Breaking News

ಚಿಕ್ಕ ಮಂಗಳೂರು

ನಾನು ರೈತನ ಮಗ, ಕೃಷಿ ಅಧ್ಯಯನಕ್ಕೆ ವಿದೇಶ ಪ್ರವಾಸಕ್ಕೆ ಹೋಗ್ತಿದ್ದೇನೆ: ತಮ್ಮಯ್ಯ

ಚಿಕ್ಕಮಗಳೂರು: ನಾನೊಬ್ಬ ರೈತನ ಮಗನಾಗಿದ್ದು ಕೃಷಿ ಅಧ್ಯಯನಕ್ಕಾಗಿ ವಿದೇಶ ಪ್ರವಾಸಕ್ಕೆ ಹೋಗುತ್ತಿದ್ದೇನೆ ಎಂದು ಚಿಕ್ಕಮಗಳೂರು ಶಾಸಕ ಹೆಚ್‌.ಡಿ  ತಮ್ಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳ ಮಾತನಾಡಿದ ಅವರು, ನಾನು ಒಬ್ಬ ರೈತರ ಮಗ. ಒಬ್ಬ ಕೃಷಿಕ ಈಗ ಶಾಸಕನಾಗಿದ್ದೇನೆ. ಕೃಷಿ ವಿಚಾರ ತಿಳಿಯಲು ವಿದೇಶ ಪ್ರವಾಸಕ್ಕೆ ಹೋಗಿತ್ತಿದ್ದೇನೆ  ಎಂದು ತಿಳಿಸಿದ್ದಾರೆ. ಮೊದಲಿನಿಂದಲೂ ನಾನು ವಿದೇಶಕ್ಕೆ ಹೋಗಿ ಬರುತ್ತಿದ್ದೇನೆ. ಬೇರೆ ಬೇರೆ ದೇಶಗಳಲ್ಲಿ ಕೃಷಿ ಹೇಗಿದೆ ಎಂದು ನೋಡಬೇಕು. ಹಾಗಾಗಿ ಪ್ರವಾಸಕ್ಕೆ ಹೋಗ್ತಾ ಇದಿನಿ. …

Read More »

ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ

ಚಿಕ್ಕಮಗಳೂರು: ತಾಯಿ ಬೈದಿದ್ದಕ್ಕೆ ಮನನೊಂದು ಏಳನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಚಿಕ್ಕಮಗಳೂರುಜಿಲ್ಲೆ, ಕೊಪ್ಪ ತಾಲೂಕಿನ ಜಯಪುರ ಸಮೀಪದ ಬಸರೀಕಟ್ಟೆ ಗ್ರಾಮದಲ್ಲಿ ನಡೆದಿದೆ. ಮೃತಳನ್ನು 13 ವರ್ಷದ ಸುಪ್ರಿತಾ ಎಂದು ಗುರುತಿಸಲಾಗಿದೆ. ಬಸರಿಕಟ್ಟೆ ಗ್ರಾಮದಲ್ಲಿ ಮೊಬೈಲ್ ಅಂಗಡಿಗೆ ಕೆಲಸಕ್ಕೆ ಹೋಗಿದ್ದ ತಾಯಿ ಮಧ್ಯಾಹ್ನ ಊಟಕ್ಕೆ ಮನೆಗೆ ಬಂದಿದ್ದರು. ಈ ವೇಳೆ ಸುಪ್ರಿತಾ ಟಿವಿ ನೋಡುತ್ತಿದ್ದಳು. ತಾಯಿ ಊಟ ಹಾಕಿ ಕೊಟ್ಟಾಗ ಸುಪ್ರಿತಾ ಟಿವಿ ನೋಡುತ್ತಾ ತಟ್ಟೆ ಬೀಳಿಸಿ …

Read More »

ಅಲ್ಪಸಂಖ್ಯಾತ ನಿಗಮ ಮಂಡಳಿ ಸಾಲದ ಬಡ್ಡಿ ಮನ್ನಾ – ಇದು ಸಂವಿಧಾನ ವಿರೋಧಿ ನಡೆ: ಸಿ.ಟಿ.ರವಿ ಕಿಡಿ

ಚಿಕ್ಕಮಗಳೂರು: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ  ಸಾಲದ  ಬಡ್ಡಿ ಮನ್ನಾ ಮಾಡಿರುವ ರಾಜ್ಯ ಸರ್ಕಾರದ ನೀತಿಯನ್ನ ತೀವ್ರವಾಗಿ ಖಂಡಿಸಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ  ಮುಖ್ಯಮಂತ್ರಿಗಳು ಒಂದು ಕಣ್ಣಿಗೆ ಸುಣ್ಣ ಮತ್ತೊಂದು ಕಣ್ಣಿಗೆ ಬೆಣ್ಣೆ ಹಚ್ಚುವ ಕೆಲಸ ಮಾಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ  ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಕೇವಲ ಒಂದು ಕೋಮಿನ ಜನರನ್ನು ಓಲೈಸುವ ರಾಜಕಾರಣ ಮಾಡುವುದು ಇತರ …

Read More »

ಚಿಕ್ಕಮಗಳೂರು ಡಿಸಿಸಿ ಬ್ಯಾಂಕಿಗೆ ಸಿ.ಟಿ.ರವಿ ಅಧ್ಯಕ್ಷ, ದಿನೇಶ್ ಹೊಸೂರು ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆ

ಚಿಕ್ಕಮಗಳೂರು: ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್  ಅಧ್ಯಕ್ಷರಾಗಿ ಎಂಎಲ್‌ಸಿ ಸಿ.ಟಿ. ರವಿ ಹಾಗೂ ಉಪಾಧ್ಯಕ್ಷರಾಗಿ ಕೊಪ್ಪ ತಾಲೂಕಿನ ದಿನೇಶ್ ಹೊಸೂರು ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಒಟ್ಟು 13 ನಿರ್ದೇಶಕರ ಬಲ ಹೊಂದಿರುವ ಡಿಸಿಸಿ ಬ್ಯಾಂಕಿನಲ್ಲಿ ಬಿಜೆಪಿ 11 ಹಾಗೂ ಜೆಡಿಎಸ್ 2 ಸ್ಥಾನಗಳನ್ನು ಹೊಂದುವ ಮೂಲಕ ಮೈತ್ರಿಕೂಟವು ಸಂಪೂರ್ಣ ಹಿಡಿತ ಸಾಧಿಸಿತ್ತು. ಬಿಜೆಪಿಯಿಂದ ಸಿ.ಟಿ. ರವಿ ಅವರೊಂದಿಗೆ ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ ಮತ್ತು ಡಿ.ಎಸ್. ಸುರೇಶ್ ಅವರು ನೇಮಕಗೊಂಡಿದ್ದರೆ, …

Read More »

ಪ್ರತಿಮನೆಯ ಯಜಮಾನಿಗೆ 2000 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ : ಸಿಎಂ ಇಬ್ರಾಹಿಂ ವ್ಯಂಗ್ಯ

ಚಿಕ್ಕಮಗಳೂರು : 2 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ ತಂದಿಡುತ್ತಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. ಕಡೂರಿನಲ್ಲಿ ಮಾತನಾಡಿದ ಸಿಎಂ ಇಬ್ರಾಹಿಂ ‘ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿಮನೆಯ ಯಜಮಾನಿಗೆ 2000 ರೂ ಹಣ ನೀಡುತ್ತಾರೆ ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ. 2 ಸಾವಿರ ಕೊಟ್ಟು ಸಿದ್ದರಾಮಯ್ಯ ಅತ್ತೆ-ಸೊಸೆ ನಡುವೆ ಜಗಳ ತಂದಿಡುತ್ತಾರೆ ಎಂದು ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪ್ರತಿ ಮನೆಯ ಯಜಮಾನಿಗೆ 2000 …

Read More »

ಚಲಿಸುತ್ತಿದ್ದಾಗಲೇ ಬಸ್​​​ನ ವೀಲ್ ಬಾಡಿ ಸಮೇತ ಹಿಂದಿನ 2 ಚಕ್ರಗಳು ಬೇರ್ಪಟ್ಟಿವೆ.

ಚಿಕ್ಕಮಗಳೂರು: ಚಲಿಸುತ್ತಿದ್ದಾಗಲೇ ಬಸ್​ನ ಎರಡೂ ಚಕ್ರಗಳೂ ಕಳಚಿ ಬಿದ್ದಿದ್ದು, ಭಾರಿ ದುರಂತ ತಪ್ಪಿರುವ ಘಟನೆ ಮಾಗಡಿ ಸಮೀಪ ನಡೆದಿದೆ. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸರ್ಕಾರಿ ಬಸ್​ನ ಹಿಂಬದಿ ಚಕ್ರಗಳು ಈ ರೀತಿ ಉರುಳಿ ಬಿದ್ದಿದ್ದು ಎಂದು ಹೇಳಲಾಗುತ್ತಿದೆ. ಚಲಿಸುತ್ತಿದ್ದಾಗಲೇ ಬಸ್​​​ನ ವೀಲ್ ಬಾಡಿ ಸಮೇತ ಹಿಂದಿನ 2 ಚಕ್ರಗಳು ಬೇರ್ಪಟ್ಟಿವೆ. ಹಾಸನ ಡಿಪೋಗೆ ಸೇರಿದ ಬಸ್ ಇದಾಗಿದ್ದು ,ಬಸ್ ನಿಧಾನಗತಿಯಲ್ಲಿ ಸಾಗುತ್ತಿರುವುದರಿಂದ ಸಂಭವಿಸಬೇಕಾಗಿದ್ದ ಭಾರಿ ದುರಂತವೊಂದು ತಪ್ಪಿದಂತಾಗಿದೆ. ಬಸ್​​​​ನಲ್ಲಿದ್ದವರಿಗೆ ಸಣ್ಣ-ಪುಟ್ಟ …

Read More »

ಪ್ರವೀಣ್ ನೆಟ್ಟಾರು ಹತ್ಯೆಗೆ ವ್ಯಾಪಕ ಖಂಡನೆ: ಇಂದು ಚಿಕ್ಕಮಗಳೂರಿನ ಕೊಪ್ಪ ಪಟ್ಟಣ ಬಂದ್‌ ಗೆ ಕರೆ

ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣ ಖಂಡಿಸಿ ಇಂದು ಚಿಕ್ಕಮಗಳೂ ಜಿಲ್ಲೆ ಕೊಪ್ಪ ಪಟ್ಟಣ ಬಂದ್‌ ಕರೆ ನೀಡಿದ್ದಾರೆ.   ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ಹಿಂದೂ ಪು ಸಂಘಟನೆಗಳು ಬಂದ್‌ ಗೆ ಕರೆ ನೀಡಿದ್ದಾರೆ. ಅಂಗಡಿಗಳನ್ನ ಮುಚ್ಚುವಂತೆ ಮನವಿ ಮಾಡಿದ್ದಾರೆ. ಆರೋಪಿಗಳನ್ನ ಶೀಘ್ರದಲ್ಲಿ ಬಂಧಿಸಬೇಕು. ಪ್ರವೀಣ್‌ ಹತ್ಯೆಗೆ ನ್ಯಾಯ ಸಿಗಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿ ಇಂದು ಪ್ರತಿಭಟನೆ ಮಾಡಲು ನಿರ್ಧಾರಿಸಿದ್ದಾರೆ.

Read More »

ಸಾಮೂಹಿಕ ರಾಜೀನಾಮೆಗೆ ಮುಂದಾದ ಬಿಜೆಪಿ ಯುವ ಮೋರ್ಚಾ ಘಟಕ ಸದಸ್ಯರು

ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ಹತ್ಯೆಯಾಗಿದ್ದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಬಿಜೆಪಿ ಯುವ ಮೋರ್ಚಾ ಪಕ್ಷದ ವಿರುದ್ಧವೇ ಅಕ್ರೋಶ ಹೊರಹಾಕಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಹತ್ಯೆಗೆ ಆಕ್ರೋಶ ಹೊರಹಾಕಿ ಬಿಜೆಪಿ ಯುವ ಮೋರ್ಚಾ ಸದಸ್ಯರು ಸಾಮೂಹಿಕ ರಾಜೀನಾಮೆ ಮುಂದಾಗಿದ್ದಾರೆ. ಬಿಜೆಪಿ ಕಾರ್ಯಕರ್ತರ ರಕ್ಷಣೆ ನೀಡದ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಜಿಲ್ಲಾಧ್ಯಕ್ಷ ಸಂದೀಪ್ ಅರವಿನಗಂಡಿ, ಪ್ರಧಾನ ಕಾರ್ಯದರ್ಶಿ ಸಂತೋಷ್, ಗಗನ್ ಕಡೂರು, ಉಪಾಧ್ಯಕ್ಷ ಸಚಿನ್, ಶಶಿ ಜಿಲ್ಲಾ …

Read More »

ಬಾಲಕಿಯ ಮೇಲೆ ಅತ್ಯಾಚಾರ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಬಂಸಿ ಕರೆ ತಂದಿದ್ದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿ

ಚಿಕ್ಕಮಗಳೂರು, ಅ.11- ಬಾಲಕಿಯ ಮೇಲೆ ಅತ್ಯಾಚಾರ ಯತ್ನ ಪ್ರಕರಣದ ಹಿನ್ನೆಲೆಯಲ್ಲಿ ಬಂಸಿ ಕರೆ ತಂದಿದ್ದ ಆರೋಪಿ ಪೊಲೀಸ್ ಠಾಣೆಯಿಂದ ಪರಾರಿಯಾಗಿದ್ದಾನೆ. ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡೆದಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಅಕ್ಷಯ್.ಎಂ.ಕೆ. ಆರೋಪಿ ಯನ್ನು ಶೀಘ್ರದಲ್ಲೇ ಪತ್ತೆ ಹಚ್ಚಲಾಗು ವುದು ಎಂದು ತಿಳಿಸಿದ್ದಾರೆ. 12 ವರ್ಷದ ಬಾಲಕಿಯು ಅಂಗಡಿಯಿಂದ ಸಾಮಗ್ರಿ ಖರೀದಿಸಿ ಮನೆಗೆ ತೆರಳುತ್ತಿದ್ದಾಗ ಮೀನು ವ್ಯಾಪಾರಿಯೊಬ್ಬ ಪ್ರೀತಿಸುವಂತೆ ಒತ್ತಾಯಿಸಿ ಬಲವಂತವಾಗಿ ತನ್ನ ಗೂq್ಸï ವಾಹನದಲ್ಲಿ ಕೂರಿಸಿಕೊಂಡು ಹೋಗಿ …

Read More »

ಕೆಲಸದ ವೇಳೆ ಆತ್ಮ ಹತ್ಯೆಗೆ ಶರಣಾದ ಯುವ

ನೆಲಮಂಗಲ: ಖಾಸಗಿ ಆಸ್ಪತ್ರೆ ಸಿಬ್ಬಂದಿಯೊಬ್ಬರು ಎರಡು ಮಾದರಿಯ ಚುಚ್ಚುಮದ್ದುಗಳನ್ನು ಸಮೀಕರಿಸಿಕೊಂಡು ಸ್ವತಃ ಇಂಜೆಕ್ಷನ್‌ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದ ಕುಣಿಗಲ್‌ ವೃತ್ತದ ಬಳಿಯಲ್ಲಿರುವ ಆಸ್ಪತ್ರೆಯಲ್ಲಿ ನಡೆದಿದೆ. ಸಂಜಯ್‌ (19)ಮೃತ ಆಸ್ಪತ್ರೆ ಸಿಬ್ಬಂದಿ. ಮೂಲತಃ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಾರ್ವತಿನಗರ ಮಂಜುನಾಥ್‌ ಎಂಬುವರ ಮಗನಾದ ಈತ ಕಳೆದ ಎರಡು ತಿಂಗಳಿನಿಂದ ಕುಣಿಗಲ್‌ ವೃತ್ತದ ಬಳಿಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಸ್ಟಾಫ್ ನರ್ಸ್‌ ಆಗಿ ಕೆಲಸಮಾಡುತ್ತಿದ್ದ. ಎಂದಿನಂತೆ ಶನಿವಾರ …

Read More »