Breaking News

ಉಡುಪಿ

ನಾವು ವಾರದಲ್ಲಿ ಮೂರು ಹೊತ್ತು ಉಪವಾಸ ಮಾಡೋಣ,ಆಹಾರವನ್ನು ತ್ಯಾಗ ಮಾಡಿದರೆ ದೇಶದಲ್ಲಿ ಆಹಾರ ವಸ್ತುಗಳನ್ನು ಉಳಿಸಿದಂತಾಗುತ್ತದ : ಉಡುಪಿ ಅದಮಾರು ಸ್ವಾಮೀಜಿ

ಉಡುಪಿ: ದೇಶಾದ್ಯಂತ ಕೊರೊನಾ ವೈರಸ್ ಹಾವಳಿ ಜಾಸ್ತಿಯಾಗಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ದೇಶದಲ್ಲಿ ಆಹಾರ ವಸ್ತುಗಳ ಲಭ್ಯತೆ ಕಷ್ಟವಾಗಲಿದೆ ಎಂದು ಉಡುಪಿ ಅದಮಾರು ಸ್ವಾಮೀಜಿ ಕಳವಳ ವ್ಯಕ್ತಪಡಿಸಿದ್ದಾರೆ. ದೇಶಕ್ಕೋಸ್ಕರ, ಭಾರತದಲ್ಲಿ ಜೀವಿಸುವ ಮನುಷ್ಯರಿಗೋಸ್ಕರ ನಾವು ತ್ಯಾಗ ಮಾಡಲು ಇದು ಸೂಕ್ತ ಸಮಯ. ಹಾಗಾಗಿ ನಾವು ವಾರದಲ್ಲಿ ಮೂರು ಹೊತ್ತು ಉಪವಾಸ ಮಾಡೋಣ ಎಂದು ಉಡುಪಿ ಕೃಷ್ಣಮಠದ ಪರ್ಯಾಯ ಸ್ವಾಮೀಜಿ ಕರೆ ನೀಡಿದ್ದಾರೆ. ವಾರಕ್ಕೆ ಮೂರು ಹೊತ್ತು ಆಹಾರವನ್ನು ತ್ಯಾಗ ಮಾಡಿದರೆ …

Read More »

ಪಡುಕೋಣೆ ಚರ್ಚಿನಲ್ಲಿ ಪ್ರಾರ್ಥನೆ- ಧರ್ಮಗುರು ಸೇರಿ 7 ಮಂದಿ ಮೇಲೆ ಕೇಸ್

ಉಡುಪಿ: ಗುಡ್ ಫ್ರೈಡೇ ದಿನವೇ ಚರ್ಚಿನ ಧರ್ಮಗುರು ಮತ್ತು ಪ್ರಾರ್ಥನೆಯಲ್ಲಿ ಪಾಲ್ಗೊಂಡವರ ಮೇಲೆ ಕೇಸು ದಾಖಲಾಗಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಪಡುಕೋಣೆಯಲ್ಲಿ ಗುಡ್ ಫ್ರೈಡೇ ಹಿನ್ನೆಲೆಯಲ್ಲಿ ಇಂದು ಸಾಮೂಹಿಕ ಪ್ರಾರ್ಥನೆ ನಡೆದಿದೆ. ಧರ್ಮಗುರು ಮತ್ತು ಆರು ಜನರ ಮೇಲೆ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ. ಪಡುಕೋಣೆಯ ಸಂತ ಅಂತೋನಿ ಚರ್ಚ್‍ನಲ್ಲಿ ಇಂದು ಗುಡ್ ಫ್ರೈಡೇ ಪ್ರಾರ್ಥನೆ ನಡೆದಿತ್ತು. ಬೈಂದೂರು ತಾಲೂಕು ನಾಡ ಗ್ರಾಮದಲ್ಲಿರುವ ಚರ್ಚ್ ಧರ್ಮಗುರು …

Read More »

ಬೆಂಗ್ಳೂರಿನಿಂದ ಮಂಗ್ಳೂರಿನವರೆಗೂ ಬಂದು ಜೈಲು ಸೇರಿದ ಅಸಾಮಿ…..

ಮಂಗಳೂರು: ಪ್ರೆಸ್ ಅಂತ ನಕಲಿ ಗುರುತಿನ ಚೀಟಿ ಅಂಟಿಸಿ ವಾಹನ ಚಲಾಯಿಸುತ್ತಿದ್ದ ಮಧ್ಯ ವಯಸ್ಕನೊಬ್ಬ ಮಂಗಳೂರಿನಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ಹುಸೈನ್ ಅಲಿ (58) ಬಂಧಿತ ನಕಲಿ ಪತ್ರಕರ್ತ. ಕೊರೊನಾ ಭೀತಿಯಿಂದ ದೇಶಾದ್ಯಂತ ಲಾಕ್‍ಡೌನ್ ಘೋಷಿಸಲಾಗಿದೆ. ಯಾರು ಅನಗತ್ಯವಾಗಿ ಮನೆಯಿಂದ ಹೊರಗಡೆ ಬರುವಂತಿಲ್ಲ. ಆದರೆ ತುರ್ತು ಸೇವೆಯಲ್ಲಿ ಇರುವವರಿಗೆ, ವಿವಿಧ ಮಾಧ್ಯಮಗಳಲ್ಲಿ ವೃತ್ತಿ ಮಾಡುವವರಿಗೆ ವಿನಾಯಿತಿ ಇದೆ. ಇದನ್ನೇ ಬಂಡವಾಳ ಮಾಡಿಕೊಂಡು ಪ್ರೆಸ್ ಅಂತ ನಕಲಿ ಗುರುತಿನ ಚೀಟಿ ಅಂಟಿಸಿ …

Read More »

ಕ್ವಾರಂಟೈನ್‍ಗಳಿಂದ ಬ್ರಾಂಡೆಡ್ ಬೇಡಿಕೆ – ಉಡುಪಿಯಲ್ಲಿ ಹೊಸ ತಲೆನೋವು ಶುರು

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಕ್ವಾರಂಟೈನ್‍ನಲ್ಲಿರುವ ಜನರ ಕಿರಿಕ್ ಜಾಸ್ತಿಯಾಗುತ್ತಿದೆ. ನಮಗೆ ಬ್ರಾಂಡೆಡ್ ಐಟಂ ಬೇಕು ಅಂತ ಸಿಬ್ಬಂದಿಗೆ ಒತ್ತಡ ಹಾಕುತ್ತಿದ್ದಾರೆ. ಉಡುಪಿ ಜಿಲ್ಲೆಯ ನರ್ಸ್, ಆಶಾ ಕಾರ್ಯಕರ್ತರಿಗೆ ಕ್ವಾರಂಟೈನ್‍ಗಳು ದುಂಬಾಲು ಬೀಳುತ್ತಿದ್ದಾರೆ. ವಿದೇಶದಿಂದ ಬಂದ ವ್ಯಕ್ತಿಗಳ ಕುಟುಂಬಕ್ಕೆ ಜಿಲ್ಲಾಡಳಿತ ಒಂದು ತಿಂಗಳ ಕಾಲ ಹೋಂ ಕ್ವಾರಂಟೈನ್ ವಿಧಿಸಿತ್ತು. ಕುಟುಂಬದ ಯಾವ ಸದಸ್ಯರು ಹೊರಗೆ ಬಾರದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮತ್ತು ಆರೋಗ್ಯ ಕಾರ್ಯಕರ್ತರು ದಿಗ್ಬಂಧನ ಹಾಕಿದ್ದರು. ಒಂದು ಕುಟುಂಬಕ್ಕೆ ಬೇಕಾದ …

Read More »

ಸರ್ಕಾರಕ್ಕೆ ವೈದ್ಯರಿಗೆ ಸಹಕಾರ ನೀಡದವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು :ಸಂಸದೆ ಶೋಭಾ ಕರಂದ್ಲಾಜೆ

ಉಡುಪಿ: ದೇಶದಲ್ಲಿ ಕೊರೊನಾ ಜಿಹಾದ್ ನಡೆಯುತ್ತಿದೆ. ಸರ್ಕಾರಕ್ಕೆ ವೈದ್ಯರಿಗೆ ಸಹಕಾರ ನೀಡದವರಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಒತ್ತಾಯಿಸಿದ್ದಾರೆ. ಉಡುಪಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೊರೊನಾ ರೋಗಿ ವೈದ್ಯರನ್ನು ತಬ್ಬಿಕೊಳ್ಳುತ್ತಾರೆ. ನರ್ಸ್ ಗಳಿಗೆ ರೋಗ ಹಬ್ಬಿಸುವ ಧಮ್ಕಿ ಹಾಕಿದ್ದಾರೆ. ಇದು ಭಯೋತ್ಪಾದನೆಯ ಮುಂದುವರಿದ ಭಾಗ. ಕ್ವಾರಂಟೈನ್‍ನಲ್ಲಿ ಇರುವ ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು. ಕಠಿಣವಾದ ಕಾನೂನು ದೇಶದಲ್ಲಿ ಜಾರಿಗೆ ಬರಬೇಕು ಎಂದು ಆಗ್ರಹಿಸಿದ್ದಾರೆ. ಕೊರೊನಾ ವಿಚಾರದಲ್ಲಿ …

Read More »

ಕೊರೊನಾ ವೈರಾಣು ಭೀತಿಯಿಂದ ಅಂತ್ಯಸಂಸ್ಕಾರ ನಡೆಸಲು ಹಿಂದೇಟು ಹಾಕಿದರು…! ಕೊನೆಗೆ ನಾಗರಿಕ ಸಮಿತಿಯಿಂದ ಅಂತ್ಯಸಂಸ್ಕಾರ ನಡೆಯಿತು.

ಕೊರೊನಾ ವೈರಾಣು ಭೀತಿಯಿಂದ ಅಂತ್ಯಸಂಸ್ಕಾರ ನಡೆಸಲು ಹಿಂದೇಟು ಹಾಕಿದರು…! ಕೊನೆಗೆ ನಾಗರಿಕ ಸಮಿತಿಯಿಂದ ಅಂತ್ಯಸಂಸ್ಕಾರ ನಡೆಯಿತು. ಉಡುಪಿ,ಏ.2; ಕೊರೊನಾ ವ್ಯಾಧಿಯ ಭಯದಿಂದ ವೃದ್ಧನ ಅಂತ್ಯಸಂಸ್ಕಾರ ನಡೆಸಲು ಮನೆ ಮಂದಿ ಭಯಭೀತರಾಗಿ ಹಿಂದೇಟು ಹಾಕಿದರು. ಕೊನೆಗೆ ಉಡುಪಿ ಜಿಲ್ಲಾ ನಾಗರಿಕ ಸಮಿತಿ, ವೃದ್ಧನ ಅಂತ್ಯಸಂಸ್ಕಾರವನ್ನು ನೆರವೆರಿಸಿತು. ಇಂತಹ ಮಾನವಿತೆಯ ಸತ್ಕಾರ್ಯವು ಉಡುಪಿಯಲ್ಲಿ ಮಾ.30 ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಸಿದ್ಧಾಪುರ- ಕಮಲಶಿಲೆಯ ನಿವಾಸಿ ಮಂಜುವೀರ( 80ವ) ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಕಳೆದ …

Read More »

ದೆಹಲಿಯ ಜಮಾತ್ ಸಮಾವೇಶಕ್ಕೆ ಉಡುಪಿ ಜಿಲ್ಲೆಯಿಂದ ಯಾರೂ ಪಾಲ್ಗೊಂಡಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯ ಇಲ್

ಉಡುಪಿ: ಕೊರೊನಾ ಹಾಟ್ ಸ್ಪಾಟ್ ದೆಹಲಿಯ ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಉಡುಪಿ ಜಿಲ್ಲೆಯಿಂದ 16 ಮಂದಿ ಶಿಬಿರಾರ್ಥಿಗಳು ಪಾಲ್ಗೊಂಡಿದ್ದಾರೆ ಎಂಬ ಮಾಹಿತಿಯಿದೆ. ಉಡುಪಿ, ಕುಂದಾಪುರ- ಬೈಂದೂರು, ಕಾರ್ಕಳ, ಪಡುಬಿದ್ರೆ ವ್ಯಾಪ್ತಿಯ ಯುವಕರು ಮತ್ತು ಮಧ್ಯವಯಸ್ಕರು ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡಿದ್ದಾರೆಂಬ ಮಾಹಿತಿ ರಾಜ್ಯದಿಂದ ಜಿಲ್ಲೆಗೆ ರವಾನೆಯಾಗಿದೆ. ಮಂಗಳವಾರ ರಾತ್ರಿ ಈ ಮಾಹಿತಿ ಬಂದಿದ್ದು, ಆಯಾ ಪೊಲೀಸ್ ಠಾಣೆಯ ಮೂಲಕ ಶಿಬಿರಾರ್ಥಿಗಳನ್ನು ಹಾಗೂ ಶಿಬಿರಾರ್ಥಿಗಳ ಸಂಪರ್ಕಕ್ಕೆ ಬಂದವರನ್ನು ಗುರುತಿಸುವ ಕೆಲಸ ನಡೆದಿದೆ. 16 …

Read More »

ಮನಕಲುಕುತ್ತೆ ಮಂಗಳೂರಿನ ಹಸುಗೂಸಿನ ಕಥೆ”……10 ತಿಂಗಳ ಮಗುವಿಗೆ ಕೊರೊನಾ ಚಿಕಿತ್ಸೆ

ಮಂಗಳೂರು: 10 ತಿಂಗಳ ಮಗುವಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಂದನಿಗಾಗಿ ಅಮ್ಮನ ತ್ಯಾಗದ ಕಥೆ ಮನಕಲಕುತ್ತದೆ. ಮಗುವಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದರೂ, ಕಂದಮ್ಮನಿಗೆ ಎದೆ ಹಾಲು ನೀಡುವುದನ್ನ ತಾಯಿ ನಿಲ್ಲಿಸಿಲ್ಲ. ಕೇರಳಕ್ಕೆ ಹೋದಾಗ ಮಗುವಿಗೆ ಕೊರೊನಾ ಸೋಂಕು ತಗುಲಿತ್ತು. ಐಸೋಲೇಷನ್ ವಾರ್ಡ್ ನಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅಮ್ಮನ ಎದೆ ಹಾಲು ಕುಡಿದ್ರೆ ಮಾತ್ರ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಮಗುವಿಗೆ ಕೊರೊನಾ ಸೋಂಕು ತಗುಲಿದ್ದರೂ ತಾಯಿ …

Read More »

ವಿದೇಶದಿಂದ ಬಂದವರು ಸುತ್ತಾಡಿದ್ರೆ ಪಾಸ್‍ಪೋರ್ಟ್ ಮುಟ್ಟುಗೋಲು

ಉಡುಪಿ: ವಿದೇಶದಿಂದ ಬಂದು 28 ದಿನ ಗೃಹ ಬಂಧನದಲ್ಲಿ ಇರದೇ ಬೇಕಾಬಿಟ್ಟಿ ಸುತ್ತಾಡಿದ್ರೆ ನಿಮ್ಮ ಪಾಸ್‍ಪೋರ್ಟ್ ಮುಟ್ಟುಗೋಲು ಹಾಕುತ್ತೇವೆ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಗೃಹ ಬಂಧನದಲ್ಲಿರುವವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಕೊರೊನಾ ಹರಡದಂತೆ ಕೇಂದ್ರ ಸರ್ಕಾರ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಿದೆ. ಆದರೆ ಆದೇಶ ಉಲ್ಲಂಘಿಸಿ ಶಂಕಿತರು ಸುತ್ತಾಡುವ ಮಾಹಿತಿ ಸಾರ್ವಜನಿಕರಿಂದ ಸಿಕ್ಕಿದೆ. ಒಂದೊಂದು ಮನೆಗೆ ಮೂರು ಬಾರಿ ಅಧಿಕಾರಿಗಳು, …

Read More »

ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಪ್ರಕರಣ

ದಕ್ಷಿಣ ಕನ್ನಡದಲ್ಲಿ ಒಂದೇ ದಿನ ಎರಡು ಪ್ರಕರಣ ಮಂಗಳೂರು: 21 ವರ್ಷದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಒಂದೇ ದಿನ ರಾಜ್ಯದಲ್ಲಿ 9 ಜನರಿಗೆ ಸೋಂಕು ತಗುಲಿದ್ದು ಜನ ಆತಂಕಕ್ಕೊಳಗಾಗಿದ್ದಾರೆ. ಕೊರೊನಾ ಸೋಂಕಿತ ಪ್ರಕರಣ 64: 21 ವರ್ಷದ ಯುವಕ, ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿಯಾಗಿದ್ದು, ದುಬೈ ದೇಶಕ್ಕೆ ಪ್ರಯಾಣ ಬೆಳೆಸಿರುವ ಹಿನ್ನೆಲೆಯಿದ್ದು, ದಿನಾಂಕ 22.03.2020 ರಂದು ಭಾರತಕ್ಕೆ ವಾಪಸ್ಸಾಗಿರುತ್ತಾರೆ. ಯುವಕನನ್ನು ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ …

Read More »