ಧಾರವಾಡ: ಜಿಲ್ಲೆಯಲ್ಲಿ ಲಾಕ್ಡೌನ್ ಮುಂದುವರಿಸುವ ಬಗ್ಗೆ ಗಮನಿಸಬೇಕಿದೆ. ಜಿಲ್ಲೆಯಲ್ಲಿ ಇನ್ನೂ 24ರ ವರೆಗೆ ಲಾಕ್ಡೌನ್ ಇದೆ. ಗುರುವಾರ ಕ್ಯಾಬಿನೆಟ್ ಸಭೆ ಇದೆ ಅಲ್ಲಿಯೂ ಚರ್ಚಿಸುತ್ತೇವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು. ಜಿಲ್ಲೆಯಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳ ಹಾಗೂ ಶಾಸಕರ ಸಭೆ ನಡೆಸಿದರು. ಸಭೆಯ ನಂತರ ಮಾತನಾಡಿದ ಅವರು, …
Read More »ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಸರ್ಕಾರ ಇದಕ್ಕೆ ಉತ್ತರ ಕೊಡಬೇಕು:ಪ್ರಮೋದ ಮುತಾಲಿಕ್
ಧಾರವಾಡ: ಕೊರೊನಾ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಸರಿಯಾಗಿ ಕೆಲಸವಾಗುತ್ತಿಲ್ಲ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ಸರ್ಕಾರ ಇದಕ್ಕೆ ಉತ್ತರ ಕೊಡಬೇಕು ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊರ ನೋಟದಲ್ಲಿ ಕೊರೊನಾ ಪ್ರಕ್ರಿಯೆಯಲ್ಲಿ ಗೊಂದಲ ಕಾಣುತ್ತಿದೆ. ರಾಜ್ಯ ಸರ್ಕಾರ ಡಾ.ಕಜೆಯವರ 70 ಲಕ್ಷ ಆಯುರ್ವೇದಿಕ್ ಮಾತ್ರೆ ಖರೀದಿಸಿದೆ ಅದನ್ನು ಎಲ್ಲಿಯೂ ವಿತರಿಸುತ್ತಿಲ್ಲ. ಇದರಿಂದ ಸರ್ಕಾರದ ಮೇಲೆ ಸಂಶಯ ಬರುತ್ತದೆ. ವಿರೋಧ ಪಕ್ಷದವರ …
Read More »ಕೋವಿಡ್ ನಿಯಂತ್ರಣಕ್ಕೆ ಅರಣ್ಯ ಇಲಾಖೆಯಿಂದ ಜನಜಾಗೃತಿ
ಧಾರವಾಡ: ಕೋವಿಡ್ ಸರಪಳಿ ತುಂಡರಿಸಲು ಜನಜಾಗೃತಿಯೇ ಮುಖ್ಯವಾಗಿರುವದರಿಂದ ಜಿಲ್ಲಾಡಳಿತ ಹಾಗೂ ಅರಣ್ಯ ,ಅಬಕಾರಿ ಇಲಾಖೆಯ ಸಹಯೋಗದಲ್ಲಿ ಧಾರವಾಡ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಜನಜಾಗೃತಿ ಚಟುವಟಿಕೆಗಳು ಜರುಗುತ್ತಿವೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗವು ಕಲಕೇರಿ, ದೇವಗಿರಿ ಹಾಗೂ ಬೆಣಚಿ ಗ್ರಾಮಗಳ ಅರಣ್ಯ ವಲಯ ಪ್ರದೇಶಗಳಲ್ಲಿ ಕೋವಿಡ್ ಜಾಗೃತಿ ಚಟುವಟಿಕೆಗಳನ್ನು ನಡೆಸಿದರು. ಪ್ರತಿಯೊಬ್ಬರೂ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್, ಬಳಸುವುದು, ಪರಸ್ಪರ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮಹತ್ವವನ್ನು ಗ್ರಾಮಸ್ಥರಿಗೆ …
Read More »ಧಾರವಾಡ ಜಿಲ್ಲೆಯನ್ನು 10 ದಿನಗಳ ಕಾಲ ಲಾಕ್ಡೌನ್: ಜಗದೀಶ್ ಶೆಟ್ಟರ್
ಧಾರವಾಡ: ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯನ್ನು 10 ದಿನಗಳ ಕಾಲ ಲಾಕ್ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದರು. ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿ ಬಗ್ಗೆ ಮಾತನಾಡಿದ ಸಚಿವರು, ಜುಲೈ 15ರ ಬೆಳಗ್ಗೆ 10 ಗಂಟೆಯಿಂದ ಜುಲೈ 24ರ ರಾತ್ರಿ 8ವರೆಗೆ ಜಿಲ್ಲೆಯಲ್ಲಿ ಲಾಕ್ಡೌನ್ ಘೋಷಣೆ ಮಾಡುವುದಾಗಿ ತಿಳಿಸಿದರು. 11 ಜಿಲ್ಲೆಗಳ ಬಗ್ಗೆ ಚರ್ಚೆ …
Read More »7 ಖಾಸಗಿ ಆಂಬುಲೆನ್ಸ್ಗಳನ್ನು ಬಾಡಿಗೆಗೆ ಪಡೆಯಲು ಜಿಲ್ಲಾಡಳಿತ ನಿರ್ಧರಿಸಿದೆ.
ಹುಬ್ಬಳ್ಳಿ: ಜಿಲ್ಲೆಯಾದ್ಯಂತ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಸೋಂಕಿತರನ್ನು ಕರೆ ತರಲು ಹೆಚ್ಚುವರಿಯಾಗಿ 7 ಖಾಸಗಿ ಆಂಬುಲೆನ್ಸ್ಗಳನ್ನು ಬಾಡಿಗೆಗೆ ಪಡೆಯಲು ಜಿಲ್ಲಾಡಳಿತ ನಿರ್ಧರಿಸಿದೆ. ಗ್ರಾಮಗಳ ಮಟ್ಟದಲ್ಲೂ ಕೊರೊನಾ ಹರಡುತ್ತಿದೆ. ಪ್ರಕರಣಗಳು ಏರುಗತಿಯಲ್ಲೇ ಸಾಗಿದರೆ, ಹುಬ್ಬಳ್ಳಿಯಲ್ಲಿರುವ ಕಿಮ್ಸ್ ಕೋವಿಡ್-19 ಆಸ್ಪತ್ರೆಗೆ ಜಿಲ್ಲೆಯ ವಿವಿಧ ಭಾಗಗಳಿಂದ ಸೋಂಕಿತರನ್ನು ಕರೆ ತರುವುದು ಸವಾಲಾಗಲಿದೆ. ಹಾಗಾಗಿ, ಆಂಬುಲೆನ್ಸ್ಗಳ ಕೊರತೆ ಎದುರಾಗದಿರಲೆಂದು, ಮುಂಜಾಗ್ರತಾ ಕ್ರಮವಾಗಿ ಆಂಬುಲೆನ್ಸ್ಗಳನ್ನು ಬಾಡಿಗೆಗೆ ಪಡೆಯಲು ತೀರ್ಮಾನಿಸಲಾಗಿದೆ. ಏಳು ಮೀಸಲು: ‘ಸದ್ಯ ಏಳು ಆಂಬುಲೆನ್ಸ್ಗಳನ್ನು …
Read More »ಸಾಮಾಜಿಕ ಅಂತರ ನಿಯಮ ಉಲ್ಲಂಘನೆ ಬಸ್, ಆಟೋ, ಕ್ಯಾಬ್ ವಶಕ್ಕೆ: 9 ಪ್ರಕರಣ ದಾಖಲು
ಧಾರವಾಡ: ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದರೂ ಸಾಮಾಜಿಕ ಅಂತರ ನಿಯಮ ಪಾಲಿಸದೇ ಹೆಚ್ಚು ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ವಾಹನಗಳನ್ನು ಪೊಲೀಸರು ಸೀಜ್ ಮಾಡಿ, ಪ್ರಕರಣ ದಾಖಲಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೂರ್ವ ಮತ್ತು ಪಶ್ಚಿಮ ವಿಭಾಗದ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರತ್ಯೇಕವಾಗಿ ಒಟ್ಟು ಒಂಬತ್ತು ಪ್ರಕರಣಗಳನ್ನು ದಾಖಲಿಸಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. 3 ಬೇಂದ್ರೆ ನಗರಸಾರಿಗೆ ವಾಹನಗಳು, ಆಟೋ ರಿಕ್ಷಾ, ಮ್ಯಾಕ್ಸಿಕ್ಯಾಬ್ ಹಾಗೂ ಸರಕು ಸಾಗಣೆ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ವಾಹನ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. …
Read More »ಕೆಸಿಡಿ ಪ್ರಧ್ಯಾಪಕಿಗೆ ಕೊರೊನಾ- ಧಾರವಾಡ ವಿವಿಗೆ 8 ದಿನ ರಜೆ
ಧಾರವಾಡ: ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೂ ಈಗ ಕೊರೊನಾ ಆತಂಕ ಎದುರಾಗಿದೆ. ವಿಶ್ವವಿದ್ಯಾಲಯ ವ್ಯಾಪ್ತಿಯ ಕೆಸಿಡಿ ಕಾಲೇಜ್ನ ಪ್ರಾಧ್ಯಾಪಕಿಯೊಬ್ಬರಿಗೆ ಕರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲೇ ಆತಂಕ ಎದುರಾಗಿದ್ದು, ಇದರ ಬೆನ್ನಲ್ಲೆ ಕರ್ನಾಟಕ ವಿಶ್ವವಿದ್ಯಾಲಯಕ್ಕೆ 8 ದಿನಗಳ ರಜೆ ಘೋಷಿಸಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯದ ಅಧೀನದಲ್ಲಿ ನಡೆಯುವ ಕೆಸಿಡಿ ಕಾಲೇಜಿನ ಪ್ರಾಧ್ಯಾಪಕಿಯೊಬ್ಬರಿಗೆ ಎರಡು ದಿನಗಳ ಹಿಂದೆ ಸೋಂಕು ದೃಢಪಟ್ಟಿತ್ತು. ಇವರು ಸೋಂಕು ದೃಢವಾಗುವ ಮುಂಚೆ ವಿಶ್ವವಿದ್ಯಾಲಯದ ಮೂರು ವಿಭಾಗಗಳಿಗೆ ಭೇಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ …
Read More »ಪ್ರಹ್ಲಾದ್ ಜೋಶಿಗರಂಒಂದು ಕ್ಷಣ ಕಕ್ಕಾಬಿಕ್ಕಿಯಾದಅಧಿಕಾರಿಗಳು
ಧಾರವಾಡ: ಮಾಸ್ಕ್ ಇಲ್ಲದೇ ಸಭೆಗೆ ಆಗಮಿಸಿದ್ದ ಮಹಿಳಾ ಅಧಿಕಾರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತರಾಟೆಗೆ ತೆಗದುಕೊಂಡ ಘಟನೆ ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾಂಗಣದಲ್ಲಿ ಇಂದು ಜೋಶಿ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಈ ಸಭೆಯ ಮೊದಲು ಎಲ್ಲ ಅಧಿಕಾರಿಗಳು ಮಾಸ್ಕ್ ಹಾಕಿಕೊಳ್ಳುವಂತೆ ಸೂಚಿಸಲಾಗಿತ್ತು. ಆದರೆ ಕೇಂದ್ರ ಸಚಿವರ ಸಭೆಗೆ ಮಾಸ್ಕ್ ಇಲ್ಲದೇ ಮಹಿಳಾ ಅಧಿಕಾರಿ ಭಾಗಿಯಾಗಿದ್ದರು. ವಿಶೇಷ ಭೂಸ್ವಾಧಿನಾಧಿಕಾರಿ ಶಾರದಾ ಕೋಲ್ಕಾರ್ ಅವರಿಗೆ …
Read More »ಧಾರವಾಡ: ಕೊಲೆ ಆರೋಪಿಯನ್ನು ಹೆಡೆಮುರಿ ಕಟ್ಟಿದ ಪೊಲೀಸರು
ಧಾರವಾಡ: ಇಲ್ಲಿನ ಮದಿಹಾಳದಲ್ಲಿ ನಿನ್ನೆ ನಡೆದ ಕೊಲೆಗೆ ಸಂಬಂಧಿಸಿದಂತೆ ರೌಡಿಶೀಟರ್ ಶ್ರೀಶೈಲ ಗಾಣಿಗೇರನನ್ನು ಬಂಧಿಸುವಲ್ಲಿ ಶಹರ ಠಾಣೆ ಪೊಲೀಸರ ಯಶಸ್ವಿಯಾಗಿದ್ದಾರೆ. ಶಿವಯೋಗಿ ಭಾವಿಕಟ್ಟಿ ಹಾಗೂ ಆರೋಪಿ ಶ್ರೀಶೈಲ ಗಾಣಿಗೇರ ಮಧ್ಯೆ ಆಸ್ತಿಗೆ ಸಂಬಂಧಿಸಿದ ವ್ಯವಹಾರವಿತ್ತು. ಈ ಸಂಬಂಧ ಮೊನ್ನೆ ತಡರಾತ್ರಿ ಶಿವಯೋಗಿ ಹಾಗೂ ಆತನ ಇನ್ನಿಬ್ಬರು ಸಹಚರರಾದ ಈರಪ್ಪ ಯಂಗಳ್ಳಿ ಹಾಗೂ ಸುನೀಲ ಕೋನಣ್ಣವರ ಅವರು ಶ್ರೀಶೈಲನ ಮನೆಗೆ ಹೋಗಿ ಕ್ಯಾತೆ ತೆಗೆದಿದ್ದರು. ಈ ಜಗಳ ವಿಕೋಪಕ್ಕೆ ಹೋಗಿದ್ದರಿಂದ ಶ್ರೀಶೈಲ …
Read More »ನರೇಗಾ ಯೋಜನೆಯಡಿ ಕೆರೆ ಹೂಳೆತ್ತುತ್ತಿದ್ದಾನೆ ಬಿಕಾಂ ಮುಗಿಸಿದ ಯುವಕ
ಧಾರವಾಡ: ಲಾಕ್ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದೆ ಖಾಲಿ ಕುಳಿತಿದ್ದ ಕೂಲಿಕಾರರಿಗೆ ನರೇಗಾ ಯೋಜನೆಯಡಿ ಜಿಲ್ಲಾ ಪಂಚಾಯಿತಿ ಕೆಲಸ ನೀಡಿದೆ. ಕೆರೆ ಹೂಳೆತ್ತುವ ಈ ಕಾರ್ಯಕ್ಕೆ ಈಗ ಪದವಿ ಮುಗಿಸಿದವರೂ ಬರುವಂತಾಗಿದೆ. ಜಿಲ್ಲೆಯ ಪ್ರಭುನಗರ ಹೊನ್ನಾಪುರ ಗ್ರಾಮದ ಪದವಿ ಮುಗಿಸಿದ ಯುವಕ ಪ್ರಕಾಶ್ ಕೆರೆ ಹೂಳೆತ್ತುವ ಕಾಮಗಾರಿಗೆ ಬರುತ್ತಿದ್ದಾನೆ. ಬಿಕಾಂ ಮುಗಿಸಿರುವ ಇವರಿಗೆ ಈಗ ಕೆಲಸ ಇಲ್ಲ. ಹೀಗಾಗಿ ನರೇಗಾ ಕಾಮಗಾರಿ ಆರಂಭವಾಗುತಿದ್ದಂತೆ ಇವರು ಸಹ ಕೆರೆ ಹೂಳೆತ್ತುವ ಕೆಲಸಕ್ಕೆ ಹೋಗುತ್ತಿದ್ದಾರೆ. ದಿನಕ್ಕೆ 275 …
Read More »