Breaking News

ಬಿಜಾಪುರ

ಇಂಡಿ ಜಿಲ್ಲೆ ಮಾಡಿಯೇ ತೀರುತ್ತೇನೆ: ಶಾಸಕ ಯಶವಂತ್ರಾಯಗೌಡ

ವಿಜಯಪುರ: ರಾಜಕೀಯವಾಗಿ ಬಹಳ ದಿನ ಅಧಿಕಾರದಲ್ಲಿ ಇರಲು ಬಯಸದ ನಾನು, ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ವಿಜಯಪುರ ಜಿಲ್ಲೆಯಿಂದ ಪ್ರತ್ಯೇಕ ಜಿಲ್ಲೆ, ಇಂಡಿ ಜಿಲ್ಲಾ ಕೇಂದ್ರ ಮಾಡಿಯೇ ತೀರುತ್ತೇನೆ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪ್ರತಿಜ್ಞೆ ಮಾಡಿದರು.   ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಭಾಗವನ್ನು ನೀರಾವರಿ ಇಂಡಿ ನಗರಸಭೆ, ಜಿಲ್ಲಾ ಕೇಂದ್ರ ಮಾಡುವುದು ನನ್ನ ರಾಜಕೀಯ ಭವಿಷ್ಯದ ಕನಸು. ನಂಜುಂಡಪ್ಪ ವರದಿ ಕೂಡ ಸಣ್ಣ ಜಿಲ್ಲೆಗಳ …

Read More »

ಪ್ರಮೋದ್ ಮುತಾಲಿಕ್ ಗೆ ಸಿಎಂ ಟಾಂಗ್

ವಿಜಯಪುರ; ; ರಾಜ್ಯದ ಇತಿಹಾಸದಲ್ಲಿ 5 ವರ್ಷಗಳಲ್ಲಿ ಮುಖ್ಯಮಂತ್ರಿಯಾಗಿ ಅತಿ ಹೆಚ್ಚು ಸಾಲ ಮಾಡಿರುವ ಖ್ಯಾತಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರದ್ದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ವಿಜಯಪುರದ ಸೈನಿಕ್ ಸ್ಕೂಲ್ ಹೆಲಿಪ್ಯಾಡ್‍ಗೆ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಳೆದ ಬಜೆಟ್ ಘೋಷಣೆ ಗಳ ಪೈಕಿ ಕೇವಲ 10 ರಷ್ಟು ಕಾಮಗಾರಿಗಳು ಜಾರಿಯಾಗಿವೆ 3 ಲಕ್ಷ ಕೋಟಿ ಸಾಲ ಇದೆ ಎಂದಿರು. ಬಜೆಟ್ …

Read More »

ಬಿಎಸ್‌ವೈಗೆ ಕಲ್ಲು ಎಸೆದರೆ ಪಕ್ಷಕ್ಕೆ ಪೆಟ್ಟು: ಬಿ.ವೈ ವಿಜಯೇಂದ್ರ

ವಿಜಯಪುರ: ‘ಯಡಿಯೂರಪ್ಪ ಅವರಿಗೆ ಕಲ್ಲು ಎಸೆದರೆ ಅದು ಪಕ್ಷಕ್ಕೆ ಪೆಟ್ಟು ಎನ್ನುವುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಬಿಎಸ್‌ವೈ ಬಗ್ಗೆ ಶಾಸಕ ಬಸನಗೌಡ ಯತ್ನಾಳ ಇನ್ನು ಟೀಕೆ ಮಾಡುವುದಿಲ್ಲ ಎಂದು ಹೇಳಿಕೆ ನೀಡಿರುವುದು ಪಕ್ಷದ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ಬೆಳವಣಿಗೆ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.   ವಿಜಯಪುರ ಜಿಲ್ಲೆಯ ಹೊರ್ತಿ ಗ್ರಾಮದಲ್ಲಿ ಶುಕ್ರವಾರ ಮಾಧ್ಯಮದ ಜೊತೆ ಮಾತನಾಡಿದ ಅವರು, ‘ಯತ್ನಾಳ ಬಗ್ಗೆ ನಮಗೆ ವೈಯಕ್ತಿಕ ವಿರೋಧವಿಲ್ಲ. …

Read More »

ಜೆಡಿಎಸ್ ಗೆ ಮತ್ತೊಂದು ಆಘಾತ

ವಿಜಯಪುರ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಜೆಡಿಎಸ್ ಗೆ ಮತ್ತೊಂದು ಆಘಾತವಾಗಿದೆ. ಜೆಡಿಎಸ್ ಅಭ್ಯರ್ಥಿ, ಮಾಜಿ ಯೋಧ ಶಿವಾನಂದ ಸೋಮನಾಳ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಜಯಪುರದಲ್ಲಿ ನಡೆದ ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಶಿವಾನಂದ ಸೋಮನಾಳ (55) ಪಂಚರತ್ನ ರಥಯಾತ್ರೆ ಬಳಿಕ ತಮ್ಮ ಕ್ಷೇತ್ರ ಸಿಂದಗಿಗೆ ತೆರಳಿದ್ದರು. ಪರಿಚಯಸ್ಥರ ಮನೆಯಲ್ಲಿ ಕುಳಿತಿದ್ದ ಶಿವಾನಂದ ಅವರಿಗೆ ಏಕಾಏಕಿ ಹೃದಯಾಘಾತ ಸಂಭವಿಸಿ ಕುಸಿದು ಬಿದ್ದಿದ್ದಾರೆ.ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ಅವರು ಕೊನೆಯುಸಿರೆಳೆದಿದ್ದರು. 15 …

Read More »

ಹೆಚ್ ಡಿಕೆ ಸಿಎಂ ಆಗದಿದ್ದರೆ ನಾನು. : ಸಿಎಂ ಇಬ್ರಾಹಿಂ ಶಪಥ !

ವಿಜಯಪುರ : ಕುಮಾರಸ್ವಾಮಿ ಮುಂದಿನ ಮುಖ್ಯಮಂತ್ರಿ ಆಗದಿದ್ದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಘೋಷಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಕಾಂಗ್ರೆಸ್-ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂದು ಹೇಳಿ ಎಂದು ಆಗ್ರಹಿಸಿದರು.   ಶುಕ್ರವಾರ ನಗರದಲ್ಲಿ ಜೆಡಿಎಸ್ ಪಕ್ಷದ ಪಂಚರತ್ನ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಫೆಬ್ರುವರಿ ಮುಗಿಯಲಿ ಬಿಜೆಪಿ, ಕಾಂಗ್ರೆಸ್ ಪಕ್ಷದಿಂದ ಜೆಡಿಎಸ್ ಪಕ್ಷಕ್ಕೆ ಯಾರು ವಲಸೆ ಬರಲಿದ್ದಾರೆ ಎಂದು ಹೇಳುತ್ತೇನೆ ಎಂದರು. ವಿಜಯಪುರ ಜಿಲ್ಲೆಯಲ್ಲಿ 5 ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲಲಿದ್ದು, ನಾಗಠಾಣಾ ಕ್ಷೇತ್ರದ …

Read More »

ಸಿದ್ಧೇಶ್ವರ ಶ್ರೀ ಅಗಲಿಕೆ: ಸಿದ್ದೇಶ್ವರ ಜಾತ್ರೆ ಸರಳ

ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆ ಶ್ರೀಸಿದ್ದೇಶ್ವರ ಸಂಸ್ಥೆಯಿಂದ ನಗರ ದೇವತೆ ಸಿದ್ದೇಶ್ವರನ ಪ್ರಸಕ್ತ ಸಾಲಿನ ಸಂಕ್ರಮಣದ ನಮ್ಮೂರ ಜಾತ್ರೆಯನ್ನು ಸರಳವಾಗಿ ಅಚರಿಸಲು ನಿರ್ಧರಿಸಿದೆ. ಆದರೆ ಧಾರ್ಮಿಕ ಕಾರ್ಯಕ್ರಮಗಳಿಗೆ ಸೀಮಿತಗೊಳಿಸಿ, ಜಾತ್ರೆ ಆಚರಿಸಲು ಯೋಜಿಸಿದೆ.   ಮಂಗಳವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷರಾದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಚೇರ್ಮನ್ ಬಸಯ್ಯ ಹಿರೇಮಠ, ಸಿದ್ದೇಶ್ವರ ಶ್ರೀಗಳ ನಿಧನ ಹಿನ್ನೆಲೆಯಲ್ಲಿ ಸಿದ್ದೇಶ್ವರ ಜಾತ್ರಾ ಮಹೋತ್ಸದಲ್ಲಿ ಜಾನುವಾರು …

Read More »

ಸಿದ್ದೇಶ್ವರ ಶ್ರೀಗಳ ಆರೋಗ್ಯದಲ್ಲಿ ಏರುಪೇರು: ಆಶ್ರಮದತ್ತ ಭಕ್ತರು ಬರದಂತೆ ಮನವಿ

ವಿಜಯಪುರ: ಸಿದ್ದೇಶ್ವರ ಶ್ರೀಗಳ ಅನಾರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯರ ತಂಡ ಶ್ರೀಗಳ ಆರೋಗ್ಯದ ಮೇಲೆ ನಿಗಾ ಇರಿಸಿದೆ. ಮತ್ತೊಂದೆಡೆ ಭಕ್ತರ ದಂಡು ಆಶ್ರಮದತ್ತ ಆಗಮಿಸುತ್ತಿದ್ದು,‌ ಶ್ರೀಗಳ ಆರೋಗ್ಯದ ದೃಷ್ಟಿಯಿಂದ ಆಶ್ರಮಕ್ಕೆ ಆಗಮಿಸದೇ ಭಕ್ತರು ಸಹಕರಿಸಬೇಕು ಎಂದು ಆಶ್ರಮದ ಸಾಧಕರು ಮನವಿ ಮಾಡುತ್ತಿದ್ದಾರೆ.   ಸಿದ್ದೇಶ್ವರ ಶ್ರೀಗಳಿಗೆ ಚಿಕಿತ್ಸೆಗಾಗಿ ಬಿಎಲ್ ಡಿಇ‌ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜು ತಂಡ ಟೊಂಕ ಕಟ್ಟಿದೆ. ಪ್ರಾಚಾರ್ಯ ಡಾ.ಅರವಿಂದ ಪಾಟೀಲ, ವೈದ್ಯರಾದ ನ್ಯೈರೋಲಾಜಿಸ್ಟ್ ಡಾ.ಎಸ್.ಬಿ.ಪಾಟೀಲ, …

Read More »

ಸಿದ್ದೇಶ್ವರ ಸ್ವಾಮೀಜಿ ಯೋಗಕ್ಷೇಮ ವಿಚಾರಿಸಿದ ಯತಿಗಳು

ಬಿಜಾಪುರ: ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರನ್ನು ವಿವಿಧ ಯತಿಗಳು ಇಂದು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದರು. ಸ್ವಾಮೀಜಿ ವಿಜಯಾನಂದಜಿ, ಸ್ವಾಮೀಜಿ ಸ್ವಾಮಿ ಸುಮೇಧಾನಂದಜಿ, ಸ್ವಾಮೀಜಿ ಸ್ವಾಮಿ ನರೇಶಾನಂದಜಿ, ಸ್ವಾಮೀಜಿ ಶಾರದೇಶಾನಂದಜಿ, ಸ್ವಾಮೀಜಿ ಸುಖದೇವಾನಂದಜಿ ಯೋಗಕ್ಷೇಮ ವಿಚಾರಿಸಿದರು.   ಈ ವೇಳೆ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಅನಾರೋಗ್ಯದ ನಡುವೆಯೂ ಭಜನೆ ಮಾಡಲು ಆದೇಶ ನೀಡಿದರು. ಅದರಂತೆ ಸ್ಥಳದಲ್ಲೇ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಯತಿಗಳು ಭಜನೆ ಮಾಡಿ ಆಶಯ ಪೂರೈಸಿದರು.

Read More »

ಮೊಸಳೆ ಕಂಡು ಶಾಕ್ ಆದ ಜನ

ಬೃಹತ್ ಮೊಸಳೆಯೊಂದು ಪಟ್ಟಣದಲ್ಲಿ ಕಾಣಿಸಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ನಾಲತವಾಡ ಪಟ್ಟಣದ ಎದುರಿನ ಚಿನಿವಾಲರ ಖಾಲಿ ಜಾಗದಲ್ಲಿರುವ ಬಾವಿಯಲ್ಲಿ ಪತ್ತೆ ಆಗಿದೆ. ಬಾವಿ ಒಂದರಲ್ಲಿ ಬೃಹತ್ ಆಕಾರದ ಮೊಸಳೆ ಹಲವಾರು ದಿನಗಳಿಂದ ವಾಸಿಸುತ್ತಿದೆ‌ ಅಲ್ಲದೇ, ಹಲವು ಬಾರಿ ಅರಣ್ಯ ಇಲಾಖೆಯವರಿಗೆ ಹೇಳಿದರು ಪ್ರಯೋಜನ ಆಗಲಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾರ್ವಜನಿಕರಿಗೆ ಸಮಸ್ಯೆ ಆಗುವ ಮುನ್ನವೇ ಮೊಸಳೆ ಬೇರೆಡೆಗೆ ಸ್ಥಳಾಂತರ ಮಾಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Read More »

ಮಹಾರಾಷ್ಟ್ರದ ಪ್ರತಿಭಾವಂತ ಬಡ ವಿದ್ಯಾರ್ಥಿಗೆ ಎಂ.ಬಿ.ಪಾಟೀಲ್ ನೆರವು

ವಿಜಯಪುರ : ಆರ್ಥಿಕ ಸಂಕಷ್ಟದಿಂದ ವೈದ್ಯಕೀಯ ಪ್ರವೇಶ ಸಿಕ್ಕರೂ ಪ್ರವೇಶ ಪಡೆಯಲಾಗದ ಮತ್ತೋರ್ವ ವಿದ್ಯಾರ್ಥಿಗೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಆರ್ಥಿಕ ನೆರವು ನೀಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ನೆಲೆಸಿರುವ ಮಹಾರಾಷ್ಟ್ರ ಮೂಲದ ವಿದ್ಯಾರ್ಥಿಗೆ ಭಾಷಾ ಸಂಕುಚಿತತೆ ಎಲ್ಲೆ ಮೀರಿ ಮಾನವೀಯತೆ ಮೆರೆದಿದ್ದಾರೆ.   ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರದಲ್ಲಿ ನೆಲೆಸಿರುವ ವಿದ್ಯಾರ್ಥಿ ಯಲ್ಲಾಲಿಂಗ ಭೀಮರಾಯ ಜೈನಾಪುರ ಮೂಲತ ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಜತ್ ತಾಲೂಕಿನ ಮುಚ್ಚಂಡಿ ಗ್ರಾಮದವರು. …

Read More »