Breaking News
Home / ಜಿಲ್ಲೆ / ದಾವಣಗೆರೆ

ದಾವಣಗೆರೆ

ಳ್ಳರಿಂದ ತರಕಾರಿ ರಕ್ಷಿಸಲು ಪಾಳಿಯಲ್ಲಿ ಕಾವಲು ಕಾಯುತ್ತಿರುವ ರೈತ‌!

ದಾವಣಗೆರೆ: ಇದೀಗ ಟೊಮೆಟೊ ತರಕಾರಿಗಳಲ್ಲೇ ರಾಜ ಎನ್ನಿಸಿಕೊಳ್ಳುವ ಪರಿಸ್ಥಿತಿ ಇದೆ. ಏಕೆಂದರೆ ಬೆಲೆ ಗಗನಕ್ಕೇರಿದೆ. ಇನ್ನೊಂದೆಡೆ, ರೈತರು ಬೆಳೆ ಬೆಳೆಯುತ್ತಿರುವ ಜಮೀನುಗಳಲ್ಲೇ ಮೊಕ್ಕಾಂ ಹೂಡುವಂತಾಗಿದೆ. ಕಳ್ಳರ ಕಾಟದಿಂದ ಬೇಸತ್ತಿರುವ ಅವರಿಗೆ ಟೊಮೆಟೊ ರಕ್ಷಣೆ ಮಾಡುವುದು ತಲೆನೋವಾಗಿ ಪರಿಣಮಿಸಿದೆ. ದಾವಣಗೆರೆಯ ರೈತರು ಎರಡು ನಾಯಿಗಳೊಂದಿಗೆ ಜಮೀನಿನಲ್ಲಿ ಕಾವಲು ಕಾಯುತ್ತಿದ್ದಾರೆ. ಮಾಯಕೊಂಡ ಹೋಬಳಿಯಲ್ಲಿ ಟೊಮೆಟೊ ಹೆಚ್ಚಾಗಿ ಬೆಳೆಯುತ್ತಾರೆ. ಸುತ್ತಮುತ್ತಲ ಗ್ರಾಮದ‌ ಜಮೀನುಗಳಲ್ಲಿ ಬೆಳೆಯುವ ತರಕಾರಿ ವಿದೇಶಗಳಿಗೂ ರಫ್ತಾಗುತ್ತದೆ. ಈಗಂತೂ ಟೊಮೆಟೊಗೆ ಬೆಲೆ ಕೇಳುವಂತಿಲ್ಲ. ಪ್ರತಿ …

Read More »

ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ.:ರೇಣುಕಾಚಾರ್ಯ

ದಾವಣಗೆರೆ : ನನ್ನ ಬಾಯಿ ಮುಚ್ಚಿಸಲು ಯಾರಿಂದಲೂ ಸಾಧ್ಯವಿಲ್ಲ. ನೋಟಿಸ್​ಗೆ ನಾನು ಉತ್ತರ ಕೊಡಲ್ಲ ಎಂದು ಹೊನ್ನಾಳಿ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ನಗರದಲ್ಲಿ ಹಮ್ಮಿಕೊಂಡಿದ್ದ ಸಂಸದ ಜಿಎಂ ಸಿದ್ದೇಶ್ವರ್​ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ನಾನು ಬಿಜೆಪಿ ಶಿಸ್ತು ಸಮಿತಿಯಿಂದ ನೀಡಿರುವ ನೋಟಿಸ್​​ಗೆ ಯಾವುದೇ ಉತ್ತರ ಕೊಡಲ್ಲ. ನೋಟಿಸ್​​ಗೆ ನಾನೇಕೆ ಉತ್ತರ ಕೊಡಬೇಕು ಎಂದು ಪ್ರಶ್ನಿಸಿದರು. ನಾನು ಏನು ಹೇಳಬೇಕೋ ಅದನ್ನೇ ಹೇಳಿದ್ದೇನೆ. …

Read More »

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ: ಮದ್ಯಪಾನ ವ್ಯಸನಿಯಾಗಿದ್ದ ಪತಿರಾಯನೊಬ್ಬ ತನ್ನ ಪತ್ನಿ ಲೈಂಗಿಕ ಕ್ರಿಯೆಗೆ ಸಹಕಾರ ಮಾಡಿಲ್ಲ ಎಂದು ಕುತ್ತಿಗೆ ಸೀಳಿ ಕೊಲೆ ಮಾಡಿದ್ದು, ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.   19/02/20ರಂದು ದಾವಣಗೆರೆ ಜಿಲ್ಲೆಯ ಅಮರಾವತಿ ಗ್ರಾಮದ ಮಲ್ಲಿಕಾರ್ಜುನ ಬಡಾವಣೆಯಲ್ಲಿ ಈ ಘಟನೆ ನಡೆದಿತ್ತು. ಮರಿಯಪ್ಪ(54) ಶಿಕ್ಷೆಗೊಳಗಾದ ಆರೋಪಿ. ಸೌಭಾಗ್ಯಮ್ಮ ಕೊಲೆಯಾದ ಪತ್ನಿ. ಆರೋಪಿ ಮರಿಯಪ್ಪ ಕುಡಿದು ಬಂದು ಮನೆಯಲ್ಲಿ ಹೆಂಡತಿ ಸೌಭಾಗ್ಯಮ್ಮ ಜೊತೆ ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂದು ಮೊದಲಿಗೆ ಕ್ಯಾತೆ …

Read More »

ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಸದಸ್ಯೆ ಲೋಕಾಯುಕ್ತ ಬಲೆಗೆ

ದಾವಣಗೆರೆ: ಲಂಚ ಸ್ವೀಕರಿಸುವ ವೇಳೆ ಹರಿಹರ ನಗರಸಭೆ ಕಾಂಗ್ರೆಸ್ ಸದಸ್ಯೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರನಿಂದ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ನಗರಸಭೆ ಸದಸ್ಯೆ ನಾಗರತ್ನ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.   ದಾವಣಗೆರೆ ಜಿಲ್ಲೆಯ ಹರಹರ ನಗರಸಭೆ ಕಾಂಗ್ರೆಸ್ ಸದಸ್ಯೆ ನಾಗರತ್ನ ಜತೆಗೆ ಅವರ ಪತಿ ಮಂಜುನಾಥ, ಪುತ್ರ ರೇವಂತ ಸೇರಿ ಗುತ್ತಿಗೆದಾರ ಮಜೀದ್ ಎಂಬುವರಿಂದ ಲಂಚ ಸ್ವೀಕರಿಸುವ ವೇಳೆ ದಾವಣಗೆರೆ ಲೋಕಾಯುಕ್ತ ಎಸ್​ಪಿ ಎಂ.ಎಸ್ ಕೌಲಾಪುರೆ …

Read More »

ನ್ಯಾಯಾಲಯದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಬಲೆಗೆ

ದಾವಣಗೆರೆ: ಪೋಕ್ಸೋ ಕೇಸ್ ಆರೋಪಿಯಿಂದ 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಮಕ್ಕಳ ಸ್ನೇಹಿ ನ್ಯಾಯಾಲಯದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೇಖಾ ಕೋಟೆಗೌಡರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಮಕ್ಕಳ ಸ್ನೇಹಿ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ. ಕೌಟುಂಬಿಕ ನ್ಯಾಯಾಲಯದಲ್ಲಿ ಸರ್ಕಾರಿ ವಕೀಲರಾಗಿದ್ದ ರೇಖಾ ಕೋಟೆಗೌಡರ್ ಪೋಕ್ಸೋ ಪ್ರಕರಣದ ಆರೋಪಿಯಿಂದ ಲಂಚ ಪಡೆಯುತ್ತಿದ್ದರು. ಮಧುಸೂಧನ್ ಕಿತ್ತೂರ್ ಎಂಬುವವರು ನೀಡಿದ ದೂರಿನ …

Read More »

ಮರಾಠಿಗರಿಗೆ ಒಂದಂಗುಲ ನೆಲ ಬಿಟ್ಟುಕೊಡುವುದಿಲ್ಲ; ಇದು ಕನ್ನಡಿಗರ ಶಪಥ: ಡಾ.ದೊಡ್ಡರಂಗೇಗೌಡ

ದಾವಣಗೆರೆ (ಜ.6) : ಕನ್ನಡ ಮಧುರ ಹಾಗೂ ಕನ್ನಡ ಮಾನವೀಯ ನೆಲೆಯುಳ್ಳ ಭಾಷೆ. ನಮ್ಮಲ್ಲಿ ಇಚ್ಛಾಶಕ್ತಿ ಇದ್ದರೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರವನ್ನು ಕನ್ನಡದಲ್ಲಿ ಹೇಳಲು ಸಾಧ್ಯ ಎಂದು ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ತಿಳಿಸಿದರು.   ಹಾವೇರಿ(Haveri)ಯಲ್ಲಿ ಆರಂಭವಾಗಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ(Kannada Sahitya sammelana)ದ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಹಾವೇರಿಗೆ ಹೋಗುವ ಮಾರ್ಗದಲ್ಲಿ ದಾವಣಗೆರೆಯ ಕುವೆಂಪು ಕನ್ನಡ ಭವನ(Kuvempu kannada Bhavana)ಕ್ಕೆ ಗುರುವಾರ ಆಗಮಿಸಿ ಜಿಲ್ಲಾ ಕನ್ನಡ …

Read More »

ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹಕ್ಕುಪತ್ರ ವಿತರಣೆ

ದಾವಣಗೆರೆ : ಸಾರ್ವಜನಿಕ ಸಮಸ್ಯೆಗೆ ಸ್ಪಂಧಿಸಿರುವ ಅಭಿವೃದ್ದಿಗೆ ಶ್ರಮಿಸಿದವರನ್ನು ಬೆಂಬಲಿಸಿ ಆರ್ಶಿವದಿಸಿ ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೈರತಿ ಅವರು ಹೇಳಿದರು. ಸಂತೆಬೆನ್ನೂರಿನಲ್ಲಿ ಶನಿವಾರ ಜಿಲ್ಲಾಡಳಿತದಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಅಂಗವಾಗಿ ಆಯೋಜಿಸಲಾದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆ ಅಲಿಸಿ ಮಾತಾನಾಡಿದರು. ಜನಸ್ಪಂದನ ಕಾರ್ಯಕ್ರಮ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕಾರ್ಯಕ್ರಮ ಕಚೇರಿ ಕೆಲಸಗಳಿಗಾಗಿ ಜನರು ಅಲೆಯುವುದನ್ನು ತಪ್ಪಿಸಲು ನಮ್ಮ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ …

Read More »

ಶಾಸಕ ರೇಣುಕಾಚಾರ್ಯ ತಮ್ಮನ ಮಗನ ಸಾವು ಪ್ರಕರಣಕ್ಕೆ ಮೆಗಾ ಟ್ವಿಸ್ಟ್:‌ ಅ. 30 ರಂದು ಆತನಿಗೆ ಒಂದೇ ನಂಬರ್‌ನಿಂದ 10 ಸಲ ಕರೆ!

ದಾವಣಗೆರೆ: ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್‌ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಚಂದ್ರಶೇಖರ್‌ ನದ್ದ ಅಪಘಾತವಾಗಿಲ್ಲ, ಅದೊಂದು ಯೋಜಿತ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿರುವ ಹಿನ್ನೆಲೆ ಪ್ರಕಣ ದಾಖಲಿಸಿಕೊಂಡಿರುವ ಹೊನ್ನಾಳಿ ಪೊಲೀಸರು ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಇದೀಗ ಚಂದ್ರಶೇಖರ್‌ ನಾಪತ್ತೆಯಾದ ದಿನ. ಅ. 30 ರಂದು ಆತನ ಮೊಬೈಲ್‌ ಗೆ ಒಂದೇ ನಂಬರ್‌ ನಿಂದ 10ಕ್ಕೂ ಹೆಚ್ಚು ಸಲ ಕರೆ ಬಂದಿದೆ ಎಂದು ತಿಳಿದುಬಂದಿದೆ. …

Read More »

ಮುಸ್ಲಿಮರನ್ನು ಯಾವ ಪಕ್ಷದಲ್ಲೂ ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ – C.M. ಇಬ್ರಾಹಿಂ

ದಾವಣಗೆರೆ: ಮುಸ್ಲಿಮರನ್ನು ಯಾವ ಪಕ್ಷದಲ್ಲೂ ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ. ಕಾಂಗ್ರೆಸ್ (Congress) ಪಕ್ಷದಲ್ಲಿ ಮುಸ್ಲಿಮರಿಗೆ ಊಟದ ಕೊನೆಯಲ್ಲಿ ಅಳಿದುಳಿದ ಎಂಜಲು ರೀತಿಯಲ್ಲಿ ಸ್ಥಾನಮಾನ ನೀಡ್ತಿದ್ರು. ಆದರೆ ಜೆಡಿಎಸ್ (JDS) ರಾಜ್ಯಾಧ್ಯಕ್ಷರ ಸ್ಥಾನ ನೀಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (C.M.Ibrahim) ಹೇಳಿದ್ದಾರೆ. ದಾವಣಗೆರೆ (Davanagere) ಜಿಲ್ಲೆಯ ಹರಿಹರ ತಾಲೂಕಿನ ಮಲೆಬೇನ್ನೂರು ಗ್ರಾಮದಲ್ಲಿ ಸಾರ್ವಜನಿಕ ಸಭೆ ಮಾಡಿ ಹಬೀವುಲ್ಲಾ ಷಾ ಖಾದ್ರಿ ದರ್ಗಾಕ್ಕೆ ಭೇಟಿ ನೀಡಿದ‌ ಬಳಿಕ ಮಾತನಾಡಿದ ಅವರು, ನಾವು ಗುರುವಾರದ …

Read More »

ಸಿದ್ಧು ಜನ್ಮದಿನ ಆಚರಣೆಗೆ ದೇವನಗರಿ ಸಜ್ಜು

ದಾವಣಗೆರೆ: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಪ್ರಯುಕ್ತ ಆ.3ರಂದು ಹಮ್ಮಿಕೊಂಡಿರುವ ಅಮೃತ ಮಹೋತ್ಸವಕ್ಕಾಗಿ ನಗರದ ಹೊರವಲಯದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ 50 ಎಕರೆ ಪ್ರದೇಶದಲ್ಲಿರುವ ಶಾಮನೂರು ಅರಮನೆ ಮೈದಾನ ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ.   ಅದ್ಧೂರಿ ಮತ್ತು ವಿಜೃಂಭಣೆಯಿಂದ ಆಚರಿ ಸುವ ಉದ್ದೇಶದಿಂದ ವೇದಿಕೆ, ಸಭಾಂಗಣ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಬಹುತೇಕ ಮುಕ್ತಾಯ ಹಂತದಲ್ಲಿದೆ. ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ನೀಡಿರುವ ಯೋಜನೆ, ಕಾರ್ಯಕ್ರಮಗಳನ್ನು …

Read More »