Breaking News

ಕಲಬುರ್ಗಿ

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ; ಬಿಗಿ ಪೊಲೀಸ್ ಬಂದೋಬಸ್ತ್

ಒಂದೆಡೆ ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕಾಗಿ ಆಗ್ರಹಿಸಲಾಗುತ್ತಿದ್ದು, ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ನಾಡದ್ರೋಹಿ ಎಂಇಎಸ್‌ನಿಂದ ಕರಾಳ ದಿನಾಚರಣೆ ಆಚರಿಸುತ್ತಿದೆ. ಈ ಎಲ್ಲ ನಿಟ್ಟಿನಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಕಲಬುರಗಿ: ಕನ್ನಡ ಮಾತನಾಡುವ ಪ್ರದೇಶಗಳು ಭೌಗೋಳಿಕವಾಗಿ ಒಂದುಗೂಡಿದ ಹೆಮ್ಮೆಯ ದಿನವಿಂದು. ನಾಡಿನ ಸಮಸ್ತ ಜನರು ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿದ್ದರೆ ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ರಾಜ್ಯಕ್ಕಾಗಿ ಆಗ್ರಹಿಸಲಾಗುತ್ತಿದೆ. ಮಾತ್ರವಲ್ಲದೆ ಇಂದು ಪ್ರತ್ಯೇಕ ರಾಜ್ಯ ಧ್ವಜಾರೋಹಣ ನಡೆಸಲು ಸಿದ್ಧತೆ ನಡೆಸಲಾಗುತ್ತಿದೆ, ಇನ್ನೊಂದೆಡೆ …

Read More »

ರಸ್ತೆ ಸುಸ್ಥಿತಿಯಲ್ಲಿದ್ದರೂ ಮತ್ತೆ ಡಾಂಬರೀಕರಣ!

ಕಲಬುರಗಿ: ನಗರದ ಹಲವು ಕಡೆ ರಸ್ತೆಗಳು ಹದಗೆಟ್ಟಿವೆ. ದುರಸ್ತಿ ಪ್ರಕ್ರಿಯೆ ನಡೆಯುತ್ತಿಲ್ಲ. ಆದರೆ, ಸುಸ್ಥಿತಿಯಲ್ಲಿರುವ ರಸ್ತೆ ಮೇಲೆಯೇ ಶನಿವಾರ ಡಾಂಬರು ಹಾಕಲಾಗಿದೆ. ಇದಕ್ಕಾಗಿ ಲೋಕೋಪಯೋಗಿ ಇಲಾಖೆ ₹ 1.25 ಕೋಟಿ ಖರ್ಚು ಮಾಡಿದೆ! ಹೊಸ ಆರ್‌ಟಿಒ ಕಚೇರಿಯ ಗೇಟ್‌ ಸಮೀಪದ ಕುಸನೂರ ರಸ್ತೆಯ 3 ಕಿ.ಮೀ. ಉದ್ದ ಡಾಂಬರ್ ಹಾಕಲಾಗಿದೆ. ಆದರೆ, ಇಡೀ ರಸ್ತೆಯಲ್ಲಿ ಸಣ್ಣ ಪುಟ್ಟ ತಗ್ಗು, ಸ್ಪೀಡ್ ಬ್ರೇಕರ್ ಹೊರತುಪಡಿಸಿ ರಸ್ತೆ ಸುಸ್ಥಿತಿಯಲ್ಲಿದೆ. ಆರ್‌ಟಿಒ ಕಚೇರಿ ಎದುರಿನ ಈ …

Read More »

ಮೊಬೈಲ್‌ ಕದ್ದು ಗೂಗಲ್‌ ಪೇ, ಫೋನ್‌ ಪೇ ಮೂಲಕ ಹಣ ದೋಚುತ್ತಿದ್ದ ಕದೀಮರು

ಕಲಬುರಗಿ: ಮೊಬೈಲ್‌ ಕಳ್ಳತನ ಮಾಡಿ ಫೋನ್‌ ಪೇ ಮತ್ತು ಗೂಗಲ್‌ ಪೇ ಮೂಲಕ ಹಣ ದೋಚುತ್ತಿದ್ದ ಇಬ್ಬರು ಅಂತಾರಾಜ್ಯ ಕಳ್ಳರನ್ನು ಸೆನ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 22 ಮೊಬೈಲ್‌ ಗಳು, 3.50 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ತೆಲಂಗಾಣದ ಕಿರಣ್‌ ರಾಜು ಸಾತಪಾಟಿ ಮತ್ತು ಶಿವಾ ಅಲಿಯಾಸ್‌ ಶಿವಾಜಿ ವೆಂಕಟೇಶ ಉಪ್ಲಾ ಎಂದು ಗುರುತಿಸಲಾಗಿದೆ. ಇವರು ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ರಾಯಚೂರು ಮತ್ತು ಗದಗ ಜಿಲ್ಲೆಗಳಲ್ಲಿ …

Read More »

ಪಿಎಸ್‌ಐ ಅಕ್ರಮ: ಖಾಲಿ ಉತ್ತರ ಪತ್ರಿಕೆಯಲ್ಲಿ ಮಂಜುನಾಥ ಕರಾಮತ್ತು

ಕಲಬುರಗಿ: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾದ ಮಂಜುನಾಥ ಮೇಳಕುಂದಿ ಒಎಂಆರ್‌ ಉತ್ತರ ಪತ್ರಿಕೆಗಳನ್ನು ಪರೀಕ್ಷೆ ಮುಗಿದ ಕೆಲವೇ ನಿಮಿಷಗಳಲ್ಲಿ ಪರೀಕ್ಷಾ ಸಿಬ್ಬಂದಿಯಿಂದ ಭರ್ತಿ ಮಾಡಿಸುವ ಮೂಲಕ ಅಭ್ಯರ್ಥಿಗಳು ಉತ್ತೀರ್ಣರಾಗುವಂತೆ ನೋಡಿಕೊಳ್ಳುತ್ತಿದ್ದ. ಆ ನಂತರ ತನ್ನ ಪಾಲಿನ ಹಣ ಬರುವವರೆಗೂ ಉತ್ತರ ಪತ್ರಿಕೆಯ ಅಭ್ಯರ್ಥಿಗಳ (ಕ್ಯಾಂಡಿಡೇಟ್ ಕಾಪಿ) ಪ್ರತಿಯನ್ನು ತನ್ನ ಬಳಿಯೇ ಇಟ್ಟುಕೊಳ್ಳುತ್ತಿದ್ದ ಸಂಗತಿ ಸಿಐಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಹೊರಬಿದ್ದಿದೆ. ಪ‍್ರಕರಣದಲ್ಲಿ ಮೊಟ್ಟಮೊದಲು ಬಂಧನಕ್ಕೊಳಗಾದ ಅಭ್ಯರ್ಥಿ, ಸೇಡಂನ ವೀರೇಶನಿಗೆ …

Read More »

ಪಿಎಸ್‌ಐ ನೇಮಕಾತಿ ಅಕ್ರಮ: ಹೆದರಿಸಿ ₹10 ಲಕ್ಷ ವಸೂಲಿ ಮಾಡಿದ್ದ ಡಿವೈಎಸ್ಪಿ!

ಕಲಬುರಗಿ: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾದವರ ಮಾಹಿತಿ ಇದ್ದರೂ ಬಂಧಿಸುವುದನ್ನು ಬಿಟ್ಟು ₹80 ಲಕ್ಷಕ್ಕೆ ಬೇಡಿಕೆ ಇಟ್ಟು ಸಂಧಾನದ ಬಳಿಕ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ₹10 ಲಕ್ಷ ಪಡೆದಿದ್ದಾರೆ ಎಂದು ಸಿಐಡಿ ಅಧಿಕಾರಿಗಳು ಕೋರ್ಟ್‌ಗೆ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ದಾಖಲಿಸಿದ್ದಾರೆ.   ‘ಅಕ್ರಮದ ಕಿಂಗ್‌ಪಿನ್ ಅಫಜಲ ಪುರದ ಆರ್.ಡಿ.ಪಾಟೀಲ ಸೂಚನೆ ಆಧರಿಸಿ ಇನ್ನಿಬ್ಬರು ಪ್ರಮುಖ ಆರೋಪಿಗಳಾದ ಮಂಜುನಾಥ ಮೇಳಕುಂದಿ ಹಾಗೂ ಜ್ಞಾನಜ್ಯೋತಿ ಇಂಗ್ಲಿಷ್ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ಕಾಶಿನಾಥ ಚಿಳ್ಳ ಅವರಿಗೆ …

Read More »

ಪಿಎಸ್‌ಐ ಅಕ್ರಮದ ಕಿಂಗ್ ಪಿನ್: ಪರೋಕ್ಷವಾಗಿ ಸಿಎಂ ಬೊಮ್ಮಾಯಿ ಹೆಸರು ಉಲ್ಲೇಖ

ಕಲಬುರಗಿ, ಜುಲೈ 7: ಪಿಎಸ್‌ಐ ಅಕ್ರಮ ನೇಮಕಾತಿ ವಿಚಾರದಲ್ಲಿ ಎಡಿಜಿಪಿ ಅಮೃತ್ ಪಾಲ್ ಬಂಧನದ ನಂತರ, ವಿರೋಧ ಪಕ್ಷವಾದ ಕಾಂಗ್ರೆಸ್ ಆಡಳಿತ ಪಕ್ಷದ ವಿರುದ್ದ ವಾಗ್ದಾಳಿಯನ್ನು ಇನ್ನಷ್ಟು ತೀವ್ರಗೊಳಿಸಿದೆ. ಕಾಂಗ್ರೆಸ್ ನಾಯಕರು ಸತತ ಸುದ್ದಿಗೋಷ್ಠಿ ನಡೆಸಿ ಮಾಹಿತಿಯನ್ನು ಹೊರಹಾಕುತ್ತಿದ್ದಾರೆ.   ಈ ಭ್ರಷ್ಟಾಚಾರದಲ್ಲಿ ಸರಿಯಾದ ತನಿಖೆ ನಡೆದರೆ ಮುಖ್ಯಮಂತ್ರಿ ಬದಲಾವಣೆ ನಿಶ್ಚಿತ ಎಂದಿದ್ದ ಕಾಂಗ್ರೆಸ್ ನಾಯಕ ಮತ್ತು ಚಿತ್ತಾಪುರ ಕ್ಷೇತ್ರದ ಶಾಸಕರೂ ಆಗಿರುವ ಪ್ರಿಯಾಂಕ್ ಖರ್ಗೆ, ಪರೋಕ್ಷವಾಗಿ ಈ ಅಕ್ರಮದ …

Read More »

ರಾಜ್ಯದ ಎಲ್ಲಾ ‘ವಾಣಿಜ್ಯ ಅಂಗಡಿ-ಮುಂಗಟ್ಟು’ಗಳ ಮೇಲೆ ‘ಕನ್ನಡ ನಾಮಫಲಕ’ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಕಲಬುರ್ಗಿ: ರಾಜ್ಯದಲ್ಲಿ ಕನ್ನಡ ಆಡಳಿತ ಭಾಷೆಯಾಗಿರುವಾಗ, ರಾಜ್ಯದ ಎಲ್ಲಾ ವಾಣಿಜ್ಯ ಅಂಗಡಿ-ಮುಂಗಟ್ಟುಗಳ ಮೇಲೆ ಕನ್ನಡ ನಾಮಫಲಕ ಕಡ್ಡಾಯಗೊಳಿಸಿ, ಸರ್ಕಾರ ಆದೇಶಿಸಿದೆ. ಒಂದು ವೇಳೆ ಈ ನಿಯಮ ತಪ್ಪಿದಲ್ಲಿ ಅಂಗಡಿಯ ಪರವಾನಗಿಯನ್ನೇ ರದ್ದುಗೊಳಿಸೋದಾಗಿ ಎಚ್ಚರಿಕೆ ನೀಡಿದೆ.   ಈ ಸಂಬಂಧ ಕಲಬುರ್ಗಿ ಪಾಲಿಕೆಯ ಆರೋಗ್ಯಾಧಿಕಾರಿ ಆದೇಶ ಹೊರಡಿಸಿದ್ದು, ಕಲಬುರ್ಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಂಗಳೂರಿನಲ್ಲಿನಂತೆ ಕರ್ನಾಟಕದಲ್ಲಿ ಕನ್ನಡ ಭಾಷೆಯು ಆಡಳಿತ ಭಾಷೆಯಾಗಿದ್ದು, ರಾಜ್ಯದಲ್ಲಿನ ನಾಮಫಲಕಗಳಲ್ಲಿ ಕನ್ನಡ ಬಳಸುವುದು ಕಡ್ಡಾಯವಾಗಿರುತ್ತದೆ ಎಂದಿದ್ದಾರೆ. ಕನ್ನಡ …

Read More »

ಹಣ ನೀಡಿದರೆ ಫೇಲ್ ಆದವರಿಗೂ ಸಿಗುತ್ತಿದೆ ಪಾಸಾದ (Gulbarga University)ಅಕ್ರಮ

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆದ (Gulbarga University)ಅಕ್ರಮಬಯಲಾಗಿದ್ದು, ಫೇಲ್ ಆದ ವಿದ್ಯಾರ್ಥಿಗಳಿಗೆ ಪಾಸ್ ಆಗಿರುವ ಅಂಕಪಟ್ಟಿ (Marks Card) ನೀಡಿರುವುದು ಬೆಳಕಿಗೆ ಬಂದಿದೆ. ಹಣ ನೀಡಿದರೆ ಸಾಕು ಫೇಲ್ ಆದವರಿಗೂ ವಿವಿ ಸಿಬ್ಬಂದಿ ಮಾರ್ಕ್ಸ್ ಕಾರ್ಡ್ ನೀಡುತ್ತಿದೆ. ನಾಗರಾಜ್ ಎಂಬ ವಿದ್ಯಾರ್ಥಿ ಪರೀಕ್ಷೆಯಲ್ಲಿ ಅನುತ್ತೀರ್ಣನಾಗಿದ್ದ. ಈತ ಫೇಲ್ ಆಗಿದ್ದರೂ ವಿವಿ ಸಿಬ್ಬಂದಿ 30 ಸಾವಿರ ರೂಪಾಯಿ ಹಣ ಪಡೆದು ನಕಲಿ ಅಂಕಪಟ್ಟಿ ನೀಡಿದೆ. ಈ ಬಗ್ಗೆ ವಿದ್ಯಾರ್ಥಿ ತನಗೆ ವಿವಿಯಿಂದ ಅನ್ಯಾಯವಾಗಿದೆ …

Read More »

ಪತ್ನಿಯೇ ಜೈಲರ್ ಆಗಿರುವ ಜೈಲಿಗೆ ಕೈದಿಯಾಗಿ ಪತಿ ಮಹಾಶಯ ಎಂಟ್ರಿ!

ಕಲಬುರಗಿ: ಪತಿಯನ್ನು ಪತ್ನಿಯೇ ಬಂಧಿಸಿ ಜೈಲಿಗೆ ಕಳುಹಿಸುವುದು, ಪತ್ನಿಯನ್ನು ಬಂಧಿಸಿ ಪತಿ ಜೈಲಿಗೆ ಕಳುಹಿಸುವುದು, ಮಗನೇ ಹೆತ್ತವರನ್ನು ಬಂಧಿಸೋದು, ಈ ರೀತಿಯ ಅನೇಕ ಘಟನೆಗಳು ಆಗಾಗ ಘಟಿಸುತ್ತಿರುತ್ತವೆ. ಇಲ್ಲಾ ಅಂತೇನೂ ಅಲ್ಲ. ಆದ್ರೆ ಇದೀಗ ಸ್ವತಃ ಪತ್ನಿಯೇ ಜೈಲರ್ ಆಗಿರುವ ಜೈಲಿಗೆ ಪತಿ ಮಹಾಶಯ ಹೋಗಿದ್ದಾನೆ. ಹಾಗಂತ ಅತಿಥಿಯಾಗಿ ಅಲ್ಲಾ, ಬದಲಾಗಿ ವಿಚಾರಣಾಧೀನ ಕೈದಿಯಾಗಿ! ಇಂತಹದೊಂದು ಘಟನೆಗೆ ಇದೀಗ ಕಲಬುರಗಿ ಕೇಂದ್ರ ಕಾರಾಗೃಹ ಸಾಕ್ಷಿಯಾಗಿದೆ. ಹೌದು ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದ …

Read More »

5 ಸಾವಿರ ಎಕರೆ ಜಮೀನು ವಶಕ್ಕೆ ಪಡೆದುಕೊಂಡು ಕೈಗಾರಿಕಾ ವಲಯ

ಕಲಬುರಗಿ: ಹಿಂದುಳಿದ ಭಾಗವಾದ ಕಲಬುರಗಿ ಜಿಲ್ಲೆಯಲ್ಲಿ ಕೈಗಾರಿಕೆಗಳನ್ನು ಆಕರ್ಷಿಸಲು ಸೇಡಂ ರಸ್ತೆಯಲ್ಲಿರುವ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಂತೆ 5 ಸಾವಿರ ಎಕರೆ ಜಮೀನು ವಶಕ್ಕೆ ಪಡೆದುಕೊಂಡು ಬೇರೆ ಬೇರೆ ಉದ್ಯಮಗಳನ್ನು ಆರಂಭಿಸುವ ಹಾಗೂ ‌ಕೈಗಾರಿಕಾ ವಲಯವನ್ನಾಗಿ ಪರಿವರ್ತಿಸುವ ಚಿಂತನೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ‌ನಿರಾಣಿ ಪ್ರಕಟಿಸಿದರು. ಇಲ್ಲಿನ ಪೊಲೀಸ್ ಪರೇಡ್ ಮೈದಾನದಲ್ಲಿ ಬುಧವಾರ 73ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ …

Read More »