ್ದು, ಇದೀಗ ಈ ಉತ್ಪನ್ನಗಳೇ ಬ್ಲಾಯಕ್ ಫಂಗಸ್ …
Read More »ಬಾಲಕಿಗೆ ಪ್ರೀತಿಸುವಂತೆ ಕಿರುಕುಳ : ಮೆಸ್ಕಾಂ ಸಿಬ್ಬಂದಿ ಪೊಲೀಸರ ವಶಕ್ಕೆ
ಪುತ್ತೂರು(ಡಿಸೆಂಬರ್. 22): ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಸವಣೂರು ಸಮೀಪದ ನಿವಾಸಿಯಾಗಿರುವ ಪಿಯುಸಿ ಓದುತ್ತಿರುವ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳಿಸಿ, ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ ಆರೋಪದ ಮೇರೆಗೆ ಸವಣೂರಿನ ಮೆಸ್ಕಾಂ ಸಿಬ್ಬಂದಿಯೊಬ್ಬನನ್ನು ಪೋಕ್ಸೋ ಕಾಯ್ದೆಯಡಿ ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಪೋಷಕರ ದೂರಿನ ಹಿನ್ನಲೆಯಲ್ಲಿ ಪೊಲೀಸರು ಮೆಸ್ಕಾಂ ಉದ್ಯೋಗಿಯಾಗಿರುವ ಸೊಯೂಬ್ ಕೊತ್ವಾಲ್ ಎಂಬಾತನನ್ನು ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂ ಮೂಲಕ ಪ್ರೀತಿಸುವಂತೆ ಕಿರುಕುಳ ಕೊಡುತ್ತಿರುವುದಲ್ಲದೆ, ಬಾಲಕಿಗೆ ಅಸಭ್ಯವಾಗಿ ಸಂದೇಶ …
Read More »ವಿಧಾನ ಪರಿಷತ್ ಸಭಾಪತಿ ಕಾಂಗ್ರೆಸ್ ನಿಯಂತ್ರಣದಲ್ಲಿದ್ದಾರೆ
ಉಡುಪಿ: ವಿಧಾನ ಪರಿಷತ್ ಕಲಾಪದಲ್ಲಿ ನಡೆದ ಗದ್ದಲವನ್ನು ಕುರಿತು ಮಾತನಾಡಿರುವ ಉಡುಪಿ ಶಾಸಕ ಕೋಟ ಶ್ರಿನಿವಾಸ್ ಪೂಜಾರಿ ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರನ್ನು ಕಾಂಗ್ರೆಸ್ ನಿಯಂತ್ರಣ ಮಾಡುವುದು ಬಿಟ್ಟಿದ್ದರೆ ಗೊಂದಲ ಇರುತ್ತಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಗದ್ದಲದ ಕುರಿತು ಪ್ರತಿಕ್ರಿಯಿಸಿರುವ ಸಚಿವರು ಕಾಂಗ್ರೆಸ್ ನಾಯಕರು ಸಭಾಪತಿ ತಾನು ಹೇಳಿದಂತೆ ಕೇಳಬೇಕು ಎಂದು ಸಿದ್ದರಾಮಯ್ಯ ಸಹಿತ ಎಲ್ಲರೂ ಕಾಂಗ್ರೆಸ್ಸೀಕರಣ ಮಾಡುತ್ತಿದ್ದಾರೆ. ಕಾಂಗ್ರೆಸ್ಸೀಕರಣ ಮಾಡಿದ್ದರ ಫಲವೇ ವಿಧಾನಪರಿಷತ್ ಗದ್ದಲಕ್ಕೆ …
Read More »ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಶುರು
ಉಡುಪಿ: ಸೂರ್ಯಾಸ್ತ ಆಗುತ್ತಿದ್ದಂತೆ ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಶುರುವಾಗಿದೆ. ಕಾರ್ಕಳ ಹೆಬ್ರಿ ತಾಲೂಕಿನಲ್ಲಿ ಸಂಜೆಯೇ ಮಳೆ ಆರಂಭ ಆಗಿತ್ತು. ಸಾಗರ ತೀರದ ತಾಲೂಕುಗಳಲ್ಲಿ ಎರಡು ಗಂಟೆ ವರ್ಷಧಾರೆಯಾಗಿದೆ. ಅರಬ್ಬಿ ಸಮುದ್ರದ ಸಾಲಿನ ತಾಲೂಕುಗಳಾದ ಉಡುಪಿ, ಕಾಪು, ಕುಂದಾಪುರದಲ್ಲಿ ಜೋರು ವರ್ಷಧಾರೆಯಾಗಿದೆ. ಬೈಂದೂರು ತಾಲೂಕಿನ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಪಶ್ಚಿಮ ಘಟ್ಟದ ತಪ್ಪಲಲ್ಲಿ ಗಾಳಿ ಸಹಿತ ಮಳೆಯಾಗಿದೆ. ಇಂದು ದಿನಪೂರ್ತಿ ಉಷ್ಟಾಂಶ ಹೆಚ್ಚಾಗಿತ್ತುಉಡುಪಿ ಜಿಲ್ಲೆಯಲ್ಲಿ ದಿಢೀರ್ ಮಳೆಯಾಗಿದ್ದರಿಂದ ಪೇಟೆಯೊಳಗೆ …
Read More »
Laxmi News 24×7