ಧಾರವಾಡ: ಇಂದು ಧಾರವಾಡ ಜಿಲ್ಲೆಯಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹುಬ್ಬಳ್ಳಿಯ ಕಮರಿಪೇಟೆ ಮುಲ್ಲಾ ಓಣಿಯ 27 ವರ್ಷದ ಈ ವ್ಯಕ್ತಿಯು ರಾಜ್ಯದ 194ನೇ ರೋಗಿಯಾಗಿರುವುದರಿಂದ ರೋಗಿ ನಂಬರ್ 194 ಎಂದು ಗುರುತಿಸಲಾಗುತ್ತಿದೆ. 1. ಈ ವ್ಯಕ್ತಿ ಮಾರ್ಚ್ 16ರಂದು ತನ್ನ ಸಹೋದರನೊಂದಿಗೆ ಹುಬ್ಬಳ್ಳಿಯಿಂದ ಹೈದರಾಬಾದಿಗೆ ವಿ.ಆರ್.ಎಲ್ ಬಸ್ ಮೂಲಕ ಪ್ರಯಾಣಿಸಿದ್ದಾರೆ. 2. ಮಾರ್ಚ್ 17 ರಂದು ಬೆಳಗ್ಗೆ 5.30ಕ್ಕೆ ಹೈದರಾಬಾದ್ ತಲುಪಿ. ಅಂದು ಬೆಳಗ್ಗೆ 8.45ಕ್ಕೆ ಹೈದರಾಬಾದಿನಿಂದ …
Read More »ಧಾರವಾಡದಲ್ಲಿ ಕೊರೋನಾ ಪ್ರಕರಣ ಜೀರೋ ಹಂತಕ್ಕೆ ಬಂದಿದೆ; ಸಚಿವ ಜಗದೀಶ್ ಶೆಟ್ಟರ್ ಸಂತಸ
ಜಿಲ್ಲೆಯಲ್ಲಿ ಓರ್ವ ವ್ಯಕ್ತಿಯಲ್ಲಿ ಮಾತ್ರ ಕೊರೋನಾ ವೈರಸ್ ಪತ್ತೆಯಾಗಿತ್ತು. ಇದೀಗ ಅವರಿಗೂ ಚಿಕಿತ್ಸೆ ನೀಡಿ ಗುಣಪಡಿಸಲಾಗಿದ್ದು ಧಾರವಾಡದಲ್ಲಿ ಯಾರೂ ಕೊರೋನಾ ಸೋಂಕಿತರ ಇಲ್ಲದಿರುವುದು ಸಂತಸದ ವಿಚಾರವಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಇಂದು ಧಾರವಾಡದಲ್ಲಿ ಕರೊನಾ ಮಾನಸಿಕ ಸಹಾಯವಾಣಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಶೆಟ್ಟರ್, “ಧಾರವಾಡದಲ್ಲಿ ಆರಂಭದಲ್ಲೇ ಒಂದು ಕೇಸ್ ಪಾಸಿಟಿವ್ ಆಗಿತ್ತು. ಆದರೆ, ಈಗ ಅವರು ಗುಣಮುಖರಾಗಿರುವುದು ಸಂತಸ ತಂದಿದೆ. ಕಿಮ್ಸ್ನಲ್ಲಿ ನಿರಂತರ ಚಿಕಿತ್ಸೆ ಕೊಡಿಸಿ ಗುಣಪಡಿಸಲಾಗಿದೆ. …
Read More »ಧಾರವಾಡದ ಜನರಿಗೆ ಗುಡ್ ನ್ಯೂಸ್ – ಜಿಲ್ಲೆಯ ಕೊರೊನಾ ಸೋಂಕಿತ ಗುಣಮುಖ
ಹುಬ್ಬಳ್ಳಿ: ಕೋವಿಡ್-19 ಪಾಸಿಟಿವ್ ಸೋಂಕು ತಗುಲಿದ್ದ ಧಾರವಾಡದ ಹೊಸಯಲ್ಲಾಪುರ ನಿವಾಸಿ ಸಂಪೂರ್ಣ ಗುಣಮುಖರಾಗಿದ್ದು, ಭಾನುವಾರ ಸಂಜೆ ಹುಬ್ಬಳ್ಳಿಯ ಕಿಮ್ಸ್ನಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ಆಸ್ಟ್ರೇಲಿಯಾದಿಂದ ದುಬೈ, ಮಸ್ಕತ್, ಪಣಜಿ ಮಾರ್ಗವಾಗಿ ಧಾರವಾಡ ನಗರಕ್ಕೆ ಮಾರ್ಚ್ 12ರಂದು ಆಗಮಿಸಿದ್ದ 33 ವ್ಯಕ್ತಿಗೆ ಕೊರೊನಾ ಲಕ್ಷಣಗಳು ಕಂಡು ಬಂದಿತ್ತು. ಆದ್ದರಿಂದ ಮಾರ್ಚ್ 17ರಂದು ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿದ್ದರು. ಅಲ್ಲಿಂದ ಮಾರ್ಚ್ 18 ರಿಂದ 21ರವರೆಗೆ ಎಸ್ಡಿಎಂ …
Read More »ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಬಹುತೇಕ ಗುಣಮುಖ: ಸಚಿವ ಶೆಟ್ಟರ್,
ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಬಹುತೇಕ ಗುಣಮುಖರಾಗಿದ್ದು, ಮೂರು ಸಲದ ಪರೀಕ್ಷೆಯಲ್ಲಿ ನೆಗಟಿವ್ ಬಂದಿದೆ. ಇನ್ನೊಂದು ಸಲದ ಪರೀಕ್ಷೆ ಮಾತ್ರವೇ ಬಾಕಿ ಉಳಿದಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶೆಟ್ಟರ್, ಧಾರವಾಡದ ಕೊರೊನಾ ಪಾಸಿಟಿವ್ ವ್ಯಕ್ತಿ ಗುಣಮುಖರಾಗಿದ್ದಾರೆ. ಮೂರನೇ ಹಂತದ ಪ್ರಯೋಗಾಲಯ ಪರೀಕ್ಷೆಯಲ್ಲಿ ಆ ವ್ಯಕ್ತಿಯ ಫಲಿತಾಂಶ ನೆಗಟಿವ್ ಬಂದಿದೆ. ಇನ್ನೊಂದು ಸಲ ಪ್ರಯೋಗಾಲಯದಲ್ಲಿ …
Read More »ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ 1 ವರ್ಷದ ವೇತನ ನೀಡಿದ ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ರಾಜ್ಯದಲ್ಲಿ ಕೋವಿಡ್-19 ಹಾವಳಿ ತಡೆಗಟ್ಟಲು ಸ್ಥಾಪಿಸಿರುವ ಪರಿಹಾರ ನಿಧಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್ ತಮ್ಮ 1 ವರ್ಷದ ವೇತನವನ್ನು ನೀಡಿದ್ದಾರೆ. ಈ ಕುರಿತಂತೆ ಸಚಿವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಅಲ್ಲದೇ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳುತ್ತಿದೆ. ಸೋಂಕು ಲಕ್ಷಣ ಇರುವ ಮಂದಿಗೆ ಮತ್ತು ರೋಗಿಗಳಿಗೆ ಸರ್ಕಾರವೇ ಚಿಕಿತ್ಸೆ ಒದಗಿಸುತ್ತಿದೆ. ಈ ಸಂಕಷ್ಟದ ಸಂದರ್ಭದಲ್ಲಿ …
Read More »ನಮಗೆ ಬಹಳ ತ್ರಾಸ ಆಗುತ್ತಿದೆ. ಒಂದೆರಡು ದಿನ ವೈನ್ ಶಾಪ್ ಚಾಲೂ ಮಾಡಿಸಿ:ಸಚಿವ ಜಗದೀಶ್ ಶೆಟ್ಟರಗೆ ಕರೆ ಮಾಡ್ತಿದಾರಂತೆ ಜನ
ಬೆಳಗಾವಿ: ‘ನಮಗೆ ಬಹಳ ತ್ರಾಸ ಆಗುತ್ತಿದೆ. ಒಂದೆರಡು ದಿನ ವೈನ್ ಶಾಪ್ ಚಾಲೂ ಮಾಡಿಸಿ ಎಂದು ಕೆಲವರು ನನಗೆ ಕರೆ ಮಾಡಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ತಿಳಿಸಿದರು. ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಕೊರೊನಾ ವೈರಸ್ ಹತ್ತಿಕ್ಕಲು ದೇಶದಾದ್ಯಂತ ಏ.14ರವರೆಗ ಲಾಕ್ ಡೌನ್ ಘೋಷಿಸಿದೆ. ಈ ದಿನಗಳಲ್ಲಿ ಮಧ್ಯ ಕುಡಿಯದೆ ಇದ್ರೆ ಏನು ಆಗುವುದಿಲ್ಲ. ಆದರೆ ನನಗೆ ಕೆಲವರು ವೈನ್ ಶಾಪ್ ಗಳನ್ನು ಎರಡು ದಿನಗಳ …
Read More »100ಕ್ಕೂ ಹೆಚ್ಚು ಜನರಿಗೆ ಊಟ ಹಾಕಿದ ಧಾರವಾಡ ಎಸ್ಪಿ – ಸ್ವತಃ ನಿಂತು ಊಟ ಬಡಿಸಿದ್ರು
ಧಾರವಾಡ: ಕೊರೊನಾ ಭೀತಿಯಿಂದ ರಸ್ತೆ ಮೂಲಕ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಸೇರಿದಂತೆ ಕರ್ತವ್ಯದ ಮಧ್ಯೆಯೂ ಅನೇಕ ಪೊಲೀಸರು ಊಟ ಹಾಕಿ ಮಾನವೀಯತೆ ಮೆರೆದಿದ್ದಾರೆ. ಶಿವಮೊಗ್ಗದಿಂದ ರಾಜಸ್ಥಾನಕ್ಕೆ ನಡೆದುಕೊಂಡೇ ಹೊರಟಿದ್ದ ಅನೇಕ ಕಾರ್ಮಿಕರು ಹಾಗೂ ಕಾರಿನಲ್ಲಿ ಹೊರಟಿದ್ದ ರಾಜಸ್ಥಾನ ಮೂಲದ ಕುಟುಂಬಗಳಿಗೆ ತೆಗೂರ ಬಳಿ ಖುದ್ದು ಎಸ್ಪಿಯೇ ಊಟ ಬಡಿಸಿ ಎಲ್ಲರ ಉಪಚಾರ ಮಾಡಿದರು. ಬೆಳಗಾವಿ ರಸ್ತೆಗೆ ಸಂಪರ್ಕ ಕಲ್ಪಿಸುವ ಟೋಲ್ ಗೇಟ್ನಲ್ಲಿ ಕೂಲಿ …
Read More »ಕಿಮ್ಸ್ ಸಿಬ್ಬಂದಿಯಿಂದ್ಲೇ ಮಾಸ್ಕ್ ಕಳ್ಳತನ
ಹುಬ್ಬಳ್ಳಿ: ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಸಿಬ್ಬಂದಿಯೇ ಮಾಸ್ಕ್ ಬಾಕ್ಸ್ ಅನಧಿಕೃತವಾಗಿ ಕಳ್ಳತನ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಕಿಮ್ಸ್ ಸಿಬ್ಬಂದಿ ಫಾತಿಮಾ ಸೈಯದ್ ಎಂಬವರೇ ಕಿಮ್ಸ್ ಆಸ್ಪತ್ರೆಯಿಂದ ಮಾಸ್ಕ್ ಬಾಕ್ಸ್ ಕಳ್ಳತನ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಿಮ್ಸ್ ಆಡಳಿತ ಮಂಡಳಿ ನೋಟಿಸ್ ನೀಡಿದೆ. ಮೇಲಾಧಿಕಾರಿ ಅನುಮತಿಯಿಲ್ಲದೇ ಮುಖ್ಯ ಔಷಾಧಾಲಯದಿಂದ 100 ಮಾಸ್ಕ್ ಇದ್ದ ಬಾಕ್ಸ್ ತೆಗೆದುಕೊಂಡು ಹೊಗಿದ್ದ ಫಾತಿಮಾ. ಕಿಮ್ಸ್ ಅಧಿಕಾರಿಗಳು ಕೇಳಿದ್ರೆ …
Read More »ಧಾರವಾಡಕ್ಕೆ ನೆರವು ಘೋಷಿಸಿದ ಸುಧಾಮೂರ್ತಿ
ಧಾರವಾಡ: ಕೊರೊನಾದಿಂದ ಉಂಟಾಗಿರುವ ಸಂಕಷ್ಟ ಪರಿಹಾರೋಪಾಯ ಕಾರ್ಯಕ್ಕಾಗಿ ಈಗಾಗಲೇ ಸಾಕಷ್ಟು ನೆರವು ನೀಡಿರುವ ಇನ್ಫೋಸಿಸ್ ಪ್ರತಿಷ್ಠಾನವು ಈಗ ಧಾರವಾಡ ಲೋಕಸಭಾ ಕ್ಷೇತ್ರಕ್ಕೆ 20 ಲಕ್ಷ ರೂ.ಗಳ ಪ್ರತ್ಯೇಕ ನೆರವು ಘೋಷಿಸಿದೆ. ಧಾರವಾಡ ಜಿಲ್ಲೆ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕು ಒಳಗೊಂಡು ಪರಿಹಾರ ಕಾರ್ಯ ಕೈಗೊಳ್ಳುವುದಕ್ಕಾಗಿ ಸುಧಾಮೂರ್ತಿಯವರು ಈ ನೆರವು ನೀಡಿದ್ದು, ಸಾಫಲ್ಯ ಪ್ರತಿಷ್ಠಾನ ಮತ್ತು ಗ್ರಾಮ ವಿಕಾಸ ಸಂಸ್ಥೆಗಳ ಮೂಲಕ ಈ ಪರಿಹಾರ ಕಾರ್ಯಗಳು ನಡೆಯಲಿವೆ. ಈ ಹಣದಲ್ಲಿ …
Read More »ಜ್ಮಾ ಎಂ.ಪೀರಜಾದೆ ಅವರಿಗೆ 2019-20ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ…
ಬೆಳಗಾವಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿ ಪ್ರಸ್ತುತ ಧಾರವಾಡದಲ್ಲಿ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂದಾಖಲೆಗಳ ಉಪ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ನಜ್ಮಾ ಎಂ.ಪೀರಜಾದೆ ಅವರಿಗೆ 2019-20ನೇ ಸಾಲಿನ ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ದೊರಕಿದೆ. ಈ ಮುಂಚೆ ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಜ್ಮಾ ಪೀರಜಾದೆ, ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಲಂಬಾಣಿ ತಾಂಡಾ ಹಾಗೂ ಗೊಲ್ಲರಹಟ್ಟಿ ಜನವಸತಿಗಳನ್ನು ಕಂದಾಯ ಗ್ರಾಮಗಳಾಗಿ ಪರಿವರ್ತಿಸಿ, ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದೇ ರೀತಿ …
Read More »
Laxmi News 24×7