Breaking News

ಧಾರವಾಡ

ಮದ್ಯ ನಿಷೇಧಿಸಿ ಎಂದವರ ವಿರುದ್ಧ ಕಿಡಿಕಾರಿದ ಶೆಟ್ಟರ್……………….

ಧಾರವಾಡ: ಲಾಕ್‍ಡೌನ್ ಮುಂಚೆಯೇ ಮದ್ಯ ಮಾರಾಟ ಇತ್ತಲ್ಲ, ಆಗ ಯಾಕೆ ಮದ್ಯ ನಿಷೇಧದ ಬಗ್ಗೆ ಚರ್ಚೆ ಆಗಲಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಮದ್ಯ ನಿಷೇಧ ಮಾಡುವುದರ ವಿರುದ್ಧ ಕಿಡಿಕಾಡಿದ್ದಾರೆ. ಮದ್ಯ ಮಾರಾಟ ನಿಷೇಧಕ್ಕೆ ಬಿಜೆಪಿ ಶಾಸಕ ಬೆಲ್ಲದ ಆಗ್ರಹ ವಿಚಾರವಾಗಿ ಧಾರವಾಡದಲ್ಲಿ ಮಾತನಾಡಿದ ಅವರು, ವೈಯಕ್ತಿಕ ಅಭಿಪ್ರಾಯಗಳಿಗೆ ನಾನು ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದರು. ಸರ್ಕಾರ ನಡೆಸುವುದು ಬೇರೆ, ಅಭಿಪ್ರಾಯ ಹೇಳುವುದು ಬೇರೆ. ಎಲ್ಲೆಲ್ಲಿ ಅಭಿಪ್ರಾಯ ಹೇಳಬೇಕು …

Read More »

ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸೆಂಟ್ರಲೈಜೆಷನ್ ಆಕ್ಸಿಜನ್ ವ್ಯವಸ್ಥೆ: ಸಚಿವ ಶ್ರೀರಾಮುಲು

ಧಾರವಾಡ: ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸೆಂಟ್ರಲೈಜೆಷನ್ ಆಕ್ಸಿಜನ್ ವ್ಯವಸ್ಥೆ ಮಾಡಲಿದ್ದೇವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಭರವಸೆ ನೀಡಿದ್ದಾರೆ. ಧಾರವಾಡದಲ್ಲಿ ಅಧಿಕಾರಿಗಳ ಸಭೆ ನಡೆಸಿ ನಂತರ ಮಾತನಾಡಿದ ಅವರು, ರಾಜ್ಯದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಸೆಂಟ್ರಲೈಜೆಷನ್ ಅಕ್ಸಿಜನ್ ವ್ಯವಸ್ಥೆ ಮಾಡಲಿದ್ದೇವೆ. ಈ ಕುರಿತು ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ 32 ಕೋವಿಡ್ ಲ್ಯಾಬ್ ಕೆಲಸ ಮಾಡುತ್ತಿವೆ. ಇನ್ನು ಹೆಚ್ಚು ಲ್ಯಾಬ್‍ಗಳಿಗೆ ಬೇಡಿಕೆ ಇದೆ, ಪ್ರಸ್ತುತ ದಿನಕ್ಕೆ 7ರಿಂದ 8 ಸಾವಿರ …

Read More »

ಮದ್ಯ ನಿಷೇಧಕ್ಕೆ ಆಗ್ರಹಿಸಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಮುತಾಲಿಕ್

ಧಾರವಾಡ: ಮದ್ಯ ಮಾರಾಟದಿಂದ ಆದಾಯದ ವಿಚಾರ ಹೇಳುತ್ತಿರುವುದು ನಾಚಿಕೆತನ, ಮದ್ಯ ನಿಷೇಧಿಸಬೇಕೆಂದು ಅಭಿಯಾನ ನಡೆಸುವುದಾಗಿ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಧಾರವಾಡದಲ್ಲಿ ಹಲವು ಸಂಘಟನೆಗಳು ಸೇರಿ ರಾಜ್ಯ ಸರ್ಕಾರ ಮದ್ಯ ನಿಷೇಧ ಮಾಡಬೇಕು ಎಂದು ಜಿಲ್ಲಾಧಿಕಾರಿ ಮೂಲಕ ಮನವಿ ಮಾಡಿವೆ. ಈ ವೇಳೆ ಮಾತನಾಡಿದ ಮುತಾಲಿಕ್, ಲಾಕ್‍ಡೌನ್ ಸಡಿಲಗೊಳಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾದ ಮದ್ಯಪಾನ ಮಾರಾಟಕ್ಕೆ ಅನುಮತಿ ಕೊಟ್ಟಿದ್ದು ನಿರ್ಲಜ್ಜತನದ ಸಂಗತಿ, ಇದು …

Read More »

ಮೆಣಸಿನಕಾಯಿ ವ್ಯಾಪಾರಿಗೆ ಕೊರೊನಾ – ಕಂಟೈನ್ಮೆಂಟ್ ಮುಕ್ತವಾಗಿದ್ದ ಪ್ರದೇಶದಲ್ಲಿ ಮತ್ತೆ ಆತಂಕ

ಧಾರವಾಡ: ಜಿಲ್ಲೆಯ ಹೊಸಯಲ್ಲಾಪುರ ಪ್ರದೇಶ ಅದೇನು ಪಾಪಾ ಮಾಡಿದೇಯೋ ಗೊತ್ತಿಲ್ಲ. ಧಾರವಾಡ ಜಿಲ್ಲೆಯ ಮೊದಲ ಪಾಸಿಟಿವ್ ಪ್ರಕರಣ ಇದೇ ಏರಿಯಾದಲ್ಲಿ ಪತ್ತೆಯಾಗಿತ್ತು. ಈ ಕಾರಣಕ್ಕೆ ಒಂದು ತಿಂಗಳ ಕಾಲ ಸಂಪೂರ್ಣ ಬಂದ್ ಆಗಿ ಹೋಗಿದ್ದ ಈ ಪ್ರದೇಶವನ್ನು ವಾರದ ಹಿಂದಷ್ಟೇ ಕಂಟೋನ್ಮೆಂಟ್ ಝೋನಿನಿಂದ ಮುಕ್ತಗೊಳಿಸಿ, ಸಾಮಾನ್ಯ ವಲಯವನ್ನಾಗಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು. ಆದರೆ ಗುರುವಾರ ಇದೇ ಏರಿಯಾದ ಕೋಳಿಕೆರೆಯ 35 ವರ್ಷದ ಮೆಣಸಿನಕಾಯಿ ವ್ಯಾಪಾರಿಯಲ್ಲಿ ಕೊರೊನಾ ಸೋಂಕು ದೃಢಪಟ್ಟ …

Read More »

ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ…………..

ಧಾರವಾಡ: ಚಲಿಸುತ್ತಿದ್ದ ಲಾರಿಯಲ್ಲಿದ್ದ ಮಶಿನ್‍ಗೆ ಏಕಾಏಕಿ ಬೆಂಕಿ ತಗುಲಿದ ಘಟನೆ ಧಾರವಾಡ ಜಿಲ್ಲೆಯ ತೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಪುಣೆಯಿಂದ ಬೆಂಗಳೂರಿನ ಕೈಗಾರಿಕಾ ಪ್ರದೇಶಕ್ಕೆ ಈ ಮಶಿನ್‍ನ್ನು ಲಾರಿ ಹೊತ್ತೊಯ್ಯುತ್ತಿತ್ತು. ತೇಗೂರು ಬಳಿ ಮಿನಿ ಲಾರಿ ಬರುತ್ತಿದ್ದಂತೆ ಲಾರಿಯಲ್ಲಿದ್ದ ಮಶಿನ್‍ಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ಆತಂಕಗೊಂಡ ಲಾರಿ ಚಾಲಕ, ಪಕ್ಕದಲ್ಲೇ ನೀರು ಇರುವುದನ್ನು ಕಂಡು ರಸ್ತೆ ಬದಿ ಲಾರಿ ನಿಲ್ಲಿಸಿ ಕೆಳಗಿಳಿದಿದ್ದಾನೆ. ಪಕ್ಕದಲ್ಲೇ …

Read More »

ಮದ್ಯದಂಗಡಿ ಮುಂದೆ ಪುರುಷರು, ರೇಷನ್ ಅಂಗಡಿ ಎದುರು ಮಹಿಳೆಯರು ಫುಲ್ ಕ್ಯೂ……

ಧಾರವಾಡ/ರಾಯಚೂರು: ಇಂದು ಎಣ್ಣೆ ಅಂಗಡಿ ಮುಂದೆ ಎಲ್ಲಿ ನೋಡಿದರೂ ಉದ್ದದ್ದೂ ಕ್ಯೂ ಕಂಡುಬರುತ್ತಿದೆ. ಆದ್ರೆ ಧಾರವಾಡದಲ್ಲಿ ಒಂದೆಡೆ ಮದ್ಯದಂಗಡಿ ಇನ್ನೊಂದೆಡೆ ರೇಷನ್ ಅಂಗಡಿಗೆ ಕ್ಯೂ ಹಚ್ಚಿದ ಅಪರೂಪದ ದೃಶ್ಯಗಳು ಕಂಡುಬಂದಿವೆ. ಧಾರವಾಡದ ತೇಜಸ್ವಿ ನಗರದಲ್ಲಿರುವ ಖಾಸಗಿ ವೈನ್ ಶಾಪ್ ಪಕ್ಕವೇ ರೇಷನ್ ಅಂಗಡಿ ಸಹ ಇರುವುದರಿಂದ ಎಣ್ಣೆ ಅಂಗಡಿ ಮುಂದೆ ಪುರುಷರು ಕ್ಯೂ ನಿಂತಿದ್ದರೆ, ರೇಷನ್ ಅಂಗಡಿ ಮುಂದೆ ಮಹಿಳೆಯರು ಕ್ಯೂ ಹಚ್ಚಿದ್ದಾರೆ. ಎರಡು ಅಂಗಡಿಗಳು ಅಕ್ಕಪಕ್ಕದಲ್ಲಿರುವುದರಿಂದ ಈ ಅಪರೂಪ …

Read More »

ಹೊಟ್ಟೆಗೆ ಎಣ್ಣೆ ಬೀಳುತ್ತಿದ್ದಂತೆಯೇ ತನ್ನ ಮೈಮೇಲಿನ ಬಟ್ಟೆಯ ಅರಿವೂ ಇಲ್ಲದಂತೆ ಟ್ರಾಫಿಕ್ ಪೊಲೀಸರು ಮಾಡುವ ಕೆಲಸವನ್ನು ತಾನು ಮಾಡಿದ್ದಾನೆ. 

ಧಾರವಾಡ: ರಾಜ್ಯದಲ್ಲಿ ಇಂದಿನಿಂದ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದ್ದು, ಮದ್ಯದಂಗಡಿಗಳನ್ನು ಓಪನ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಫುಲ್ ಖುಷಿಯಲ್ಲಿರುವ ಎಣ್ಣೆಪ್ರಿಯರು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರಹಾಕಲು ಆರಂಭಿಸಿದ್ದಾರೆ. ಹೌದು. ಮದ್ಯದ ಅಂಗಡಿಗಳನ್ನು ಬಂದ್ ಮಾಡಿದರೆ ಅನೇಕ ಪ್ರತಿಭೆಗಳು ಮಾಯವಾಗುತ್ತವೆ ಎಂದು ಕುಡುಕರ ಬಗೆಗಿನ ಕಾಮಿಡಿ ದೃಶ್ಯಗಳನ್ನು ನಾವು ಈಗಾಗಲೇ ಟಿಕ್ ಟಾಕ್ ನಲ್ಲಿ ನೋಡಿದ್ದೇವೆ. ಅಂತೆಯೇ ಧಾರವಾಡದಲ್ಲೊಬ್ಬ ವ್ಯಕ್ತಿಯೊಬ್ಬನ ಹೊಟ್ಟೆಗೆ ಎಣ್ಣೆ ಬೀಳುತ್ತಿದ್ದಂತೆಯೇ ತನ್ನ ಮೈಮೇಲಿನ ಬಟ್ಟೆಯ ಅರಿವೂ ಇಲ್ಲದಂತೆ ಟ್ರಾಫಿಕ್ …

Read More »

ಊರಿಗೆ ತಲುಪಿದ ಕಾರ್ಮಿಕರು; ಪ್ರಯಾಣಿಸುವವರಿಗೆ ಸೂಚನೆಗಳು….

ಧಾರವಾಡ, ಮೇ 04: ಬೆಂಗಳೂರಿನಿಂದ ಹೊರಟಿದ್ದ ವಿಶೇಷ ಬಸ್‌ಗಳ ಮೂಲಕ ಕಾರ್ಮಿಕರು ಧಾರವಾಡಕ್ಕೆ ಆಗಮಿಸಿದರು. ಬೆಂಗಳೂರಿನಿಂದ ಆಗಮಿಸಿದ ಪ್ರತಿ ಪ್ರಯಾಣಿಕರನ್ನು ಥರ್ಮಲ್ ಸ್ಕ್ಯಾನಿಂಗ್ ಮೂಲಕ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ಹೊರಟಿದ್ದ ಬಸ್‌ಗಳು ರಾತ್ರಿ ಧಾರವಾಡಕ್ಕೆ ತಲುಪಿದವು. ಧಾರವಾಡ ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರಿಗೆ ಶುದ್ಧ ಕುಡಿಯವ ನೀರು, ಆಹಾರ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಒದಗಿಸಲಾಗಿದೆ. ಶಾಸಕರಾದ ಅರವಿಂದ ಬೆಲ್ಲದ್ ಹುಬ್ಬಳ್ಳಿ ಬಸ್ ನಿಲ್ದಾಣಣಕ್ಕೆ ಆಗಮಿಸಿ …

Read More »

ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರಿಗೆ ಪಾದ ಪೂಜೆ ಮಾಡಿದ ಕೆಎಂಎಫ್ ಅಧಿಕಾರಿ

ಧಾರವಾಡ: ನಗರದ ಕೆಎಂಎಫ್ ಅಧಿಕಾರಿಯೊಬ್ಬರು ಕೊರೊನಾ ಸಂಕಷ್ಟದಲ್ಲೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪೌರಕಾರ್ಮಿಕರ ಕೆಲಸವನ್ನು ಮೆಚ್ಚಿ, ಅವರ ಪಾದ ಪೂಜೆಯನ್ನ ಮಾಡಿ ಗೌರವ ಸಲ್ಲಿಸಿದ್ದಾರೆ. ಧಾರವಾಡ ನಗರದ ಟೋಲ್‍ನಾಕಾದಲ್ಲಿ ಪ್ರತಿ ದಿನ 30ಕ್ಕೂ ಹೆಚ್ಚು ಪೌರಕಾರ್ಮಿಕರು ಈ ಕೊರೊನಾ ಸಮಯದಲ್ಲಿ ಕೂಡಾ ಬೆಳಗಿನ ಜಾವವೇ ಬಂದು ಕಸ ತೆಗೆದುಕೊಂಡು ಹೋಗುವುದು, ರಸ್ತೆ ಸ್ವಚ್ಛ ಮಾಡುವ ಕೆಲಸದಲ್ಲಿ ತೊಡಗಿರುತ್ತಾರೆ. ಇದನ್ನ ಧಾರವಾಡ ಕೆಎಂಎಫ್‍ನ ಟೆಕ್ನಿಕಲ್ ಆಫಿಸರ್ ನಾಗಪ್ಪ ಅರಳೋದ ಅವರು ಕಳೆದ …

Read More »

Corona ಕ್ಷಯರೋಗಿಯನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಧಾರವಾಡ ಯುವಕರು

ಧಾರವಾಡ: ಕ್ಷಯರೋಗದಿಂದ ಬಳಲುತ್ತಿದ್ದ ಆಂಧ್ರ ಪ್ರದೇಶ ಮೂಲದ ವ್ಯಕ್ತಿಯನ್ನು ಯುವಕರು ರಕ್ಷಿಸಿ ಜಿಲ್ಲಾಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಧಾರವಾಡದಲ್ಲಿ ಘಟನೆ ನಡೆದಿದ್ದು, ನಗರ ಸಾರಿಗೆ ಬಸ್ ನಿಲ್ದಾಣ(ಸಿಬಿಟಿ)ದ ಬಳಿ ನರಳುತ್ತ ಬಿದ್ದಿದ್ದ ವ್ಯಕ್ತಿಯನ್ನು ಯುವಕರಾದ ದೇವರಾಜ್, ವಿನಾಯಕ ಗೊಂಧಳಿ ಮತ್ತು ಮಂಜುನಾಥ ನೀರಲಕಟ್ಟಿಯವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ರಸ್ತೆ ಬದಿ ಈತನ್ನು ಕಂಡ ಧಾರವಾಡ ಯುವಕರು, ಸಹಾಯ ಮಾಡಿ, ಉಪಚರಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ರಸ್ತೆ ಪಕ್ಕ ರಾತ್ರಿಯಿಡಿ ನರಳುತ್ತ ಮಲಗಿದ್ದ …

Read More »