ಬಾಗಲಕೋಟೆ: ತಾಯಿಯೊಬ್ಬಳು ಭಾನುವಾರ ಮೂರು ಮಕ್ಕಳಿಗೆ ನೇಣು ಹಾಕಿ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ. ರೂಪಾ ಹನುಮಂತ ಗೌಡರ (28) ಕೃತ್ಯ ಎಸಗಿದ ತಾಯಿ. ಸಮೃದ್ಧಿ ಹನುಮಂತಪ್ಪ ಗೌಡರ (5), ಪ್ರೀತಂ ಹನುಮಂತಪ್ಪ ಗೌಡರ (4), ಸುಕ್ಷೀತ ಹನುಮಂತಪ್ಪ ಗೌಡರ (2) ಮೃತ ಮಕ್ಕಳು. ಮೂವರು ಮಕ್ಕಳನ್ನು ಮನೆಯಲ್ಲಿಯೇ ನೇಣು ಹಾಕಿ ಸಾಯಿಸಿದ್ದಾಳೆ. ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ರೂಪಾ …
Read More »ಡಾ. ಸಿದ್ದರಾಮಯ್ಯನವರಿಗೆ ಸಂಗೀತ ರತ್ನ ಪ್ರಶಸ್ತಿ
ಬಾಗಲಕೋಟೆ : ಬಿ.ವಿ.ವಿ. ಸಂಘದ ಕಲಾ ಮಹಾವಿದ್ಯಾಲಯದ ವಿಶ್ರಾಂತ ಪ್ರಾಧ್ಯಪಕ ಮತ್ತು ನಾಡಿನ ಹಿಂದೂಸ್ತಾನಿ ಸಂಗೀತಗಾರರಾದ ಡಾ. ಪಂಡಿತ ಸಿದ್ದರಾಮಯ್ಯ ಮಠಪತಿ ( ರುದ್ರಮಠ ) ಗೊರಟಾ ಅವರಿಗೆ ಬೀದರ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಸುಕ್ಷೇತ್ರ ಹಾರಕೊಡದ ಹಿರೇಮಠ ಚೆನ್ನಬಸವೇಶ್ವರ ಸಂಸ್ಥಾನವು ಕಲ್ಯಾಣ ಕರ್ನಾಟಕ ಸಂಗೀತ ರತ್ನ ಪ್ರಶಸ್ತಿ ನೀಡಿದೆ . ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದನ್ನು ಒಳಗೊಂಡಿದ್ದೆ. ಡಾ. ಪಂಡಿತ ಸಿದ್ದರಾಮಯ್ಯ ಮಠಪತಿ ಅವರು ಕಳೆದ …
Read More »ನರೇಗಾ ಬಗ್ಗೆ ಚರ್ಚೆಗಾಗಿ ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ – ಸಿಎಂ
ಬೆಂಗಳೂರು: ಶಿವರಾತ್ರಿ ಹಬ್ಬದ ಪ್ರಯುಕ್ತ ಎಸ್.ಎಂ.ವಿ.ಟಿ. ಬೆಂಗಳೂರು (SMVT Bengaluru) ಮತ್ತು ವಿಜಯಪುರ (Vijayapura) ನಡುವೆ ವಿಶೇಷ ರೈಲು ಸಂಚರಿಸಲಿದೆ. ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಎಸ್.ಎಂ.ವಿ.ಟಿ. ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 06503: ಎಸ್.ಎಂ.ವಿ.ಟಿ. ಬೆಂಗಳೂರು – ವಿಜಯಪುರ ಎಕ್ಸ್ಪ್ರೆಸ್ ವಿಶೇಷ ರೈಲು ದಿನಾಂಕ 2026ರ ಫೆಬ್ರವರಿ 13ರಂದು (ಶುಕ್ರವಾರ) ರಾತ್ರಿ …
Read More »ರಾಜ್ಯದಲ್ಲಿ ಗುಂಡಾಗಿರಿ ಸರಕಾರ ಆಡಳಿತದಲ್ಲಿದೆ: ಗೋವಿಂದ ಕಾರಜೋಳ
ಬಾಗಲಕೋಟೆ: ಕಾಂಗ್ರೆಸ್ ನಲ್ಲಿ ಅಭಿವೃದ್ಧಿ ಕ್ರಾಂತಿಯಿಲ್ಲ ಕೇವಲ ಭ್ರಷ್ಟಾಚಾರದ ಜಾತ್ರೆ, ಅಧಿಕಾರಕ್ಕಾಗಿ ಕಿತ್ತಾಟ, ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡದೆ ರಾಜ್ಯದಲ್ಲಿ ದುರಾಡಳಿತ ನಡೆಸುತ್ತಿದೆ ಎಂದು ಸರಕಾರದ ವಿರುದ್ಧ ಮಾಜಿ ಡಿಸಿಎಂ ಗೋವಿಂದ್ ಕಾರಜೋಳ ವಾಗ್ದಾಳಿ ನಡೆಸಿದರು. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ರಾಜ್ಯಸರಕಾರದಲ್ಲಿ ಖುರ್ಚಿಗಾಗಿ ಕಿತ್ತಾಟ ನಡೆಯುತ್ತಿದೆ. ಅಭಿವೃದ್ಧಿಯ ಚಿಂತನೆ ಇಲ್ಲದೇ ದುರಾಡಳಿತ ಮಿತಿಮೀರಿದೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ಶೋಷಣೆ, ಅತ್ಯಾಚಾರ ಮಿತಿಮೀರಿದೆ. ಸರಕಾರಿ ಮಹಿಳಾ ಅಧಿಕಾರಿಗಳ ಮೇಲೆ ನಿಂದನೆ …
Read More »ದೇಶದ ಅಭಿವೃದ್ಧಿ ಪ್ರಧಾನ ಮಂತ್ರವಾಗಲಿ: ಎಸ್.ಆರ್ ಮೂಗನೂರಮಠ
ಬಾಗಲಕೋಟೆ: ರಾಷ್ಟ್ರೀಯ ಹಬ್ಬಗಳು ನಮ್ಮ ಹೆಮ್ಮೆಯ ಸಂಕೇತಗಳಾಗಿದ್ದು ಗಣರಾಜ್ಯೋತ್ಸವ ಕೇವಲ ಐತಿಹಾಸಿಕ ದಿನವಾಗಿರದೆ ಜಗತ್ತಿನಲ್ಲಿಯೇ ಪ್ರಜಾಪ್ರಭುತ್ವ ಕ್ರೂಡೀಕೃತ ಲಿಖಿತ ಸಂವಿಧಾನಕ್ಕೆ ನಮ್ಮನ್ನು ನಾವು ಸಮರ್ಪುಸಿಕೊಂಡಿರುವ ಪ್ರತೀಕವಾಗಿದೆ ಎಂದು ಪ್ರಾಚಾರ್ಯರಾದ ಎಸ್. ಆರ್ ಮೂಗನೂರಮಠ ಹೇಳಿದರು. ಬಿವಿವಿ ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ 77ನೇ ಗಣರಾಜ್ಯೊತ್ಸವದ ನಿಮಿತ್ಯ ಧ್ವಜಾರೋಹಣ ಮಾಡಿ ಮಾತನಾಡಿದ ಅವರು ಸರ್ವೋತ್ತಮ ಮೌಲ್ಯಗಳನ್ನು ಅಳವಡಿಸಿ ಸಂವಿಧಾನಕ್ಕೆ ಪ್ರಜ್ವಲ ಹೊಳಪು ನೀಡಿದ ದಿನವಾದ ಇಂದು ದೇಶದ ಐಕ್ಯತೆಗಾಗಿ ಬಲಿದಾನಗೈದ ಎಲ್ಲರನ್ನು …
Read More »ಬಾಗಲಕೋಟೆಯಲ್ಲಿ ತೋಟಗಾರಿಕಾ ಮೇಳ–2025
ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ತೋಟಗಾರಿಕೆ, ಕೃಷಿ ಹಾಗೂ ಇತರೆ ಅಭಿವೃದ್ಧಿ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತೋಟಗಾರಿಕಾ ಮೇಳ–2025 — “ಮೌಲ್ಯವರ್ಧನೆ ಹಾಗೂ ರಫ್ತು ಅವಕಾಶಗಳಿಗಾಗಿ ನಿಖರ ತೋಟಗಾರಿಕೆ” ಮತ್ತು ರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ನಡೆದ ಸಾಧಕ ರೈತ/ರೈತ ಮಹಿಳೆಯರ ಪ್ರಶಸ್ತಿ ಪ್ರದಾನ ಹಾಗೂ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಲಾಯಿತು. ಈ ಸಂದರ್ಭದಲ್ಲಿ ಕಪ್ಪತ್ತಗುಡ್ಡದ ನಂದಿವೇರಿ ಮಠದ ಶಿವಕುಮಾರ ಸ್ವಾಮಿಜಿ, ವಿಶ್ವವಿದ್ಯಾಲಯದ ಕುಲಸಚಿವರು, ಅಧಿಕಾರಿಗಳು, ಶಾಸಕರು ಹಾಗೂ ಸಾಧಕ …
Read More »ಪ್ರಾಥಃಸ್ಮರಣೀಯ, ಸಮಾಧಿ ಸಾಮ್ರಾಟ, ಚಾರಿತ್ರ್ಯ ಚಕ್ರವರ್ತಿ ಪ್ರಥಮಾಚಾರ್ಯ ಪ.ಪೂ. ಶ್ರೀ 108 ಶಾಂತಿಸಾಗರ ಮಹಾರಾಜರವರ 70ನೇ ಪುಣ್ಯತಿಥಿ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ದಕ್ಷಿಣ ಭಾರತ ಜೈನ ಸಭಾ ವೀರ ಸೇವಾದಳ ಮಧ್ಯವರ್ತಿ ಸಮಿತಿಯವರಿಂದ, ಪ್ರಾಥಃಸ್ಮರಣೀಯ, ಸಮಾಧಿ ಸಾಮ್ರಾಟ, ಚಾರಿತ್ರ್ಯ ಚಕ್ರವರ್ತಿ ಪ್ರಥಮಾಚಾರ್ಯ ಪ.ಪೂ. ಶ್ರೀ 108 ಶಾಂತಿಸಾಗರ ಮಹಾರಾಜರವರ 70ನೇ ಪುಣ್ಯತಿಥಿ ನಿಮಿತ್ತವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನುಡಿ ನಮನಗಳನ್ನು ಸಲ್ಲಿಸಿದೆ.
Read More »ಬಾಗಲಕೋಟೆಯಲ್ಲಿಯೂ ಧರ್ಮಸ್ಥಳದ ಅವಹೇಳನವನ್ನು ಖಂಡಿಸಿ ಭಕ್ತರು ಪ್ರತಿಭಟನೆಯನ್ನು ನಡೆಸಿ, ಅವಹೇಳನ ಮಾಡುವವರ ವಿರುದ್ಧ ಕ್ರಮಕೈಗೊಳ್ಳದಿದ್ದರೇ, ಉಗ್ರ ಪ್ರತಿಭಟನೆಯ ಎಚ್ಚರಿಕೆ
ಬಾಗಲಕೋಟೆಯಲ್ಲಿಯೂ ಧರ್ಮಸ್ಥಳದ ಅವಹೇಳನವನ್ನು ಖಂಡಿಸಿ ಭಕ್ತರು ಪ್ರತಿಭಟನೆಯನ್ನು ನಡೆಸಿ, ಅವಹೇಳನ ಮಾಡುವವರ ವಿರುದ್ಧ ಕ್ರಮಕೈಗೊಳ್ಳದಿದ್ದರೇ, ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದಾರೆ. ಧರ್ಮಸ್ಥಳದ ಹೆಗ್ಗಡೆ ಕುಟುಂಬದ ಗೌರವಕ್ಕೆ ಧಕ್ಕೆ ತರಲು ಒಳಸಂಚು ನಡೆಸುತ್ತಿರುವ ದುಷ್ಟ ವ್ಯಕ್ತಿಗಳ ವಿರುದ್ದ ಭಕ್ತಾಭಿಮಾನಿಗಳಲ್ಲಿ ಆಕ್ರೋಶ ಉಕ್ಕಿದೆ. ಬಾಗಲಕೋಟೆ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರು ಇಂದು ಭಕ್ತರು ಪ್ರತಿಭಟನೆ ನಡೆಸಿದರು. ಧರ್ಮಸ್ಥಳದ ಭಕ್ತಾಭಿಮಾನಿಗಳ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆಯನ್ನು ನಡೆಸಿ, ಧರ್ಮಾಧಿಕಾರಿಗಳಾದ ವೀರೆಂದ್ರ ಹೆಗಡೆ ಅವರ ಹೆಸರಿಗೆ ಮಸಿ ಬಳಿಯುವ …
Read More »ಬಾಗಲಕೋಟೆ ಜಿಲ್ಲೆಯ ಬಾಡಗಂಡಿಯಲ್ಲಿ ಇಂದು ಶ್ರೀ ಎಸ್.ಆರ್. ಪಾಟೀಲ ಸಮೂಹ ಸಂಸ್ಥೆಗಳು ಮತ್ತು ಬಾಡಗಂಡಿ ಶಾಖೆಯ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತ ಸಂಸ್ಥೆಯ ರಜತ ಮಹೋತ್ಸ
ಬಾಗಲಕೋಟೆ ಜಿಲ್ಲೆಯ ಬಾಡಗಂಡಿಯಲ್ಲಿ ಇಂದು ಶ್ರೀ ಎಸ್.ಆರ್. ಪಾಟೀಲ ಸಮೂಹ ಸಂಸ್ಥೆಗಳು ಮತ್ತು ಬಾಡಗಂಡಿ ಶಾಖೆಯ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ನಿಯಮಿತ ಸಂಸ್ಥೆಯ ರಜತ ಮಹೋತ್ಸವದ ಅಂಗವಾಗಿ, ಬ್ಯಾಂಕಿನ ನವೀಕೃತ ಕಟ್ಟಡ, ನೂತನ ಶಾಖಾ ಕಟ್ಟಡ ಹಾಗೂ ಎಸ್.ಆರ್. ಪಾಟೀಲ ಶಿಕ್ಷಣ ಪ್ರತಿಷ್ಠಾನದ ವಿವಿಧ ಕಟ್ಟಡಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದೆ. ಈ ಸಂದರ್ಭದಲ್ಲಿ ಹಿರಿಯ ನಾಯಕ ಶ್ರೀ ಎಸ್.ಆರ್. ಪಾಟೀಲ ಅವರು ಬಾಗಲಕೋಟೆ ಜಿಲ್ಲೆಗೆ …
Read More »ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!!
ಕಳ್ಳರನ್ನು ಓಡಿಸಲು ದಿಟ್ಟತನ ಮೆರೆದ ಮಹಿಳೆ ಪೃಥ್ವಿ ಸಮಯ ಪ್ರಜ್ಞೆಯಿಂದ ಜಿರಲೆ ಸ್ಪ್ರೇ ಸಿಂಪಡಿಸಿ ಕಳ್ಳರನ್ನು ಓಡಿಸಿದ ಮಹಿಳೆ…!!! ಖದೀಮ ಕಳ್ಳರು ಹಿಂದಿಯಲ್ಲಿ ಮಾತನಾಡುತ್ತಾ ಬಳಿಕ ಗಮನ ಬೇರೆಡೆ ಸೆಳೆದು ಸರಗಳ್ಳತನಕ್ಕೆ ಯತ್ನಿಸಿದ ಸಮಯದಲ್ಲಿ ಮಹಿಳೆಯೊಬ್ಬಳು ತನ್ನ ಸಮಯ ಪ್ರಜ್ಞೆಯಿಂದ ಎಚ್ಚೆತ್ತು ಕಳ್ಳರಿಗೆ ಜಿರಲೆ ಸ್ಪ್ರೇ ಸಿಂಪಡಿಸಿ ಓಡಿಸಿದ ಘಟನೆ ಜರುಗಿದೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಗೌತಮ ಬುದ್ಧ ಕಾಲೋನಿಯಲ್ಲಿರೋ ಪೃಥ್ವಿ ಎಂಬ ಮಹಿಳೆ ಒಂಟಿಯಾಗಿ ಇರೋದನ್ನು ಗಮನಿಸಿ …
Read More »
Laxmi News 24×7