Breaking News

ದಾವಣಗೆರೆ

ಲೈಂಗಿಕ ಕ್ರಿಯೆಗೆ ಸಹಕರಿಸದ ಪತ್ನಿಯ ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ

ದಾವಣಗೆರೆ: ಮದ್ಯಪಾನ ವ್ಯಸನಿಯಾಗಿದ್ದ ಪತಿರಾಯನೊಬ್ಬ ತನ್ನ ಪತ್ನಿ ಲೈಂಗಿಕ ಕ್ರಿಯೆಗೆ ಸಹಕಾರ ಮಾಡಿಲ್ಲ ಎಂದು ಕುತ್ತಿಗೆ ಸೀಳಿ ಕೊಲೆ ಮಾಡಿದ್ದು, ಆರೋಪಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.   19/02/20ರಂದು ದಾವಣಗೆರೆ ಜಿಲ್ಲೆಯ ಅಮರಾವತಿ ಗ್ರಾಮದ ಮಲ್ಲಿಕಾರ್ಜುನ ಬಡಾವಣೆಯಲ್ಲಿ ಈ ಘಟನೆ ನಡೆದಿತ್ತು. ಮರಿಯಪ್ಪ(54) ಶಿಕ್ಷೆಗೊಳಗಾದ ಆರೋಪಿ. ಸೌಭಾಗ್ಯಮ್ಮ ಕೊಲೆಯಾದ ಪತ್ನಿ. ಆರೋಪಿ ಮರಿಯಪ್ಪ ಕುಡಿದು ಬಂದು ಮನೆಯಲ್ಲಿ ಹೆಂಡತಿ ಸೌಭಾಗ್ಯಮ್ಮ ಜೊತೆ ಕುಡಿಯುವುದಕ್ಕೆ ಹಣ ಕೊಡಲಿಲ್ಲ ಎಂದು ಮೊದಲಿಗೆ ಕ್ಯಾತೆ …

Read More »

ಲಂಚ ಪಡೆಯುತ್ತಿದ್ದ ಹರಿಹರ ನಗರಸಭೆ ಸದಸ್ಯೆ ಲೋಕಾಯುಕ್ತ ಬಲೆಗೆ

ದಾವಣಗೆರೆ: ಲಂಚ ಸ್ವೀಕರಿಸುವ ವೇಳೆ ಹರಿಹರ ನಗರಸಭೆ ಕಾಂಗ್ರೆಸ್ ಸದಸ್ಯೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಗುತ್ತಿಗೆದಾರನಿಂದ 20 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ನಗರಸಭೆ ಸದಸ್ಯೆ ನಾಗರತ್ನ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.   ದಾವಣಗೆರೆ ಜಿಲ್ಲೆಯ ಹರಹರ ನಗರಸಭೆ ಕಾಂಗ್ರೆಸ್ ಸದಸ್ಯೆ ನಾಗರತ್ನ ಜತೆಗೆ ಅವರ ಪತಿ ಮಂಜುನಾಥ, ಪುತ್ರ ರೇವಂತ ಸೇರಿ ಗುತ್ತಿಗೆದಾರ ಮಜೀದ್ ಎಂಬುವರಿಂದ ಲಂಚ ಸ್ವೀಕರಿಸುವ ವೇಳೆ ದಾವಣಗೆರೆ ಲೋಕಾಯುಕ್ತ ಎಸ್​ಪಿ ಎಂ.ಎಸ್ ಕೌಲಾಪುರೆ …

Read More »

ನ್ಯಾಯಾಲಯದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಬಲೆಗೆ

ದಾವಣಗೆರೆ: ಪೋಕ್ಸೋ ಕೇಸ್ ಆರೋಪಿಯಿಂದ 3 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ದಾವಣಗೆರೆ ಮಕ್ಕಳ ಸ್ನೇಹಿ ನ್ಯಾಯಾಲಯದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರೇಖಾ ಕೋಟೆಗೌಡರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದ ಮಕ್ಕಳ ಸ್ನೇಹಿ ನ್ಯಾಯಾಲಯದ ಸರ್ಕಾರಿ ಅಭಿಯೋಜಕಿ. ಕೌಟುಂಬಿಕ ನ್ಯಾಯಾಲಯದಲ್ಲಿ ಸರ್ಕಾರಿ ವಕೀಲರಾಗಿದ್ದ ರೇಖಾ ಕೋಟೆಗೌಡರ್ ಪೋಕ್ಸೋ ಪ್ರಕರಣದ ಆರೋಪಿಯಿಂದ ಲಂಚ ಪಡೆಯುತ್ತಿದ್ದರು. ಮಧುಸೂಧನ್ ಕಿತ್ತೂರ್ ಎಂಬುವವರು ನೀಡಿದ ದೂರಿನ …

Read More »

ಮರಾಠಿಗರಿಗೆ ಒಂದಂಗುಲ ನೆಲ ಬಿಟ್ಟುಕೊಡುವುದಿಲ್ಲ; ಇದು ಕನ್ನಡಿಗರ ಶಪಥ: ಡಾ.ದೊಡ್ಡರಂಗೇಗೌಡ

ದಾವಣಗೆರೆ (ಜ.6) : ಕನ್ನಡ ಮಧುರ ಹಾಗೂ ಕನ್ನಡ ಮಾನವೀಯ ನೆಲೆಯುಳ್ಳ ಭಾಷೆ. ನಮ್ಮಲ್ಲಿ ಇಚ್ಛಾಶಕ್ತಿ ಇದ್ದರೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರವನ್ನು ಕನ್ನಡದಲ್ಲಿ ಹೇಳಲು ಸಾಧ್ಯ ಎಂದು ಹಿರಿಯ ಸಾಹಿತಿ ಡಾ.ದೊಡ್ಡರಂಗೇಗೌಡ ತಿಳಿಸಿದರು.   ಹಾವೇರಿ(Haveri)ಯಲ್ಲಿ ಆರಂಭವಾಗಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ(Kannada Sahitya sammelana)ದ ಸರ್ವಾಧ್ಯಕ್ಷತೆ ವಹಿಸಿಕೊಳ್ಳಲಿದ್ದು, ಹಾವೇರಿಗೆ ಹೋಗುವ ಮಾರ್ಗದಲ್ಲಿ ದಾವಣಗೆರೆಯ ಕುವೆಂಪು ಕನ್ನಡ ಭವನ(Kuvempu kannada Bhavana)ಕ್ಕೆ ಗುರುವಾರ ಆಗಮಿಸಿ ಜಿಲ್ಲಾ ಕನ್ನಡ …

Read More »

ಸರ್ಕಾರಿ ಜಮೀನು ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : ಶೀಘ್ರವೇ ಹಕ್ಕುಪತ್ರ ವಿತರಣೆ

ದಾವಣಗೆರೆ : ಸಾರ್ವಜನಿಕ ಸಮಸ್ಯೆಗೆ ಸ್ಪಂಧಿಸಿರುವ ಅಭಿವೃದ್ದಿಗೆ ಶ್ರಮಿಸಿದವರನ್ನು ಬೆಂಬಲಿಸಿ ಆರ್ಶಿವದಿಸಿ ಎಂದು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ಬೈರತಿ ಅವರು ಹೇಳಿದರು. ಸಂತೆಬೆನ್ನೂರಿನಲ್ಲಿ ಶನಿವಾರ ಜಿಲ್ಲಾಡಳಿತದಿಂದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ’ ಅಂಗವಾಗಿ ಆಯೋಜಿಸಲಾದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆ ಅಲಿಸಿ ಮಾತಾನಾಡಿದರು. ಜನಸ್ಪಂದನ ಕಾರ್ಯಕ್ರಮ ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಕಾರ್ಯಕ್ರಮ ಕಚೇರಿ ಕೆಲಸಗಳಿಗಾಗಿ ಜನರು ಅಲೆಯುವುದನ್ನು ತಪ್ಪಿಸಲು ನಮ್ಮ ಸರ್ಕಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ …

Read More »

ಶಾಸಕ ರೇಣುಕಾಚಾರ್ಯ ತಮ್ಮನ ಮಗನ ಸಾವು ಪ್ರಕರಣಕ್ಕೆ ಮೆಗಾ ಟ್ವಿಸ್ಟ್:‌ ಅ. 30 ರಂದು ಆತನಿಗೆ ಒಂದೇ ನಂಬರ್‌ನಿಂದ 10 ಸಲ ಕರೆ!

ದಾವಣಗೆರೆ: ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್‌ ಸಾವು ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಚಂದ್ರಶೇಖರ್‌ ನದ್ದ ಅಪಘಾತವಾಗಿಲ್ಲ, ಅದೊಂದು ಯೋಜಿತ ಕೊಲೆ ಎಂದು ಕುಟುಂಬಸ್ಥರು ಆರೋಪಿಸಿರುವ ಹಿನ್ನೆಲೆ ಪ್ರಕಣ ದಾಖಲಿಸಿಕೊಂಡಿರುವ ಹೊನ್ನಾಳಿ ಪೊಲೀಸರು ತನಿಖೆ ಮತ್ತಷ್ಟು ಚುರುಕುಗೊಂಡಿದೆ. ಇದೀಗ ಚಂದ್ರಶೇಖರ್‌ ನಾಪತ್ತೆಯಾದ ದಿನ. ಅ. 30 ರಂದು ಆತನ ಮೊಬೈಲ್‌ ಗೆ ಒಂದೇ ನಂಬರ್‌ ನಿಂದ 10ಕ್ಕೂ ಹೆಚ್ಚು ಸಲ ಕರೆ ಬಂದಿದೆ ಎಂದು ತಿಳಿದುಬಂದಿದೆ. …

Read More »

ಮುಸ್ಲಿಮರನ್ನು ಯಾವ ಪಕ್ಷದಲ್ಲೂ ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ – C.M. ಇಬ್ರಾಹಿಂ

ದಾವಣಗೆರೆ: ಮುಸ್ಲಿಮರನ್ನು ಯಾವ ಪಕ್ಷದಲ್ಲೂ ರಾಜ್ಯಾಧ್ಯಕ್ಷರನ್ನಾಗಿ ಮಾಡಿಲ್ಲ. ಕಾಂಗ್ರೆಸ್ (Congress) ಪಕ್ಷದಲ್ಲಿ ಮುಸ್ಲಿಮರಿಗೆ ಊಟದ ಕೊನೆಯಲ್ಲಿ ಅಳಿದುಳಿದ ಎಂಜಲು ರೀತಿಯಲ್ಲಿ ಸ್ಥಾನಮಾನ ನೀಡ್ತಿದ್ರು. ಆದರೆ ಜೆಡಿಎಸ್ (JDS) ರಾಜ್ಯಾಧ್ಯಕ್ಷರ ಸ್ಥಾನ ನೀಡಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (C.M.Ibrahim) ಹೇಳಿದ್ದಾರೆ. ದಾವಣಗೆರೆ (Davanagere) ಜಿಲ್ಲೆಯ ಹರಿಹರ ತಾಲೂಕಿನ ಮಲೆಬೇನ್ನೂರು ಗ್ರಾಮದಲ್ಲಿ ಸಾರ್ವಜನಿಕ ಸಭೆ ಮಾಡಿ ಹಬೀವುಲ್ಲಾ ಷಾ ಖಾದ್ರಿ ದರ್ಗಾಕ್ಕೆ ಭೇಟಿ ನೀಡಿದ‌ ಬಳಿಕ ಮಾತನಾಡಿದ ಅವರು, ನಾವು ಗುರುವಾರದ …

Read More »

ಸಿದ್ಧು ಜನ್ಮದಿನ ಆಚರಣೆಗೆ ದೇವನಗರಿ ಸಜ್ಜು

ದಾವಣಗೆರೆ: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಪ್ರಯುಕ್ತ ಆ.3ರಂದು ಹಮ್ಮಿಕೊಂಡಿರುವ ಅಮೃತ ಮಹೋತ್ಸವಕ್ಕಾಗಿ ನಗರದ ಹೊರವಲಯದ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ 50 ಎಕರೆ ಪ್ರದೇಶದಲ್ಲಿರುವ ಶಾಮನೂರು ಅರಮನೆ ಮೈದಾನ ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ.   ಅದ್ಧೂರಿ ಮತ್ತು ವಿಜೃಂಭಣೆಯಿಂದ ಆಚರಿ ಸುವ ಉದ್ದೇಶದಿಂದ ವೇದಿಕೆ, ಸಭಾಂಗಣ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಬಹುತೇಕ ಮುಕ್ತಾಯ ಹಂತದಲ್ಲಿದೆ. ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ನೀಡಿರುವ ಯೋಜನೆ, ಕಾರ್ಯಕ್ರಮಗಳನ್ನು …

Read More »

ಖಾಸಗಿ ಆಸ್ಪತ್ರೆಯಲ್ಲಿ ಶವವಿಟ್ಟು ವೈದ್ಯರ ವಿರುದ್ಧ ಪ್ರತಿಭಟನೆ

ದಾವಣಗೆರೆ: ತಪ್ಪು ಚಿಕಿತ್ಸೆ ನೀಡಿ ಸಾವಿಗೆ ಕಾರಣವಾಗಿರುವ ವೈದ್ಯರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಮೃತರ ಸಂಬಂಧಿಕರು, ಸಾರ್ವಜನಿಕರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಗುರುವಾರ ಕೆ.ಆರ್. ರಸ್ತೆಯ ಖಾಸಗಿ ಆಸ್ಪತ್ರೆಯಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದರು. ದಾವಣಗೆರೆಯ ಜಯನಗರ ನಿವಾಸಿ ಅನ್ನಪೂರ್ಣಮ್ಮ(65) ಎಂಬುವರ ಸಾವಿಗೆ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ವೃದ್ಧೆಯ ಸಂಬಂಧಿಕರು ಶವವಿಟ್ಟು ಪ್ರತಿಭಟನೆ ನಡೆಸಿದರು. ವೈದ್ಯರ ಬಂಧನ, ಆಸ್ಪತ್ರೆ ಬಂದ್ ಮಾಡುವಂತೆ ಒತ್ತಾಯಿಸಿದರು. ಜೂ. 8 …

Read More »

ಮೃತಪಟ್ಟ ಮಹಿಳೆಯೊಬ್ಬರ ಅಂಗಾಂಗಳನ್ನು ದಾನ ಮಾಡಿ ಜೀವನದ ಸಾರ್ಥಕತೆ

ಮಣಿಪಾಲ: ದಾವಣಗೆರೆ ಬಳಿ ಸಂಭವಿಸಿದ ರಸ್ತೆ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟ ಮಹಿಳೆಯೊಬ್ಬರ ಅಂಗಾಂಗಳನ್ನು ದಾನ ಮಾಡಿ ಜೀವನದ ಸಾರ್ಥಕತೆ ಮೆರೆದಿದ್ದಾರೆ. ದಾವಣಗೆರೆ ಬಳಿ ಗುಡಾಲು ಗ್ರಾಮದ ಗುಮ್ಮನೂರು ರಸ್ತೆಯಲ್ಲಿ ಜ.22ರ ಸಂಜೆ ಅಪಘಾತ ಸಂಭವಿಸಿತ್ತು. ನಂಜುಂಡಪ್ಪ ಎಚ್‌.ಎನ್‌. ಅವರ ಪತ್ನಿ ಇಂದ್ರಮ್ಮ ಬಿ.ಎಂ. (57) ಗಂಭೀರ ಗಾಯಗೊಂಡಿದ್ದು, ಜ. 23ರಂದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಗಂಭೀರ ಪ್ರಯತ್ನದ ಹೊರತಾಗಿಯೂ ಚೇತರಿಸಿಕೊಳ್ಳದ …

Read More »