Breaking News
Home / ಜಿಲ್ಲೆ / ಧಾರವಾಡ

ಧಾರವಾಡ

ಬೆಲೆ ಕುಸಿತಕ್ಕೆ ಕಂಗಾಲಾಗಿ ಗಿಡದಿಂದ ಹತ್ತಿ ಬಿಡಿಸದ ರೈತ.

ಧಾರವಾಡ: ರೈತರ ಪಾಲಿನ ಬಿಳಿ ಬಂಗಾರ ಅಂತಲೇ ಹೆಸರುವಾಸಿಯಾಗಿರುವ ಮತ್ತು ವರ್ಷದಿಂದ ವರ್ಷಕ್ಕೆ ಏರುತ್ತ ಹೊರಟಿದ್ದ ಹತ್ತಿ ಯ ಬೆಲೆ ಈ ಬಾರಿ ಏಕಾಏಕಿಯಾಗಿ ಕುಸಿದಿದ್ದು, ಇದರಿಂದಾಗಿ ರೋಸಿ ಹೋದ ರೈತರು ಇದೀಗ ಹತ್ತಿಯನ್ನು ಬಿಡಿಸದೇ ಗದ್ದೆಯಲ್ಲಿ ಹಾಗೆಯೇ ಬಿಡುತ್ತಿದ್ದು, ಬೆಳೆದು ನಿಂತಲ್ಲಿಯೇ ಹತ್ತಿಯೆಲ್ಲವೂ ಹಾಳಾಗಿ ಹೋಗುತ್ತಿದೆ.   ಧಾರವಾಡ, ನವಲಗುಂದ, ಅಣ್ಣಿಗೇರಿ ತಾಲೂಕಿನ ಭಾಗದಲ್ಲಿ ಹತ್ತಿ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಾರೆ. ಕಳೆದ ವರ್ಷ ಒಂದು ಕ್ವಿಂಟಾಲ್​ ಹತ್ತಿಗೆ 12 ಸಾವಿರ …

Read More »

ರಾಷ್ಟ್ರ ಮಟ್ಟದಲ್ಲಿ ವೈರಲ್ ಆಯ್ತು ವಿಡಿಯೋ; ನರ್ತಕಿ ಮೇಲೆ ಹಣ ತೂರಿದ ಕಾಂಗ್ರೆಸ್ ಮುಖಂಡ!

ಧಾರವಾಡ: ನಿನ್ನೆ ನರ್ತಕಿಯೊಬ್ಬರ ಮೇಲೆ ಹಣ ತೂರಿದ್ದ ಕಾಂಗ್ರೆಸ್​ ಮುಖಂಡನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡಿದ್ದು ದಿನ ಬೆಳಗಾಗುವಷ್ಟರಲ್ಲಿ ಈ ಸುದ್ದಿ ಕಾಡ್ಗಿಚ್ಚಿನಂತೆ ಹರಡಿ ದೇಶದೆಲ್ಲೆಡೆ ವೈರಲ್ ಆಗಿದೆ. ಶಿವಶಂಕರ ಎಂಬ ಈ ಕಾಂಗ್ರೆಸ್ ಮುಖಂಡ ಧಾರವಾಡದವನು. ಅಷ್ಟೇ ಅಲ್ಲದೇ ಈತ ಮಾಜಿ ಸಚಿವ ವಿನಯ ಕುಲಕರ್ಣಿ ಪರಮಾಪ್ತ ಕೂಡ. ಶಿವಶಂಕರ ಹಂಪಣ್ಣವರ, ಮದುವೆಯೊಂದರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ. ಅಲ್ಲೇ ನೃತ್ಯ ಕಾರ್ಯಕ್ರಮವೂ ನಡೆಯುತ್ತಿತ್ತು. ಈ ವೇಳೆ ಶಿವಶಂಕರ ಹಂಪಣ್ಣವರ ನೃತ್ಯಗಾರ್ತಿ ಮೇಲೆ …

Read More »

ಠೇವಣಿ ಹಣ ಮರಳಿಸದ ಅಂಚೆ ಇಲಾಖೆಗೆ ಗ್ರಾಹಕರ ಆಯೋಗದಿಂದ ದಂಡ

ಧಾರವಾಡ : ಧಾರವಾಡದ ಯು.ಬಿ.ಹಿಲ್ ನಿವಾಸಿ ಅಶೋಕ ಹುದ್ದಾರ ಎಂಬುವವರು ಇಲ್ಲಿನ ಹೆಡ್‍ಪೋಸ್ಟ್ ಕಛೇರಿಯಲ್ಲಿ 15 ವರ್ಷಗಳ ಅವಧಿಯ ಹೆಚ್.ಯು.ಎಫ್, ಪಿ.ಪಿ.ಎಫ್ ಅಕೌಂಟ್ ತೆರೆದು ಸದರಿ ಯೋಜನೆಯಡಿ ಹಣವನ್ನು ತೊಡಗಿಸಿದ್ದರು. ಸದರಿ ಯೋಜನೆಯು ದಿ:31/03/2015 ರಂದು ಮುಕ್ತಾಯವಾಗಿತ್ತು.ತದನಂತರ ದೂರುದಾರ ಸದರಿ ಯೋಜನೆಯನ್ನು ಮತ್ತೆ 5 ವರ್ಷಗಳ ಅವಧಿಗೆ ಅಂದರೆ 01/04/2015 ರಿಂದ 31/03/2020 ರವರೆಗೆ ಮುಂದುವರೆಸಿದ್ದರು. ಆ ಯೋಜನೆ ದಿ:31/03/2020 ರಂದು ಮುಕ್ತಾಯವಾಗಿದ್ದರೂ ಅಲ್ಲಿಯವರೆಗಿನ ಅವರ ವಂತಿಗೆ ಹಣ ಮತ್ತು ಅದರ …

Read More »

ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ.

ಧಾರವಾಡ, ಆಗಸ್ಟ್‌, 12: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಹಿನ್ನಡೆ ಅನುಭವಿಸಿದ ಧಾರವಾಡ ರಂಗಾಯಣ ಮತ್ತೆ ಕಾರ್ಯಪ್ರವೃತ್ತವಾಗಿದೆ. 18ನೇ ಶತಮಾನದ ರಾಣಿಯರ ಚಿತ್ರಣವನ್ನು ರಂಗಭೂಮಿ ಮೇಲೆ ತರುವ ಪ್ರಯತ್ನಕ್ಕೆ ಮುಂದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ.   ನಾಟಕವು ಸ್ವಾತಂತ್ರ್ಯ ಹೋರಾಟ ಮತ್ತು ಚೆನ್ನಮ್ಮನ ಆಡಳಿತದ ದೃಶ್ಯಗಳನ್ನು ಮರುಸೃಷ್ಟಿಸುತ್ತದೆ.   ನಿಜವಾದ ಕುದುರೆ, ಆನೆಗಳು ಹಾಗೂ ಸೈನಿಕರನ್ನು ವೀಕ್ಷಕರ ಕಣ್ಣೆದುರು …

Read More »

ದಯಮಾಡಿ ಬಂದ್​​ಗೆ ಸಹಕಾರ ನೀಡಿ ಸ್ವಾಮಿ- ಆಟೋ ಚಾಲಕನ ಕಾಲಿಗೆ ಬಿದ್ದ ರೈತ

ಧಾರವಾಡ: ‘ಭಾರತ್ ಬಂದ್’ ಹಿನ್ನೆಲೆ ನಗರದ ಆಲೂರು ವೆಂಕಟರಾವ್ ವೃತ್ತದಲ್ಲಿ ಬಸ್ ತೆಡೆದು ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನಾಕಾರರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಭಾರತ ಬಂದ್ ಗೆ ಬೆಂಬಲ ನೀಡಲು ರೈತನೋರ್ವ ಆಟೋ ಚಾಲಕನ ಕಾಲಿಗೆ ಬಿದ್ದು ಮನವಿ ಮಾಡಿದ ಘಟನೆ ಆಲೂರು ವೆಂಕಟರಾವ್ ವೃತ್ತದಲ್ಲಿ ನಡೆದಿದೆ. ಜನರ ಪರವಾಗಿ ಹೋರಾಟ ಮಾಡುತ್ತಿದ್ದೇವೆ ದಯಮಾಡಿ ನಮಗೆ ಬೆಂಬಲ ನೀಡಿ ಎಂದು ರೈತ …

Read More »

ಸರ್ಕಾರಿ ಕಚೇರಿಗಳ ನೌಕರರಿಗೆ ಸಾರ್ವತ್ರಿಕ ರಜೆಯನ್ನು ಮತ್ತು ಖಾಸಗಿ ಹಾಗೂ ಇತರ ನೌಕರರಿಗೆ ವೇತನ ಸಹಿತ ರಜೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯು ಸೆಪ್ಟೆಂಬರ್ 3 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆವರೆಗೆ ಮತದಾನ ನಡೆಯಲಿದೆ.   ಮತದಾನ ದಿನದಂದು ಮಹಾನಗರ ಪಾಲಿಕೆಯ ವ್ಯಾಪ್ತಿಯ ಸರ್ಕಾರಿ ಕಚೇರಿಗಳ ನೌಕರರಿಗೆ ಸಾರ್ವತ್ರಿಕ ರಜೆಯನ್ನು ಮತ್ತು ಖಾಸಗಿ ಹಾಗೂ ಇತರ ನೌಕರರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ, ರಾಜ್ಯ ಚುನಾವಣಾ ಆಯೋಗವು ಅಧಿಸೂಚನೆ ಹೊರಡಿಸಿದ್ದು, ಮಹಾನಗರ ವ್ಯಾಪ್ತಿಯ ಎಲ್ಲ ಸರ್ಕಾರಿ, ಅರೆ …

Read More »

ಧಾರವಾಡದಲ್ಲಿ ರಕ್ತದ ಕೊರತೆ- ಗರ್ಭಿಣಿಯರಿಗೂ ಸಿಗುತ್ತಿಲ್ಲ ಬ್ಲಡ್

ಧಾರವಾಡ: ಜಿಲ್ಲೆಯಲ್ಲಿ ಯಾವುದೇ ಬ್ಲಡ್ ಬ್ಯಾಂಕ್ ಗೆ ಹೋಗಿ ಕೇಳಿದರೂ ‘ನೋ ಸ್ಟಾಕ್’ ಉತ್ತರ ಸಿಗುತ್ತಿದ್ದು, ಬಹುತೇಕ ಬ್ಲಡ್ ಬ್ಯಾಂಕ್ ಗಳು ದಾನಿಗಳಿಲ್ಲದೆ ಬಿಕೋ ಎನ್ನುತ್ತಿವೆ. ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಭರದಲ್ಲಿ ಯುವ ಜನತೆ ರಕ್ತ ದಾನ ಮಾಡುತ್ತಿಲ್ಲ. 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ವ್ಯಾಕ್ಸಿನ್ ಹಾಕುವುದಕ್ಕೆ ಶುರು ಮಾಡಿದ ಬಳಿಕ ಜಿಲ್ಲೆಯಲ್ಲಿ ತೀರಾ ರಕ್ತದ ಕೊರತೆ ಉದ್ಭವಿಸಿದೆಯಂತೆ. ಮುಖ್ಯವಾಗಿ ರಕ್ತದಾನ ಮಾಡುವವರು ಇದೇ ವಯೋಮಾನದವರಾಗಿರುವ ಕಾರಣ ಈಗ ಲಸಿಕೆಯೇ …

Read More »

ಉತ್ತರ ಕನ್ನಡದ ಮಹಿಳೆಯಿಂದ ಅಂಗಾಂಗ ದಾನ; ಧಾರವಾಡದಿಂದ ಬೆಂಗಳೂರಿಗೆ ಮಹಿಳೆಯ ಲಿವರ್ ಏರ್​ಲಿಫ್ಟ್

ಧಾರವಾಡ: ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಲಿವರ್​ನ್ನು ಏರ್‌ಲಿಫ್ಟ್ ಧಾರವಾಡದ ಎಸ್​ಡಿಎಂ ಆಸ್ಪತ್ರೆಯಿಂದ ಬೆಂಗಳೂರಿಗೆ ಮೂಲಕ ರವಾನಿಸಲಾಗಿದೆ. ಲೀವರ್​ನ್ನು ಹುಬ್ಬಳಿಯ ವಿಮಾನ ನಿಲ್ದಾಣಕ್ಕೆ ರವಾನಿಸಲು ಗ್ರೀನ್ ಕಾರಿಡಾರ್ ಮೂಲಕ ಅಂಬ್ಯುಲೆನ್ಸ್‌ಗೆ ಪೊಲೀಸರು ದಾರಿ ಮಾಡಿಕೊಟ್ಟಿದ್ದಾರೆ. ಈ ಮೂಲಕ ಅಂಗಾಗ ದಾನ ಮಾಡಿದ ಮಹಿಳೆಯ ಜತೆ ಪೊಲೀಸ್ ಇಲಾಖೆಯೂ ಮಾನವೀಯ ಕಾರ್ಯದಲ್ಲಿ ಕೈಜೋಡಿಸಿದೆ. ಎರಡು ದಿನಗಳ ಹಿಂದೆ ಮನೆಯಲ್ಲಿ ಬಿದ್ದು ತಲೆಗೆ ಪೆಟ್ಟಾಗಿ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಗ ದಾನ ಮಾಡಲಾಗಿದೆ. ಉತ್ತರ …

Read More »

ಪಚ್ಚೆ ನಂಜುಂಡಸ್ವಾಮಿ ಬರಹ – ಬಾಬಾಗೌಡರ ನೆನಪು| ಚಳವಳಿಕಾರನಾದ ಐಎಎಸ್ ಆಕಾಂಕ್ಷಿ

ಧಾರವಾಡ: ಐಎಎಸ್‌ ಅಧಿಕಾರಿಯಾಗಬೇಕು ಎಂಬ ಕನಸಿನೊಂದಿಗೆ ಅಧ್ಯಯನ ನಡೆಸುತ್ತಿದ್ದ ವ್ಯಕ್ತಿಯೊಳಗಿದ್ದ ಒಬ್ಬ ಚಳವಳಿಕಾರ ಹಾಗೂ ನಾಯಕ ಹೊರಜಗತ್ತಿಗೆ ಪರಿಚಯಗೊಂಡಿದ್ದೇ ರೈತ ಹೋರಾಟದ ಮೂಲಕ. ಅಂಥ ಒಬ್ಬ ಮೇರು ವ್ಯಕ್ತಿ ರೈತನಾಯಕನಾಗಿ, ಶಾಸಕನಾಗಿ, ಕೇಂದ್ರ ಸಚಿವರಗಿ ರೈತಕುಲಕ್ಕಾಗಿ ಮಾಡಿದ ಕೆಲಸ ಅನನ್ಯ. ಆದರೆ ಜನರ ಕಲ್ಯಾಣಕ್ಕಾಗಿ ಅವರ ಜ್ಞಾನವನ್ನು ಬಳಸಿಕೊಳ್ಳಬೇಕಾಗಿದ್ದ ರಾಜಕೀಯ ಪಕ್ಷಗಳು, ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದು ನಿಜಕ್ಕೂ ಬೇಸರ. ಆ ಅಪ್ರತಿಮ ಹೋರಾಟಗಾರ ಬಾಬಾಗೌಡ ಪಾಟೀಲ ಅವರು ಇಂದು ನಮ್ಮೊಂದಿಗೆ …

Read More »

ಸರ್ಕಾರದ ಮಾರ್ಗಸೂಚಿ ವಿಚಾರ-ಅಂಗಡಿ ಮಾಲೀಕರಿಂದ ಆಕ್ರೋಶ

ಧಾರವಾಡ: ಜಿಲ್ಲೆಯ ಜನತೇ ಸರ್ಕಾರದ ಕೊರೊನಾ ಮಾರ್ಗ ಸೂಚಿಗಳ ವಿಷಯದಲ್ಲಿ ಈಗಲೂ ಗೊಂದಲದಲ್ಲಿದ್ದಾರೆ. ನಗರದ ಅಂಗಡಿ ಮಾಲೀಕರು ಪ್ರತಿ ದಿನದಂತೆ ಇವತ್ತು ಅಂಗಡಿಗಳನ್ನು ತೆರೆದಿದ್ದರು. ಆದರೆ ಪೊಲೀಸರು ಬಂದು ಅಂಗಡಿಗಳನ್ನು ಬಂದ್ ಮಾಡಿಸಿದ್ದಾರೆ. ಇದನ್ನು ಕಂಡು ಸರ್ಕಾರದ ವಿರುದ್ಧ ಅಂಗಡಿ ಮಾಲೀಕರು ಆಕ್ರೋಶ ಹೊರಹಾಕಿದ್ದಾರೆ. ಧಾರವಾಡ ಜಿಲ್ಲೆಯ ಪಟ್ಟಣದಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಅಗತ್ಯ ವಸ್ತುಗಳ ಅಂಗಡಿಗಳನ್ನು ಹೊರತು ಪಡಿಸಿ, ಬಟ್ಟೆ, ಪಾತ್ರೆ, ಮೊಬೈಲ್ ಸೇರಿ ಹಲವು ಅಂಗಡಿಗಳನ್ನು ಪೊಲೀಸರು ಬಂದ್ …

Read More »