ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ₹ 25 ಕೋಟಿ ವಂಚನೆ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅರುಣಾಕುಮಾರಿ ಮಾಧ್ಯಮಗಳಿಗೆ ವಿಡಿಯೋ ಒಂದನ್ನ ಹರಿಬಿಟ್ಟಿದ್ದಾರೆ. ನನ್ನ ಪಾಡಿಗೆ ನನಗೆ ಬದುಕಲು ಬಿಡಿ ಈ ಪ್ರಕರಣದಿಂದ ನನಗೆ, ಕುಟುಂಬಕ್ಕೆ ನೋವಾಗಿದೆ. ದಯವಿಟ್ಟು ನನ್ನ ಪಾಡಿಗೆ ನಾನು ಬದುಕಲು ಬಿಡಿ. ಇವೆಲ್ಲಾ ಬೆಳವಣಿಗೆಯಿಂದ ಸಾಯಬೇಕು ಎನಿಸುತ್ತಿದೆ. ನಾನು ಬಹಳ ನೋವಿನಿಂದ ಮಾತನಾಡುತ್ತಿದ್ದೇನೆ. ಮಾರ್ಚ್ 30ರಿಂದ ನನಗೂ ಅವರಿಗೂ ಸಂಪರ್ಕವಿಲ್ಲ. ಪೊಲೀಸರು ತನಿಖೆ …
Read More »ಕೊರೊನಾ ಪಾಸಿಟಿವ್ ಬಂತೆಂದು ಎಸ್ಕೇಪ್ ಆಗಿದ್ದ 96,000 ಜನರು ಪತ್ತೆ.. 400 ಮಂದಿ ಈಗಲೂ ಮಿಸ್ಸಿಂಗ್
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದ್ರೆ, ಮತ್ತೊಂದೆಡೆ ಸೋಂಕಿತರು ನಾಪತ್ತೆಯಾಗ್ತಿದ್ರು. ಇದು ಪೊಲೀಸರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿತ್ತು. ಮೊದಲನೇ ಅಲೆಗಿಂತ ಎರಡನೇ ಅಲೆಯಲ್ಲೇ ಹೆಚ್ಚು ಮಂದಿ ನಾಪತ್ತೆಯಾಗಿದ್ದರು. ಈ ನಡುವೆ ಪೊಲೀಸ್ರಿಗೆ ಸಿಕ್ಕವರು ಎಷ್ಟು ಮಂದಿ ಗೊತ್ತಾ? ಕೊರೊನಾ.. ಹೆಸ್ರು ಕೇಳಿದ್ರೆನೆ ಒಂದು ಸಮಯದಲ್ಲಿ ಎಲ್ಲರೂ ಬೆಚ್ಚಿ ಬೀಳ್ತಿದ್ರು. ಇನ್ನು ತಮಗೆ ಹೆಮ್ಮಾರಿ ತಗುಲಿದೆ ಅಂದಾಕ್ಷಣ ಅದೆಷ್ಟೋ ಸೋಂಕಿತರು ಹೆದರಿ ಹೇಳದೆ ಕೇಳದೆ ನಾಪತ್ತೆಯಾಗ್ಬಿಟ್ಟಿದ್ರು. ತಪ್ಪಿಸಿಕೊಂಡವರ …
Read More »ಹೋರಾಟ ಮಾಡೋಹಾಗಿದ್ರೆ ಗಂಡಸ್ತನದಿಂದ ಹೋರಾಡೋಣ: ರಾಕ್ಲೈನ್ ವೆಂಕಟೇಶ್
ಬೆಂಗಳೂರು: ರಾಕ್ಲೈನ್ ವೆಂಕಟೇಶ್ ಮನೆ ಮೇಲೆ ಕಲ್ಲು ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವತಃ ರಾಕ್ಲೈನ್ ವೆಂಕಟೇಶ್ ಹೇಳಿಕೆ ಕೊಟ್ಟಿದ್ದಾರೆ. ಇಂತಹ ಟೈಮ್ನಲ್ಲಿ ನನ್ನ ಎದುರಿಸಬೇಕು ಅಂದ್ಕೊಂಡ್ರೆ ಅದು ಆಗಲ್ಲ, ಯಾರೋ ದುಷ್ಕರ್ಮಿಗಳು ಬಂದು ನಮ್ಮನೆಗೆ ಕಲ್ಲು ಎಸೆದಿದ್ದಾರೆ. ಏನೇ ಆದ್ರೂ ನಾನು ಅಂಬರೀಶ್ ಕುಟುಂಬಕ್ಕೆ ಸಪೋರ್ಟ್ ಮಾಡ್ತೀನಿ. ಈ ರೀತಿ ಗಲಾಟೆಗಳನ್ನ ಮಾಡಿಸಿ ನನ್ನ ಎದುರಿಸ್ತೀನಿ ಅಂದ್ಕೊಂಡ್ರೆ ಅದು ಆಗಲ್ಲ. ಅಂಬರೀಶ್ ಕುಟುಂಬದ ಹಿಂದೆ ನಾನು ಯಾವಾಗ್ಲೂ ಇರ್ತೇನೆ. ಅಂಬರೀಶ್ …
Read More »ಕೋವಿಡ್:ರಾಜ್ಯದಲ್ಲಿಂದು 3204 ಸೋಂಕಿತರು ಗುಣಮುಖ;1386 ಹೊಸ ಪ್ರಕರಣ ಪತ್ತೆ
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿ( ದಿನಾಂಕ: 11.07.2021, 00:00 ರಿಂದ 23:59 ರವರೆಗೆ)ಯಲ್ಲಿ ಹೊಸದಾಗಿ 1386 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ ಹಾಗೂ 61 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ( ಜುಲೈ 12) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ. ಮೇಲೆ ತಿಳಿಸಿದ ಕಾಲಾವಧಿಯಲ್ಲಿ 3204 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ …
Read More »ಗುರು ರಾಘವೇಂದ್ರ ಬ್ಯಾಂಕ್ ವಂಚನೆ: ಬಿಜೆಪಿ ಮಾಜಿ ಎಂಎಲ್ಸಿ ಅಶ್ವಥ್ ನಾರಾಯಣ್ 12 ಕೋಟಿ ಸಾಲ ಕಟ್ಟಿಲ್ಲ -ಠೇವಣಿದಾರರ ಅಳಲು
ಬೆಂಗಳೂರು: ನಗರದ ಬಸವನಗುಡಿಯ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ನ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಡಾ ಶಂಕರ ಗುಹಾ ದ್ವಾರಕನಾಥ್ ಬೆಳ್ಳೂರು ಪತ್ರಿಕಾಗೋಷ್ಟಿ ನಡೆಸಿದ್ರು. ಈ ಬ್ಯಾಂಕ್ ಹಗರಣ ಬೆಳಕಿಗೆ ಬಂದು ಎರಡು ವರ್ಷಗಳಾಗ್ತಾ ಬಂತು. ಇದನ್ನ ಸಿಐಡಿ ತನಿಖೆಗೆ ವಹಿಸಲಾಗಿದೆ. ಆದರೆ ಏನು ತನಿಖೆ ಆಗ್ತಾ ಇದೆ ಅನ್ನೊದು ಗೊತ್ತಿಲ್ಲ. ವಾಸ್ತವದಲ್ಲಿ ಸಿಐಡಿಗೆ ಇಷ್ಟು ದೊಡ್ಡ ಹಗರಣ ತನಿಖೆ ಮಾಡಲು ಸಾಮರ್ಥ್ಯ ಇಲ್ಲ. ಈಗಾಗಲೇ ಸುಮಾರು ಠೇವಣಿದಾರರು ಮೃತರಾಗಿದ್ದಾರೆ ಎಂದು …
Read More »ರಾಜ್ಯದ ಹಲವೆಡೆ ಭಾರೀ ಮಳೆ- ಎಲ್ಲೆಲ್ಲಿ ಏನೇನಾಗಿದೆ..?
ಬೆಂಗಳೂರು: ರಾಜ್ಯದ ಹಲವೆಡೆ ವರುಣರಾಯ ಅಬ್ಬರಿಸಿದ್ದಾನೆ. ಕೊಡಗು ಜಿಲ್ಲೆಯಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯ ಮುನ್ಸೂಚನೆ ಇದೆ. ಮುಂದಿನ 24 ಗಂಟೆಗಳಲ್ಲಿ 204 ಮಿಲಿ ಮೀಟರ್ಗೂ ಹೆಚ್ಚು ಮಳೆ ಬೀಳುವ ಸಂಭವ ಇದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಬೆಟ್ಟ-ಗುಡ್ಡ, ನದಿ ತೀರದ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಆದೇಶಿಸಿದೆ. ಅನಾಹುತ ತಪ್ಪಿಸಲು ಎನ್ಡಿಆರ್ಎಫ್ ತಂಡ ನಿಯೋಜಿಸಲಾಗಿದೆ. …
Read More »ಸಿಲಿಕಾನ್ ಸಿಟಿಯಲ್ಲಿ ಸೂಟುಬೂಟಿನ ಕಳ್ಳ – ಸಭ್ಯಸ್ಥನ ವೇಷದಲ್ಲಿ ಬಂದು ಕಳ್ಳತನ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳ್ಳರ ಹಾವಳಿ ಹೆಚ್ಚಾಗುತ್ತಿದೆ. ಹಗಲು ಹೊತ್ತಲ್ಲೇ ರಾಜಾರೋಷವಾಗಿ ಬಂದು ಕಳ್ಳತನ ಮಾಡುತ್ತಾರೆ. ಅಪಾರ್ಟ್ ಮೆಂಟ್ ಒಳಗೆ ನುಗ್ಗಿ ಕದ್ದೊಯ್ದರೂ ಹೇಳೋರಿಲ್ಲ ಕೇಳೋರಿಲ್ಲ ಅನ್ನೋವಂತಾಗಿದೆ. ಹೌದು. ಹಗಲು ಹೊತ್ತಲ್ಲಿಯೇ ಮನಗೆ ನುಗ್ಗಿ ಕಳ್ಳನೊಬ್ಬ ತನ್ನ ಕೈಚಳಕ ತೋರಿರುವುದು ಸಿಸಿಟಿವಿಯಲ್ಲಿ ಬಯಲಾಗಿದೆ. ಈ ಘಟನೆ ಗೋವಿಂದಪುರ ಠಾಣೆ ವ್ಯಾಪ್ತಿಯ ವೀರನಪಾಳ್ಯದಲ್ಲಿ ನಡೆದಿದೆ. ವೀರನಪಾಳ್ಯದಲ್ಲಿರುವ ಸೋನಾ ಟವರ್ ಅಪಾರ್ಟ್ ಮೆಂಟ್ ನ ಮೊದಲನೇ ಮಹಡಿಯಲ್ಲಿ ಈ ಕಳ್ಳತನ ನಡೆದಿದೆ. ಖದೀಮ …
Read More »ಕೆಆರ್ಎಸ್ ವಾರ್ ಕುರಿತಂತೆ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ
ರಾಜ್ಯದಲ್ಲಿ ಕನ್ನಂಬಾಡಿ ಕಾಳಗ ದಿನಕ್ಕೊಂದು ಆಯಾಮವನ್ನ ಪಡೆಯುತ್ತಿದೆ. ಡ್ಯಾಂ ಸುರಕ್ಷತೆ ವಿಚಾರವಾಗಿ ಶುರುವಾದ ವಿವಾದ ಇದೀಗ ವೈಯಕ್ತಿಕ ಹೇಳಿಕೆ ನೀಡುವವರೆಗೂ ಬಂದು ನಿಂತಿದೆ. ಇಂದು ಬೆಂಗಳೂರಿನಲ್ಲಿ ಕೆಆರ್ಎಸ್ ಡ್ಯಾಂ ವಿಚಾರವಾಗಿ ಸಂಸದೆ ಸುಮಲತಾ ಹಾಗೂ ಹೆಚ್ಡಿಕೆ ನಡುವಿನ ಸಂಘರ್ಷದ ವಿಚಾರವಾಗಿ ಮಾತನಾಡಿದ ಗೃಹ ಸಚಿವ ಬೊಮ್ಮಾಯಿ ನಮ್ಮ ಡ್ಯಾಂ ಸುರಕ್ಷಿತವಾಗಿದೆಯಾ ಅನ್ನೋದಷ್ಟೇ ಮುಖ್ಯ ಎಂದು ಹೇಳಿದ್ರು. ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನಡುವೆ ನಡೆಯುತ್ತಿರುವ …
Read More »ಕಾರ್ಯಕರ್ತನಿಗೆ ಹೊಡೆದ ಡಿಕೆಶಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆಶಿವಕುಮಾರ್ ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ..? ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ ಎಂದು ರಾಜ್ಯ ಬಿಜಪಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದೆ. ಡಿ.ಕೆ ಶಿವಕುಮಾರ್ ಮಾದೇಗೌಡರ ಆರೋಗ್ಯ ವಿಚಾರಿಸಲು ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿಗೆ ತೆರಳಿದ್ದರು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಹೆಗಲ ಮೇಲೆ ಕೈ ಹಾಕಿ ಫೋಟೋ ತೆಗೆದುಕೊಳ್ಳಲು …
Read More »ಬೆಂಗಳೂರಲ್ಲಿ ಶೇ. 70ರಷ್ಟು ಸೋಂಕಿತರಿಗೆ ರೂಪಾಂತರಿ ವೈರಸ್, ಅಲರ್ಟ್ ಆದ ಬಿಬಿಎಂಪಿ
ಬೆಂಗಳೂರು: ನಗರದಲ್ಲಿ ದಿನೇ ದಿನೇ ರೂಪಾಂತರಿ ಕೊರೊನಾ ವೈರಸ್ ಹಾವಳಿ ಹೆಚ್ಚಾಗ್ತಿದೆ. ಲ್ಯಾಬ್ಗೆ ಕಳುಹಿಸಿದ ಬಹುತೇಕ ಸ್ಯಾಂಪಲ್ಗಳೆಲ್ಲವೂ ರೂಪಾಂತರಿ ವೈರಸ್ ಅಂತ ದೃಢಪಟ್ಟಿದೆ. ನಗರದ ಶೇಕಡಾ 70ರಷ್ಟು ಸೋಂಕಿತರಿಗೆ ರೂಪಂತರಿ ವೈರಸ್ ತಗುಲಿರೋದು ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಸಾಂಕ್ರಾಮಿಕ ನಿಯಂತ್ರಣಕ್ಕೆ ಬೆಂಗಳೂರು ಮಹಾನಗರ ಪಾಲಿಕೆ ಫುಲ್ ಆಯಕ್ಟೀವ್ ಆಗಿದ್ದು, ಜಿನೋಮಿಕ್ ಸೀಕ್ವೆನ್ಸಿಂಗ್ ಟೆಸ್ಟ್ ಹೆಚ್ಚಳ ಮಾಡಲು ನಿರ್ಧರಿಸಿದೆ. ಈ ಹಿಂದೆ ಪಾಸಿಟಿವ್ ಬಂದ ಶೇಕಡಾ 5ರಷ್ಟು ಸ್ಯಾಂಪಲ್ಸ್ ಮಾತ್ರ …
Read More »