Breaking News

ಬೆಂಗಳೂರು

ಜೈಲಿನಿಂದಲೇ ಶಾಸಕ ಅರವಿಂದ್ ಬೆಲ್ಲದ್‌ಗೆ ಬೆದರಿಕೆ ಫೋನ್ ಕರೆ

ಬೆಂಗಳೂರು, ಜೂ. 18: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಜೈಲಿನ ಕೈದಿಗಳಿಗೆ ಐಷಾರಾಮಿ ಸೌಲಭ್ಯ ಸಿಗುತ್ತಿರುವ ಸಂಗತಿ ಮತ್ತೆ ಚರ್ಚೆಗೆ ಬಂದಿದೆ. ಆರ್‌ಎಸ್‌ಎಸ್ ನಕಲಿ ನಾಯಕನ ಹೆಸರಿನಲ್ಲಿ ವಂಚಿಸಿ ಬಂಧನಕ್ಕೆ ಒಳಗಾಗಿರುವ ಯುವರಾಜ್, ಶಾಸಕ ಅರವಿಂದ್ ಬೆಲ್ಲದ್‌ಗೆ ಜೈಲಿನಿಂದಲೇ ಕರೆ ಮಾಡಿದ್ದಾನೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತರು ತನಿಖೆಗೆ ಆದೇಶಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಆಡಳಿತ ವಿರುದ್ಧ ದಂಗೆ ಎದ್ದಿರುವ ಭಿನ್ನಾಭಿಪ್ರಾಯ ಶಾಸಕರ ಸಾಲಿನಲ್ಲಿ ಅರವಿಂದ್ ಬೆಲ್ಲದ್ …

Read More »

ಯಡಿಯೂರಪ್ಪ ಕೂಡಾ ಸಾಮಾನ್ಯ ಕಾರ್ಯಕರ್ತರೇ..!: ಬಿಎಸ್ ವೈ ವಿರುದ್ಧ ಸಿ.ಟಿ ರವಿ ಆಕ್ರೋಶ

ಬೆಂಗಳೂರು: ನಮ್ಮದು ಸಿದ್ದಾಂತದಿಂದ ಬಂದ ಪಕ್ಷ. ಇಲ್ಲಿ ಎಲ್ಲರೂ ಸಾಮಾನ್ಯ ಕಾರ್ಯಕರ್ತರೇ. ಪತ್ರಕರ್ತನಾಗಿದ್ದ ಪ್ರತಾಪ್ ಸಿಂಹರನ್ನು ಕರೆದು ಸಂಸದರನ್ನಾಗಿ ಮಾಡಿದೆವು. ನಾನೂ ಸಾಮಾನ್ಯ ಕಾರ್ಯಕರ್ತ, ಪ್ರಹ್ಲಾದ್ ಜೋಶಿ, ಈಶ್ವರಪ್ಪನವರು ಸಾಮಾನ್ಯ ಕಾರ್ಯಕರ್ತರೇ. ಅದೇ ರೀತಯಡಿಯೂರಪ್ಪನವರು ಸಾಮಾನ್ಯ ಕಾರ್ಯಕರ್ತರೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಪಕ್ಷದಲ್ಲಿ ಯಾರೂ ದೊಡ್ಡವರಿಲ್ಲ ಎಂದು ಪರೋಕ್ಷವಾಗಿ ಯಡಿಯೂರಪ್ಪ ವಿರುದ್ಧ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಪಾರ್ಟಿ ಗೆ ಜಾತಿ …

Read More »

ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ,ರಾಜ್ಯ ಸರ್ಕಾರ ವಜಾ ಮಾಡಲಿ – ಸಿದ್ದರಾಮಯ್ಯ

ಬೆಂಗಳೂರು: ಭ್ರಷ್ಟಾಚಾರ ಹಾಗೂ ಫೋನ್ ಕದ್ದಾಲಿಕೆ ಬಗ್ಗೆ ಆಡಳಿತ ಪಕ್ಷದ ಸದಸ್ಯರೇ ಆರೋಪ ಮಾಡಿರುವುದರಿಂದ ರಾಜ್ಯಪಾಲರು ಕೂಡಲೇ ಕೇಂದ್ರಕ್ಕೆ ಪತ್ರ ಬರೆದು ರಾಜ್ಯ ಸರ್ಕಾರವನ್ನು ವಜಾ ಮಾಡಲು ಶಿಫಾರಸ್ಸು ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯನವರು, ಸ್ವಾಮೀಜಿಗಳ ಬಗ್ಗೆ ನಾನು ಮಾತಾಡಲ್ಲ. ಆದರೆ ಬಿಜೆಪಿಯಲ್ಲಿ ಕುರ್ಚಿಗೆ ಕಚ್ಚಾಟ ನಡೀತಿದೆ, ಆಡಳಿತ ಕುಸಿದಿದೆ, ಲೀಡರ್ ಇಲ್ಲ, ಸರ್ಕಾರ ಇಲ್ಲ, ರಾಜ್ಯ ದಿವಾಳಿ ಆಗಿದೆ. ಭ್ರಷ್ಟಾಚಾರ …

Read More »

ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ,ಎಲ್ಲಾ ಇಲಾಖೆಗಳಲ್ಲೂ ಮೂಗು ತೂರಿಸುತ್ತಾರ ₹20 ಸಾವಿರ ಕೋಟಿ ಟೆಂಡರ್‌ನಲ್ಲಿ ಭ್ರಷ್ಟಾಚಾರ : ವಿಶ್ವನಾಥ್ ಆರೋಪ

ಬೆಂಗಳೂರು: ನೀರಾವರಿ ಇಲಾಖೆಯ ವಿವಿಧ ಕಾಮಗಾರಿಗಳಿಗೆ ತರಾತುರಿಯಲ್ಲಿ ಟೆಂಡರ್‌ ಕರೆದು ಒಪ್ಪಿಗೆ ನೀಡಲಾಗಿದೆ. ಇದರಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ವಿಧಾನಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಆರೋಪಿಸಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ದಾಖಲೆ ಬಿಡುಗಡೆ ಮಾಡಿದ ಅವರು, ‘ಭದ್ರಾ ಮೇಲ್ದಂಡೆ ಮತ್ತು ಕಾವೇರಿ ನೀರಾವರಿ ನಿಗಮದಲ್ಲಿ ಅಕ್ರಮ ನಡೆದಿದೆ. ಸುಮಾರು ₹20 ಸಾವಿರ ಕೋಟಿ ಟೆಂಡರ್‌ನಲ್ಲಿ ಅಕ್ರಮ ನಡೆದಿದೆ. ಗುತ್ತಿಗೆದಾರರಿಂದ ಹಣ ಪಡೆಯಲಾಗಿದೆ’ ಎಂದು ಅವರು ಮುಖ್ಯಮಂತ್ರಿ ವಿರುದ್ಧ ಹರಿಹಾಯ್ದರು. ಯಡಿಯೂರಪ್ಪ …

Read More »

ಬಗೆದಷ್ಟೂ ಆಳ ಸಿಮ್​ ಕಿಟ್​ ದಂಧೆಯ ಜಾಲ: ದಿನವೊಂದಕ್ಕೆ 15 ಲಕ್ಷ ಸಂಪಾದಿಸ್ತಿದ್ದ ಆರೋಪಿ

ಬೆಂಗಳೂರು: ಇತ್ತೀಚೆಗೆ ಬೆಳಕಿಗೆ ಬಂದ ಭಾರೀ ಸಿಮ್ ಕಿಟ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಲಿಟರಿ ಇಂಟಲಿಜೆನ್ಸ್ ರಹಸ್ಯ ತನಿಖೆ ನಡೆಸಿದ್ದು ರೋಪಿಗಳ ಪ್ಲ್ಯಾನಿಂಗ್​ ಸೇರಿದಂತೆ ತನಿಖೆಯ ಸಂಪೂರ್ಣ ಮಾಹಿತಿಯನ್ನ ಪೊಲೀಸರಿಗೆ ರವಾನೆ ಮಾಡಿದೆ ಎನ್ನಲಾಗಿದೆ. ಎ1 ಇಬ್ರಾಹಿಂ 10 ನೇ ಕ್ಲಾಸ್ ಓದಿದ್ರೆ.. ಎ2 ಗೌತಮ್ ಎಂಬಿಎ ಪಾಸ್ ಮಾಡಿದ್ದಾನೆ. ಹೆಚ್ಚಿನ ಹಣಕ್ಕೆ ಆಸೆ ಬಿದ್ದು ಗೌತಮ್ ಈ ಕೃತ್ಯಕ್ಕೆ ಇಳಿದಿದ್ದ ಎನ್ನಲಾಗಿದೆ. ಎ1 ಆರೋಪಿಯ ದಿನದ ಆದಾಯವೇ 15 …

Read More »

ಉತ್ತರ ಕರ್ನಾಟಕದ ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ; ಬಸವ ಜಯಮೃತ್ಯುಂಜಯ ಸ್ವಾಮೀಜಿ ಒತ್ತಾಯ

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಗಮನದ ಬಳಿಕವೂ ನಾಯಕತ್ವ ಬದಲಾವಣೆ ಚರ್ಚೆಗೆ ಬ್ರೇಕ್ ಬಿದ್ದಿಲ್ಲ. ಇದೀಗ ಅರುಣ್ ಸಿಂಗ್ ಅವರನ್ನು ಭೇಟಿಯಾಗಿರುವ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಲಿಂಗಾಯಿತ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ ಎಂದು ಒತ್ತಾಯಿಸಿದ್ದಾರೆ. ಅರುಣ್ ಸಿಂಗ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿ, ಸಿಎಂ ಬದಲಾವಣೆ ವಿಚಾರಕ್ಕೂ ನಮಗೂ ಸಂಬಂಧವಿಲ್ಲ. ನಾವು ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತಲೂ ಇಲ್ಲ. ಆದರೆ ರಾಜ್ಯದಲ್ಲಿ …

Read More »

ವಿಜಯೇಂದ್ರ ವಿರುದ್ಧ ಕಿಕ್ ಬ್ಯಾಕ್ ಪಡೆದ ಆರೋಪ: ಸರ್ಕಾರ ವಿರುದ್ಧ ಹೊಸ ಬಾಂಬ್ ಸಿಡಿಸಿದ ಹೆಚ್.ವಿಶ್ವನಾಥ್

ಬೆಂಗಳೂರು: ಸರ್ಕಾರದ ವಿರುದ್ಧ ಮತ್ತೆ ಗುಡುಗಿರುವ ಎಂ ಎಲ್ ಸಿ ಹೆಚ್.ವಿಶ್ವನಾಥ್ ನಿರಾವರಿ ಯೋಜನೆಗಳಲ್ಲಿ ಭಾರಿ ಅಕ್ರಮ ನಡೆದಿದ್ದು, ಕಿಕ್ ಬ್ಯಾಕ್ ಪಡೆದುಕೊಳ್ಳಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಕೆಲ ದಾಖಲೆಗಳನ್ನು ಬಿಡುಗಡೆ ಮಾಡಿದ ವಿಶ್ವನಾಥ್, ಸರ್ಕಾರದ ಪ್ರತಿಯೊಂದು ಇಲಾಖೆಯಲ್ಲಿಯೂ ಬಿ.ವೈ.ವಿಜಯೇಂದ್ರ ಹಸ್ತಕ್ಷೇಪ ಹೆಚ್ಚಾಗುತ್ತಿದೆ. ಭದ್ರಾ ಮೇಲ್ದಂಡೆ ನಿರಾವರಿ ಯೋಜನೆ ಕಾಮಗಾರಿಗಾಗಿ 20 ಸಾವಿರ ಕೋಟಿ ರೂ.ಟೆಂಡರ್ ತರಾತುರಿಯಲ್ಲಿ ಕರೆಯಲಾಗಿದೆ. ಇದರ ಅಗತ್ಯವೇನಿತ್ತು? ಕಾವೇರಿ ನೀರಾವರಿ ನಿಗಮದಲ್ಲೂ …

Read More »

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರ ರಾತ್ರಿ ಭೇಟಿ

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರನ್ನು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಗುರುವಾರ ರಾತ್ರಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಬಿಜೆಪಿ ಸರ್ಕಾರದ ನಾಯಕತ್ವ ವಿಚಾರಕ್ಕೆಸಂಬಂಧಿಸಿ ಅರುಣ್‌ ಸಿಂಗ್‌ ಅವರು ಪಕ್ಷದ ಮುಖಂಡರ ಅಭಿಪ್ರಾಯ ಸಂಗ್ರಹಿಸಿದ್ದು, ಸುಮಾರು 53 ಮಂದಿ ಶಾಸಕರೊಂದಿಗೆ ವೈಯಕ್ತಿಕವಾಗಿ ಚರ್ಚೆ ನಡೆಸಿದ್ದಾರೆ. ಆದರೆ ಇದಾದ ಬಳಿಕ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಚರ್ಚೆ ನಡೆಸಿದ್ದಾರೆ. ಈ ವೇಳೆ …

Read More »

ರೋಮ್ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸಿದಂತೆ: ಖಂಡ್ರೆ ವ್ಯಂಗ್ಯ

ಬೆಂಗಳೂರು: ಜನ ಕೊರೊನಾ ಸಂಕಷ್ಟದಲ್ಲಿರುವಾಗ ಬಿಜೆಪಿಗೆ ನಾಯಕತ್ವದ ಚಿಂತೆ. ರೋಮ್ ಪಟ್ಟಣ ಹೊತ್ತಿ ಉರಿಯುತ್ತಿದ್ದಾಗ, ದೊರೆ ನೀರೋ ಪಿಟೀಲು ನುಡಿಸುತ್ತಿದ್ದನಂತೆ. ಅದೇ ರೀತಿ ರಾಜ್ಯ ಸಾಂಕ್ರಾಮಿಕ ಮತ್ತು ಲಾಕ್‍ಡೌನ್ ನಿಂದ ನಲುಗುತ್ತಿರುವಾಗ, ಸರ್ಕಾರ ಜನರ ಸಂಕಷ್ಟ ಪರಿಹರಿಸುವುದನ್ನು ಬಿಟ್ಟು ನಾಯಕತ್ವ ಬದಲಾವಣೆಯ ಕಸರತ್ತಿನಲ್ಲಿ ನಿರತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಅವರು, ರಾಜ್ಯದಲ್ಲಿ ಮುಂಗಾರು ಉತ್ತಮವಾಗಿದೆ. ಆದರೆ ರೈತರಿಗೆ ಸೂಕ್ತ ಪ್ರಮಾಣದಲ್ಲಿ ಬಿತ್ತನೆ …

Read More »

ರೋಮ್ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸಿದಂತೆ: ಖಂಡ್ರೆ ವ್ಯಂಗ್ಯ

ಬೆಂಗಳೂರು: ಜನ ಕೊರೊನಾ ಸಂಕಷ್ಟದಲ್ಲಿರುವಾಗ ಬಿಜೆಪಿಗೆ ನಾಯಕತ್ವದ ಚಿಂತೆ. ರೋಮ್ ಪಟ್ಟಣ ಹೊತ್ತಿ ಉರಿಯುತ್ತಿದ್ದಾಗ, ದೊರೆ ನೀರೋ ಪಿಟೀಲು ನುಡಿಸುತ್ತಿದ್ದನಂತೆ. ಅದೇ ರೀತಿ ರಾಜ್ಯ ಸಾಂಕ್ರಾಮಿಕ ಮತ್ತು ಲಾಕ್‍ಡೌನ್ ನಿಂದ ನಲುಗುತ್ತಿರುವಾಗ, ಸರ್ಕಾರ ಜನರ ಸಂಕಷ್ಟ ಪರಿಹರಿಸುವುದನ್ನು ಬಿಟ್ಟು ನಾಯಕತ್ವ ಬದಲಾವಣೆಯ ಕಸರತ್ತಿನಲ್ಲಿ ನಿರತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಅವರು, ರಾಜ್ಯದಲ್ಲಿ ಮುಂಗಾರು ಉತ್ತಮವಾಗಿದೆ. ಆದರೆ ರೈತರಿಗೆ ಸೂಕ್ತ ಪ್ರಮಾಣದಲ್ಲಿ ಬಿತ್ತನೆ …

Read More »