Breaking News
Home / ಜಿಲ್ಲೆ / ಚಿತ್ರದುರ್ಗ

ಚಿತ್ರದುರ್ಗ

ಎಸೆಸೆಲ್ಸಿ ಪರೀಕ್ಷೆ ನಕಲಿಗೆ ಸಹಕಾರ: ನಾಲ್ವರು ಸಹ ಶಿಕ್ಷಕರ ಅಮಾನತು

ಚಿತ್ರದುರ್ಗ: ಎಸೆಸೆಲ್ಸಿ ವಿಜ್ಞಾನ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ನಕಲು ಮಾಡಲು ಸಹಕರಿಸಿದ ಆರೋಪದಲ್ಲಿ ನಾಲ್ವರು ಸಹ ಶಿಕ್ಷಕರನ್ನು ಅಮಾನತು ಮಾಡಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರವಿಶಂಕರ್‌ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಚಳ್ಳಕೆರೆ ತಾಲೂಕು ಪರಶುರಾಂಪುರ ಕರ್ನಾಟಕ ಪಬ್ಲಿಕ್‌ ಶಾಲೆಯಲ್ಲಿ ಕೊಠಡಿ ಮೇಲ್ವಿಚಾರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಳ್ಳಕೆರೆ ತಾಲೂಕು ಪಿ.ಈಬನಹಳ್ಳಿ ಶಾಲೆಯ ಚಂದ್ರಶೇಖರ್‌, ಕೊರ್ಲಕುಂಟೆ ಶಾಲೆಯ ಪ್ರಕಾಶ್‌, ಗೋಸಿಕೆರೆ ರಾಧಾಕೃಷ್ಣ ಶಾಲೆಯ ರಾಘವೇಂದ್ರ ಹಾಗೂ ಮಂಜರಿ ಹಿರಿಯ ಪ್ರಾಥಮಿಕ ಶಾಲೆಯ ರೇವಣ್ಣ ಅಮಾನತುಗೊಂಡ …

Read More »

ರಾಜ್ಯದ ರೈತರಿಗೆ 10 ಹೆಚ್.ಪಿ ವರೆಗೆ ಉಚಿತ ವಿದ್ಯುತ್ : ಸಿಎಂ ಬೊಮ್ಮಾಯಿ

ಚಿತ್ರದುರ್ಗ : ರೈತ ಸಮುದಾಯಕ್ಕೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಸರ್ಕಾರದಿಂದ 10 ಹೆಚ್ ಪಿ ವರೆಗೆ ರೈತರಿಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹೊಳಲ್ಕೆರೆ ಪಟ್ಟಣದಲ್ಲಿ ಭಾನುವಾರ ಹೊಳೆಲ್ಕೆರೆ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. …

Read More »

ರಾಜ್ಯದಲ್ಲಿ ಮತ್ತೆ ಐಟಿ ಸದ್ದು; ಮಾಜಿ ಸಚಿವರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ

ಚಿತ್ರದುರ್ಗ: ರಾಜ್ಯದಲ್ಲಿ ಆಗಾಗ ಕೇಳಿ ಬರುತ್ತಿರುವ ಐಟಿ ಸದ್ದು ಮತ್ತೊಮ್ಮೆ ಮೊಳಗಿದೆ. ಅರ್ಥಾತ್, ರಾಜ್ಯದ ಮಾಜಿ ಸಚಿವರೊಬ್ಬರ ಆಪ್ತನ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳ ದಾಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಐಟಿ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.   ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಪಾಡಿಗಟ್ಟೆ ಗ್ರಾಮದಲ್ಲಿನ ಜಿಲ್ಲಾ ಕಾಂಗ್ರೆಸ್​ ಕಾರ್ಯದರ್ಶಿ ಪಾಡಿಗಟ್ಟೆ ಸುರೇಶ್ ಮತ್ತು ಆತನ ಸಹೋದರ, ಗುತ್ತಿಗೆದಾರನೂ ಆಗಿರುವ ತಿಪ್ಪೇಸ್ವಾಮಿ ಮನೆ ಮೇಲೆ ಆದಾಯ ತೆರಿಗೆ ಅಧಿಕಾರಿಗಳು …

Read More »

ವರದಿ ನಂತರ ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಕದ ನಿರ್ಧಾರ: ಸಿಎಂ

ಚಿತ್ರದುರ್ಗ, ನವೆಂಬರ್ 08: ”ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಅರ್ಜಿ ಸಲ್ಲಿಕೆಯಾಗಿವೆ. ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ಮಂಗಳವಾರ ಜಿಲ್ಲೆಯ ಸಾಣೇಹಳ್ಳಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ”ಆಡಳಿತಾಧಿಕಾರಿ ನೇಮಿಸುವ ಪೂರ್ವ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯಬೇಕಿದೆ. ಈ ಸಂಬಂಧ ಕಂದಾಯ ಇಲಾಖೆಯಿಂದ ವರದಿ ಸಲ್ಲಿಕೆಯಾದ …

Read More »

ನ್ಯಾಯಾಲಯಕ್ಕೆ ಮುರುಘಾಶ್ರೀ ವಿರುದ್ಧ 694 ಪುಟಗಳ ಆರೋಪ ಪಟ್ಟಿ

ಚಿತ್ರದುರ್ಗ: ‍ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ನ್ಯಾಯಾಲಯಕ್ಕೆ ಗುರುವಾರ 694 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.   ತನಿಖೆಯನ್ನು ಭಾಗಶಃ ಪೂರ್ಣಗೊಳಿಸಿರುವ ಪೊಲೀಸರು, ದೋಷಾರೋಪ ಪಟ್ಟಿಯ ತಲಾ 347 ಪುಟಗಳ ಎರಡು ಪ್ರತಿಗಳನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಸಲ್ಲಿಸಿದರು. ಒಂದರಲ್ಲಿ ಮುರುಘಾ ಶರಣರು …

Read More »

ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಮಂತ್ರಿಗಿರಿ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಚಿತ್ರದುರ್ಗ: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಶೀಘ್ರದಲ್ಲಿಯೇ ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಚರ್ಚೆ ನಡೆಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಚಿತ್ರದುರ್ಗ ಜಿಲ್ಲೆಗೂ ಪ್ರಾತಿನಿಧ್ಯ ನೀಡಲು ಪ್ರಯತ್ನಿಸಲಾಗುವುದು. ಜಿಲ್ಲೆಗೆ ಸಚಿವ ಸ್ಥಾನ ನಿಡದೇ ಮಲತಾಯಿ ಧೋರಣೆ ಅನುಸರಿಸಲಾಗಿದೆ ಎಂದು ಹೇಳಲಾಗುತ್ತಿದೆ. ಯಾವುದೇ ತಾರತಮ್ಯ ಮಾಡಿಲ್ಲ ಎಂದರು. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿಗೆ ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ …

Read More »

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ: ಫೋನ್‌ ಸಂಭಾಷಣೆಯ ಆಡಿಯೊ ವೈರಲ್‌

ಚಿತ್ರದುರ್ಗ: ಪ್ರೌಢಶಾಲೆಯ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾಶ್ರೀ ಬಂಧನಕ್ಕೆ ಒಳಗಾಗಿರುವುದಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವೆ ರಾಣಿ ಸತೀಶ್‌ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಮಹಡಿ ಶಿವಮೂರ್ತಿ ನಡುವೆ ನಡೆದ ಫೋನ್‌ ಸಂಭಾಷಣೆಯ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.   ಸುಮಾರು 12 ನಿಮಿಷದ ಮಾತುಕತೆಯಲ್ಲಿ ಹಲವು ವಿಚಾರಗಳು ಚರ್ಚೆಗೆ ಬಂದಿವೆ. ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಆಕ್ರೋಶ, ಯಡಿಯೂರಪ್ಪ …

Read More »

ಪೋಕ್ಸೋ ಪ್ರಕರಣ : ‘ಮುರುಘಾಶ್ರೀ’ ಜಾಮೀನು ಅರ್ಜಿ ವಿಚಾರಣೆ ಸೆ.23 ಕ್ಕೆ ಮುಂದೂಡಿಕೆ

ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ (POCSO) ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳ (murugha shri) ಜಾಮೀನು ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ನ್ಯಾಯಾಲಯ ಆದೇಶ ಹೊರಡಿಸಿದೆ.   ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಜೈಲು ಪಾಲಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಕುರಿತು ಚಿತ್ರದುರ್ಗ 2 ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದು, ಇದೀಗ ಅರ್ಜಿ ವಿಚಾರಣೆಯನ್ನು ಸೆ.23 ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ. ಅಪ್ರಾಪ್ತ …

Read More »

ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ: ಜೈಲಾ ಅಥವಾ ಆಸ್ಪತ್ರೆ ಇಂದು ನಿರ್ಧಾರ!

ಚಿತ್ರದುರ್ಗ: ಪೋಕ್ಸೋ ಕೇಸ್​ನಲ್ಲಿ ಮುರುಘಾಶ್ರೀಗಳು ಜೈಲು ಸೇರಿದ್ದು, ಜಿಲ್ಲೆಯ 2ನೇ ಹೆಚ್ಚುವರಿ ಸೆಷನ್ಸ್​ ಕೋರ್ಟ್​​ನಲ್ಲಿ ಇಂದು ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಆ ಬಳಿಕ ಮುರುಘಾಶ್ರೀಗೆ ಬೇಲಾ, ಜೈಲಾ, ಆಸ್ಪತ್ರೆನಾ? ಇಂದು ನಿರ್ಧಾರವಾಗಲಿದೆ. ಸೆ.14ರವರೆಗೆ ಮುರುಘಾಶ್ರೀ ನ್ಯಾಯಾಂಗ ಬಂಧನದಲ್ಲಿದ್ದಾರೆ. ಕರೊನರಿ ಎಂಜೋಗ್ರಾಮ ಪರೀಕ್ಷೆ, ಚಿಕಿತ್ಸೆ ಬಗ್ಗೆಯೂ ವಿಚಾರಣೆ ನಡೆಯಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಶಿಫ್ಟ್ ಮಾಡಲು ಮುರುಘಾಶ್ರೀ ಪರ ವಕೀಲರು ಮನವಿ ಮಾಡಿದ್ದು, ಸಮೀಪದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು …

Read More »

ಮುರುಘಾಶ್ರೀಗಳಿಗೆ ಸೆಪ್ಟೆಂಬರ್ 14 ರವರೆಗೆ ನ್ಯಾಯಾಂಗ ಬಂಧನ

ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮರುಘಾಮಠದ ಶ್ರೀಗಳಿಗೆ 9 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2 ನೇ ಹೆಚ್ಚುವರಿ ನ್ಯಾಯಾಲಯ ಆದೇಶ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾಮಠದ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಿದ್ದು, ಪೊಲೀಸರು ಇಂದು ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಹೆಚ್ಚುವರಿ ನ್ಯಾಯಾಲಯ ಮುರುಘಾಶ್ರೀಗಳಿಗೆ ಸೆಪ್ಟೆಂಬರ್ 14 ರವರೆಗೆ ನ್ಯಾಯಾಂಗ …

Read More »