ದಾವಣಗೆರೆ: ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 6.17 ಲಕ್ಷ ನಗದು ಹಣವನ್ನ ವಶಕ್ಕೆ ಪಡೆದಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆ ತಪಾಸಣೆ ನಡೆಸುತ್ತಿದ್ದ ವೇಳೆ ಕಾರಿಗನೂರ, ಮಾಗಾನಹಳ್ಳಿ ಹಾಗೂ ಭೂಮಿಕಾ ನಗರ ಚೆಕ್ ಪೋಸ್ಟ್ಗಳಲ್ಲಿ ಹಣ ಜಪ್ತಿ ಮಾಡಲಾಗಿದೆ. ದಾವಣಗೆರೆ ನಗರದ ಭೂಮಿಕಾ ನಗರ ಚೆಕ್ಪೋಸ್ಟ್ನಲ್ಲಿ ಜಯನಗರದ ಪವನಕುಮಾರ ಅವರು 4 ಲಕ್ಷ ರೂ., ಕಾರಿಗನೂರ ಕ್ರಾಸ್ ಚೆಕ್ ಪೋಸ್ಟ್ ನಲ್ಲಿ ಕಾರಿಗನೂರಿನ …
Read More »ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ – ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ ಸವಾಲ್
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ನಬಂಡಾಯ ಅಭ್ಯರ್ಥಿ ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ ಕಣಕ್ಕಿಳಿದಿದ್ದಾರೆ. ಅವರ ಸ್ಪರ್ಧೆ ಕಾಂಗ್ರೆಸ್ಗೆ ತಲೆನೋವಾಗಿ ಪರಿಣಮಿಸಿದೆ. ತಮ್ಮ ಸ್ಪರ್ಧೆ ಬಗ್ಗೆ ವಿಡಿಯೋ ಒಂದನ್ನು ಅವರು ಹರಿಬಿಟ್ಟಿದ್ದು, ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದು ಕಾಂಗ್ರೆಸ್ಗೆ ಸವಾಲು ಎಸೆದಿದ್ದಾರೆ. ಅಹಿಂದ ಸಮುದಾಯದ ಬೆಂಬಲದಿಂದ ಈ ಬಾರಿ ಚುನಾವಣೆ ಕಣದಲ್ಲಿ ಇದ್ದೇನೆ. ಅಹಿಂದ ಸಮುದಾಯ ಬಿಟ್ಟು …
Read More »ದಾವಣಗೆರೆ, ಬಾಗಲಕೋಟೆ ಉಪಸಮರ – ಜವಾಬ್ದಾರಿ ಹಂಚಿಕೆಗೆ ಸಿದ್ಧತೆ; ಬುಧವಾರ ಸಿಎಲ್ಪಿ ಸಭೆ
ಬೆಂಗಳೂರು: ಕಾಂಗ್ರೆಸ್ ಪಾಲಿಗೆ ಬಾಗಲಕೋಟೆ, ದಾವಣಗೆರೆ ಎರಡು ಕ್ಷೇತ್ರದ ಉಪ ಚುನಾವಣೆ ಸವಾಲಾಗಿದೆ. ಎಲ್ಲಾ 140 ಶಾಸಕರು ಹಾಗೂ ಸಚಿವರಿಗೂ ಚುನಾವಣಾ ಜವಾಬ್ದಾರಿ ಹಂಚಿಕೆಗೆ ಸಿದ್ಧತೆ ನಡೆಸಿದೆ. ನಾಳೆ (ಮಾ.25) ಈ ಸಂಬಂಧ ಸಿಎಂ ಸಿದ್ದರಾಮಯ್ಯ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಶತಾಯ ಗತಾಯ ಉಪ ಚುನಾವಣೆ ಗೆಲ್ಲುವ ಲೆಕ್ಕಾಚಾರದಲ್ಲಿ ಶಾಸಕರು, ಸಚಿವರನ್ನ ಅಖಾಡಕ್ಕೆ ಇಳಿಸಲು ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ. ಇನ್ನು ಬಾಗಲಕೋಟೆ ವಿಧಾನಸಭಾ ಉಪ …
Read More »ದಾವಣಗೆರೆಯಲ್ಲಿ ಕಾಂಗ್ರೆಸ್ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್ ನಾಯಕರಿಂದ ನಾಮಪತ್ರ ಸಲ್ಲಿಕೆ
ದಾವಣಗೆರೆ: ಸಮರ್ಥ್ ಶಾಮನೂರು ಟಿಕೆಟ್ ನೀಡಿದ್ದಕ್ಕೆ ಕಾಂಗ್ರೆಸ್ (Congress) ವಿರುದ್ದ ಅಲ್ಪಸಂಖ್ಯಾತ ನಾಯಕರು ಸಮರ ಸಾರಿದ್ದಾರೆ. 23 ಮಂದಿ ಮುಸ್ಲಿಮ್ ನಾಯಕರು ನಾಮಪತ್ರ ಸಲ್ಲಿಕೆ ಮಾಡುವ ಮೂಲಕ ಬಂಡಾಯದ ಬಿಸಿ ಮುಟ್ಟಿಸಿದ್ದಾರೆ. ಶಾಮನೂರು ಶಿವಶಂಕರಪ್ಪಅವರ ನಿಧನದಿಂದ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ನಮಗೆ ನಮ್ಮ ಸಮುದಾಯ ನಾಯಕರಿಗೆ ನೀಡಬೇಕೆಂದು ಮುಸ್ಲಿಮ್ ನಾಯಕರು ಪಟ್ಟು ಹಿಡಿದಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಮುಸ್ಲಿಮರ ಬೇಡಿಕೆಗೆ ಸ್ಪಂದಿಸದೇ ಎಸ್ಎಸ್ ಮಲ್ಲಿಕಾರ್ಜುನ್ ಪುತ್ರ ಸಮರ್ಥ್ಗೆ …
Read More »ದಾವಣಗೆರೆ ಉಪಸಮರಕ್ಕೂ ಮುನ್ನವೇ ಭುಗಿಲೆದ್ದ ಬಂಡಾಯ; 20ಕ್ಕೂ ಹೆಚ್ಚು ಮುಸ್ಲಿಂ ಮುಖಂಡರು ಬಿಜೆಪಿ ಸೇರ್ಪಡೆ
ದಾವಣಗೆರೆ: ದಕ್ಷಿಣ ಕ್ಷೇತ್ರದ ಉಪಸಮರಕ್ಕೂ ಮುನ್ನವೇ ರಾಜಕೀಯ ವಲಯದಲ್ಲಿ ಬಿರುಗಾಳಿ ಎದ್ದಿದೆ. ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಸಿಗದ ಹಿನ್ನೆಲೆ 20 ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮುಖಂಡರು , ಯುವನಾಯಕರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇದೇ ವೇಳೆ ಮುಖಂಡರು ಮುಂದಿನ ದಿನಗಳಲ್ಲಿ ಇನ್ನಷ್ಟು ಅಲ್ಪಸಂಖ್ಯಾತರನ್ನ ಬಿಜೆಪಿಗೆ ಸೇರಿಸುವುದಾಗಿ ವಾಗ್ದಾನ ಮಾಡಿದ್ದಾರೆ. ಜೊತೆಗೆ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್ …
Read More »ನಮಾಜ್ ಮಾಡುವ ವೇಳೆ ಹೆಜ್ಜೇನು ದಾಳಿ – ಐವರು ಗಂಭೀರ
ದಾವಣಗೆರೆ: ರಂಜಾನ್ ಪ್ರಾರ್ಥನೆ ಮಾಡುವ ವೇಳೆ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಐವರು ಗಂಭೀರ ಗಾಯಗೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಆನಗೋಡು ಬಳಿ ನಡೆದಿದೆ. ರಂಜಾನ್ ಪ್ರಯುಕ್ತ ಸುಮಾರು 800ಕ್ಕೂ ಅಧಿಕ ಮುಸ್ಲಿಂ ಬಾಂಧವರು ಆನಗೋಡು ಬಳಿಯ, ರಾಷ್ಟ್ರೀಯ ಹೆದ್ದಾರಿ 48ರ ಪಕ್ಕದಲ್ಲಿ ಇರುವ ಈದ್ಗಾ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆ ಹೆಜ್ಜೇನು ಗೂಡಿಗೆ ಕೆಲ ಯುವಕರು ಕಲ್ಲು ಹೊಡೆದಿದ್ದಾರೆ. ಈ ಪರಿಣಾಮ ಏಕಾಏಕಿ ಹೆಜ್ಜೇನು ದಾಳಿ ನಡೆಸಿದೆ. ಹೆಜ್ಜೇನು …
Read More »ಕಗ್ಗಂಟಾಗಿದ್ದ ದಾವಣಗೆರೆ, ಬಾಗಲಕೋಟೆಗೆ ಕಾಂಗ್ರೆಸ್ ಅಭ್ಯರ್ಥಿಗಳು ಫೈನಲ್! ಇವರಿಗೆ ಟಿಕೆಟ್ ಕೊಡೋದು ಕನ್ಫರ್ಮ್
ಪಚುನಾವಣೆ ದಿನಾಂಕ ಘೋಷಣೆಯಾದಾಗಿನಿಂದಲೂ ದಾವಣಗೆರೆ ದಕ್ಷಿಣ ಮತ್ತು ಬಾಲಕೋಟೆಯಲ್ಲಿ ಚುನಾವಣಾ ರಂಗು ಹೆಚ್ಚಾಗಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ರಾಜಕೀಯವಾಗಿ ಬಹಳ ಆಸಕ್ತಿಕರವಾಗಿ ಮುಂದುವರೆಯುತ್ತಿದೆ. ಬಿಜೆಪಿ ಈಗಾಗಲೇ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಆದರೆ ಕಾಂಗ್ರೆಸ್ನಲ್ಲಿ ಮಾತ್ರ ಟಿಕೆಟ್ಗಾಗಿ ಭಾರೀ ಪೈಪೋಟಿ ನಡೆಯುತ್ತಿತ್ತು. ಇದೀಗ ಕೊನೆಗೂ ಟಿಕೆಟ್ ಹಂಚಿಕೆ ಮುಕ್ತಾಯ ಹಂತಕ್ಕೆ ಬಂದಿದೆ. ಸದ್ಯ ಬಿಜೆಪಿ ಟಿಕೆಟ್ ಅಧಿಕೃತವಾಗಿ ಘೋಷಣೆಯಾಗಿದ್ದು, ಈಗ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳ …
Read More »ಕೈ ಟಿಕೆಟ್ ಘೋಷಣೆ ಮುನ್ನವೇ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ
ದಾವಣಗೆರೆ : ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ ಒಂಬತ್ತರಂದು ಉಪಚುನಾವಣೆ ನಡೆಯಲಿದೆ. ಆಪೈಕಿ, ದಾವಣಗೆರೆ ದಕ್ಷಿಣ ಕ್ಷೇತ್ರವೂ ಒಂದು. ಟಿಕೆಟ್’ಗಾಗಿ ಭಾರೀ ಆಂತರಿಕ ಜಟಾಪಟಿಯ ನಡುವೆ, ಸಮರ್ಥ್ ಶಾಮನೂರು ನಾಮಪತ್ರವನ್ನು ಇಂದು (ಮಾರ್ಚ್. 20) ಸಲ್ಲಿಸಿದ್ದಾರೆ. ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಸೇರಿ ಒಟ್ಟು 2 ಸೆಟ್ ನಾಮಪತ್ರ ಸಲ್ಲಿಸಿದ್ದಾರೆ. ಗಮನಿಸಬೇಕಾದ ವಿಚಾರ ಏನಂದರೆ, ಕಾಂಗ್ರೆಸ್ ಹೈಕಮಾಂಡ್, ಅಧಿಕೃತವಾಗಿ ಟಿಕೆಟ್ ಘೋಷಣೆ ಮಾಡುವ …
Read More »ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾದಿಕ್ ಪೈಲ್ವಾನ್ ನಾಮಪತ್ರ ಸಲ್ಲಿಕೆ
ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಮುಖಂಡ ಸಾದಿಕ್ ಪೈಲ್ವಾನ್ ಅವರು ಶುಕ್ರವಾರ ಉಮೇದುವಾರಿಕೆ ಸಲ್ಲಿಸಿದರು. ಪಕ್ಷದ ‘ಬಿ’ ಫಾರಂ ಇಲ್ಲದೇ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರವನ್ನು ಚುನಾವಣಾಧಿಕಾರಿಗೆ ನೀಡಿದರು. ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಸ್ಲಿಂ ಸಮುದಾಯದ ನಾಯಕರಿಗೆ ಅವಕಾಶ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆ. 2013ರ ವಿಧಾನಸಭಾ ಚುನಾವಣೆಯಿಂದಲೂ ಪಕ್ಷದ ಎದುರು ಟಿಕೆಟ್ಗೆ ಬೇಡಿಕೆ ಸಲ್ಲಿಸಿದ್ದೇನೆ. ಉಪಚುನಾವಣೆಯಲ್ಲಿ ಪಕ್ಷದ ‘ಬಿ’ ಫಾರಂ ಸಿಗುವ ಸಂಪೂರ್ಣ …
Read More »ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ
ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ ಪ್ರಕಟಿಸಿದೆ. ಕರ್ನಾಟಕ, ಗೋವಾ, ನಾಗಾಲ್ಯಾಂಡ್ ಮತ್ತು ತ್ರಿಪುರಾ ರಾಜ್ಯಗಳಲ್ಲಿ ಏಪ್ರಿಲ್ 9ರಂದು ಮತದಾನ ನಡೆಯಲಿದೆ. ಪಕ್ಷದ ಪ್ರಕಟಣೆಯ ಪ್ರಕಾರ, ಗೋವಾದ ಪೊಂಡಾ ಕ್ಷೇತ್ರದಿಂದ ರಿತೇಶ್ ರವಿ ನಾಯ್ಕ್ ಅವರನ್ನು ಕಣಕ್ಕಿಳಿಸಲಾಗಿದೆ. ನಾಗಾಲ್ಯಾಂಡ್ನ 28-ಕೊರಿಡಾಂಗ್ ಕ್ಷೇತ್ರದಿಂದ ದಾವೋಚಿಯರ್ ಐ. ಇಮ್ಚೆನ್ ಅಭ್ಯರ್ಥಿಯಾಗಿದ್ದು, ತ್ರಿಪುರಾದ 56-ಧರ್ಮನಗರ ಕ್ಷೇತ್ರದಿಂದ ಜಹರ್ …
Read More »
Laxmi News 24×7