ಧಾರವಾಡ: ಜಿಲ್ಲೆಯಲ್ಲಿ ಮತ್ತೊಬ್ಬ ಕೊರೊನಾ ಸೋಂಕಿತ ವ್ಯಕ್ತಿ ಗುಣಮುಖನಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯ ಇಬ್ಬರು ಕೊರೊನಾದಿಂದ ಗುಣಮುಖರಾದಂತಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೊಬ್ಬ ವ್ಯಕ್ತಿ ಗುಣಮುಖನಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿರುವ ಕುರಿತು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ. ದೆಹಲಿ ಪ್ರವಾಸದಿಂದ ಮರಳಿ ಬಂದಿದ್ದ ಹುಬ್ಬಳ್ಳಿ ಮುಲ್ಲಾ ಓಣಿಯ 27 ವರ್ಷದ ವ್ಯಕ್ತಿಗೆ (ರೋಗಿ ನಂ.194) ಕೊರೊನಾ ಸೋಂಕು ತಗುಲಿರುವುದು ಏಪ್ರಿಲ್ 9 ರಂದು …
Read More »ರಾಮನಗರ ಬಿಟ್ಟು ಬೇರೆ ಕಡೆ ಶಿಫ್ಟ್ ಮಾಡಿದ್ರೆ ತೊಂದರೆ ಆಗಲ್ವಾ:ಸಿಎಂ ಕುಮಾರಸ್ವಾಮಿಗೆ ತಿರುಗೇಟು ಜಗದೀಶ್ ಶೆಟ್ಟರ್
ಧಾರವಾಡ: ಬೆಂಗಳೂರಿನ ಪಾದರಾಯನಪುರದಲ್ಲಿ ಗಲಾಟೆ ಮಾಡಿದವರಿಗೆ ಎಲ್ಲಾದ್ರು ಒಂದು ಕಡೆ ಇಡಲೇಬೇಕಲ್ಲಾ. ಇಡೀ ರಾಜ್ಯದಲ್ಲಿ ರಾಮನಗರ ಒಂದೇ ಇದೆ ಎಂದು ಸೀಮಿತವಾಗಬೇಡಿ ಎಂದು ಸಚಿವ ಜಗದೀಶ್ ಶೆಟ್ಟರ್ ಮಾಜಿ ಸಿಎಂ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ. ಧಾರವಾಡದ ಜಿಲ್ಲಾಧಿಕಾರಿ ಕಚೇರಿ ಬಳಿ ಕೋವಿಡ್-19 ಪರೀಕ್ಷೆಯ ಗಂಟಲು ದ್ರವ ಮಾದರಿ ಸಂಚಾರ ವಾಹನ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರಾಮನಗರ ಜೈಲು ಬಿಟ್ಟು ಬೇರೆ ಕಡೆ ಪಾದರಾಯನಪುರ ಆರೋಪಿಗಳನ್ನು ಇಟ್ಟರೆ, ಅಲ್ಲಿ ಕೂಡಾ …
Read More »ಪಿಎಸ್ಐ ಮಹೇಂದ್ರ ನಾಯಕ್ 2.50 ಲಕ್ಷ ಮೌಲ್ಯದ ದಿನಸಿಯನ್ನು ತಮ್ಮ ಸ್ವಂತ ಹಣದಲ್ಲಿ ಠಾಣಾ ವ್ಯಾಪ್ತಿಯ ಅಸಹಾಯಕರಿಗೆ ಹಂಚಿದ್ದಾರೆ.
ಧಾರವಾಡ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿರುವ ಜೊತೆಗೆ ಪೊಲೀಸ್ ಇಲಾಖೆಯ ಸಿಬ್ಬಂದಿ ಕರ್ತವ್ಯದೊಂದಿಗೆ ಮಾನವೀಯತೆ ಮೆರೆದಿದ್ದಾರೆ. ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ಮಹೇಂದ್ರ ನಾಯಕ್ 2.50 ಲಕ್ಷ ಮೌಲ್ಯದ ದಿನಸಿಯನ್ನು ತಮ್ಮ ಸ್ವಂತ ಹಣದಲ್ಲಿ ಠಾಣಾ ವ್ಯಾಪ್ತಿಯ ಅಸಹಾಯಕರಿಗೆ ಹಂಚಿದ್ದಾರೆ. ಮೂಲತಃ ವಿಜಯಪುರ ತಾಲೂಕಿನ ಐನಾಪುರ ತಾಂಡಾದ ನಿವಾಸಿಯಾದ ಪಿಎಸ್ಐ, ಬಡತನದ ಹಿನ್ನೆಲೆಯಿಂದ ಬಂದಿದ್ದರು. ಹೀಗಾಗಿ ಲಾಕ್ಡೌನ್ ಸಮಯದಲ್ಲಿ ಹಸಿದವರಿಗೆ, ಅಸಹಾಯಕರಿಗೆ ನಿತ್ಯ ನೆರವಾಗುತ್ತಿದ್ದಾರೆ. ತಮ್ಮ …
Read More »ಕೋವಿಡ್-19 ಪರಿಹಾರ ನಿಧಿಗೆ ಧಾರವಾಡ ಜಿಲ್ಲೆಯ ಕಂಡಕ್ಟರ್ ಒಬ್ಬರು ತಮ್ಮ ಒಂದು ತಿಂಗಳ ವೇತನ ನೀಡಿ ಮಾನವೀಯತೆ ಮೆರೆದಿದ್ದಾರೆ.
ಧಾರವಾಡ: ಕೋವಿಡ್-19 ಪರಿಹಾರ ನಿಧಿಗೆ ಜಿಲ್ಲೆಯ ಕಂಡಕ್ಟರ್ ಒಬ್ಬರು ತಮ್ಮ ಒಂದು ತಿಂಗಳ ವೇತನ ನೀಡಿ ಮಾನವೀಯತೆ ಮೆರೆದಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸವರಾಜ ನೀಲಪ್ಪ ಗಾಣಿಗೇರ ಅವರು ಧಾರವಾಡ ಜಿಲ್ಲಾಧಿಕಾರಿಗಳ ಮೂಲಕ 25 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ ನೀಡಿದ್ದಾರೆ. ಬಸವರಾಜ ಅವರು ನವಲಗುಂದ ತಾಲೂಕಿನ ಶಿರಕೋಳ ಗ್ರಾಮದ ನಿವಾಸಿಯಾಗಿದ್ದು, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ ವಿಭಾಗದ ಒಂದನೇ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಚೆಕ್ ಸ್ವೀಕರಿಸಿದ …
Read More »ಧಾರವಾಡ:ವಿಡಿಯೋ ಕಾಲ್ ಮೂಲಕ ಮುಸ್ಲಿಂ ಜೋಡಿಯೊಂದು ಮದುವೆಯಾಗಿದ್ದಾರೆ.
ಧಾರವಾಡ: ಲಾಕ್ಡೌನ್ನಿಂದ ಈಗಾಗಲೇ ಅನೇಕ ಮದುವೆ ಸಮಾರಂಭಗಳು ಕ್ಯಾನ್ಸಲ್ ಆಗಿವೆ. ಕೆಲವರು ಸರಳವಾಗಿ ಲಾಕ್ಡೌನ್ ನಿಯಮ ಉಲ್ಲಂಘಿಸದೆ ಮದುವೆಯಾಗಿದ್ದಾರೆ. ಈ ನಡುವೆ ಜಿಲ್ಲೆಯಲ್ಲಿ ವಿಡಿಯೋ ಕಾಲ್ ಮೂಲಕ ಮುಸ್ಲಿಂ ಜೋಡಿಯೊಂದು ಮದುವೆಯಾಗಿದ್ದಾರೆ. ಜಿಲ್ಲೆಯ ಆದರ್ಶ ನಗರದ ವರ ಇಮ್ರಾನ್ ಜೊತೆ ಕೊಪ್ಪಳ ಜಿಲ್ಲೆಯ ವಧು ತಾಜಮಾ ಬೇಗಂ ಮದುವೆ ಆನ್ಲೈನ್ನಲ್ಲಿ ವಿಡಿಯೋ ಕಾಲ್ನಲ್ಲಿ ನಡೆದಿದೆ. ಇವರಿಬ್ಬರ ಮದುವೆಯನ್ನು ಏಪ್ರಿಲ್ನಲ್ಲಿ ಮಾಡಬೇಕೆಂದು ನಿಶ್ಚಯ ಮಾಡಲಾಗಿತ್ತು. ಆದರೆ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್ಡೌನ್ …
Read More »ಹುಬ್ಬಳ್ಳಿ:ಕೊರೊನಾ ಭೀತಿ-ಪೊಲೀಸ್ ಠಾಣೆಯೇ ಶಿಫ್ಟ್
ಹುಬ್ಬಳ್ಳಿ: ಕೊರೊನಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಮರಿಪೇಟೆ ಪೊಲೀಸ್ ಠಾಣೆಯನ್ನು ಸ್ಥಳಾಂತರಿಸಲಾಗಿದೆ. ನಗರದ ಮುಲ್ಲಾ ಮತ್ತು ಕರಾಡಿ ಓಣಿಯಲ್ಲಿ ಒಟ್ಟು 6 ಜನರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಇದೀಗ ಮುಂಜಾಗ್ರತ ಕ್ರಮವಾಗಿ ಈ ಭಾಗದ ಕಮರಿಪೇಟೆಯ ಪೊಲೀಸ್ ಠಾಣೆಯನ್ನು ಚರ್ಚ್ ವೊಂದರ ಸಭಾಭವನಕ್ಕೆ ಸ್ಥಳಾಂತರಿಸಲಾಗಿದೆ. ಕಮರಿಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯು ಕಂಟೈನ್ಮೆಂಟ್ ಪ್ರದೇಶವಾಗಿದ್ದು, ಸಿಬ್ಬಂದಿ ಹಾಗೂ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಠಾಣೆಯನ್ನ ಶಿಫ್ಟ್ ಮಾಡಲಾಗಿದೆ. ಮುಲ್ಲಾ …
Read More »ಪಾದರಾಯನಪುರವೇನು ಜಮೀರ್ ಅಜ್ಜನಾ ಆಸ್ತಿನಾ: ಪ್ರಮೋದ್ ಮುತಾಲಿಕ್ ಕಿಡಿ
ಧಾರವಾಡ: ಪಾದರಾಯನಪುರವೇನು ಜಮೀರ್ ಅಜ್ಜನಾ ಆಸ್ತಿನಾ? ಶಾಸಕರಾದ ತಕ್ಷಣ ಪಾಳೆಗಾರಿಕೇನಾ? ಶಾಸಕ ಜಮೀರ್ ಅಹ್ಮದ್ ಚಾಮರಾಜ್ ಪೇಟೆಯ ಶಾಸಕ ಅಷ್ಟೇ, ಚಾಮರಾಜ್ ಕೋಟೆಯ ಶಾಸಕ ಅಲ್ಲ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಪಾದರಾಯನಪುರದಂತ ಘಟನೆಗಳು ಪದೇ ಪದೇ ನಡೆದಿರುವುದು ಖಂಡನೀಯ. ಇದರ ಹಿಂದೆ ಒಂದು ಕೈವಾಡವಿದೆ ಎಂದು ಸಂಶಯ ವ್ಯಕ್ತಪಡಿಸಿದರು. ಪಾದರಾಯನಪುರ ಪಾಕಿಸ್ತಾನದಲ್ಲಿ ಇಲ್ಲ, ನಮ್ಮ ದೇಶದಲ್ಲೇ ಇದೆ. …
Read More »ಸ್ಯಾನಿಟೈಸರ್ ಸಾವು ಪ್ರಕರಣ- ಗ್ರಾಮದ 15 ಮದ್ಯವ್ಯಸನಿಗಳು ಸ್ಯಾನಿಟೈಸರ್ ಸೇವಿಸಿರುವ ಶಂಕೆ
ಧಾರವಾಡ: ಮದ್ಯ ಸಿಗದ್ದಕ್ಕೆ ಸ್ಯಾನಿಟೈಸರ್ ಸೇವಿಸಿ ಅಕ್ಕ, ತಮ್ಮ ಇಬ್ಬರೂ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಇನ್ನೂ ಭಯಾನಕ ಮಾಹಿತಿಯೊಂದು ಹೊರ ಬಿದ್ದಿದೆ. ಅದೇ ಗ್ರಾಮದ ಇನ್ನೂ 15 ಜನ ಮದ್ಯ ವ್ಯಸನಿಗಳು ಸ್ಯಾನಿಟೈಸರ್ ಸೇವಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಭಾನುವಾರವಷ್ಟೇ ಜಿಲ್ಲೆಯ ಗಂಬ್ಯಾಪೂರ ಗ್ರಾಮದಲ್ಲಿ ಸ್ಯಾನಿಟೈಸರ ಕುಡಿದು ಇಬ್ಬರು ಸಾವನ್ನಪ್ಪಿದ್ದರು. ಇದೀಗ ಗ್ರಾಮದ ಅಂದಾಜು 15 ಜನ ಮದ್ಯ ವ್ಯಸನಿಗಳು ಸ್ಯಾನಿಟೈಸರ್ ಸೇವಿಸಿದ್ದಾರೆ ಎಂದು ಶಂಕಿಸಲಾಗಿದೆ. ಪರಿಶೀಲನೆಗಾಗಿ ಭಾನುವಾರ ರಾತ್ರಿ …
Read More »ಹುಬ್ಬಳ್ಳಿ:ಸಂಚಾರಿ ಫೀವರ್ ಕ್ಲೀನಿಕ್ ಕಾರ್ಯಾರಂಭ- ಕ್ವಾರಂಟೈನ್ ಪ್ರದೇಶಗಳಲ್ಲಿ ತಪಾಸಣೆ
ಹುಬ್ಬಳ್ಳಿ: ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಅನ್ನು ಸಂಚಾರಿ ಫೀವರ್ ಕ್ಲೀನಿಕ್ ಆಗಿ ಮಾರ್ಪಡಿಸಲಾಗಿದೆ. ಕೊರೊನಾ ಸೋಂಕು ಕಂಡುಬಂದ ಹುಬ್ಬಳ್ಳಿ-ಧಾರವಾಡ ಪ್ರದೇಶದಲ್ಲಿ ಸಂಚರಿಸಿ ಜ್ವರ, ಕೆಮ್ಮು ಹಾಗೂ ಉಸಿರಾಟದ ತೊಂದರೆ ಕಾಣಿಸಿಕೊಂಡವರನ್ನು ಪರೀಕ್ಷಿಸಲಾಗುವುದು ಎಂದು ಜಿಲ್ಲಾ ಉಸ್ತವಾರಿ ಸಚಿವರೂ ಆಗಿರುವ ಬೃಹತ್ ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದರು. ನಗರದ ಬಿಆರ್ ಟಿಎಸ್ ಪ್ರಾದೇಶಿಕ ಬಸ್ ನಿಲ್ದಾಣದಲ್ಲಿನ ಕಂಟ್ರೋಲ್ ರೂಂ ಹಾಗೂ …
Read More »ಧಾರವಾಡ:ಮನೆ ಮೇಲಿಂದ ಬಿದ್ದು ವೃದ್ಧೆ ಸಾವು..
ಧಾರವಾಡ: ಶುಕ್ರವಾರ ರಾತ್ರಿ ಸುರಿದ ಮಳೆ-ಗಾಳೆಯಿಂದ ಮನೆ ಮೇಲೆ ಬಿದ್ದಿದ್ದ ತೆಂಗಿನ ಮರದ ಗರಿ ತೆಗೆಯಲು ಹೋದ ವೃದ್ಧೆಯೊಬ್ಬರು ಆಯತಪ್ಪಿ ಬಿದ್ದು ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಸಪ್ತಾಪುರ 8ನೇ ಕ್ರಾಸ್ನಲ್ಲೇ ಈ ಘಟನೆ ನಡೆದಿದ್ದು, 65 ವರ್ಷದ ಸರೊಜಾ ಸಾಟೆ ಎಂಬವರೇ ಮೃತಪಟ್ಟವರು. ನಿನ್ನೆ ರಾತ್ರಿ ನಗರಾದ್ಯಂತ ಭಾರೀ ಗಾಳಿ ಬೀಸಿತ್ತು. ಇದರಿಂದ ಮನೆ ಇವುಗಳನ್ನು ತೆರವುಗೊಳಿಸಲು ಮುಂದಾದಾಗ ಆಯತಪ್ಪಿ ಕೆಳಗೆ ಬಿದ್ದಾಗ ಪಕ್ಕದ ಮನೆಯ ಕಾಂಪೌಂಡ್ …
Read More »