Breaking News

ಬೀದರ್

ತಾನು ಪ್ರೀತಿಸುತ್ತಿದ್ದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದಪಾಗಲ್​ ಪ್ರೇಮಿ

ಬೀದರ್ : ಬೀದರ್ ತಾಲೂಕಿನ ಸೋಲಪೂರ್ ಗ್ರಾಮದ ಕೆರೆಯ ಸಮೀಪದಲ್ಲಿ ಮದುವೆ ನಿರಾಕರಿಸಿದ್ದಕ್ಕೆ ಪಾಗಲ್​ ಪ್ರೇಮಿಯೊಬ್ಬ (Lover) ತಾನು ಪ್ರೀತಿಸುತ್ತಿದ್ದ ಹುಡುಗಿಯ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ನಡೆದಿದೆ.     ಶಿವಲೀಲಾ (18) ಕೊಲೆಗೀಡಾಗಿರುವ ಯುವತಿ. ಈಕೆ ಬ್ರೀಮ್ಸ್​ನಲ್ಲಿ ಪ್ಯಾರಾ ಮೆಡಿಕಲ್ ವ್ಯಾಸಂಗ ಮಾಡುತ್ತಿದ್ದಳು. ಇನ್ನೂ ಶ್ರೀನಿವಾಸ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮದುವೆಯಾಗಲು (Marriage) ಇಷ್ಟವಿಲ್ಲ ಎಂದು ಹೇಳಿದ್ದಕ್ಕೆ ಶ್ರೀನಿವಾಸ ಸೋಲಪೂರ್ ಕೆರೆಯ ಬಳಿ ಕರೆದುಕೊಂಡು ಹೋಗಿ …

Read More »

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಬಸವಕಲ್ಯಾಣ ಲೇಡಿ ಪಿಎಸ್​ಐ, ಪೇದೆ!

ಬೀದರ್: ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆಗೆ ಲಾರಿಗಳಿಗೆ ಅನುಮತಿ ನೀಡಲು 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ರನ್ನು ಲೋಕಾಯುಕ್ತ ಪೊಲೀಸರು ರೆಡ್​ಹ್ಯಾಂಡ್​ ಆಗಿ ಬಲೆಗೆ ಕೆಡವಿದ್ದಾರೆ.   ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣೆಯ ಪಿಎಸ್‌ಐ ಶೀಲಾ ನ್ಯಾಮನ್ ಹಾಗು ಕಾನ್​ಸ್ಟೆಬಲ್ ಪರಶುರಾಮರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆ ಲಾರಿಗಳಿಗೆ ಅನುಮತಿ ನೀಡಲು ದೂರುದಾರ ಇರ್ಷಾದ್​ ಪಟೇಲ್‌ನಿಂದ 21 ಸಾವಿರ ರೂಪಾಯಿ …

Read More »

ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಅಗತ್ಯವೆಂದ ಎಂದ ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್: ದೇಶದ ರಾಜಕೀಯ ಸ್ಥಿತಿ, ನ್ಯಾಯಾಂಗ, ಕಾರ್ಯಾಂಗ, ಶಾಸಕಾಂಗದ ಕುರಿತು ಮಕ್ಕಳಿಗೆ ಅರಿವು ಅಗತ್ಯ. ಮಕ್ಕಳಲ್ಲಿ ರಾಜಕೀಯ ಪ್ರಜ್ಞೆ ಬೆಳೆಸುವುದು ಎಲ್ಲರ ಕರ್ತವ್ಯ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಹೇಳಿದರು.   ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಗುನ್ನಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಕೆಕೆಆರ್ಡಿಬಿಯ 2022-23ನೇ ಸಾಲಿನ ಮೈಕ್ರೋ ಯೋಜನೆಯಡಿಯಲ್ಲಿ ಸುಮಾರು 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಆಡಿಟೋರಿಯಂ ಹಾಲ್ ಗೆ …

Read More »

ಸಿದ್ದರಾಮಯ್ಯ ದೊಡ್ಡ ದೊಡ್ಡ ಮಾತನಾಡುತ್ತಾರಷ್ಟೇ, ಧಮ್ ಇಲ್ಲ: ಸಿಎಂ ಬೊಮ್ಮಾಯಿ

ಬೀದರ್: ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿನ ಹಗರಣ ಮತ್ತು ಅವ್ಯವಹಾರ ಸಂಬಂಧ ಎಲ್ಲ ಮಾಹಿತಿ, ದಾಖಲೆಗಳನ್ನು ರಾಹುಲ್ ಗಾಂಧಿಯವರಿಗೆ ಮುಟ್ಟಿಸುತ್ತೇನೆ. ಅವರು ಏನು ಶಿಕ್ಷೆ ಕೊಡುತ್ತಾರೆ ಕಾದು ನೋಡೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸವಾಲು ಹಾಕಿದ್ದಾರೆ.   ಔರಾದ ಪಟ್ಟಣದಲ್ಲಿ ಮಂಗಳವಾರ ‘ಜನಸಂಕಲ್ಪ ಯಾತ್ರೆ’ಗೆ ಚಾಲನೆ ನೀಡಿ ಮಾತನಾಡಿದ ಅವರು, 2016ರ ಶಿಕ್ಷಕರ ನೇಮಕಾತಿ ಹಗರಣ, ಪ್ರಾಸಿಕ್ಯೂಟರ್ ಮತ್ತು ಪೊಲೀಸ್ ನೇಮಕಾತಿಯಲ್ಲಿನ ಹಗರಣ ಸೇರಿ ಎಲ್ಲ …

Read More »

ಬಹಮನಿಯರ ಕೋಟೆ ಮೇಲೆ ಹಾರಾಡಲಿದೆ ರಾಷ್ಟ್ರಧ್ವಜ

ಬೀದರ್‌: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ನಗರದಲ್ಲಿರುವ ಬಹಮನಿ ಸುಲ್ತಾನರ ಕಾಲದ ಕೋಟೆ ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದ್ದು, ತ್ರಿವರ್ಣ ಬೆಳಕಿನಲ್ಲಿ ಮೈದೆಳೆದ ಕೋಟೆ ವೀಕ್ಷಣೆಗೆ ಅನುಕೂಲವಾಗುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಸ್ಮಾರಕಗಳ ವೀಕ್ಷಣೆ ಸಮಯವನ್ನು ರಾತ್ರಿ 9 ಗಂಟೆಯವರೆಗೂ ವಿಸ್ತರಿಸಿದೆ. ಅಷ್ಟೇ ಅಲ್ಲ; ಐತಿಹಾಸಿಕ ಕೋಟೆ ಆವರಣದಲ್ಲಿ ರಾಷ್ಟ್ರ್ರ ಧ್ವಜ ಹಾರಿಸಲು ಸಿದ್ಧತೆ ನಡೆಸಿದೆ. ಕೋಟೆಯೊಳಗಿನ ಗುಂಬಜ್‌ ದರ್ವಾಜಾ, ತರ್ಕಿಶ್‌ ಮಹಲ್‌ ಹಾಗೂ ಸೋಲಾ ಕಂಬಾ ಮಸೀದಿ …

Read More »

ಸಿದ್ದರಾಮಯ್ಯ ವಿರುದ್ಧವೇ ಸ್ಫರ್ಧೆ: ಶ್ರೀರಾಮಲು

ಬೀದರ್: ಬಿಜೆಪಿ ಪಕ್ಷ ಸೂಚಿಸಿದರೆ ಮತ್ತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಸ್ಫರ್ಧೆ ಮಾಡುವುದಾಗಿ ಸಾರಿಗೆ ಸಚಿವ ಶ್ರೀರಾಮಲು ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾದಾಮಿಯಲ್ಲಿ ಸಿದ್ದರಾಮಯ್ಯ ಮತ್ತೆ ಸ್ಫರ್ಧಿಸಿದರೆ ಅವರು ಠೇವಣಿ ಕಳೆದುಕೊಳ್ಳಲಿದ್ದಾರೆ. ಅಲ್ಲಿನ‌ ಜನ‌ ಶ್ರೀರಾಮುಲು ಅವರನ್ನು ಸೋಲಿಸಿ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದರು. ಕ್ಷೇತ್ರ ಹುಡುಕಾಡುತ್ತಿರುವ ಸಿದ್ದರಾಮಯ್ಯ ಸಿಎಂ ಹೇಗಾಗುತ್ತಾರೆ? ಪಕ್ಷದ ಬೆಂಬಲದ ಮೇಲೆ ಸಿದ್ದರಾಮಯ್ಯ ಹಾರಾಡುತ್ತಿದ್ದಾರೆ, ಅವರಿಗೆ ವೈಯಕ್ತಿಕ ವರ್ಚಸ್ಸು ಇಲ್ಲ. ಸ್ವಂತ ಶಕ್ತಿ …

Read More »

ನಗ್ನ ಜಾಲದಲ್ಲಿ ತೊಳಲಾಡುತ್ತಿರುವ 15 ಮಂದಿ ಪುರುಷರು!

ಬೀದರ್‌: ವೀಡಿಯೋ ಕಾಲ್‌ನಲ್ಲಿ ಸಂಪರ್ಕ ಸಾಧಿಸಿರುವ ಯುವತಿಯರ ಮಾತಿಗೆ ಮರುಳಾಗಿ ನಗ್ನ ದೇಹ ಪ್ರದರ್ಶಿಸಿ ಸಂಕಷ್ಟಕ್ಕೆ ಸಿಲುಕಿರುವ ಜಿಲ್ಲೆಯ 15ಕ್ಕೂ ಹೆಚ್ಚು ಮಂದಿ ಈಗ ಪೊಲೀಸರಿಗೆ ದೂರು ನೀಡಿದ್ದಾರೆ. ಪಶ್ಚಿಮ ಬಂಗಾಲ, ರಾಜಸ್ಥಾನ ಮತ್ತು ಝಾರ್ಖಂಡ್‌ ಸಹಿತ ಉತ್ತರ ಭಾರತದಲ್ಲಿ ಇಂಥ ಸೈಬರ್‌ ಜಾಲಗಳು ವ್ಯಾಪಕವಾಗಿ ಹರಡಿಕೊಂಡಿದ್ದು, ಮುಖ್ಯವಾಗಿ ರಾಜಕಾರಣಿ, ಉದ್ಯಮಿ ಹಾಗೂ ಇತರ ಪ್ರಭಾವಿಗಳಿಗೇ ಗಾಳ ಹಾಕಲಾಗುತ್ತಿದೆ.   ಫೇಸ್‌ಬುಕ್‌, ಇನ್‌ಸ್ಟಾಗ್ರಾಂ ನಕಲಿ ಅಕೌಂಟ್‌ಗಳ ಮೂಲಕ ಯುವಕರನ್ನು ಪರಿಚ ಯಿಸಿಕೊಂಡು …

Read More »

ರಮ್ಯಾ ಜತೆ ರಕ್ಷಿತ್​​ ಶೆಟ್ಟಿ ಸಿನಿಮಾ ಮಾಡೋದು ಪಕ್ಕಾ.. ಹೇಗಿತ್ತು ಸಿಂಪಲ್​ ಸ್ಟಾರ್​​ ರಿಯಾಕ್ಷನ್..?​​

ಸ್ಯಾಂಡಲ್​ವುಡ್​ ಪದ್ಮಾವತಿ ರಮ್ಯಾ ಕಂಬ್ಯಾಕ್​ಗಾಗಿ ಅದೇಷ್ಟೋ ಹೃದಯಗಳು ಕಾದು ಕುಂತಿವೆ. ಪೊಲಿಟಿಕಲ್ ಸಹವಾಸ ಸಾಕು, ಪ್ಲೀಸ್ ಸಿನಿಮಾ ಮಾಡಿ ಅಂತ ಅವರ ಫ್ಯಾನ್ಸ್ ರಿಕ್ವೆಸ್ಟ್ ಮೇಲೆ ರಿಕ್ವೆಸ್ಟ್ ಮಾಡ್ತಾ ಕನಸು ಕಾಣ್ತಾ ಇದ್ದಾರೆ. ಈಗ, ರಮ್ಯಾ ಫ್ಯಾನ್ಸ್​ಗೆ ನಿಮ್ಮ ನ್ಯೂಸ್​ಫಸ್ಟ್​ ಎಕ್ಸ್​ಕ್ಲೂಸಿವ್​ ಸಮಾಚಾರವೊಂದು ತಗೊಂಡು ಬಂದಿದೆ. ಸ್ಯಾಂಡವುಡ್​ ಪದ್ಮಾವತಿ, ಮೋಹಕತಾರೆ ರಮ್ಯಾ ತುಂಬಾ ಜನಕ್ಕೆ ಡ್ರೀಮ್ ಗರ್ಲ್. ಅವರೊಂದು ಕನಸು. ರಾಜಕೀಯಕ್ಕೆ ಹೋದ್ಮೇಲೆ ಅವರನ್ನ ತುಂಬಾ ಮಿಸ್ ಮಾಡಿಕೊಂಡಿರೋ ಅಭಿಮಾನಿಗಳು, …

Read More »

ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಹಲ್ಲೆ, ಶಿವಾಜಿ ಮೂರ್ತಿ ಭಗ್ನ

ಬೀದರ್: ರಾಜ್ಯದಲ್ಲಿ ನಡೆಯುತ್ತಿರುವ ಧರ್ಮ ದಂಗಲ್ ಮಧ್ಯೆ ಅನ್ಯ ಕೋಮಿನ ಗುಂಪೊಂದು ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ನೂರ್ ಖಾನ್ ಕಾಲೋನಿಯ ಜೈ ಭವಾನಿ ಪಾಸ್‍ಫುಡ್ ಹೋಟೆಲ್‍ನಲ್ಲಿ ನಡೆದಿದೆ. ಗೋ ರಕ್ಷಣೆ ಸೇರಿದಂತೆ ಹಿಂದೂ ಸಂಘಟನೆಯಲ್ಲಿ ಸಕ್ರಿಯವಾಗಿದ್ದ ಎಂಬ ಕಾರಣಕ್ಕೆ ಬಜರಂಗದಳದ ಕಾರ್ಯಕರ್ತನ ಮೇಲೆ ಗಂಭೀರವಾಗಿ ಅನ್ಯಕೋಮಿನ ಜನರು ಹಲ್ಲೆ ಮಾಡಿದ್ದಾರೆ. ಉದ್ದೇಶಪೂರ್ವಕವಾಗಿ ತಡರಾತ್ರಿ ಹೋಟೆಲ್‍ಗೆ ಬಂದು ಊಟದ ವಿಚಾರಕ್ಕೆ ಗಲಾಟೆ …

Read More »

ಬೀದರ್: ನಗರದ ಕೊಳಚೆ ನೀರಿನಿಂದ ಮಲಿನವಾದ ಭೂಮಿ; ತರಕಾರಿ ಬೆಳೆಯಲಾಗದೆ ಕಂಗಾಲಾದ ರೈತರು

ಬೀದರ್: ಐತಿಹಾಸಿಕ ಬೀದರ್ ಕೋಟೆಯೊಳಗೊಂದು ಪುಟ್ಟ ಊರಿದೆ. ಈ ಊರಲ್ಲಿರುವ ಇನ್ನೂರು ಎಕರೆಯಷ್ಟು ಜಮೀನಿನಲ್ಲಿ ರೈತರು ತರಕಾರಿ ಬೆಳೆಸುತ್ತಾ ನೆಮ್ಮದಿಯಿಂದಿದ್ದರು. ಇಲ್ಲಿ ಬೆಳೆಸುವ ಪುದಿನಾ, ಪಾಲಕ್ ಸೊಪ್ಪಿಗೆ ಮಾರುಕಟ್ಟೆಯಲ್ಲಿ ಭಾರೀ ಬೇಡಿಕೆಯಿತ್ತು. ಆದರೀಗ ಆ ರೈತರಿಗೆ ತರಕಾರಿ ಬೆಳೆಯೋಕೆ ಸಾಧ್ಯವಾಗುತ್ತಿಲ್ಲ ಯಾಕೆ ಅಂತೀರಾ ಈ ವರದಿ ನೋಡಿ. ನಗರದ ಗಲೀಜು ನೀರು ಗ್ರಾಮದ ಹೊಲಕ್ಕೆ ಬರುತ್ತಿದೆ. ಇದರಿಂದ ಇಲ್ಲಿರುವ ಬಾವಿಯ ನೀರು ಮಲಿನವಾಗುತ್ತಿದೆ. ಕುಡಿಯೋ ನೀರು ಸೇರಿ ಕೃಷಿಗೂ ಇದರಿಂದ …

Read More »