ಕಲಬುರ್ಗಿ: ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯಮ ವಲಯ ಅಭಿವೃದ್ಧಿಗಾಗಿ ಹೂಡಿಕೆದಾರರನ್ನು ಆಕರ್ಷಿಸಬೇಕು ಎಂಬ ಬೇಡಿಕೆ ಬಹುದಿನಗಳಿಂದ ಇದೆ. ಆದರೆ, ಹೊರಗಿನವರು ಬಂದು ಹೂಡಿಕೆ ಮಾಡಲಿ ಎಂದು ಕಾಯುವುದಕ್ಕಿಂತ ಸ್ಥಳೀಯರೇ ಮುಂದೆ ಬಂದರೆ ಹೆಚ್ಚು ಪ್ರಯೋಜನವಾಗಲಿದೆ. ಯಾವುದೇ ಪ್ರದೇಶದ ಅಭಿವೃದ್ಧಿಗೆ ಸ್ಥಳೀಯ ಹೂಡಿಕೆಯ ಪಾತ್ರ ದೊಡ್ಡದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಸಲಹೆ ನೀಡಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ …
Read More »ಮಹಿಳಾ ಪೊಲೀಸ್ ಪೇದೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆ
ಕಲಬುರಗಿ: ಮಹಿಳಾ ಪೊಲೀಸ್ ಪೇದೆಯೊಬ್ಬರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಸುಂಬಡ ಗ್ರಾಮದಲ್ಲಿ ನಡೆದಿದೆ. 34 ವರ್ಷದ ಸುರೇಖಾ ಬಾವಿಯಲ್ಲಿ ಶವವಾಗಿ ಪತ್ತೆಯಾದ ಮಹಿಳಾ ಪೇದೆ. ಮೃತ ಸುರೇಖಾ ಕಲಬುರಗಿ ನಗರದಲ್ಲಿ ಗುಪ್ತಚರ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಭಾನುವಾರ ಸಂಜೆ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಕೆಲ ತಿಂಗಳ ಹಿಂದೆ ಸುರೇಖಾ ಪತಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದರು. ಇದೀಗ ಮಹಿಳಾ ಪೇದೆ ಸುರೇಖಾ ಕೂಡ ಸಾವನ್ನಪ್ಪಿದ್ದಾರೆ. …
Read More »ಹಳೆ ವೈಷಮ್ಯಕ್ಕೆ ಕಲಬುರಗಿಯಲ್ಲಿ ಯುವಕ ಬಲಿಯಾದ
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ 23 ವರ್ಷ ವಯಸ್ಸಿನ ಯುವಕನೊಬ್ಬನನ್ನು ಹಾಡುಹಗಲೇ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿರುವ ಕೃತ್ಯ ಕಲಬುರಗಿ ನಗರದ ಪಬ್ಲಿಕ್ ಗಾರ್ಡನ್ ಮುಂಭಾಗದಲ್ಲಿ ನಡೆದಿದೆ . ಯುವಕನನ್ನು ನಗರದ ರಾಣೇಶ್ ಪೀರ್ ದರ್ಗಾ ಬಡಾವಣೆ ನಿವಾಸಿ ವಿರೇಶ್ ಕಡಗಂಚಿ ಎಂದು ಗುರುತಿಸಲಾಗಿದೆ . ಪಲ್ಸರ್ ಬೈಕ್ನಲ್ಲಿ ಬಂದ ಮೂವರು ಹಂತಕರು ಕೃತ್ಯವೆಸಗಿ ಕ್ಷಣಾರ್ಧದಲ್ಲೇ ಪರಾರಿಯಾಗಿದ್ದಾರೆ . ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ವಿರೇಶ್ನನ್ನು ಅಂಬ್ಯಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ …
Read More »ನದಿಗೆ ಈಜುಲು ಹೋಗಿದ್ದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ಜಲಸಮಾಧಿ
ಕಲಬುರಗಿ : ನದಿಗೆ ಈಜುಲು ಹೋಗಿದ್ದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ಜಲಸಮಾಧಿಯಾದ ಘಟನೆ ಕಲಬುರಗಿ ಜಿಲ್ಲೆಯ ಕಾಗಿಣಾ ನದಿಯಲ್ಲಿ ನಡೆದಿದೆ. ಚಿತ್ತಾಪುರ ತಾಲ್ಲೂಕಿನ ಇಂಗಳಗಿ ಗ್ರಾಮದ ಸಂಪತ್ ಸಂಕ(18) ಮೃತ ಯುವಕ. ಶಾಲೆ, ಕಾಲೇಜ್ ರಜೆ ಇರುವ ಹಿನ್ನೆಲೆಯಲ್ಲಿ ಪ್ರತಿದಿನ ಸ್ನೇಹಿತರೊಂದಿಗೆ ಕಾಗಿಣಾ ನದಿಗೆ ಈಜುಲು ಹೋಗುತ್ತಿದ್ದರು. ಅದೇ ರೀತಿ ಗುರುವಾರವೂ ಸಹ ಹೋಗಿದ್ದಾರೆ. ಈಜು ಬರುತ್ತಿದ್ದ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನೀರಿಗೆ ಧುಮುಕ್ಕಿದ್ದ ಯುವಕ, ದುರದೃಷ್ಟವಶಾತ್ …
Read More »ನಾಲ್ಕು ಜಿಲ್ಲೆಗಳಿಗೆ ಸಚಿವ ಸ್ಥಾನ ಮರೀಚಿಕೆ?
ಕಲಬುರ್ಗಿ: ಸಚಿವ ಸ್ಥಾನಕ್ಕೆ ತೀವ್ರ ಲಾಬಿ ನಡೆಸಿದ್ದ ಮೂವರೂ ಸೇರಿದಂತೆ ಕಲ್ಯಾಣ ಕರ್ನಾಟಕದ ಐವರು ಶಾಸಕರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಿಗಮ-ಮಂಡಳಿಗೆ ನೇಮಕ ಮಾಡಿದ್ದಾರೆ. ಆ ಮೂಲಕ ಈ ಜಿಲ್ಲೆಗಳಿಗೆ ಸದ್ಯ ಸಚಿವ ಸ್ಥಾನ ದೊರೆಯುವುದಿಲ್ಲ ಎಂಬ ಸಂದೇಶವೂ ರವಾನೆಯಾದಂತಾಗಿದೆ. ಬಳ್ಳಾರಿ ಜಿಲ್ಲೆಯ ಆನಂದ ಸಿಂಗ್ ಹಾಗೂ ಬೀದರ್ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ಅವರು ಸಚಿವರಾಗಿದ್ದಾರೆ. ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ …
Read More »ಕಲಬುರಗಿಲಾಕ್ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ರವಿವಾರ ಆದೇಶ
ಕಲಬುರಗಿ: ಕೊರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಜು.14 ರಿಂದ 20 ವರೆಗೆ ಕಲಬುರಗಿ ನಗರ & ಜಿಲ್ಲೆಯ ನಗರ-ಸ್ಥಳೀಯ ಸಂಸ್ಥೆಗಳ ಪ್ರದೇಶದಲ್ಲಿ ವಿಧಿಸಲಾಗಿದ್ದ ಸಂಪೂರ್ಣ ಲಾಕ್ಡೌನ್ ಅವಧಿಯನ್ನು ಮತ್ತೆ ಜು.27ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್ ಬಿ. ರವಿವಾರ ಆದೇಶ ಹೊರಡಿಸಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಅನುಮತಿಸಲಾದ ಚಟುವಟಿಕೆಗಳು ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ತೆರೆದು ಮುಚ್ಚತಕ್ಕದು. ಆಸ್ಪತ್ರೆ ಮತ್ತು ಔಷಧಿ ಅಂಗಡಿಗಳಿಗೆ ಈ ಸಮಯದ ನಿರ್ಬಂಧ …
Read More »ಆಸ್ಪತ್ರೆ ವರೆಗೆ ಬಂದರೂ ಸೋಂಕಿತನನ್ನು ಅಡ್ಮಿಟ್ ಮಾಡಿಕೊಳ್ಳದ ಜಿಮ್ಸ್ ಸಿಬ್ಬಂದಿ ; ಆರೋಗ್ಯ ಇಲಾಖೆ ನಿರ್ಲಕ್ಷ್ಯ ಬಟಾಬಯಲು
ಕಲಬುರ್ಗಿ: ಕಲಬುರ್ಗಿಯಲ್ಲಿ ಕೊರೋನಾ ದಿನೇ ದಿನೇ ವ್ಯಾಪಕಗೊಳ್ಳಲು ಆರೋಗ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯವೂ ಕಾರಣವಾಗುತ್ತಿದೆ. ಕಲಬುರ್ಗಿ ನಗರಗಲ್ಲಿ ಆರೋಗ್ಯ ಇಲಾಖೆ ನಿರ್ಲಕ್ಷ್ಯ ಎಷ್ಟರಮಟ್ಟಿಗೆ ಇದೇ ಎನ್ನುವುದು ಬಟಾಬಯಲಾಗಿದೆ. ವ್ಯಕ್ತಿಗೆ ಸೋಂಕು ದೃಢವಾಗಿ ಒಂದು ದಿನವಾದ್ರೂ ಕೇರ್ ಮಾಡದ ಸಿಬ್ಬಂದಿ. ಮೊನ್ನೆ ಸೋಂಕು ಬಂದ್ರು ಆಸ್ಪತ್ರೆಗೆ ಕರೆದೊಯ್ಯದೆ ಸಿಬ್ಬಂದಿ ನಿರ್ಲಕ್ಷ್ಯ. ಆಸ್ಪತ್ರೆಗೆ ಬಂದರೂ ಅಡ್ಮಿಟ್ ಮಾಡಿಕೊಳ್ಳದೆ ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕೊರೋನಾ ಸೋಂಕಿತನನ್ನು ಮನೆಯಿಂದ ಕರೆದೊಯ್ಯದ ಆರೋಗ್ಯ ಇಲಾಖೆ ಸಿಬ್ಬಂದಿ. ಕೊನೆಗೆ …
Read More »ತಾಯಿಯ ಸಾಲ ವಾಪಸ್ ಕೊಡದ್ದಕ್ಕೆ ಯುವಕನ ಕೊಲೆ-
ಕಲಬುರಗಿ: ಹಣಕಾಸಿನ ವಿಚಾರಕ್ಕೆ ಮೂವರು ಸ್ನೇಹಿತರು ಯುವಕನನ್ನು ಕೊಲೆ ಮಾಡಿದ್ದರು. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತಾರಫೈಲ್ ಬಡಾವಣೆ ನಿವಾಸಿಗಳಾದ ಸುನೀಲ್ ಅಲಿಯಾಸ್ ಸೋನು, ಶಿವಲಿಂಗ ಹುಲಿಮನಿ ಮತ್ತು ರಾಜು ಬಂಧಿತ ಆರೋಪಿಗಳು. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ತಾರಫೈಲ್ ಬಡಾವಣೆ ನಿವಾಸಿ ವಿಶಾಲ್ನನ್ನ ಜೂನ್ 26 ರಂದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಮೃತ ವಿಶಾಲ್ ಆರೋಪಿ ಸುನೀಲ್ ತಾಯಿ ಬಳಿ 3 ಲಕ್ಷ …
Read More »ಕೊರೊನಾಗೆ ಮೊದಲ ಬಲಿಯಾದ ಕಲಬುರಗಿಯಲ್ಲಿ ಇನ್ನೂ ಪ್ರಾರಂಭಿಸಿಲ್ಲ ಲ್ಯಾಬ್: ಪ್ರಿಯಾಂಕ್ ಖರ್ಗೆ ಆಕ್ರೋಶ
ಕಲಬುರಗಿ: ದೇಶದಲ್ಲೇ ಕಿಲ್ಲರ್ ಕೊರೊನಾಗೆ ಮೊದಲು ಬಲಿ ಪಡೆದಿದ್ದೇ ಕಲಬುರಗಿ ಜಿಲ್ಲೆಯಲ್ಲಿ. ಆದರೆ ಇಲ್ಲಿವರಗೆ ಜಿಲ್ಲೆಯಲ್ಲಿ ಇರುವುದು ಒಂದೇ ಪರೀಕ್ಷಾ ಕೇಂದ್ರ. ಸರ್ಕಾರದ ನಿರ್ಲಕ್ಷ್ಯದಿಂದ ಜಿಲ್ಲೆಯ ಜನರು ಕಂಗಾಲಾಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಜಿಮ್ಸ್ ಆಸ್ಪತ್ರೆಯಲ್ಲಿ ಮಾತ್ರ ಕೊರೊನಾ ಟೆಸ್ಟ್ ಲ್ಯಾಬ್ ಇದೆ. ಇಲ್ಲಿ ಪ್ರತಿನಿತ್ಯ ಸಾವಿರ ಸ್ಯಾಂಪಲ್ಸ್ ಗಳನ್ನು ಮಾತ್ರ ಟೆಸ್ಟ್ ಮಾಡಲಾಗುತ್ತಿದೆ. ಇನ್ನೂ …
Read More »ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ…
ಕಲಬುರಗಿ: ಮೊಬೈಲ್ ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಪೋಷಕರು ಬೈದಿದಕ್ಕೆ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬ್ರಹ್ಮಪುರ ಬಡಾವಣೆಯಲ್ಲಿ ನಡೆದಿದೆ. ರಾಹುಲ್ (15) ಆತ್ಮಹತ್ಯೆಗೆ ಶರಣಾದ ಬಾಲಕ. ಗುರುವಾರ ಸಂಜೆ ಮೊಬೈಲ್ನಲ್ಲಿ ವಿಡಿಯೋ ಗೇಮ್ ಆಡಬೇಡ ಎಂದು ಹೆತ್ತವರು ಬೈದಿದ್ದಾರೆ. ಇದರಿಂದ ಮನನೊಂದು ರಾತ್ರಿ ಮನೆಯಲ್ಲೇ ಫ್ಯಾನ್ ಗೆ ನೇಣು ಬಿಗಿದುಕೊಂಡಿದ್ದಾನೆ. ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »