Breaking News

ಬಾಗಲಕೋಟೆ

ಭಾರತೀಯ ತರಕಾರಿ ಜಾಗತಿಕ ಮಟ್ಟದಲ್ಲಿ ಮಾರಾಟ ಆಗುವಂತೆ ಆಗಬೇಕು;ಆರ್.ಬಿ.ತಿಮ್ಮಾಪುರ

ಬಾಗಲಕೋಟೆ: ‘ವಿಶೇಷ ಔಷಧ ಗುಣಗಳುಳ್ಳ ತರಕಾರಿಗಳತ್ತ ಜನರು ವಾಲುತ್ತಿದ್ದಾರೆ. ಅಂತಹ ಭಾರತೀಯ ತರಕಾರಿ ಜಾಗತಿಕ ಮಟ್ಟದಲ್ಲಿ ಮಾರಾಟ ಆಗುವಂತೆ ಆಗಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ತೋಟಗಾರಿಕೆ ಸಂಶೋಧನಾ ವಿಸ್ತರಣಾ ಕೇಂದ್ರದಿಂದ ಮುಖ್ಯ ಆವರಣದಲ್ಲಿ ಸೋಮವಾರದಿಂದ ಆರಂಭವಾದ ಮೂರು ದಿನಗಳ ಸಸ್ಯ ಸಂತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ತರಕಾರಿ ಬೆಳೆಗಳಿಗೆ ವಿಷಕಾರಿ ಔಷಧ ಉಪಯೋಗಿಸುವುದು ವಾಡಿಕೆಯಾಗಿದೆ. ಜವಾರಿ ಎನಿಸಿಕೊಂಡ ಜೋಳ ಕೂಡ …

Read More »

ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ. ತಪ್ಪಿದ ಅನಾಹುತ

ಮುಧೋಳ: ಸಿಲಿಂಡರ್ ಸ್ಫೋಟಗೊಂಡು ಮನೆಗೆ ಹಾನಿಯಾಗಿರುವ ಘಟನೆ ಸಮೀಪದ ಶಿರೋಳ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಸಿದ್ದಪ್ಪ ಮುಂಡಗನೂರ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ‌ ಸಿಲಿಂಡರ್ ಸ್ಫೋಟಗೊಂಡಿದ್ದು ಸ್ಫೋಟದ ಭಿಕರತೆಗೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ತಪ್ಪಿದ ಅನಾಹುತ: ಮಧ್ಯಾಹ್ನದ ಸಮಯದಲ್ಲಿ‌ ಮನೆಯ ಮಂದಿಯೆಲ್ಲ ಬೀಗ ಹಾಕಿಕೊಂಡು ಕೂಲಿ‌ ಕೆಲಸಕ್ಕೆ ತೆರಳಿದ್ದರು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಮನೆಯ ಕೆಲ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. …

Read More »

ಜಾತಿಗೊಂದು ಡಿಸಿಎಂ ಹುದ್ದೆ ಬೇಕು: ಸಚಿವ ರಾಜಣ್ಣ

ಬಾಗಲಕೋಟೆ: ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಕೆಲವು ಜಾತಿಗೆ ಆದ್ಯತೆ ನೀಡಲಯ ಸಮುದಾಯ ಆಧಾರಿತ ಡಿಸಿಎಂ ಹುದ್ದೆ ನೀಡಬೇಕು ಎಂಬುದು ನಮ್ಮ ಪ್ರಬಲ ಬೇಡಿಕೆ ಇದ್ದೇ ಇದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು. ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಡಿಸಿಎಂ ಹುದ್ದೆ ಆಕಾಂಕ್ಷಿ ಅಲ್ಲ. ಮುಂದೆ ನಾನು ಚುನಾವಣೆಗೂ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತೇನೆ. ರಾಜ್ಯದಲ್ಲಿ ಸಮುದಾಯ ಆಧಾರಿತ ಡಿಸಿಎಂ ಹುದ್ದೆಯ …

Read More »

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ. BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಬಾಗಲಕೋಟೆ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇಂದು ಸಿಐಡಿ ವಿಚಾರಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿಕೆಯೊಂದನ್ನು ನೀಡಿದ್ದಾರೆ. ಮುಧೋಳದಲ್ಲಿ ಮಾತನಾಡಿದ ಅವರು ಲೈಂಗಿಕ ಕಿರುಕುಳ ನೀಡಿರುವ ವಿಚಾರದ ಬಗ್ಗೆ ಯಡಿಯೂರಪ್ಪ ಅವರನ್ನು ಇಲಾಖೆ ವಿಚಾರಣೆ ಮಾಡುತ್ತಿದೆ, ತನಿಖೆಯಲ್ಲಿ ಸತ್ಯಾಸತ್ಯತೆ ಏನಿದೆಯೋ ಹೊರಬರಲಿ ಎಂದು ಹೇಳಿದ್ದಾರೆ. ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಆಗಬಾರದು. ಇದು ಒಳ್ಳೆಯದೂ ಅಲ್ಲ, …

Read More »

ನನ್ನದು ಗಜಕೇಸರಿ ಯೋಗ, ಮುಂದೆ ನಾನು ‘ಪ್ರಧಾನಿ’ಯಾದರು ಆಗಬಹುದು :ಸಂಯುಕ್ತ ಪಾಟೀಲ್

ಬಾಗಲಕೋಟೆ : ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆಯ ವಿಚಾರವಾಗಿ ಅಸಮಾಧಾನ ಬಿಜೆಪಿ ಪಕ್ಷ ಅಷ್ಟೆ ಅಲ್ಲದೆ ಕಾಂಗ್ರೆಸ್ ಪಕ್ಷ ಕೂಡ ಇದಕ್ಕೆ ಹೊರತಾಗಿಲ್ಲ. ಏಕೆಂದರೆ ಬಾಗಲಕೋಟೆ ಲೋಕಸಭಾ ಕ್ಷೇತ್ರಕ್ಕೆ ಶಾಸಕ ವಿಧಾನದ ಕಾಶಪ್ಪನವರ ಪತ್ನಿ ವೀಣಾ ಕಾಶಪ್ಪನವರು ಲೋಕಸಭೆ ಆಕಾಂಕ್ಷಿಯಾಗಿದ್ದರು.   ಆದರೆ ಕಾಂಗ್ರೆಸ್ ಹೈಕಮಾಂಡ್ ಸಚಿವ ಶಿವಾನಂದ್ ಪಾಟೀಲ್ ಅವರ ಪುತ್ರಿ ಸಂಯುಕ್ತ ಪಾಟೀಲ್ ಗೆ ಟಿಕೆಟ್ ನೀಡಿದೆ. ಹೀಗಾಗಿ ಅವರು ಇದೀಗ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದಾರೆ. …

Read More »

ವೀಣಾಗೆ ಕೈತಪ್ಪಿದ ಟಿಕೆಟ್​! ಸಂಯುಕ್ತಾ ಪಾಟೀಲ ಕೊಟ್ಟ ಪ್ರತಿಕ್ರಿಯೆ ಹೀಗಿದೆ

ಬಾಗಲಕೋಟೆ: ಲೋಕಸಭಾ ಚುನಾವಣೆ 2024ರ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಾಗಲಕೋಟೆ ಕ್ಷೇತಕ್ಕೆ ‘ಕೈ’ ಅಭ್ಯರ್ಥಿಯಾಗಿ ಯಾರು ಹೊರಹೊಮ್ಮಲ್ಲಿದ್ದಾರೆ ಎಂಬ ಪ್ರಶ್ನೆ ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಯಾಗುತ್ತಿತ್ತು. ಈ ಮಧ್ಯೆ ಟಿಕೆಟ್​ ಸ್ಪರ್ಧೆಯಲ್ಲಿದ್ದ ಶಾಸಕ ವಿಜಯಾನಂದ ಪತ್ನಿ ವೀಣಾ ಕಾಶಪ್ಪನವರ ಮತ್ತು ಸಚಿವ ಶಿವಾನಂದ ಪಾಟೀಲ ಪುತ್ರಿ ಸಂಯುಕ್ತಾ ಪಾಟೀಲ ಮಧ್ಯೆ ಭಾರೀ ಹಣಾಹಣಿ ಇತ್ತು. ಆದ್ರೆ, ಕಾಂಗ್ರೆಸ್​ ತನ್ನ ಮೂರನೇ ಪಟ್ಟಿ ಬಿಡುಗಡೆಗೊಳಿಸಿದ ಬೆನ್ನಲ್ಲೇ ಸಂಯುಕ್ತಾಗೆ …

Read More »

ಜಾತಿಗಣತಿ ವೇಳೆ ಉಪಜಾತಿ ಬರೆಸಬೇಡಿ ಎಂಬ ನಿರ್ಣಯಕ್ಕೆ ಪಂಚಮಸಾಲಿ ಶ್ರೀ ವಿರೋಧ

ಬಾಗಲಕೋಟೆ, ): ಉಪಜಾತಿ ಬರೆಸಬೇಡಿ ಎಂದು ವೀರಶೈವ ಮಹಾಸಭಾ ಅಧಿವೇಶನದ ನಿರ್ಣಯಕ್ಕೆ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ (jaya mruthyunjaya swamiji) ವಿರೋಧ ವ್ಯಕ್ತಪಡಿಸಿದ್ದಾರೆ. ಲಿಂಗಾಯತ ಒಳಪಂಗಡದವರು, ಉಪಜಾತಿ ಕಾಲನಲ್ಲಿ ತಮ್ಮ ಉಪಜಾತಿ ನಮೂದಿಸಬಾರದು ಎಂದು ನಿರ್ಣಯ ಮಾಡಿರುವುದನ್ನು ನಾವು ಪಂಚಮಸಾಲಿಗಳು ಒಪ್ಪಲಿಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ. ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯಮೃತ್ಯುಂಜಯ ಸ್ವಾಮೀಜಿ ಲಿಂಗಾಯತ ಒಳಪಂಗಡದವರು, ಉಪಜಾತಿ ಕಾಲನಲ್ಲಿ ತಮ್ಮ ಉಪಜಾತಿ …

Read More »

ಬಾಗಲಕೋಟೆಯ ಮಹಿಳಾ ಒಕ್ಕೂಟದ ಮಹಿಳೆಯರು ಸ್ವಸಹಾಯ ಸಂಘದಡಿಯ ಪರಿಸರ ಸ್ನೇಹಿ ಬ್ಯಾಗ್​ ತಯಾರಿಕೆ,

ಬಾಗಲಕೋಟೆ: ಮಹಿಳೆ ಮನಸ್ಸು ಮಾಡಿದರೆ ಪ್ರಪಂಚವನ್ನೇ ಗೆಲ್ಲಬಹದು ಎಂಬುದಕ್ಕೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಕಟಗೇರಿ ಗ್ರಾಮದ ಮಹಿಳೆಯರು ಮಾದರಿಯಾಗಿದ್ದಾರೆ. ಇವರ ಸಾಧನೆಯ ಫಲ ಎಂಬಂತೆ ಇದೀಗ ಕೇಂದ್ರ ಸರ್ಕಾರ 5 ಕೋಟಿ ರೂಪಾಯಿ ಅನುದಾನ ನೀಡಿ ಬೃಹತ್ ಕಾರ್ಖಾನೆ ನಿರ್ಮಾಣಕ್ಕೆ ಸಿದ್ಧತೆ ನಡೆಸಿದೆ. ಹೌದು.. ಪರಿಸರಸ್ನೇಹಿ ಬ್ಯಾಗ್​ ತಯಾರಿಕೆ ಮೂಲಕ ಬಾಗಲಕೋಟೆ ವನಿತೆಯರು ರಾಜ್ಯವಲ್ಲದೇ ಕೇಂದ್ರ ಸರ್ಕಾರದ ಗಮನ ಸೆಳೆಯುವಲ್ಲೂ ಯಶಸ್ವಿಯಾಗಿದ್ದಾರೆ. ಕಟಗೇರಿ ಗ್ರಾಮದಲ್ಲಿರುವ ಪಂಚಾಯತ್​ ಮಟ್ಟದ ಸಂಜೀವಿನಿ ಮಹಿಳಾ …

Read More »

ಬಾಗಲಕೋಟೆ: RSS ಮುಖಂಡ ಹೃದಯಾಘಾತದಿಂದ ಕಾರಿನಲ್ಲೇ ಸಾವು

ಬಾಗಲಕೋಟೆ: ಆರ್​ಎಸ್​ಎಸ್​ ಮುಖಂಡರೊಬ್ಬರು ಹೃದಯಾಘಾತದಿಂದ ಕಾರಿನಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಲೋಕಾಪೂರ ಪಟ್ಟಣದ ಬಳಿ ನಡೆದಿದೆ. ಸಿದ್ದು ಚಿಕ್ಕದಾನಿ ಮುಧೋಳ (55) ಮೃತರು. ಇವರು ಆರ್​​ಎಸ್​ಎಸ್​ನಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಸಿದ್ದು ಕಳೆದ ರಾತ್ರಿ ಬಾಗಲಕೋಟೆ ಹೋಗಿ ವಾಪಸ್​ ಬರುವಾಗ ಈ ಘಟನೆ ಸಂಭವಿಸಿದೆ. ಮುಧೋಳ ಪಟ್ಟಣದ ನಿವಾಸಿಯಾಗಿರುವ ಇವರು, ಶಿವಾಜಿ ಸರ್ಕಲ್ ಬಳಿ ಮಂಜುನಾಥ ಮೊಬೈಲ್ ಶಾಪ್ ಇಟ್ಟುಕೊಂಡು ವ್ಯವಹಾರ ನಡೆಸುತ್ತಿದ್ದರು. ನಿನ್ನೆ ರಾತ್ರಿ ಲೋಕಾಪೂರ ಪಟ್ಟಣದ ಸಮೀಪ ಇರುವ …

Read More »

ಎಗ್ಗಿಲ್ಲದೆ ಸಾಗುತ್ತಿದೆ ಮಣ್ಣು ಗಣಿಗಾರಿಕೆ

ಬಾಗಲಕೋಟೆ, ಅಕ್ಟೋಬರ್​ 04: ಆ‌ ನಗರದ ಸುತ್ತಮುತ್ತ ಗುಡ್ಡಬೆಟ್ಟಗಳಿವೆ. ಕೆಲ‌ವರ ಖಾಸಗಿ ಜಮೀನುಗಳು ಕೂಡ ಬೆಟ್ಟದ ರೀತಿಯಲ್ಲೇ ಇವೆ. ಆದರೆ ಇಂತಹ ಜಾಗದಲ್ಲಿ ಮಣ್ಣು ಗಣಿಗಾರಿಕೆ (mud mining) ಎಗ್ಗಿಲ್ಲದೆ ಸಾಗುತ್ತಿದೆ. ಕೆಲವರು ನಿಯಮ ಪಾಲಿಸಿದರೆ ಬಹುತೇಕರು ನಿಯಮ ಉಲ್ಲಂಘಿಸಿ ಮಣ್ಣು ಗಣಿಗಾರಿಕೆ ‌ನಡೆಸುತ್ತಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ಮುಚಖಂಡಿ, ಸೀಮಿಕೇರಿ ಗದ್ದನಕೇರಿ ವ್ಯಾಪ್ತಿಯಲ್ಲಿ ಮಣ್ಣು ಗಣಿಗಾರಿಕೆ ಎಗ್ಗಿಲ್ಲದೆ ಸಾಗುತ್ತಿದೆ. ಸರಕಾರಿ ಜಾಗೆಯಲ್ಲಿ ಬೆಟ್ಟ ಗುಡ್ಡ ಅಗೆದು ಮಣ್ಣು ಮಾರಾಟ ಮಾಡುತ್ತಿದ್ದಾರೆ. ಜೊತೆಗೆ ಖಾಸಗಿ ಜಮೀನುಗಳ …

Read More »