Breaking News

ಬಾಗಲಕೋಟೆ

ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆಯ ಕಾರ್ಯಕ್ಕೆ ಒಲಿದು ಬಂತು ರಾಷ್ಟ್ರಮಟ್ಟದ ಪ್ರಶಸ್ತಿ

ಬಾಗಲಕೋಟೆ: ಮಹಿಳೆಯರು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಮಹಿಳಾ ಸಂಘಟನೆಯೊಂದು ಸಾಕ್ಷಿಯಾಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದಲ್ಲಿರುವ ಚಾಮುಂಡೇಶ್ವರಿ ಸಂಜೀವಿನಿ ಮಹಿಳಾ ಸಂಘಟನೆ ಮಹಿಳಾ ವರ್ಗಕ್ಕೆ ಮಾದರಿಯಾಗಿದೆ. ಗ್ರಾಮ ಪಂಚಾಯತ್​​ ಮಟ್ಟದಲ್ಲಿ ಒಕ್ಕೂಟ ಸ್ಥಾಪನೆ ಮಾಡಿ, ಮಹಿಳೆಯರಿಗೆ ಸ್ವಾವಲಂಬನೆ ಬದುಕು ನಿರ್ಮಿಸುವ ಮೂಲಕ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದಕೊಂಡ ರಾಜ್ಯದ ಏಕೈಕ ಮಹಿಳಾ ಸಂಘಟನೆ ಎಂಬ ಗರಿ ಪಡೆದಿದೆ. ದೀನದಯಾಳ್ ಅಂತ್ಯೋದಯ ಯೋಜನೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ …

Read More »

ಬನಹಟ್ಟಿಯಲ್ಲಿ ವಿಚಿತ್ರ ಘಟನೆ… ಅರಳಿ ಮರ ಕಡಿಯಲು ಹೋದವರಿಗೆ ಆಂಜನೇಯನ ದರ್ಶನ!

ಬನಹಟ್ಟಿಯಲ್ಲಿ ವಿಚಿತ್ರ ಘಟನೆ… ಅರಳಿ ಮರ ಕಡಿಯಲು ಹೋದವರಿಗೆ ಆಂಜನೇಯನ ದರ್ಶನ! ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯ ಸೋಮವಾರಪೇಟೆಯ ನಾಮದೇವ ಗಲ್ಲಿಯಲ್ಲಿ ಇರುವ ಹನುಮ ದೇವಾಲಯದಲ್ಲಿ ಧಾರ್ಮಿಕ ನಂಬಿಕೆಗಳನ್ನು ಪುಷ್ಟಿಪಡಿಸುವ ರೀತಿಯಲ್ಲಿ ಅಚ್ಚರಿಯ ಘಟನೆ ನಡೆದಿದೆ. ದೇವಸ್ಥಾನದ ಜೀರ್ಣೋದ್ಧಾರದ ಭಾಗವಾಗಿ ಮುಂಭಾಗದಲ್ಲಿದ್ದ ಅರಳಿ ಮರವನ್ನು ಕಡಿದು ಕಟ್ಟಡ ನಿರ್ಮಿಸಲು ಆಡಳಿತ ಸಮಿತಿ ಮುಂದಾಗಿತ್ತು. ಮರ ಕಡಿತದ ವೇಳೆ ಮರದ ಕಾಂಡ ಕಡಿದು, ಮುಂದಿನ ಭಾಗವನ್ನು ಕತ್ತರಿಸಲು ಪ್ರಯತ್ನಿಸಿದಾಗ ಗರಗಸ ಸೇರಿದಂತೆ ಬಳಸಿದ …

Read More »

ವೇತನಕ್ಕಾಗಿ ಆಗ್ರಹಿಸಿ ಬಾಗಲಕೋಟೆಯಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ

ವೇತನಕ್ಕಾಗಿ ಆಗ್ರಹಿಸಿ ಬಾಗಲಕೋಟೆಯಲ್ಲಿ ಹೊರಗುತ್ತಿಗೆ ನೌಕರರ ಪ್ರತಿಭಟನೆ ಕಳೆದ 7 ತಿಂಗಳುಗಳಿಂದ ವೇತನ ಬಂದಿಲ್ಲ ವೇತನ ಸಕಾಲಕ್ಕೆ ನೀಡಬೇಕೆಂದು ಒತ್ತಾಯಿಸಿ ಹೊರಗುತ್ತಿಗೆ ನೌಕರರು ಅಸಹಕಾರ ಹೋರಾಟ ನಡೆಸುತ್ತಿದ್ದಾರೆ ಬಾಗಲಕೋಟೆಯ ಡಿಸಿ ಕಚೇರಿ ಎದುರು ಎಮ್ ಎನ್ ಆರ್ ಇ ಜಿ ಹೊರಗುತ್ತಿಗೆ ನೌಕರರ ವೇತನ ಸರ್ಕಾರ ಕಳೆದ ಏಳು ತಿಂಗಳಿಂದ ನೀಡದ ಹಿನ್ನೆಲೆಯಲ್ಲಿ ವೇತನಕ್ಕಾಗಿ ಆಗ್ರಹಿಸಿ ಎಮ್ ಎನ್ ಆರ್ ಇ ಜಿ ಕೆಲಸ ನಿರ್ವಹಣೆ ಮಾಡುವ ಹೊರಗುತ್ತಿಗೆಯ ೨೧೨ …

Read More »

ಬಿಜೆಪಿಯವರು ಕಾಂಗ್ರೆಸ್​​ನ 55 ಶಾಸಕರನ್ನು ಟಾರ್ಗೆಟ್​ ಲಿಸ್ಟ್​ ಮಾಡಿದ್ದಾರೆ: ಶಾಸಕ ವಿಜಯಾನಂದ ಕಾಶಪ್ಪನವರ್​​​

ಬಾಗಲಕೋಟೆ : ಬಿಜೆಪಿಯವರು ಕಾಂಗ್ರೆಸ್​​ನ 55 ಶಾಸಕರನ್ನು ಪಟ್ಟಿ ಮಾಡಿದ್ದಾರೆ. ಬಿಜೆಪಿ ಏಜೆಂಟ್​ಗಳನ್ನು ಅವರ ಮನೆಗೆ ಕಳುಹಿಸಿ ಹೆದರಿಸಿದ್ದಾರೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ್ ಆರೋಪಿಸಿದ್ದಾರೆ. ಹುನಗುಂದ ಪಟ್ಟಣದಲ್ಲಿ ಶನಿವಾರ (ಜು.12) ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಪಟ್ಟ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ಮಾಧ್ಯಮ ಪತ್ರಿನಿಧಿಗಳೊಂದಿಗೆ ಅವರು ಮಾತನಾಡಿದರು. ಬಿಜೆಪಿಗೆ ಬರದೇ ಹೋದ್ರೆ ಸಿಬಿಐ, ಇಡಿ ದಾಳಿ ಮಾಡಿಸಿ ಅಕ್ರಮ ಆಸ್ತಿ ಹೊರಗೆಳಸ್ತೀವಿ ಅಂತಾರೆ, ಇದಕ್ಕೆ ನಾನು ಜಗ್ಗೋದಿಲ್ಲ, ಬಗ್ಗೋದಿಲ್ಲ, ಆ ಲಿಸ್ಟ್​​ನಲ್ಲಿ …

Read More »

ಬಾಗಲಕೋಟೆಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ

ಬಾಗಲಕೋಟೆಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ ಪಡಿತರ ಅಕ್ಕಿಯನ್ನು ಕಾಳ ಸಂತೆಯಲ್ಲಿ ಸೀಜ್ ಆಗಿದ್ದ ವಾಹನದಲ್ಲೇ ಮತ್ತೆ ಸಾಗಾಟ ಮಾಡುತ್ತಿರುವುದರ ಬಗ್ಗೆ ಹೇಳಿಕೆ ಪಡೆಯಲು ಹೊದ ವರಿದಿಗಾರರ ಮೇಲೆ ಆಹಾರ ಇಲಾಖೆಯ ಅಧಿಕಾರಿ ದರ್ಪತೋರಿದ ಘಟನೆ ಜರುಗಿದೆ. ಬಾಗಲಕೋಟೆ ಜಿಲ್ಲಾ ಆಡಳಿತ ಭವನದಲ್ಲಿ ಡಿಸಿ, ಸಿಇಒ ಸ್ಥಾನ ಪಲ್ಲಟವಾದ್ರೂ ಆಹಾರ ಇಲಾಖೆಯ ಡಿಡಿ ಹುದ್ದೆ ಮಾತ್ರ ಅಭಾದಿತವಾಗಿದೆ. ಆಹಾರ ಇಲಾಖೆ ಉಪ ನಿರ್ದೇಶಕ ಶ್ರೀಶೈಲ್ ಕಂಕಣವಾಡಿ ಕಳೆದ ಹತ್ತು …

Read More »

12 ಜ್ಯೋತಿರ್ಲಿಂಗಗಳ ದರ್ಶನಕ್ಕೆ ಬಾಗಲಕೋಟೆಯ ಯುವಕ ಸೈಕಲ್ ಏರಿ ಹೊರಟ

ಬಾಗಲಕೋಟೆ ಯುವಕ ಪೃಥ್ವಿ ಅಂಬಿಗೇರ್ ಸಾಹಸ ಪ್ರವಾಸ 12 ಜ್ಯೋತಿರ್ಲಿಂಗಗಳ ದರ್ಶನಕ್ಕೆ ಬಾಗಲಕೋಟೆಯ ಯುವಕ ಸೈಕಲ್ ಏರಿ ಹೊರಟಿದ್ದು, ಎಂ.ಲ್.ಸಿ ಪಿ.ಎಚ್. ಪುಜಾರ್ ಯುವಕನ ಸೈಕಲ್ ಯಾತ್ರೆಗೆ ಚಾಲನೆ ನೀಡಿ, ಶುಭ ಹಾರೈಸಿದ್ದಾರೆ. ಬಾಗಲಕೋಟೆ ನಗರದ ಯುವಕ ಪೃಥ್ವಿ ಅಂಬಿಗೇರ್ 12 ಜ್ಯೋತಿರ್ಲಿಂಗಗಳ ದರ್ಶನ ಪಡೆಯುವ ಮಹತ್ವಾಕಾಂಕ್ಷಿಯ ಸೈಕಲ್ ಯಾತ್ರೆಗೆ ಹೊರಡಿದ್ದಾರೆ. ಸಾವಿರಾರು ಕಿಲೋಮೀಟರ್ ದೂರವಿರುವ ಜ್ಯೋತಿರ್ಲಿಂಗ ಸ್ಥಳಗಳಿಗೆ ಸೈಕಲ್ ಮೂಲಕ ಪ್ರವಾಸ ಮಾಡುವ ಸಾಹಸಿಕ ನಿರ್ಧಾರ ಕೈಗೊಂಡಿದ್ದಾನೆ. ಪೃಥ್ವಿಗೆ …

Read More »

ಒಂದೇ ರಾತ್ರಿ ಮೂರು ಮನೆಗಳ ಕಳ್ಳತನಕ್ಕೆ ಯತ್ನ

ಬಾಗಲಕೋಟೆ : ಒಂದೇ ರಾತ್ರಿ ಮೂರು ಮನೆಗಳ ಕಳ್ಳತನಕ್ಕೆ ಯತ್ನ ಜಮಖಂಡಿ ತಾಲೂಕು ನಾಗನೂರು ಗ್ರಾಮದಲ್ಲಿ ಒಂದೇ ರಾತ್ರಿಯಲ್ಲಿ ಮೂರು ಮನೆಗಳ ಕಳ್ಳತನಕ್ಕೆ ಯತ್ನಿಸಿದ ಘಟನೆ ನಡೆದಿದೆ. ದರೋಡೆಗೆ ಬಂದ ಕಳ್ಳರು ಎಲ್ಲಾ ಮನೆಗಳ ಹತ್ತಿರ ಸುಳಿದಾಡಿದ್ದಾರೆ. ನಂತರ ಒಂದು ಮನೆಯಲ್ಲಿ ಚಿನ್ನಾಭರಣ, ನಗದು ಕದ್ದು ಪರಾರಿಯಾಗಿದ್ದಾರೆ. ಮತ್ತೆರಡು‌ ಮನೆಗಳಲ್ಲೂ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ್ದಾರೆ .ಉಮೇಶ ಕನಮುಚನಾಳ ಎಂಬುವರ ಮನೆಯಲ್ಲಿ ಕಳ್ಳತನ ಮಾಡಿ 30 ಗ್ರಾಂ ಚಿನ್ನದ ತಾಳಿ, …

Read More »

ಜನಮನ ಸೇಳೆದ ಭರ್ಜರಿ ತೆರೆಬಂಡಿ ಸ್ಪರ್ಧೆ

ಜನಮನ ಸೇಳೆದ ಭರ್ಜರಿ ತೆರೆಬಂಡಿ ಸ್ಪರ್ಧೆ ಜಾತ್ರೆಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸುವುದು ಸರ್ವೇ ಸಾಮಾನ್ಯ ಆದರೆ ಜೋಡೆತ್ತುಗಳ ತೆರೆಬಂಡಿ ಸ್ಪರ್ಧೆ ಆಯೋಜಿಸುವುದು ತೀರಾ ವಿರಳ ಅದರಲ್ಲೂ ವಿಜೇತರಿಗೆ ಬಹುಮಾನ ನೀಡುವುದರಲ್ಲಿರುವ ವಿಶೇಷ ಇದೇಯಲ್ಲಾ ಅದು ಮತ್ತಷ್ಟು ವಿಶೇಷವಾಗಿದೆ ಈ ಕುರಿತು ಒಂದು ವರದಿ ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ತಾಲೂಕಿನ ಮಹಾಲಿಂಗಪೂರ ಪಟ್ಟಣದ ಬಸವೇಶ್ವರ ಜಾತ್ರಾ ಕಮೀಟಿ ವತಿಯಿಂದ ಸಾಧುನ ಗುಡಿ ಹತ್ತಿರ ಆಯೋಜಿಸಲಾಗಿದ್ದ ತೆರೆಬಂಡಿ ಸ್ಪರ್ಧೆಯಲ್ಲಿ ಮಹಾಲಿಂಗಪೂರ ರನ್ನ ಬೆಳಗಲಿ ಸೇರಿದಂತೆ …

Read More »

ಪರಿಹಾರ ನೀಡಿ ಅಥವಾ ನನ್ನನ್ನು ಸ್ಮಶಾನಕ್ಕೆ ಕಳುಹಿಸಿ…ದಾನಪ್ಪ ಹಡಪದ

ಪರಿಹಾರ ನೀಡಿ ಅಥವಾ ನನ್ನನ್ನು ಸ್ಮಶಾನಕ್ಕೆ ಕಳುಹಿಸಿ…ದಾನಪ್ಪ ಹಡಪದ ಕಳೆದಕೊಂಡ ಅಂಗಡಿಗೆ ಪರಿಹಾರವೋ ಅಥವಾ ಸ್ಮಶಾನವೋ ಎನ್ನುತ್ತಾ ಕಳೆದ 6-7 ತಿಂಗಳುಗಳಿಂದ ಗಟಾರ ನಿರ್ಮಾಣದ ಹೆಸರಿನಲ್ಲಿ ತೆರವುಗೊಂಡ ಅಂಗಡಿಯ ಮುಂದೆ ಕಣ್ಣೀರುಡುತ್ತಾ ಕಾಯುತ್ತಿರುವ ಕ್ಷೌರಿಕನ ಬಗ್ಗೆ ಒಂದು ವಿಶೇಷ ವರದಿ ಇಲ್ಲಿದೆ ನೋಡಿ. ಇದು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಲೋಕಾಪುರ ಪಟ್ಟಣದ ದಾನಪ್ಪಾ ಮಹಾಲಿಂಗಪ್ಪ ಹಡಪದ ಅವರ ಕಥೆಯಾಗಿದೆ. ದಾನಪ್ಪನ ತಂದೆ ಮಹಾಲಿಂಗಪ್ಪ ಖುಲ್ಲಾ ಜಾಗೆಯನ್ನು 1951 ರಲ್ಲಿ …

Read More »

ಎಂಬಿಬಿಎಸ್​ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಬಾಗಲಕೋಟೆ: ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನಲ್ಲಿ ನಾಲ್ಕೂವರೆ ವರ್ಷ ಎಂಬಿಬಿಎಸ್ ಮುಗಿಸಿ ಇಂಟರ್ಶಿಪ್‍ನಲ್ಲಿದ್ದ ವಿದ್ಯಾರ್ಥಿ ಲಕ್ಷ್ಮೀಪುತ್ರ ಬಿ.ಕುಲಕರ್ಣಿ (24) ಸೋಮವಾರ ಬೆಂಗಳೂರಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಎರಡು ದಿನಗಳ ಹಿಂದಷ್ಟೇ ರಜೆ ಮೇಲೆ ಸಂಬಂಧಿಕರ ಜೊತೆ ಲಕ್ಷ್ಮೀಪುತ್ರ ಬೆಂಗಳೂರಿಗೆ ಹೋಗಿದ್ದರು. ಅಲ್ಲಿಂದ ತಮಿಳುನಾಡಿಗೆ ಪ್ರವಾಸಕ್ಕೆ ಹೋಗಿ ವಾಪಸ್​ ಬರುತ್ತಿದ್ದಾಗ ಆರೋಗ್ಯದಲ್ಲಿ ಏರುಪೇರಾಗಿ ಬೆಂಗಳೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲೇ ಯುವಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಲಕ್ಷೀಪುತ್ರ ಮೂಲತಃ ವಿಜಯಪುರ …

Read More »