Breaking News

ಬೆಂಗಳೂರು

ಜೈಲಲ್ಲಿರುವ ರೌಡಿಯ ಪತ್ನಿಯ ಜತೆ ಅಕ್ರಮ ಸಂಬಂಧ: ರೌಡಿಶೀಟರ್‌ನ ಕುತ್ತಿಗೆ ಸೀಳಿ ಬರ್ಬರ ಕೊಲೆ!

ಬೆಂಗಳೂರು: ರಶೀದ್ ಮಲಬಾರಿ ಗ್ಯಾಂಗ್‌ನಲ್ಲಿ ಗುರುತಿಸಿಕೊಂಡಿದ್ದವನ ಕುಖ್ಯಾತ ರೌಡಿ ಶೀಟರ್‌ ಸೈಯದ್ ಕರೀಂ ಅಲಿ ಎಂಬಾತನನ್ನು ನಗರದಲ್ಲಿ ಕೊಲೆ ಮಾಡಲಾಗಿದೆ. ಬೇರೊಬ್ಬನ ಪತ್ನಿಯ ಜತೆ ಈತ ಅಕ್ರಮ ಸಂಬಂಧ ಹೊಂದಿದ್ದು ಅದೇ ಈ ಕೊಲೆಗೆ ಕಾರಣ ಎನ್ನಲಾಗುತ್ತಿದೆ. ಇಂದು ಬೆಳಗ್ಗೆ ಸೈಯದ್‌ನನ್ನು ಚಾಕುವಿನಿಂದ ಚುಚ್ಚಿ, ಕುತ್ತಿಗೆ ಸೀಳಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಗೋವಿಂದ ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸೈಯದ್‌ ಇನ್ನೋರ್ಚ ರೌಡಿ ಅನೀಸ್ ಎಂಬಾತನ …

Read More »

NCB ಅಧಿಕಾರಿಗಳಿಂದ ಭರ್ಜರಿ ಬೇಟೆ: 2 ಟನ್​ಗೂ ಹೆಚ್ಚು ಗಾಂಜಾ ವಶಕ್ಕೆ

ಬೆಂಗಳೂರು: ಬೆಂಗಳೂರು ವಲಯ ಎನ್​ಸಿಬಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ ₹15 ಕೋಟಿ ಬೆಲೆಬಾಳುವ ಗಾಂಜಾವನ್ನ ವಶಕ್ಕೆ ಪಡೆದಿದ್ದಾರೆ. ಹೈದರಾಬಾದ್​ನ ಪೆದ್ದ ಅಂಬರ್​ಪೇಟ್ ಟೋಲ್ ಪ್ಲಾಜಾ ಬಳಿ ಟ್ರಕ್​ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಲಾಗಿದ್ದು 2 ಟನ್​ಗಿಂತಲೂ ಹೆಚ್ಚಿನ ಗಾಂಜಾವನ್ನ ಸೀಜ್ ಮಾಡಲಾಗಿದೆ. ಒಟ್ಟು 1,080 ಪ್ಯಾಕೆಟ್​ಗಳಲ್ಲಿ ಗಾಂಜಾವನ್ನ ಸಾಗಾಟ ಮಾಡಲಾಗ್ತಿತ್ತು.. ಒಂದೊಂದು ಪ್ಯಾಕೆಟ್​ನಲ್ಲಿ 2 ಕೆ.ಜಿ ಗಾಂಜಾ ಶೇಖರಿಸಲಾಗಿತ್ತು ಎನ್ನಲಾಗಿದೆ. ಹೈದರಾಬಾದ್​ನಿಂದ …

Read More »

ಹಂತ ಹಂತವಾಗಿ ಶಾಲಾ ಕಾಲೇಜು ತೆರೆಯಲು ತಜ್ಞರ ಸಮಿತಿ ಸೂಚನೆ: ಸಿಎಂ ಬಿಎಸ್ ವೈ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಶಾಲೆ- ಕಾಲೇಜು ತೆರೆಯಲು ತಜ್ಞರ ಸಮಿತಿ ಸಲಹೆ ನೀಡಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಜ್ಞರ ಸಮಿತಿಯ ಸಭೆಯ ಬಳಿಕ ಮಾತನಾಡಿದ ಸಿಎಂ, ಕೊವಿಡ್ ನಂತರ ಆರೊಗ್ಯ ಸಮಸ್ಯೆ ಕಡೆಗೆ ಗಮನ ಹರಿಸಬೇಕು. 18 ವರ್ಷಕ್ಕಿಂತ ಹಿರಿಯ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿ ನಂತರ ಹಂತ ಹಂತವಾಗಿ ಕಾಲೇಜು ತೆರೆಯಲು ಸೂಚನೆ ನೀಡಿದ್ದಾರೆ ಎಂದರು. ಕೋವಿಡ್ ಮೂರನೇ ಅಲೆ …

Read More »

ಕೋವಿಡ್‌ 3ನೇ ಅಲೆ- ಮಕ್ಕಳಿಗಾಗಿಯೇ ಪ್ರತ್ಯೇಕ ಆಸ್ಪತ್ರೆಗೆ ಚಿಂತನೆ: ಶಶಿಕಲಾ ಜೊಲ್ಲೆ

ಬೆಂಗಳೂರು: ಕೊರೋನಾ 3ನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಆತಂಕ ಇರುವುದರಿಂದ ಬೆಂಗಳೂರಿನಲ್ಲಿ ಮಕ್ಕಳಿಗಾಗಿಯೇ ಪ್ರತ್ಯೇಕ ಕೋವಿಡ್ ಆಸ್ಪತ್ರೆ ನಿರ್ಮಿಸುವಂತೆ ಸಲಹೆ ಬಂದಿದೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ‘ಈ ಕುರಿತು ಮುಖ್ಯಮಂತ್ರಿಯನ್ನು ಶೀಘ್ರದಲ್ಲೇ ಭೇಟಿ ಮಾಡಿ ಮಾತುಕತೆ ನಡೆಸಲಿದ್ದು, ಅವರ ಅಂತಿಮ ಆದೇಶದಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಸಮುದಾಯ ಕೇಂದ್ರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ …

Read More »

ತಿಹಾರ್ ಜೈಲಿನಲ್ಲಿ ನೆರವಿಗೆ ನಿಂತವನ ಕೈಬಿಡದ ಕಾಂಗ್ರೆಸ್ ನಾಯಕ; ಡಿ.ಕೆ‌. ಶಿವಕುಮಾರ್

ಕಷ್ಟದ ದಿನಗಳಲ್ಲಿ ಕೈಚಾಚಿದವರನ್ನು, ಸಹಾಯ ಮಾಡಿದವರನ್ನು ಮರೆಯಲು ಸಾಧ್ಯವೇ? ಸೆರೆಯಾಗಿದ್ದ ಹಕ್ಕಿಯು ಬಿಡುಗಡೆಯಾಗುತ್ತಿದ್ದಂತೆಯೇ ಪಂಜರದಲ್ಲಿ ಜೊತೆಯಾಗಿದ್ದ ಮತ್ತೊಂದು ಹಕ್ಕಿಯತ್ತ ಸುಳಿಯುತ್ತದೆಯೇ? ಇಲ್ಲ. ಆದರೆ, ಒಡಲ ನೋವನ್ನು ಆಲಿಸಿದ, ಕಷ್ಟದ ಘಟನೆಗಳ ಕೇಳುಗನಾದ, ಸ್ಪಂದಿಸಿ, ಸಂತೈಸಿದ ವ್ಯಕ್ತಿ ಸೆರೆಯಲ್ಲಿದ್ದಾಗ, ಹೃದಯವಂತನಾದವನು ಮತ್ತೆ ಧಾವಿಸದೇ ಇರನು. ಹಾಗೆ ಧಾವಿಸಿ, ವ್ಯಕ್ತಿಯ ಕಷ್ಟಕ್ಕೆ ಸ್ಪಂದಿಸಿದವರು ರಾಜ್ಯದ ನಾಯಕರಲ್ಲೊಬ್ಬರು. ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ‌ ಶಿವಕುಮಾರ್ ತಿಹಾರ್ ಜೈಲು ಸೇರಿದ್ರು.ಬರೋಬ್ಬರಿ …

Read More »

ಮಾನನಷ್ಟ ಮೊಕದ್ದಮೆಯಲ್ಲಿ ದೇವೇಗೌಡರಿಗೆ ಹಿನ್ನಡೆ: 2 ಕೋಟಿ ಪರಿಹಾರ ಕಟ್ಟಿಕೊಡಲು ಕೋರ್ಟ್ ಆದೇಶ

ಬೆಂಗಳೂರು: ನಂದಿ ಇನ್​ಫ್ರಾ ಸ್ಟ್ರಕ್ಚರ್ ಕಾರಿಡಾರ್ (Nandi Infrastructure Corridor Enterprises – NICE) ಕಂಪನಿಯ ವಿರುದ್ಧ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡ ಮಾಡಿದ್ದ ಆರೋಪವನ್ನು ಸಾಬೀತುಪಡಿಸುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ನೈಸ್ ಕಂಪನಿಗೆ ₹ 2 ಕೋಟಿ ಪರಿಹಾರ ಕಟ್ಟಿಕೊಡಬೇಕು ಎಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ. ದೇವೇಗೌಡರ ವಿರುದ್ಧ ನೈಸ್ ಕಂಪನಿಯು ಮಾನನಷ್ಟ ದಾವೆ ಹೂಡಿತ್ತು. ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ ದೇವೇಗೌಡರು ನೈಸ್ ಸಂಸ್ಥೆಯ ಗೌರವಕ್ಕೆ …

Read More »

ಭೂಗತ ಪಾತಕಿ ರವಿ ಪೂಜಾರಿ ಕಸ್ಟಡಿಗೆ ಗುಜರಾತ್ ಮನವಿ

ಬೆಂಗಳೂರು ; ಅನೇಕ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಕಳೆದ ವರ್ಷ ಫೆ.24ರಂದು ಕರ್ನಾಟಕ ಪೊಲೀಸರು ವಿದೇಶದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ಸದ್ಯ ಆತ ಕೇಂದ್ರ ಅಪರಾಧ ತನಿಖಾ ದಳದ​ ವಶದಲ್ಲಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಆದರೆ, ದೇಶದ ಅನೇಕ ಭಾಗಗಳಲ್ಲಿ ಡಾನ್ ರವಿ ಪೂಜಾರಿ ಅಪರಾಧ ನಡೆಸಿದ್ದು, ಮುಂಬೈ,ಕೇರಳ, ಬಳಿಕ ಗುಜರಾತ್ ಪೊಲೀಸರು ಇದೀಗ ವಿಚಾರಣೆಗೆ ರವಿ ಪೂಜಾರಿನ್ನು ತಮ್ಮ ಕಸ್ಟಡಿಗೆ ನೀಡಬೇಕು ಎಂದು ಕರ್ನಾಟಕ …

Read More »

ಇಂದಿನಿಂದ ಅಂತರರಾಜ್ಯ ಪ್ರಯಾಣ ಆರಂಭ

ಬೆಂಗಳೂರು: ಕೋವಿಡ್-19 ಲಾಕ್ಡೌ ನ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಿತ್ತಾದರೂ ಇದೀಗ. ಕೋವಿಡ್-19 ಲಾಕ್‌ಡೌನ್ ಸಡಿಲಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 22 ರಿಂದ ಸಂಚಾರ ಆರಂಭಿಸಲಾಗುತ್ತಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಆಯಾ ರಾಜ್ಯಗಳ ಮಾರ್ಗಸೂಚಿಗಳನ್ವಯ ಪ್ರಯಾಣಿಕರ ದಟ್ಟಣೆ ಮತ್ತು ಅವಶ್ಯಕತೆಗೆ ಅನುಗುಣವಾಗಿ ಶೇ.50 ರಷ್ಟು ಆಸನ ಸಾಮರ್ಥ್ಯ ದೊಂದಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ …

Read More »

ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ ಸವದಿ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಅನ್‍ಲಾಕ್ ನಲ್ಲಿ ಸಾರಿಗೆ ಸಂಚಾರಕ್ಕೆ ಅವಕಾಶ ಇದ್ದರೂ ಪರಿಪೂರ್ಣ ಬಸ್ ವ್ಯವಸ್ಥೆಯಿಲ್ಲದೆ ಜನ ಪರದಾಡುತ್ತಿದ್ದಾರೆ. ಆದರೆ ಇತ್ತ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರು ಸಮಸ್ಯೆ ಬಗೆಹರಿಸುವ ಬಗ್ಗೆ ಯೋಚನೆ ಮಾಡದೇ, ಸಾರಿಗೆ ಸಮಸ್ಯೆಯಾದಾಗ ಜನರೇ ಸಹಿಸಿಕೊಳ್ಳಬೇಕು ಎಂದು ಉಡಾಫೆ ಉತ್ತರ ನೀಡಿದ್ದಾರೆ. ಸಾರಿಗೆ ಸಮಸ್ಯೆಯ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಲಾಕ್‍ಡೌನ್ ಬಳಿಕ ರಾಜ್ಯದಲ್ಲಿ ಅನ್‍ಲಾಕ್ ಘೋಷಣೆಯಾಗಿದೆ. ಪ್ರಾರಂಭದಲ್ಲಿ ಈ …

Read More »

ಸಾರಿಗೆ ಸಂಚಾರ ಯಥಾಸ್ಥಿತಿ – ಡಿಸಿಎಂ ಲಕ್ಷ್ಮಣ್ ಸವದಿ

ಬೆಂಗಳೂರು : ಸದ್ಯಕ್ಕೆ 2 ಡೋಸ್ ಕೊರೋನಾ ಲಸಿಕೆ ಪಡೆದಂತ ಸಿಬ್ಬಂದಿಗಳನ್ನು ಬಳಸಿಕೊಂಡು, ಸಾರಿಗೆ ಸಂಚಾರ ಆರಂಭಿಸಲಾಗಿದೆ. ಈಗ 2 ಡೋಸ್ ಲಸಿಕೆ ಪಡೆದಂತ ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗಿ, ಸಂಚಾರ ಆರಂಭಿಸಿದ್ದಾರೆ. ಪ್ರಯಾಣಿಕರಿಗೆ ತೊಂದರೆಯಾಗದಂತೆಯಥಾಸ್ಥಿತಿ ಸಂಚಾರ ಆರಂಭ ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ. ವಿಧಾನ ಸೌಧ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರು, BMTC ಸ್ಪಲ್ಪ …

Read More »