Breaking News

ಬೆಂಗಳೂರು

ಕಾಂಗ್ರೆಸ್‌ ಸೇರಲು ಸಾ.ರಾ. ಗೋವಿಂದು ಒಲವು?

ಬೆಂಗಳೂರು: ಚಿತ್ರ ನಿರ್ಮಾಪಕ ಸಾ.ರಾ. ಗೋವಿಂದು ಕಾಂಗ್ರೆಸ್‌ ಸೇರಲು ಉತ್ಸುಕರಾಗಿದ್ದು, ಪಕ್ಷದ ಮುಖಂಡರನ್ನು ಭೇಟಿಯಾಗಿ ಸಮಾಲೋಚನೆ ನಡೆಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರನ್ನು ಶುಕ್ರವಾರ ಭೇಟಿ ಮಾಡಿ ಕೆಲಕಾಲ ಚರ್ಚೆ ನಡೆಸಿದ್ದಾರೆ. ಇದೇ 17ರಂದು ಬಸವೇಶ್ವರನಗರದಲ್ಲಿ ಪಡಿತರ ಕಿಟ್‌ ವಿತರಣೆ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ. ಅದರಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲು ತೆರಳಿದ್ದ ಗೋವಿಂದು, ಪಕ್ಷ ಸೇರ್ಪಡೆ ಕುರಿತೂ ಪೂರ್ವಭಾವಿ ಚರ್ಚೆ ನಡೆಸಿದ್ದಾರೆ. ಶೀಘ್ರದಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ …

Read More »

ಜಯಂತ ಕಾಯ್ಕಿಣಿ, ಆರತಿಗೆ ‘ಕಸಾಪ ದತ್ತಿ ಪ್ರಶಸ್ತಿ’

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ನೀಡುವ ‘ಮನೋಹರ ಪಾರ್ಥಸಾರಥಿ ಮನುಶ್ರೀ ದತ್ತಿ ಪ್ರಶಸ್ತಿ’ಗೆ ಸಾಹಿತಿ ಜಯಂತ ಕಾಯ್ಕಿಣಿ ಹಾಗೂ ‘ಎ. ಪಂಕಜ ಸಾಹಿತ್ಯ ಪ್ರಶಸ್ತಿ’ಗೆ ಲೇಖಕಿ ಎಚ್‌.ಎನ್. ಆರತಿ ಆಯ್ಕೆಯಾಗಿದ್ದಾರೆ. ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಶುಕ್ರವಾರ ಈ ಆಯ್ಕೆಗಳು ನಡೆದಿವೆ. ಈ ಪ್ರಶಸ್ತಿಗಳು ತಲಾ ₹ 10 ಸಾವಿರ ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿವೆ ಎಂದು ಗೌರವ ಕಾರ್ಯದರ್ಶಿ ಕೆ. ರಾಜಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More »

ಕೋವಿಡ್: ಬಾಗಲಕೋಟೆಯಲ್ಲಿ ಶೂನ್ಯ ಪ್ರಕರಣ; ರಾಜ್ಯದಲ್ಲಿಂದು 3045 ಸೋಂಕಿತರು ಗುಣಮುಖ

ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿ ( ದಿನಾಂಕ:08.07.2021,00:00 ರಿಂದ 23:59 ರವರೆಗೆ) ಯಲ್ಲಿ 2290 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ ಹಾಗೂ 68 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು (ಜುಲೈ 09) ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ 3045 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಇದುವರೆಗೆ ರಾಜ್ಯದಲ್ಲಿ ಸೋಂಕಿನಿಂದ ಗುಣಮುಖರಾದವರ …

Read More »

ದಾರಿಯಲ್ಲಿ ಹೋಗುವ ದಾಸಪ್ಪ ಸಿಎಂ ಆಗಿದ್ದರನೂ ಇಂತಹ ಕೆಲಸಗಳನ್ನ ಮಾಡಿಯೇ ಮಾಡುತ್ತಾರೆ : ಕಿಡಿಕಾರಿದ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್

ಬೆಂಗಳೂರು: ದಿವಂಗತ ರೆಬಲ್ ಸ್ಟಾರ್​ ಅಂಬರೀಶ್ ವಿರುದ್ಧ ಮಾಜಿ ಸಿಎಂ ಎಚ್.​​ಡಿ.ಕುಮಾರಸ್ವಾಮಿ ಹೇಳಿಕೆಗಳಿಗೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಅಂಬರೀಶ್ ಅಣ್ಣನ ಬಗ್ಗೆ ಯಾರು ಮಾತನಾಡಿಲ್ಲ ಹೇಳಿ? ದಾರಿಯಲ್ಲಿ ಹೋಗುವ ದಾಸಪ್ಪ ಸಿಎಂ ಆಗಿದ್ದರನೂ ಇಂತಹ ಕೆಲಸಗಳನ್ನ ಮಾಡಿಯೇ ಮಾಡುತ್ತಾರೆ. ಸರ್ಕಾರದ ಗೌರವದೊಂದಿಗೆ ಕಳುಹಿಸಿಕೊಟ್ಟಿದ್ದೀರಿ ಎಂದು ಹೇಳ್ತೀರಿ. ಮೊನ್ನೆ ಸಂಚಾರಿ ವಿಜಯ್ ಮೃತಪಟ್ಟಾಗಲೂ ಸರ್ಕಾರಿ ಗೌರವದಿಂದ ಅಂತ್ಯಕ್ರಿಯೆ ಮಾಡಲಾಗಿದೆ. ನೀವು ಸ್ವಂತವಾಗಿ ಏನು …

Read More »

ಕೋವಿಡ್: ಮೃತ ಪತ್ರಕರ್ತರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ

ಬೆಂಗಳೂರು: ಕೋವಿಡ್ 19 ಸೋಂಕಿಗೆ ಸಿಲುಕಿ ಸಾವನ್ನಪ್ಪಿದ ಇಬ್ಬರು ಪತ್ರಕರ್ತರ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂ.ಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೋವಿಡ್ ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಿತ್ತು. ಇದೀಗ ಮನವಿ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪರಿಹಾರವನ್ನು ಮಂಜೂರು ಮಾಡಿದ್ದಾರೆ. ಕಲಬುರ್ಗಿ ಜಿಲ್ಲೆಯ ಸಂಯುಕ್ತ ಕರ್ನಾಟಕ ಪತ್ರಿಕೆಯ ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ ಮತ್ತು ಕೊಡಗು …

Read More »

ಜಲಾಶಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆದರೆ ಕ್ರಮ ಕೈಗೊಳ್ಳಬೇಕು: ಎಂ.ಬಿ.ಪಾಟೀಲ್

ಬೆಂಗಳೂರು: ಯಾವುದೇ ಆಣೆಕಟ್ಟು ಸುತ್ತಮುತ್ತ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯಬಾರದು. ಕೆಆರ್ ಎಸ್ ಪುರಾತನ ಜಲಾಶಯ. ಜಲಾಶಯದ ಸುರಕ್ಷಿತ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ಸುದ್ದಗಾರರೊಂದಿಗೆ ಅವರು ಮಾತನಾಡಿದರು. ಅಂಬರೀಶ್ ಕಾಲದಲ್ಲೇ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು ಎಂಬ ಜೆಡಿಎಸ್ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅಂಬರೀಶ್ ನನ್ನ …

Read More »

ಎಪಿಎಂಸಿಗಳಿಗೆ ₹ 1 ಲಕ್ಷ ಕೋಟಿ ವರೆಗೆ ಆರ್ಥಿಕ ನೆರವು: ತೋಮರ್

ನವದೆಹಲಿ: ನಿಯಂತ್ರಿತ ಮಾರುಕಟ್ಟೆಗಳ ಸಾಮರ್ಥ್ಯ ವೃದ್ಧಿ ಮತ್ತು ರೈತರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವುದಕ್ಕಾಗಿ ಕೃಷಿ ಮೂಲಸೌಕರ್ಯ ನಿಧಿಯಿಂದ (ಎಐಎಫ್‌) ₹ 1 ಲಕ್ಷ ಕೋಟಿ ವರೆಗೆ ಆರ್ಥಿಕ ನೆರವು ನೀಡಲಾಗುವುದು. ಕೃಷಿ ಉತ್ಪಾದನಾ ಮಾರುಕಟ್ಟೆ ಸಮಿತಿ (ಎಪಿಎಂಸಿ) ಮಾರುಕಟ್ಟೆಗಳು ನೆರವು ಪಡೆಯಲು ಅರ್ಹವಾಗಲಿವೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್‌ ತೋಮರ್‌ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರದ ಯೋಜನೆಗೆ ಅನುಮೋದನೆ …

Read More »

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಸಲ್ಲಿಕೆಯಾಗಿದ್ದ ಖಾಸಗಿ ದೂರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ ವಜಾಗೊಳಿಸಿದೆ. ಖಾಸಗಿ‌ ಕಂಪನಿಯೊಂದರಿಂದ ₹12 ಕೋಟಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಯಡಿಯೂರಪ್ಪ, ಪುತ್ರ ವಿಜಯೇಂದ್ರ, ಅಳಿಯ ಸಂಜಯ್ ಸೇರಿ 9 ಜನರ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.‌ಅಬ್ರಾಹಂ ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಯಂತ್ ಕುಮಾರ್ ಅವರು ಕಾಯ್ದಿರಿಸಿದ್ದ ಆದೇಶವನ್ನು ಗುರುವಾರ ಪ್ರಕಟಿಸಿದರು‌. ಅಶ್ವಿನಿ ವೈಷ್ಣವ್ ಪ್ರತಿಭಾನ್ವಿತರಾಗಿದ್ದರು: ನೂತನ ರೈಲ್ವೆ ಸಚಿವರ ಕಾಲೇಜು ಸಹಪಾಠಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೂ ಅಬ್ರಾಹಂ ಮನವಿ ಸಲ್ಲಿಸಿದ್ದರು. ಅನುಮತಿ ನೀಡಲು ರಾಜ್ಯಪಾಲರು ನಿರಾಕರಿಸಿದ್ದರು‌. ಬಳಿಕ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಸಲ್ಲಿಸಲಾಗಿದ್ದ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಸಲ್ಲಿಸಿದ್ದ ದೂರನ್ನು ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಿದೆ. ಮೂಲಗಳ ಪ್ರಕಾರ ಪ್ರಾಸಿಕ್ಯೂಷನ್​ಗೆ ಗವರ್ನರ್ ಪೂರ್ವಾನುಮತಿ ನೀಡದ ಹಿನ್ನೆಲೆಯಲ್ಲಿ ಖಾಸಗಿ ದೂರನ್ನು ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸಿಎಂ ಬಿಎಸ್ ವೈ ಮತ್ತು ಇತರರು ನಡೆಸಿದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು …

Read More »

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ದಮ್ ಇಲ್ಲ : ಸಿದ್ದರಾಮಯ್ಯ

ಬೆಂಗಳೂರು: 15ನೇ ಹಣಕಾಸು ಆಯೋಗ 5,495 ಕೋಟಿ ರೂ ವಿಶೇಷ ಅನುದಾನ ಕೊಡಬೇಕು. ಆದರೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇದನ್ನು ತಡೆಹಿಡಿದಿದ್ದಾರೆ. ಇದರ ಬಗ್ಗೆ ಕೇಳೋಕೆ ಸಿಎಂ ಯಡಿಯೂರಪ್ಪಗೆ ದಮ್ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಉಚಿತ ದಿನಸಿ ಕಿಟ್ ವಿತರಿಸಿ ಮಾತನಾಡಿದ ಸಿದ್ದರಾಮಯ್ಯ, ಕೇಂದ್ರ, ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ರಾಜ್ಯಕ್ಕೆ ಬರಬೇಕಿದ್ದ 5,495 …

Read More »

ಕರ್ನಾಟಕ ಸರ್ಕಾರದಿಂದ ಮಹತ್ತರ ಹೆಜ್ಜೆ: ಲೈಂಗಿಕ ಅಲ್ಪಸಂಖ್ಯಾತರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 1ರಷ್ಟು ಮೀಸಲಾತಿ

ಬೆಂಗಳೂರು: ಕರ್ನಾಟಕ ಸರ್ಕಾರ ಮಂಗಳವಾರ ರಾಜ್ಯದಲ್ಲಿ ನೇರ ನೇಮಕಾತಿ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಬೇಕಾದ ಯಾವುದೇ ಸೇವೆ ಅಥವಾ ಎಲ್ಲಾ ವರ್ಗದ ಉದ್ಯೋಗಗಳಲ್ಲಿ ಲೈಂಗಿಕ ಅಲ್ಪಸಂಖ್ಯಾತರಿಗೆ (transgenders ) ಒಂದು ಶೇಕಡಾ ಮೀಸಲಾತಿ ನೀಡುವಂತೆ ಅಧಿಸೂಚನೆ ಹೊರಡಿಸಿದೆ. ಸಾಮಾನ್ಯ ಅರ್ಹತೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮತ್ತು ಇತರ ಹಿಂದುಳಿದ ವರ್ಗಗಳ ವಿಭಾಗಗಳಲ್ಲಿ ಖಾಲಿ ಇರುವ ಹುದ್ದೆಗಳಲ್ಲಿ ಈ ಆಂತರಿಕ ಮೀಸಲಾತಿ ಲಭ್ಯವಿರುತ್ತದೆ. 1977 ರ ಕರ್ನಾಟಕ ನಾಗರಿಕ ಸೇವೆಗಳ …

Read More »