ಆಲಮಟ್ಟಿ: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ನೂರು ಸಿದ್ದರಾಮಯ್ಯ ಬಂದರೂ ನನ್ನ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ …
Read More »ಹೊಟ್ಟೆ ತುಂಬಿಸದ ಕಾಳಜಿ ಕೇಂದ್ರ. ಸಂತ್ರಸ್ಥರೇ ತಯಾರಿಸುತ್ತಿದ್ದಾರೆ ಅಡುಗೆ
ಮುಧೋಳ: ಘಟಪ್ರಭಾ ಪ್ರವಾಹಕ್ಕೆ ಸಿಲುಕಿರುವ ಸಂತ್ರಸ್ಥರಿಗೆ ನೆರವಾಗಬೇಕಿದ್ದ ಕಾಳಜಿ ಕೇಂದ್ರಗಳು ಸಂತ್ರಸ್ಥರ ಹೊಟ್ಟೆ ತುಂಬಿಸುತ್ತಿಲ್ಲ. ಅರೆಹೊಟ್ಟೆ ಊಟ ತಡೆಯದೆ ಸಂತ್ರಸ್ಥರು ಕಾಳಜಿ ಕೇಂದ್ರದಲ್ಲಿಯೇ ಗ್ಯಾಸ್ ಬಳಕೆ ಮಾಡಿ ಹಚ್ಚಿನ ಆಹಾರ ತಯಾರಿಸುತ್ತಿದ್ದಾರೆ. ಮುಧೋಳ ತಾಲೂಕಿನ ಮಿರ್ಜಿ ಗ್ರಾಮದಲ್ಲಿ ಆರಂಭಿಸಿರುವ ಬಿ.ಬಿ. ಮುಧೋಳ ಶಾಲೆಯಲ್ಲಿನ ಸಂತ್ರಸ್ಥರು ತಮ್ಮ ಅಗತ್ಯ ಅಡುಗೆಗಾಗಿ ಕಾಳಜಿ ಕೇಂದ್ರದಲ್ಲಿಯೇ ಗ್ಯಾಸ್ ಒಲೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಎರಡು ಚಪಾತಿ ಸಾಲಲ್ಲ : ಹಳ್ಳಿಗಾಡಿನ ರೈತಾಪಿ ವರ್ಗಕ್ಕೆ ಹೊಟ್ಟೆ ತುಂಬಾ ರೊಟ್ಟಿ ತಿಂದಾಗ …
Read More »ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು
ಮುದ್ದೇಬಿಹಾಳ: ಕಾಲುವೆಯಲ್ಲಿ ಬಿದ್ದ ಕುರಿ ಮರಿ ರಕ್ಷಿಸಲು ಹೋಗಿದ್ದ ಯುವಕನೊಬ್ಬ ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಗಡಿ ಭಾಗದಲ್ಲಿರುವ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ನೀರು ಪಾಲಾದವನನ್ನು ಕಾಲುವೆ ಸಮೀಪ ಇರುವ ನಾಗಬೇನಾಳ ಗ್ರಾಮದ ಮಂಜುನಾಥ ಮಾದರ (28) ಎಂದು ಗುರುತಿಸಲಾಗಿದೆ. ನಾರಾಯಣಪುರ ಚೆಕ್ ಪೋಸ್ಟ್ ಹತ್ತಿರ ಇರುವ ಈ ಕಾಲುವೆ ಬಳಿ ಕುರಿಗಳನ್ನು ಮೇಯಿಸಲು ಮಂಜುನಾಥ ಹೋಗಿದ್ದ. ಒಂದು ಕುರಿ ಮರಿ ಕಾಲುವೆಯಲ್ಲಿ …
Read More »ನೋವು ನಿವಾರಣೆ ಹೆಸರಲ್ಲಿ ಭಕ್ತರಿಗೆ ಕೊಡಲಿ ಏಟು ಕೊಡುವ ಪೂಜಾರಿ!
ಬಾಗಲಕೋಟೆ : ಮುಗ್ದಜನರ ಅಸಹಾಯಕತೆಯನ್ನ ಲಾಭ ಮಾಡಿಕೊಂಡು ಪೂಜೆ-ಪುನಸ್ಕಾರ ಅಂತೆಲ್ಲಾ ಹೇಳಿ ದುಡ್ಡು ಪೀಕುವ ಬಾಬಾಗಳು, ಪವಾಡ ಪುರುಷರು, ದೇವ ಮಾನವರ ಬಗ್ಗೆ ನಾವು ಕೇಳಿರುತ್ತೇವೆ. ಪೂಜೆಗಳನ್ನ (Worship) ಮಾಡಿಸಿದರೆ ಒಳ್ಳೆಯದಾಗುತ್ತೇ, ನಿಮ್ಮ ಕಷ್ಟಗಳು ಪರಿಹಾರ ಸಿಗಲಿವೆ ಎಂದೆಲ್ಲಾ ಹೇಳಿ ಮೋಸ ಮಾಡುವ ಜನರನ್ನ ಕೇಳಿರುತ್ತೇವೆ. ಆದರೆ ಇಲ್ಲೊಂದು ಮೂಡನಂಬಿಕೆಯಿಂದ (Superstition) ನಡೆದಿರುವ ಘಟನೆ ಕೇಳಿದರೆ ಬೆಚ್ಚಿ ಬೀಳುತ್ತೀರಾ. ಪೂಜಾರಿಯೊಬ್ಬ (Priest) ದೇಹದ ಭಾಗಗಗಳು ನೋವು ಎಂದು ಬಂದವರಿಗೆ ಕೊಡಲಿಯಿಂದ …
Read More »ಕೋತಿ ಕಚ್ಚಿ 8 ಮಂದಿಗೆ ಗಾಯ
ಬಾದಾಮಿ: ಬನಶಂಕರಿ ರಸ್ತೆಯ ಕಾಳಿದಾಸ ಶಿಕ್ಷಣ ಸಂಸ್ಥೆಯ ಸಮೀಪ ಮಂಗಳವಾರ ಸಂಜೆ ಕಪ್ಪು ಕೋತಿಯೊಂದು ಮಹಿಳೆಯರು ಸೇರಿದಂತೆ ಎಂಟಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿದೆ ಎಂದು ಗಾಯಗೊಂಡ ಮಹಾದೇವ ಪತ್ರಿಕೆಗೆ ಹೇಳಿದರು. ಅರಣ್ಯ ಇಲಾಖೆ ಸಿಬ್ಬಂದಿ ಕೋತಿಯನ್ನು ಹಿಡಿದು ಬೇರೆಡೆ ಸಾಗಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ. ಕೋತಿ ನೆಗೆದಾಡುತ್ತ ಜನರ ತಲೆ, ಕಾಲು, ಬೆನ್ನು ಮತ್ತು ಕೈಗೆ ಕಚ್ಚಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಗಾಯಗೊಂಡವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ …
Read More »ನಕಲಿ ವೈದ್ಯರ 12 ಚಿಕಿತ್ಸಾ ಕೇಂದ್ರಗಳಿಗೆ ಬೀಗ
ಬಾಗಲಕೋಟೆ: ಜಿಲ್ಲೆಯ ವಿವಿಧೆಡೆ ಬುಧವಾರ ಕಾರ್ಯಾಚರಣೆ ನಡೆಸಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು 12 ನಕಲಿ ವೈದ್ಯರ ಚಿಕಿತ್ಸಾ ಕೇಂದ್ರಗಳಿಗೆ ಬೀಗ ಜಡಿದಿದ್ದಾರೆ. ‘ಮುಧೋಳ ತಾಲ್ಲೂಕಿನ ಬೆಳಗಲಿ, ಮಹಾಲಿಂಗಪುರ, ತೇರದಾಳದ ಎರಡು ಚಿಕಿತ್ಸಾ ಕೇಂದ್ರ, ಬೀಳಗಿ ತಾಲ್ಲೂಕಿನ ಮೂರು, ಬಾದಾಮಿ ತಾಲ್ಲೂಕಿನ ಒಂದು, ಬಾಗಲಕೋಟೆಯಲ್ಲಿ ಎರಡು, ಹುನಗುಂದ ಎರಡು ಚಿಕಿತ್ಸಾ ಕೇಂದ್ರ ಬಂದ್ ಮಾಡಲಾಗಿದೆ. ಒಟ್ಟು 32 ಕಡೆ ಕಾರ್ಯಾಚರಣೆ ನಡೆಸಲಾಯಿತು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ …
Read More »ಜಮಖಂಡಿ ತಾಲ್ಲೂಕಿಗೆ ಹಿಪ್ಪರಗಿ ಮರುಸೇರ್ಪಡೆ
ಜಮಖಂಡಿ: ರಾಜ್ಯದಲ್ಲಿ ಹೊಸ ತಾಲ್ಲೂಕುಗಳ ರಚನೆಯ ಬಳಿಕ ರಬಕವಿ-ಬನಹಟ್ಟಿ ತಾಲ್ಲೂಕಿಗೆ ಸೇರ್ಪಡೆಯಾಗಿದ್ದ ಹಿಪ್ಪರಗಿ ಗ್ರಾಮವನ್ನು ಜಮಖಂಡಿ ತಾಲ್ಲೂಕಿಗೆ ಮರುಸೇರ್ಪಡೆಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ (ಕಂದಾಯ ಇಲಾಖೆ ಭೂಮಾಪನ) ಎಸ್. ಗುರುಮೂರ್ತಿ ಅಧಿಸೂಚನೆ ಹೊರಡಿಸಿದ್ದಾರೆ. ರಬಕವಿ-ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಗ್ರಾಮವನ್ನು ಜಮಖಂಡಿ ತಾಲ್ಲೂಕಿಗೆ ಸೇರ್ಪಡೆಗೊಳಿಸಿ ಜೂನ್ 14 ರಂದು ಅಂತಿಮ ಅಧಿಸೂಚನೆ ಹೊರಡಿಸಿದ್ದು, ಜೂನ್ 24ರಂದು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಅಧಿಸೂಚನೆ ಮಾಹಿತಿಯನ್ನು ಅಗತ್ಯ ಕ್ರಮದ ಸಲುವಾಗಿ ಜಿಲ್ಲಾ ಮತ್ತು ತಾಲ್ಲೂಕು …
Read More »ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು
ಮಹಾಲಿಂಗಪುರ: ರೈತ ಸಮುದಾಯವು ಜಾಣತನದಿಂದ ಒಕ್ಕಲುತನ ಮಾಡಿದರೆ ಕಡಿಮೆ ಜಮೀನು, ಅಲ್ಪಾವಧಿಯಲ್ಲಿಯೇ ಲಾಭವನ್ನು ಮಾಡಿಕೊಳ್ಳಬಹುದು ಎಂಬುದನ್ನು ರಬಕವಿ ಬನಹಟ್ಟಿ ತಾಲ್ಲೂಕಿನ ಕೆಸರಗೊಪ್ಪ ಗ್ರಾಮದ ಯುವ ರೈತ ಬಸವರಾಜ ಶ್ರೀಶೈಲ ಸತ್ತಿಗೇರಿ ಸಾಧಿಸಿ ತೋರಿಸಿದ್ದಾರೆ. ಅಂತರ ಬೆಳೆಯಾಗಿ ಕೊತ್ತಂಬರಿ ಸೊಪ್ಪು : ಒಟ್ಟು 3.18 ಎಕರೆ ಜಮೀನು ಹೊಂದಿರುವ ಸಣ್ಣ ರೈತರಾದ ಬಸವರಾಜ ಸತ್ತಿಗೇರಿ ಅವರು ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ 25 ಗುಂಟೆ ಜಮೀನಿನಲ್ಲಿ ಕಳೆದ ಮೇ18 ರಂದು ಅರಿಶಿನ …
Read More »ಭಾರತೀಯ ತರಕಾರಿ ಜಾಗತಿಕ ಮಟ್ಟದಲ್ಲಿ ಮಾರಾಟ ಆಗುವಂತೆ ಆಗಬೇಕು;ಆರ್.ಬಿ.ತಿಮ್ಮಾಪುರ
ಬಾಗಲಕೋಟೆ: ‘ವಿಶೇಷ ಔಷಧ ಗುಣಗಳುಳ್ಳ ತರಕಾರಿಗಳತ್ತ ಜನರು ವಾಲುತ್ತಿದ್ದಾರೆ. ಅಂತಹ ಭಾರತೀಯ ತರಕಾರಿ ಜಾಗತಿಕ ಮಟ್ಟದಲ್ಲಿ ಮಾರಾಟ ಆಗುವಂತೆ ಆಗಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ ಹೇಳಿದರು. ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಮುಖ್ಯ ತೋಟಗಾರಿಕೆ ಸಂಶೋಧನಾ ವಿಸ್ತರಣಾ ಕೇಂದ್ರದಿಂದ ಮುಖ್ಯ ಆವರಣದಲ್ಲಿ ಸೋಮವಾರದಿಂದ ಆರಂಭವಾದ ಮೂರು ದಿನಗಳ ಸಸ್ಯ ಸಂತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ‘ತರಕಾರಿ ಬೆಳೆಗಳಿಗೆ ವಿಷಕಾರಿ ಔಷಧ ಉಪಯೋಗಿಸುವುದು ವಾಡಿಕೆಯಾಗಿದೆ. ಜವಾರಿ ಎನಿಸಿಕೊಂಡ ಜೋಳ ಕೂಡ …
Read More »ಸಿಲಿಂಡರ್ ಸ್ಫೋಟಗೊಂಡು ಹಾರಿ ಹೋದ ಮನೆಯ ಮೇಲ್ಛಾವಣಿ. ತಪ್ಪಿದ ಅನಾಹುತ
ಮುಧೋಳ: ಸಿಲಿಂಡರ್ ಸ್ಫೋಟಗೊಂಡು ಮನೆಗೆ ಹಾನಿಯಾಗಿರುವ ಘಟನೆ ಸಮೀಪದ ಶಿರೋಳ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ. ಸಿದ್ದಪ್ಪ ಮುಂಡಗನೂರ ಅವರ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸಿಲಿಂಡರ್ ಸ್ಫೋಟಗೊಂಡಿದ್ದು ಸ್ಫೋಟದ ಭಿಕರತೆಗೆ ಮನೆಯ ಮೇಲ್ಛಾವಣಿ ಹಾರಿಹೋಗಿದೆ. ತಪ್ಪಿದ ಅನಾಹುತ: ಮಧ್ಯಾಹ್ನದ ಸಮಯದಲ್ಲಿ ಮನೆಯ ಮಂದಿಯೆಲ್ಲ ಬೀಗ ಹಾಕಿಕೊಂಡು ಕೂಲಿ ಕೆಲಸಕ್ಕೆ ತೆರಳಿದ್ದರು, ಈ ವೇಳೆ ಸಿಲಿಂಡರ್ ಸ್ಫೋಟಗೊಂಡಿದ್ದು ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಮನೆಯ ಕೆಲ ಸದಸ್ಯರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. …
Read More »
Laxmi News 24×7