Breaking News

ಚಿಕ್ಕ ಮಂಗಳೂರು

ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಇಂದಿಗೂ ಸ್ಫೂರ್ತಿಯಾಗಿವೆ: ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

ಮಂಗಳೂರು: ಸಮಾಜದಲ್ಲಿರುವ ಅಸಮಾನತೆಯ ವಿರುದ್ಧ ಹೋರಾಡಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶಗಳು ಇಂದಿಗೂ ಸ್ಫೂರ್ತಿಯಾಗಿವೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು. ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು. ಅಂದು ಸಮಾಜದಲ್ಲಿ ಬೇರೂರಿದ ಜಾತಿಬೇಧ ಎನ್ನುವ ಕೆಟ್ಟ ವ್ಯವಸ್ಥೆ, ಅಸಮತೋಲನ, ಶೋಷಣೆಯ ವಿರುದ್ಧ ಧ್ವನಿ ಎತ್ತಿ ಸಾಮಾಜಿಕ ಸಮಾನತೆಯನ್ನು ಮೂಡಿಸಿದ ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ, ಚಿಂತನೆಗಳು ಇಂದಿಗೂ …

Read More »

ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನ ಸಂಚಾರಕ್ಕೆ ಅವಕಾಶ

ಚಿಕ್ಕಮಗಳೂರು.    ರಾಷ್ಟ್ರೀಯ ಹೆದ್ದಾರಿ-73 (ಹಳೆಯ ಸಂಖ್ಯೆ-234)ರ ಮಂಗಳೂರು-ವಿಲ್ಲಂಪುರ ರಸ್ತೆಯ 86.200 ರಿಂದ 90.200ಕಿಮೀ ಕೊಟ್ಟಿಗೆಹಾರದವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ದಿನದ 24 ಗಂಟೆ ಲಘುವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹೆದ್ದಾರಿ ವಿಭಾಗದ ಕಾರ್ಯಪಾಲಕ ಅಭಿಯಂತರರ ವರದಿಯನ್ವಯ ಪ್ರಸ್ತುತ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿರುವುದರಿಂದ ವಾಹನಗಳ ಸುಗಮ ಸಂಚಾರ ಹಾಗೂ ಪ್ರಯಾಣಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ ಅನ್ವಯ ರಾಷ್ಟ್ರೀಯ ಹೆದ್ದಾರಿ-73ರ ಮಂಗಳೂರು-ತುಮಕೂರು ರಸ್ತೆಯ 86.200ಕಿಮೀ …

Read More »

ನೀರಿನಲ್ಲಿ ಮುಳುಗುತ್ತಿದ್ದಂತೆ ಸ್ನೇಹಿತರು ಆತನ ಮೊಬೈಲ್ ತೆಗೆದುಕೊಂಡು ನಾಪತ್ತೆ

ಚಿಕ್ಕಮಗಳೂರು: ಬೆಂಗಳೂರಿನಿಂದ ಬಂದಿದ್ದ ಸ್ನೇಹಿತರ ಜೊತೆ ಈಜಲು ಹೋದ ಯುವಕ ನೀರು ಪಾಲಾಗಿದ್ದಾನೆ. ಆದರೆ ಯುವಕ ನೀರಿನಲ್ಲಿ ಮುಳುಗುತ್ತಿದ್ದಂತೆ ಸ್ನೇಹಿತರು ಆತನ ಮೊಬೈಲ್ ತೆಗೆದುಕೊಂಡು ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಆಲ್ದೂರಿನ ಗ್ರಾಮದಲ್ಲಿ ನಡೆದಿದೆ.   ಅನ್ವಿತ್ (18) ಮೃತ ಯುವಕ. ತಂದೆಯನ್ನ ಕಳೆದುಕೊಂಡಿದ್ದ ಅನ್ವಿತ್ ಅಮ್ಮ-ಅಕ್ಕನಿಗೆ ಆಸರೆಯಾಗಿದ್ದನು. ಅಕ್ಕನನ್ನು ಈತನೇ ಓದಿಸುತ್ತಿದ್ದು, ಬೆಂಗಳೂರಲ್ಲಿ ಬೇಕರಿ ಕೆಲಸ ಮಾಡಿಕೊಂಡಿದ್ದನು. ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ಊರಿಗೆ ಬಂದಿದ್ದ ಅನ್ವಿತ್ ಮತ್ತೆ …

Read More »

ಇದೀಗ ಪ್ರವಾಸಿಸಗರಿಗೆ ಷರತ್ತು ಬದ್ಧ ಅನುಮತಿ ನೀಡಿ, ಜಿಲ್ಲಾಡಳಿತ ನಿರ್ಬಂಧವನ್ನು ತೆರವುಗೊಳಿಸಿದೆ.

ಚಿಕ್ಕಮಗಳೂರು: ಕೊರೊನಾ ಹರಡುವಿಕೆ ಹಿನ್ನೆಲೆ ಜಿಲ್ಲೆಯ ಎಲ್ಲ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿಷೇಧ ಹೇರಿತ್ತು. ಇದೀಗ ಪ್ರವಾಸಿಸಗರಿಗೆ ಷರತ್ತು ಬದ್ಧ ಅನುಮತಿ ನೀಡಿ, ಜಿಲ್ಲಾಡಳಿತ ನಿರ್ಬಂಧವನ್ನು ತೆರವುಗೊಳಿಸಿದೆ. ಪ್ರವಾಸಿಗರು ಕಾರು, ಬೈಕ್, ಜೀಪ್‍ನಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಭೇಟಿ ನೀಡಬಹುದಾಗಿದ್ದು, ದೊಡ್ಡ ವಾಹನಗಳು, ಖಾಸಗಿ ಬಸ್‍ಗಳಲ್ಲಿ ಬರುವುದನ್ನು ನಿರ್ಬಂಧಿಸಲಾಗಿದೆ. ಜಿಲ್ಲೆಯ ಪ್ರವಾಸಿ ತಾಣಗಳಿಗೆ ಬರುವ ಪ್ರವಾಸಿಗರು ಕಡ್ಡಾಯವಾಗಿ ಮುಖಕ್ಕೆ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪ್ರವಾಸಿ ತಾಣಗಳಲ್ಲಿ ಗುಂಪಾಗಿ …

Read More »

38ರ ಆಂಟಿಯೊಬ್ಬಳು 22 ವರ್ಷದ ಯುವಕನನ್ನ ಆರನೇ ಗಂಡನಾಗಿ ಕೈಹಿಡಿದಿದ್ದಾಳೆ.

ಚಿಕ್ಕಮಗಳೂರು: 38ರ ಆಂಟಿಯೊಬ್ಬಳು 22 ವರ್ಷದ ಯುವಕನನ್ನ ಆರನೇ ಗಂಡನಾಗಿ ಕೈಹಿಡಿದಿದ್ದಾಳೆ. ಆಕೆಗೆ ಇತನೇ ಬೇಕು ಎನ್ನುವುದು ಮುಖ್ಯವಲ್ಲ. ಆದರೆ ಈತ ಇವಳೇ ಬೇಕು, ಬಾಳು ಕೊಡುತ್ತೇನೆ ಎನ್ನುವುದು ವಿಶೇಷದಲ್ಲಿ ವಿಶೇಷ. ಕಂಬಿಹಳ್ಳಿ ಚಂದ್ರುಗೂ ಈಕೆ ಹೆಂಡತಿ. ಹನಿಕೆ ಬಸವರಾಜನ ಪ್ರೇಮಿಯೂ ಈಕೆ. ಬೆಂಗಳೂರಿನ ಬೇಕರಿಯ ಕಿರಣನ ಮನದರಸಿಯೂ ಹೌದು. ರಮೇಶನ ರಾಧೆಯೂ ಇವಳೇ. ತುಕಾರಂನ ಮಡದಿಯೂ ಇದೇ ಗಟ್ಟಿಗಿತ್ತಿ. ಈಗ ರಂಗೇನಹಳ್ಳಿ ಚಂದ್ರುವಿನ ಚಕೋರಿ.   38ರ ಅಸುಪಾಸಿಗೆ …

Read More »

ಸೋಂಕಿತೆ ಆಸ್ಪತ್ರೆಗೆ ದಾಖಲಾಗುವಾಗ ಮಾಂಗಲ್ಯ ಸರವಿತ್ತು, ಮೃತದೇಹದ ಮೇಲೆ ಇರಲಿಲ್ಲ!

ಚಿಕ್ಕಮಗಳೂರು: ಕೊರೊನಾ ಸೋಂಕಿತೆ ಆಸ್ಪತ್ರೆಗೆ ದಾಖಲಾಗುವಾಗ ಕೊರಳಲ್ಲಿ ಮಾಂಗಲ್ಯ ಸರವಿತ್ತು. ಆದರೆ ಮೃತರಾದ ಬಳಿಕ ಮೃತದೇಹ ಹೊರ ತಂದಾಗ ಮಾಂಗಲ್ಯ ಸರ ಹಾಗೂ ಕೈಯಲ್ಲಿದ್ದ ಉಂಗುರ ಇಲ್ಲದಂತಾಗಿತ್ತು. ಈ ಕುರಿತು ಆಸ್ಪತ್ರೆ ಸಿಬ್ಬಂದಿಯನ್ನು ವಿಚಾರಿಸಿದಾಗ ಗೊತ್ತಿಲ್ಲ ಎಂದಿದ್ದರು. ಆದರೆ 13 ದಿನದ ಬಳಿಕ ಕಳ್ಳನೇ ಮಾಂಗಲ್ಯ ಸರ ಇಟ್ಟು ಹೋದನಂತೆ. ಈ ಘಟನೆ ಜಿಲ್ಲೆಯಲ್ಲಿ ಆಗಸ್ಟ್ 10ರಂದು ನಡೆದಿತ್ತು. ನಾಲ್ಕೈದು ತಿಂಗಳಿಂದ ಕೊರೊನಾ ವಾರಿಯರ್ ಆಗಿ ಕೆಲಸ ಮಾಡುತ್ತಿರೋ ವೈದ್ಯರು, …

Read More »

ಹೇಮಾವತಿಯಲ್ಲಿ ಮುಳುಗಿ, ಶಿವನ ಮುಡಿ ಸೇರಿದ ಗೌರಿ!

ಚಿಕ್ಕಮಗಳೂರು: ಮೊನ್ನೆ ಶುಕ್ರವಾರ ಸಂಭ್ರಮದಿಂದ ಬರಮಾಡಿಕೊಂಡಿದ್ದ ಗೌರಿಯನ್ನು ನಿನ್ನೆ ಹೆಂಗಳೆಯರು ಬೇಸರದಿಂದ ಕಳಿಸಿಕೊಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಮುಗ್ರಹಳ್ಳಿಯಲ್ಲಿ ಗೌರಿಗೆ ಹೇಮಾವತಿ ನದಿ ತೀರದಲ್ಲಿ ಪೂಜೆ ಮಾಡಲಾಯಿತು. ಹೇಮಾವತಿ ತೀರದಲ್ಲಿ ಹತ್ತಾರು ಮಹಿಳೆಯರು ಮಂಗಳ ಹಾಡಿ ಗೌರಮ್ಮನನ್ನ ಭಾರವಾದ ಮನಸ್ಸಿನಿಂದಲೇ ಕಳುಹಿಸಿಕೊಟ್ಟರು. ಇದೇ ಸಂದರ್ಭದಲ್ಲಿ ತವರು ಮನೆಗೆ ಆಗಮಿಸಿದ ಮಹಿಳೆಯರು ಗೌರಿ ಪೂಜೆಯಲ್ಲಿ ಪಾಲ್ಗೊಂಡು ಸಂಭ್ರಮಪಟ್ಟರು. ಕಳೆದ ಕೆಲವು ದಿನಗಳ ಹಿಂದೆ ಉಕ್ಕಿ ಹರಿದಿದ್ದ ಹೇಮಾವತಿ, ಸದ್ಯ ಶಾಂತಳಾಗಿದ್ದು, ನೀರಿನ …

Read More »

ಭರ್ಜರಿ ಮಳೆಯಲ್ಲೇ ಗೌರಿ ಪೂಜೆ

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದೊಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ, ಇಂದು ಬೆಳಗ್ಗೆಯಿಂದ ಮತ್ತೆ ಶುರುವಿಟ್ಟಿದ್ದಾನೆ. ವಾರದ ನಂತರ ಇದ್ದಕ್ಕಿದ್ದಂತೆ ಮಳೆಯಾಗಿರುವುದು ಜನರನ್ನು ಪರದಾಡುವಂತೆ ಮಾಡಿದೆ. ಇದು ಗೌರಿ ಹಬ್ಬಕ್ಕೂ ತಟ್ಟಿದ್ದು, ಮಹಿಳೆಯರು ಮಳೆಯನ್ನೂ ಲೆಕ್ಕಿಸದೆ ಪೂಜೆ ನೆರವೇರಿಸಿದ್ದಾರೆ.ಜಿಲ್ಲಾದ್ಯಂತ ಮೋಡಕವಿದ ವಾತಾವರಣವಿದ್ದು, ಹಲವೆಡೆ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಮಲೆನಾಡಿಗರು ಆತಂಕಕ್ಕೀಡಾಗಿದ್ದಾರೆ. ಸುರಿಯುತ್ತಿರೋ ಮಳೆಯಲ್ಲೇ ಗೌರಿ ಹಬ್ಬಕ್ಕೆ ಮುಂದಾಗಿರೋ ಮಲೆನಾಡಿಗರು, ವರುಣನ ಅಬ್ಬರದ ನಡುವೆಯೇ ಗೌರಿಯನ್ನು ಪೂಜೆ ಮಾಡಿ ಮನೆಗೆ …

Read More »

ತಾಳ್ಮೆ ಪರೀಕ್ಷಿಸದೇ ಮೊದಲು ಆಸ್ಪತ್ರೆ ನಿರ್ಮಿಸಿ ಕೊಡಿ: ಇದು ಬ್ಯಾನರ್ ಚಳವಳಿ! ಎಲ್ಲಿ?

ಚಿಕ್ಕಮಗಳೂರು: ‘ಶೃಂಗೇರಿಯ ನೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಉತ್ತಮ ಆಸ್ಪತ್ರೆಗಳಿಲ್ಲ, ನಿಮ್ಮ ಹಾಗೂ ಊರಿನ ಜನರ ಆರೋಗ್ಯದ ಹಿತದೃಷ್ಠಿಯಿಂದ ವಾಹನಗಳನ್ನ ನಿಧಾನವಾಗಿ ಚಲಿಸಿ” ಎಂಬ ಬ್ಯಾನರ್ ಶೃಂಗೇರಿಯ ಎಲ್ಲೆಡೆ ಕಂಡುಬರುತ್ತದೆ. ಪ್ರವಾಸಿಗರು ಕೂಡ ಆತಂಕದಿಂದ ನೋಡುತ್ತಿದ್ದಾರೆ! ವ್ಯವಸ್ಥೆ ಅಲ್ಲಲ್ಲ. ಅವ್ಯವಸ್ಥೆಯ ಅಣಕವನ್ನ ಇದೀಗ ಜನರೇ ತೆರೆದಿಡುತ್ತಿದ್ದಾರೆ. ಈ ರೀತಿಯ ಬ್ಯಾನರ್​ಗಳು ಶೃಂಗೇರಿಯ ಹಲವೆಡೆ ಕಂಡು ಬರುತ್ತಿವೆ. ಈ ವಿಭಿನ್ನ ಬ್ಯಾನರ್ ಕಂಡು ಸ್ಥಳೀಯರ ಜೊತೆ ಜಿಲ್ಲೆಗೆ ಬರೋ ಪ್ರವಾಸಿಗರು ಕೂಡ ಆತಂಕದಿಂದ ನೋಡುತ್ತಿದ್ದಾರೆ! …

Read More »

ಒಂದು ವರ್ಷದಲ್ಲಿ ಎಮ್ಮೆ ಕಾಂತಣ್ಣ ಒಟ್ಟು ಏಳು ಹಸುಗಳನ್ನು ಕಳೆದುಕೊಂಡಿದ್ದಾರೆ.

ಚಿಕ್ಕಮಗಳೂರು: ಕಳೆದ ಹತ್ತು ತಿಂಗಳಲ್ಲಿ ಏಳು ಹಸುಗಳನ್ನು ಕಳೆದುಕೊಂಡಿದ್ದೇನೆ. ದನಗಳ್ಳರನ್ನು ಹಿಡಿದುಕೊಟ್ಟರೆ ನಿಂತ ಜಾಗದಲ್ಲಿ ನಾನೇ ಅವರಿಗೆ 50 ಸಾವಿರ ಹಣ ಕೊಡುತ್ತೇನೆ ಎಂದು ಚಿಕ್ಕಮಗಳೂರು ತಾಲೂಕಿನ ತೇಗೂರಿನ ರೈತ ಕಾಂತರಾಜ್ ಆಫರ್ ಕೊಟ್ಟಿದ್ದಾರೆ. ದನಗಳ್ಳರನ್ನು ಯಾರೇ ಹಿಡಿದುಕೊಟ್ಟರು ಅವರಿಗೆ ಹಣ ಕೊಡುತ್ತೇನೆ ಎಂದು ಘೋಷಿಸಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ರೈತ ಕಾಂತರಾಜು ಅಲಿಯಾಸ್ ಎಮ್ಮೆ ಕಾಂತಣ್ಣರವರ ಎಂಟೂವರೆ ತಿಂಗಳ ಗರ್ಭಿಣಿ ಹಸುವನ್ನು ದನಗಳ್ಳರು ಸ್ಕಾರ್ಪಿಯೋ ಕಾರಿನಲ್ಲಿ ತುಂಬಿಕೊಂಡು …

Read More »