Breaking News
Home / ಜಿಲ್ಲೆ / ಚಿತ್ರದುರ್ಗ (page 3)

ಚಿತ್ರದುರ್ಗ

ನಿತ್ಯವೂ 100 ಬಡವರಿಗೆ ಮುರುಘಾ ಮಠದಿಂದ ಆಹಾರದ ಕಿಟ್‌ ವಿತರಣೆ

ಚಿತ್ರದುರ್ಗ: ಕೋವಿಡ್ ಮೊದಲ ಅಲೆಯ ವೇಳೆ ಬಡತನ ರೇಖೆಗಿಂತ ಕಡಿಮೆ ಇರುವ ಜನರನ್ನು ಕಳೆದ ವರ್ಷ ಗುರುತಿಸಿ ಮುರುಘಾಮಠದಿಂದ ಆಹಾರ ಕಿಟ್‌ ವಿತರಿಸಲಾಗಿತ್ತು. ಎರಡನೇ ಅಲೆಯಲ್ಲೂ ಇದೇ ಮಾದರಿ ಅನುಸರಿಸಿದ್ದು, ಶನಿವಾರದಿಂದ ಈ ಕಾರ್ಯ ಆರಂಭವಾಗಿದೆ. ವಿವಿಧ ಸಮುದಾಯಗಳನ್ನು ಗುರುತಿಸಿರುವ ಶ್ರೀಮಠ ಸವಿತಾ ಸಮುದಾಯದ 100 ಬಡವರಿಗೆ ಅಕ್ಕಿ, ಬೇಳೆ ಹಾಗೂ ಗೋಧಿ ಹಿಟ್ಟು ಹೊಂದಿರುವ ‘ಆಹಾರ ಸಾಮಗ್ರಿ ಕಿಟ್‌’ಗಳನ್ನು ವಿತರಿಸಿತು. ಶಿವಮೂರ್ತಿ ಮುರುಘಾ ಶರಣರು ಇದಕ್ಕೆ ಚಾಲನೆ ನೀಡಿದರು. …

Read More »

ಚಿತ್ರದುರ್ಗದಲ್ಲಿ ಅಂಬುಲೆನ್ಸ್‌ನಲ್ಲಿ ಆಕ್ಸಿಜನ್ ಸಿಗದೆ ಕೋವಿಡ್ ರೋಗಿ ಸಾವು

ಚಿತ್ರದುರ್ಗ: ಒಂದ್ಕಡೆ ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳ ಆಗ್ತಿದ್ರೆ ಇತ್ತ ಚಿತ್ರದುರ್ಗದಲ್ಲಿ ಅಂಬುಲೆನ್ಸ್‌ನಲ್ಲಿ ಆಮ್ಲಜನಕ ಸಿಗದೇ ಕೋವಿಡ್ ರೋಗಿ ಮೃತಪಟ್ಟಿರುವ ದುರಂತ ನಡೆದಿದೆ. ಅಂಬುಲೆನ್ಸ್‌ನಲ್ಲಿ ಸಕಾಲಕ್ಕೆ ಆಕ್ಸಿಜನ್ ಸಿಗದೇ 65 ವರ್ಷದ ವೃದ್ಧೆಯೊಬ್ಬರು ಪ್ರಾಣಬಿಟ್ಟಿದ್ದಾರೆ. ಹಿರಿಯೂರು ನಗರದ ವೇದಾವತಿ ಬಡಾವಣೆಯ ಕೋವಿಡ್ ಸೊಂಕಿತ ವೃದ್ಧೆಯನ್ನು ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಿಂದ ದಾವಣಗೆರೆಗೆ ಅಂಬುಲೆನ್ಸ್ ಮೂಲಕ ಕರೆದೊಯ್ಯುವಾಗ ಮಾರ್ಗಮಧ್ಯೆ ವೃದ್ದೆ ಮೃತಪಟ್ಟಿದ್ದಾರೆ. ಆಕ್ಸಿಜನ್ ಸಿಲಿಂಡರ್ ಬೇಕು ಐದು ಸಾವಿರ ರೂಪಾಯಿ ಕೊಡ್ಬೇಕು …

Read More »

ವಿನಯ್ ಕುಲಕರ್ಣಿ ಸಿಬಿಐ ವಿಚಾರಣೆ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ಚಿತ್ರದುರ್ಗ: ಮಾಜಿ ಸಚಿವ ವಿನಯ್ ಕುಲಕರ್ಣಿಯವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸುತ್ತಿರುವುದು ರಾಜಕೀಯ ಪ್ರೇರಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಜೊತೆ ನಾನೂ ಮಾತನಾಡಿದ್ದೇನೆ. ನಾನು ಏನೂ ತಪ್ಪು ಮಾಡಿಲ್ಲ ಎಂದು ನನ್ನ ಬಳಿ ಹೇಳಿದ್ದಾನೆ. ಹೀಗಾಗಿ ವಿಚಾರಣೆ ಹಂತದಲ್ಲಿರುವಾಗ ನಾನು ಏನೂ ಹೇಳುವುದಿಲ್ಲ ಎಂದರು. ಕೊರೊನಾಗೆ ವ್ಯಾಕ್ಸಿನ್ ಬರುವ ತನಕ ಗ್ರಾ.ಪಂ. ಚುನಾವಣೆ …

Read More »

ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ.

ಚಿತ್ರದುರ್ಗ, – ದೆವ್ವ ಬಿಡಿಸುವ ನೆಪದಲ್ಲಿ ಎರಡು ವರ್ಷದ ಹೆಣ್ಣು ಮಗುವನ್ನು ಮಾಂತ್ರಿಕನೊಬ್ಬ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪೂರ್ಣಿಕಾ (2) ಮಂತ್ರವಾದಿಯಿಂದ ಹತ್ಯೆಯಾದ ಕಂದಮ್ಮ. ಪ್ರವೀಣ್ ಹಾಗೂ ಬೇಬಿ ದಂಪತಿಯ ಪುತ್ರಿ ಪೂರ್ಣಿಕಾ ನಿದ್ದೆಯಲ್ಲಿ ಬೆಚ್ಚಿ ಬೀಳುತ್ತಿದ್ದಳು. ಈ ಕಾಯಿಲೆಯ ಬಗ್ಗೆ ಆಸ್ಪತ್ರೆಗೆ ತೋರಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ಮೌಢ್ಯದ ಮೊರೆ ಹೋಗಿದ್ದು , ರಾಕೇಶ್ ಎಂಬ ಮಾಂತ್ರಿಕನ ಬಳಿ ಹೋಗಿದ್ದಾರೆ. ಮಗುವನ್ನು …

Read More »

ದೆವ್ವ ಬಿಡಿಸುವ ನೆಪದಲ್ಲಿ ಬಾಲಕಿ ಹತ್ಯೆ

ಚಿತ್ರದುರ್ಗ: ದೆವ್ವ ಬಿಡಿಸುವುದಾಗಿ ನಂಬಿಸಿ ಮೂರು ವರ್ಷದ ಬಾಲಕಿಯನ್ನು ಪೂಜಾರಿ ಕೋಲಿನಿಂದ ಹೊಡೆದು ಸಾಯಿಸಿದ ಘಟನೆ ಹೊಳಲ್ಕೆರೆ ತಾಲ್ಲೂಕಿನ ಅಜ್ಜಿ ಕ್ಯಾತನಹಳ್ಳಿಯಲ್ಲಿ ಭಾನುವಾರ ನಡೆದಿದೆ. ಪ್ರವೀಣ್‌ ಹಾಗೂ ಶಾಮಲಾ ದಂಪತಿಯ ಪುತ್ರಿ ಪೂರ್ವಿಕಾ ಮೃತ ಬಾಲಕಿ. ಚೌಡಮ್ಮನ ದೇಗುಲದ ಪೂಜಾರಿ ರಾಕೇಶ್‌ (19) ಎಂಬಾತನನ್ನು ಚಿಕ್ಕಜಾಜೂರು ಪೊಲೀಸರು ಬಂಧಿಸಿದ್ದಾರೆ. ಮೌಢ್ಯ ನಿಷೇದ ಕಾಯ್ದೆ-2017ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ‘ಪೂರ್ವಿಕಾ ಮೂರು ದಿನಗಳಿಂದ ಸರಿಯಾಗಿ ಊಟ ಮಾಡುತ್ತಿರಲಿಲ್ಲ. ಬಾಲಕಿಗೆ ದೆವ್ವ ಹಿಡಿದಿದೆ ಎಂದಿದ್ದ …

Read More »

ರಾಜ್ಯದ ಇತಿಹಾಸದಲ್ಲೇ ಫಸ್ಟ್- 4 ಕೋಟಿ ಮೌಲ್ಯದ ಹಸಿ ಗಾಂಜಾ ಬೇಟೆ

ಚಿತ್ರದುರ್ಗ: ರಾಜ್ಯದಾದ್ಯಂತ ಪೊಲೀಸರು ಡ್ರಗ್ಸ್ ಮಾಫಿಯಾ ವಿರುದ್ಧ ಸಮರ ಸಾರಿದ್ದು, ಪ್ರತಿದಿನ ಗಾಂಜಾವನ್ನು ವಶಕ್ಕೆ ಪಡೆದ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಸದ್ಯ ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಂಪುರ ಠಾಣೆ ಪೊಲೀಸರು ಬರೋಬ್ಬರಿ ನಾಲ್ಕು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡು, ನಾಲ್ವರನ್ನು ಬಂಧಿಸಿದ್ದಾರೆ. ಡಿ.ಬಿ.ಮಂಜುನಾಥ್, ವೈ.ಜಂಬುನಾಥ್, ಡಿ.ವೈ.ಮಂಜುನಾಥ್, ಸುಮಂತ್ ಗೌಡ ಬಂಧಿತ ಆರೋಪಿಗಳಿದ್ದಾರೆ. ಸೆ.3ರ ನಸುಕಿನ ಜಾವ ಬೀಟ್ ಹೊರಟ ಕೋಟೆನಾಡಿನ ಪೊಲೀಸ್ ಪೇದೆಗೆ …

Read More »

ಕೋವಿಡ್ ದಿಂದ ಗುಣಮುಖರಾದವರ ಸಂಖ್ಯೆ ಅಧಿಕ

ಚಿತ್ರದುರ್ಗ: ಜಿಲ್ಲೆಯಲ್ಲಿ 5034 ಕೋವಿಡ್ ಸೋಂಕಿತರಿದ್ದು, ರಾಜ್ಯಕ್ಕೆ ಹೋಲಿಸಿದಾಗ ಜಿಲ್ಲೆಯಲ್ಲಿ ಕೋವಿಡ್‌ ಪಾಸಿಟಿವ್‌ ರೇಟ್‌ ಶೇ. 9.70 ಇದೆ. ಮರಣ ಪ್ರಮಾಣ ಶೇ. 0.65 ಹಾಗೂ ಗುಣಮುಖರಾದವರ ಪ್ರಮಾಣ ಶೇ. 75.66 ಇದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್‌. ಮನ್ನಿಕೇರಿ ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲೂಕುಗಳ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್‌-19ಗೆ ಚಿಕಿತ್ಸೆ ನೀಡುತ್ತಿದ್ದು, ಸಾರ್ವಜನಿಕರು ಚಿಕಿತ್ಸೆ ಪಡೆದುಕೊಳ್ಳಬಹುದು ಎಂದರು. ಎಲ್ಲರಿಗೂ ಜಿಲ್ಲಾ …

Read More »

ಕೊರೊನಾ ವರದಿ ವಿಳಂಬ, ಚಿಕಿತ್ಸೆ ನಿರ್ಲಕ್ಷದ ಬಗ್ಗೆ ಕಿಡಿ:ವಿಡಿಯೋ ಮಾಡಿ ಅಳಲು

ಚಿತ್ರದುರ್ಗ: ಇಷ್ಟು ದಿನ ಜನ ಸಾಮಾನ್ಯರು ಕೋವಿಡ್ ಕೇಂದ್ರಗಳಲ್ಲಿ ಹಾಗೂ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ, ವ್ಯವಸ್ಥೆ ಸರಿ ಎಲ್ಲ ಎಂದು ವಿಡಿಯೋ ಹರಿಬಿಟ್ಟು ಅಳಲು ತೋಡಿಕೊಂಡಿರುವುದನ್ನು ನೋಡಿದ್ದೇವೆ. ಆದರೆ ಇದೀಗ ಕೊರೊನಾ ವಾರಿಯರ್ಸ್‍ಗೂ ಇದೇ ರೀತಿ ಸಮಸ್ಯೆಯಾಗುತ್ತಿದ್ದು, ಇದೀಗ ಜೀವ ಉಳಿಸುವ ಕೆಲಸ ಮಾಡುವರಿಗೇ ಜೀವ ಭಯ ಶುರುವಾಗಿದೆ. ಚಿತ್ರದುರ್ಗ ತಾಲೂಕಿನ ಹಿರೇಗುಂಟನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಹಿರೇಗುಂಟನೂರು ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ವಿಡಿಯೋ ಮಾಡಿ ಅವ್ಯವಸ್ಥೆ ಕುರಿತು …

Read More »

ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯ ಜಿಲ್ಲಾಸ್ಪತ್ರೆಯಲ್ಲಿ ಮೋಜು-ಮಸ್ತಿ

ಚಿತ್ರದುರ್ಗ: ಸರ್ಕಾರಿ ಆಸ್ಪತ್ರೆ ಬಡ ರೋಗಿಗಳ ಪಾಲಿಗೆ ಸಂಜೀವಿನಿ ಅಂತ ಎಲ್ಲರು ಭಾವಿಸಿದ್ದಾರೆ. ಆದರೆ ಆರೋಗ್ಯ ಸಚಿವ ಶ್ರೀರಾಮುಲು ತವರು ಜಿಲ್ಲೆಯ ಈ ಆಸ್ಪತ್ರೆ ದುಸ್ಥಿತಿ ನೋಡಿದ್ರೆ ಎಂಥವರೂ ಒಮ್ಮೆ ಬೆಚ್ಚಿ ಬೀಳ್ತಾರೆ. ಹೌದು. ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಘಟಕದ ಮುಂಭಾಗದಲ್ಲೇ ನೋವು ನೋವು ಅಂತ ರೋಗಿಯೊಬ್ಬರು ನರಳಾಡಿದ್ದಾರೆ. ಬೆಡ್ ಖಾಲಿ ಇಲ್ಲ ಅಂತ ನೆಪ ಹೇಳಿ, ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಆಸ್ಪತ್ರೆಯ ಮುಂಭಾಗದಲ್ಲಿಯೇ ಸ್ಟ್ರಚರ್‍ನಲ್ಲೇ ಬಿಟ್ಟು ಹೋಗಿ ಆಸ್ಪತ್ರೆ …

Read More »

ಅಮಾಯಕ ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಚಿತ್ರದುರ್ಗ: ದಲಿತ ಯುವಕರನ್ನು ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ ಅಮಾನವೀಯ ಘಟನೆ ಚಿತ್ರದುರ್ಗದಲ್ಲಿ  ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಚೋಳಗುಡ್ಡ ನಿವಾಸಿ ಜಯಸೂರ್ಯ, ಹೊಳಲ್ಕೆರೆ ತಾಲ್ಲೂಕಿನ ಎಚ್.ಡಿ ಪುರ ನಿವಾಸಿ ಮಾರುತಿ, ಶರತ್ ಹಲ್ಲೆಗೊಳಗಾದವರು ಎಂದು ಗುರುತಿಸಲಾಗಿದೆ.  ಚಿತ್ರದುರ್ಗ ತಾಲೂಕಿನ ಅಡವಿ ಗೊಲ್ಲರಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೇರೊಂದು ಪ್ರಕರಣಕ್ಕೆ ತಳುಕು ಹಾಕಿ ದಲಿತ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಹಲ್ಲೆಗೊಳಗಾದವರ ವಿರುದ್ಧವೇ ಹಲ್ಲೆಕೋರರು …

Read More »