ಬೀದರ್: ಮಹಾಮಾರಿ ಡ್ರ್ಯಾಗನ್ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, ಜಿಲ್ಲೆಯಲ್ಲಿ ಇಂದು ಕೂಡ 5 ಕೊರೊನಾ ಪಾಸಿಟಿವ್ ದೃಢವಾಗಿದೆ. ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ 3, ಬೀದರ್ ತಾಲೂಕಿನಲ್ಲಿ 2 ಸೇರಿದಂತೆ ಒಟ್ಟು 5 ಜನ ವಲಸೆ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ. ಮುಂಬೈ ಕಂಟಕ ಜಿಲ್ಲೆಯನ್ನು ಬಿಟ್ಟು ಬಿಡದೆ ಕಾಡುತ್ತಿದೆ. ಇಂದು ಕೂಡಾ ಮುಂಬೈ ಕಂಟಕದಿಂದಲೇ 5 ಕೊರೊನಾ ಸೋಂಕು ದೃಢವಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 502ಕ್ಕೇರಿದೆ. ಜಿಲ್ಲೆಯ 502 …
Read More »ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಸಿಗ್ತಿಲ್ಲ ಡಯಾಲಿಸಿಸ್ ಚಿಕಿತ್ಸೆ….
ಬೀದರ್/ಚಿತ್ರದುರ್ಗ: ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲೇ ಅವ್ಯವಸ್ಥೆ ತಾಂಡವವಾಡುತ್ತಿದೆ. ಜೀವ ಉಳಿಸಿ ಅಂತ ಹೋದರೆ ಅದೊಂದು ಪ್ರಸಿದ್ಧ ಆಸ್ಪತ್ರೆಯಲ್ಲಿ ಅವ್ಯವಸ್ಥೆ ಎದ್ದು ಕಾಣುತ್ತಿದೆ. ಹೌದು. ಆರೋಗ್ಯ ಸಚಿವ ಶ್ರೀರಾಮುಲುರ ತವರು ಜಿಲ್ಲೆ ಚಿತ್ರದುರ್ಗದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಒಂದೆಡೆ ಖಾಲಿ ಖಾಲಿಯಾಗಿರುವ ಡಯಾಲಿಸಿಸ್ ವಾರ್ಡಿನ ಬೆಡ್ಗಳು, ಇನ್ನೊಂದೆಡೆ ಆಸ್ಪತ್ರೆ ಹೊರಗೆ ಡಯಾಲಿಸಿಸ್ ಚಿಕಿತ್ಸೆ ಸಿಗಲಾರದೇ ಕಂಗಾಲಾಗಿ ಕುಳಿತ ರೋಗಿಗಳು. ಕೊರೊನಾ ಮಧ್ಯೆ ಮುಖ್ಯವಾಗಿ ಸಿಗಬೇಕಿರುವ ಡಯಾಲಿಸಿಸ್ ಚಿಕಿತ್ಸೆ ಇಲ್ಲದೆ ರೋಗಿಗಳು ಪರದಾಡುತ್ತಿದ್ದಾರೆ. …
Read More »ಕೊರೊನಾ ಸೋಂಕಿತರಿಗೆ ಚಿಕಿತ್ಸೆ, ಊಟ ಇಲ್ಲ- ಸೌಲಭ್ಯ ನೀಡದೇ ನಿರ್ಲಕ್ಷ್ಯ ಮಾಡಿತಾ ಬ್ರಿಮ್ಸ್?
ಬೀದರ್: ಕೋವಿಡ್ 19 ನಿರ್ವಹಣೆಗಾಗಿ ಸರ್ಕಾರ ಕೋಟಿ ಕೋಟಿ ಖರ್ಚು ಮಾಡ್ತಿದೆ. ಆದರೆ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಹಾಗೂ ಸೌಕರ್ಯಗಳು ಸಿಗ್ತಿದ್ಯಾ ಅನ್ನೋ ಪ್ರಶ್ನೆ ಮೂಡಲು ಗಡಿ ಜಿಲ್ಲೆಯ ಸೋಂಕಿತರ ಆಕ್ರೋಶವೇ ಕಾರಣವಾಗಿದೆ ಹೌದು. ಮುಂಬೈ ಕಂಟಕದಿಂದ ಬೀದರ್ ಜಿಲ್ಲೆಯಲ್ಲಿ ಅತಿ ಹೆಚ್ಚು ಕೇಸ್ ದಾಖಲಾಗ್ತಿದ್ದು ಸೋಂಕಿತರ ಸಂಖ್ಯೆ ತ್ರಿಶತಕದತ್ತ ಬಂದು ನಿಂತಿದೆ. ಹೀಗಿದ್ದರೂ ಬ್ರಿಮ್ಸ್ ಆಸ್ಪತ್ರೆ ಕೋವಿಡ್ ವಿಶೇಷ ವಾರ್ಡಿನಲ್ಲಿರೋ 124 ಸೋಂಕಿತರಿಗೆ ಯಾವುದೇ ಸೌಲಭ್ಯ ನೀಡದೇ ನಿರ್ಲಕ್ಷ್ಯ …
Read More »ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ……..
ಬೆಂಗಳೂರು: ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು. ಬೀದರ್ ನಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ 82 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು 9 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ತುಮಕೂರು 2, ವಿಜಯಪುರದಲ್ಲಿ 2, ಬೆಳಗಾವಿ, ಬೆಂಗಳೂರು, ಬಾಗಲಕೋಟೆ, ಚಿಕ್ಕಬಳ್ಳಾಪುರದದಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ. …
Read More »ಮಹಿಳೆಯರಿಗೆ ಸಲಹೆಯೊಂದನ್ನು ನೀಡಿದ ನಟಿ ಹರಿಪ್ರಿಯಾ…….
ಬೆಂಗಳೂರು: ಸಿನಿಮಾದಲ್ಲಿ ಬರುವ ಭಯಾನಕ ವಿಲನ್ ಕೂಡ ಜಿರಳೆಯಷ್ಟು ಭಯ ಹುಟ್ಟಿಸುವುದಿಲ್ಲ ಎಂದು ಚಂದನವದ ನಟಿ ಹರಿಪ್ರಿಯಾ ಹೇಳಿದ್ದಾರೆ. ಲಾಕ್ಡೌನ್ನಿಂದ ಮನೆಯಲ್ಲೇ ಕುಳಿತಿರುವ ನಟ-ನಟಿಯರು ಸಾಮಾಜಿಕ ಜಾಲತಾಣದಲ್ಲಿ ಮುಳುಗಿದ್ದಾರೆ. ಅಂತೆಯೇ ನಟಿ ಹರಿಪ್ರಿಯಾ ಕೂಡ ತಮ್ಮ ಬ್ಲಾಗ್ನಲ್ಲಿ ಆಗಾಗ ತಮ್ಮ ಅನುಭವದ ಕಥೆಯನ್ನು ಬರೆದು ಪೋಸ್ಟ್ ಮಾಡುತ್ತಿರುತ್ತಾರೆ. ಈಗ ಜಿರಳೆ ಕಥೆಯೊಂದು ಬರೆದು ತಮ್ಮ ಲೇಡಿ ಫ್ಯಾನ್ಸ್ ಗೆ ಸಲಹೆಯೊಂದನ್ನು ಹೇಳಿದ್ದಾರೆ ಈ ವಿಚಾರವಾಗಿ ತಮ್ಮ ಬ್ಲಾಗ್ನಲ್ಲಿ ತಮ್ಮ ಅನುಭವವನ್ನು …
Read More »ಬೀದರ್:ಜಮಾತ್ಗೆ ಹೋಗಿ ಬಂದಿದ್ದ 3 ಮಂದಿ ಡಿಸ್ಚಾರ್ಜ್……
ಬೀದರ್: ಕಳೆದ 23 ದಿನಗಳಿಂದ ಬೀದರ್ ಜಿಲ್ಲೆಯ ಹುಮನಾಬಾದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿದ 3 ಜನ ಕೊರೊನಾ ಶಂಕಿತರ ವರದಿ ನೆಗೆಟಿವ್ ಬಂದ ಹಿನ್ನೆಲೆ ಇಂದು ಮಧ್ಯಾಹ್ನ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ದೆಹಲಿ ತಬ್ಲಿಘಿ ಜಮಾತ್ಗೆ ಹೋಗಿ ಬಂದಿದ್ದ ದುಬಲಗುಂಡಿ ಗ್ರಾಮದ ಇಬ್ಬರು ಹಾಗೂ ಹಳ್ಳಿಖೇಡ ಬಿ ಪಟ್ಟಣದ ಒಬ್ಬರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿ, ಅಂಬುಲೆನ್ಸ್ ಮೂಲಕ ಅವರ ಊರುಗಳಿಗೆ ಕಳುಹಿಸಲಾಯಿತು. ಈ ಸಂದರ್ಭದಲ್ಲಿ ಸಿಬ್ಬಂದಿಗಳು ಚಪ್ಪಾಳೆ ತಟ್ಟಿ …
Read More »ಬೀದರ್: ಜಮಾತ್ನಿಂದ ಬಂದವರ ತಲಾಶ್ಗೆ ಇಳಿದ ವೈದ್ಯರು – ಮಾಹಿತಿ ನೀಡಲು ನಕಾರ
ಬೀದರ್: ಮಹಾಮಾರಿ ಕೊರೊನಾಗೆ ಈಗಾಗಾಲೇ ವಿಶ್ವವೇ ತಲ್ಲಣವಾಗಿದ್ದು, ದೇಶದಲ್ಲಿ ಕೂಡಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ಗಡಿ ಜಿಲ್ಲೆ ಬೀದರ್ ನಿಂದ ಜಮಾತ್ಗೆ 28 ಜನ ಹೋಗಿದ್ದಾರೆ ಎಂದು ಮೊದಲು ಮಾಹಿತಿ ಸಿಕ್ಕಿತ್ತು. ಆದರೆ ಈಗ 25 ಜನರಲ್ಲ ಈ ಸಂಖ್ಯೆ ಬಹಳ ಜಾಸ್ತಿಯಿದೆ ಎನ್ನುವ ವಿಚಾರ ಜಿಲ್ಲಾಡಳಿತಕ್ಕೆ ಸಿಕ್ಕಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ವಿದೇಶದಿಂದ ಹಾಗೂ ದೆಹಲಿಯ ಜಮಾತ್ನಿಂದ ಬಂದವರ ತಲಾಶ್ಗೆ ವೈದ್ಯರ ಹಾಗೂ ಆಶಾ ಕಾರ್ಯಕರ್ತೆಯರು ಫೀಲ್ಡಿಗೆ …
Read More »ದೆಹಲಿ ಜಮಾತ್ನಿಂದ ಬಂದಿದ್ದ 17 ಜನರ ವರದಿ ನೆಗೆಟಿವ್: ಬೀದರ್ ಜಿಲ್ಲಾಧಿಕಾರಿ
ಬೀದರ್: ದೆಹಲಿ ಜಮಾತ್ನಿಂದ ಬಂದಿದ್ದ 17 ಜನರ ಕೊರೊನಾ ವೈದ್ಯಕೀಯ ವರದಿ ನೆಗಟಿವ್ ಬಂದಿದೆ ಎಂದು ಬೀದರ್ ಜಿಲ್ಲಾಧಿಕಾರಿ ಹೆಚ್.ಆರ್.ಮಹಾದೇವ್ ಕೊರೊನಾ ಮಹಾಮಾರಿಗೆ ಗಡಿ ಜಿಲ್ಲೆ ಬೀದರ್ ತತ್ತರಿಸಿ ಹೋಗಿದೆ. ಜಮಾತ್ ಧಾರ್ಮಿಕ ಕಾರ್ಯಕ್ರಮ ಕಂಟವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿ, ಜಮಾತ್ ಗೆ ಹೋಗಿದ್ದ ಬೀದರ್ ಮೂಲದ 28 ಜನರಲ್ಲಿ 10 ಜನರಿಗೆ ಈಗಾಗಾಲೇ ಕೊರೊನಾ ಸೋಂಕು ಧೃಡ ಪಟ್ಟಿದೆ. ಅನುಮಾವಿದ್ದ ಕಾರಣ ಇನ್ನೊಬ್ಬರ ವರದಿ ಬಾಕಿಯಿದೆ. …
Read More »ಬೀದರ್:ಲಾಕ್ಡೌನ್ ಉಲ್ಲಂಘನೆ – 4 ಪ್ರಕರಣ ದಾಖಲು, 213 ವಾಹನಗಳು ಸೀಜ್
ಬೀದರ್: ಭಾರತದಲ್ಲಿ ಕೊರೊನಾ ವೈರಸ್ ಸೋಂಕು ತಡೆಯಲು 21 ದಿನಗಳ ಕಾಲ ಲಾಕ್ಡೌನ್ ಆಗಿದೆ. ಇದೀಗ ಲಾಕ್ಡೌನ್ ನಿಯಮವನ್ನು ಉಲ್ಲಂಘಿಸಿ ಮನೆಯಿಂದ ಹೊರಗೆ ಬಂದು ಓಡಾಡುತ್ತಿದ್ದವರ ಸುಮಾರು 213 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊರೊನಾ ವೈರಸ್ ಸೋಂಕು ಇತರರಿಗೆ ಹರಡದಂತೆ ತಡೆಯಲು ಹೋಮ್ ಕ್ವಾರಂಟೈನ್ನಲ್ಲಿ ಇರಬೇಕು ಎಂದು ಆದೇಶ ಹೊರಡಿಸಲಾಗಿದೆ. ಆದರೆ ಕಲಂ 144 ಸಿಆರ್ಪಿಸಿ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಜಿಲ್ಲೆಯಲ್ಲಿ 4 ಪ್ರಕರಣಗಳು ದಾಖಲಾಗಿವೆ. ಕೊರೊನಾ ವೈರಸ್ ಹರಡದಂತೆ …
Read More »ಕೊರೊನಾ ತುರ್ತು ಪರಿಸ್ಥಿತಿಯನ್ನೇ ಬಂಡವಾಳ ಮಾಡ್ಕೊಂಡ್ರೆ ಜೈಲಿಗೆ ಕಳಿಸ್ತೀವಿ’
ಬೀದರ್: ಕೊರೊನಾ ತುರ್ತು ಪರಿಸ್ಥಿತಿಯನ್ನು ಉಪಯೋಗಿಸಿಕೊಂಡು ಲಾಭ ಮಾಡಲು ಹೊರಟರೆ ಮುಲಾಜಿಲ್ಲದೆ ಜೈಲಿಗೆ ಕಳುಹಿಸುವುದಾಗಿ ಜಿಲ್ಲಾಧಿಕಾರಿ ಫಾರ್ಮಸಿ ಅಂಗಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಎಚ್.ಆರ್ ಮಹಾದೇವ, ವಿಶ್ವದಾದ್ಯಂತ ಕೊರೊನಾ ವೃಸ್ ಭೀತಿ ಹೆಚ್ಚಾಗುತ್ತಿದೆ. ಇದರಿಂದ ತಪ್ಪಿಸಿಕೊಳ್ಳಬೇಕು ಅಂತ ಎಲ್ಲರೂ ಮಾಸ್ಕ್ ಮೊರೆ ಹೋಗುತ್ತಿದ್ದಾರೆ. ಹೀಗಾಗಿ ಕೆಲ ಫಾರ್ಮಸಿ ಅಂಗಡಿಗಳು ಮಾಸ್ಕ್ ಗೆ ದುಪ್ಪಟ್ಟು ಹಣ ಪಡೆಯುತ್ತಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ. …
Read More »
Laxmi News 24×7