Breaking News

ಬೆಂಗಳೂರು

ಗೃಹಿಣಿಯರಿಗೆ ಗುಡ್‌ ನ್ಯೂಸ್:‌ ಇಳಿಕೆಯಾಗಿದೆ ಅಡುಗೆ ಎಣ್ಣೆ ಬೆಲೆ

ಕಳೆದ ಒಂದು ತಿಂಗಳಿನಿಂದ ಅಡುಗೆ ಎಣ್ಣೆ ಬೆಲೆಗಳು ಕುಸಿಯುತ್ತಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಹಲವೆಡೆ ಅಡುಗೆ ಎಣ್ಣೆ ಬೆಲೆಗಳಲ್ಲಿ 20%ನಷ್ಟು ಇಳಿಕೆ ಕಂಡುಬಂದಿದೆ. ಅಡುಗೆ ಎಣ್ಣೆ ಬೆಲೆಗಳ ಇಳಿಕೆಯ ವಿವರ ಇಂತಿದೆ   1. ಪಾಮ್‌ ಎಣ್ಣೆಯ ಬೆಲೆ ಮೇ 7ರಂದು ರೂ.142/ಕೆಜಿ ಇದ್ದಿದ್ದು ಇಂದಿಗೆ 115 ರೂ./ಕೆಜಿಗೆ ಇಳಿದಿದೆ. 2. ಸೂರ್ಯಕಾಂತಿ ಎಣ್ಣೆಯ ಬೆಲೆಯು ಮೇ 5ರಂದು 188ರೂ./ಕೆಜಿ ಇಂದ 157 ರೂ./ಕೆಜಿಗೆ ಇಳಿದಿದೆ. 3. ಸೋಯಾ …

Read More »

ತೈಲ ಬೆಲೆ ಏರಿಕೆ ಎಫೆಕ್ಟ್: ಅಕ್ಕಿ ದರದಲ್ಲಿ ಕ್ವಿಂಟಲ್‌ಗೆ ದಿಢೀರ್‌ 200 ರೂ. ಹೆಚ್ಚಳ

ಬೆಂಗಳೂರು: ತೈಲಬೆಲೆಯ ಏರಿಕೆ ಎಫೆಕ್ಟ್ ಈಗ ಅಕ್ಕಿ ವ್ಯಾಪಾರದ ಮೇಲೆ ಬೀರಿದೆ.ಕಳೆದ ಕೆಲವು ದಿನಗಳಿಂದ ಪೆಟ್ರೋಲ್‌, ಡಿಸೇಲ್‌ ಸೇರಿದಂತೆ ತೈಲ ಬೆಲೆ ಗಗನ ಮುಖವಾಗಿದ್ದು ಆ ಹಿನ್ನೆಲೆಯಲ್ಲಿ ಭಿನ್ನ ತಳಿಯ ಅಕ್ಕಿಯ ಬೆಲೆ ಪ್ರತಿ ಕ್ವಿಂಟಾಲ್‌ನ ನಿಗದಿತ ಬೆಲೆಗಿಂತ ದಿಢೀರ್‌ ಆಗಿ 200ರೂ. ಏರಿಕೆಯಾಗಿದೆ. ಜನತಾ ಕರ್ಫ್ಯೂ ಮಾರ್ಗಸೂಚಿ ತೆರವಾಗುತ್ತಿದಂತೆ ಇದರ ಬಿಸಿ ಶ್ರೀಸಾಮಾನ್ಯರಿಗೆ ತಟ್ಟಿದೆ. ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಈ ಹಿಂದೆ ಕೋಲಂ (ಬುಲೆಟ್‌ ರೈಸ್‌ )ಅಕ್ಕಿ …

Read More »

ಸಂತೋಷ್ ಹೆಗ್ಡೆಗೂ ಸೈಬರ್ ವಂಚಕರ ಕರೆ: ಪ್ರಕರಣ ದಾಖಲು

ಬೆಂಗಳೂರು: ದಿನೇ ದಿನೇ ಸೈಬರ್ ವಂಚನೆ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇದರ ನಡುವೆ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರಿಗೂ ವಂಚಿಸಲು ಯತ್ನಿಸಿರುವುದು ಬೆಳಕಿಗೆ ಬಂದಿದೆ. ದೂರವಾಣಿ ಕರೆ ಮಾಡಿ ಕ್ರೆಡಿಟ್ ಕಾರ್ಡ್ ಮಾಹಿತಿ ಪಡೆದು ವಂಚನೆ ಮಾಡಲು ದುಷ್ಕರ್ಮಿಗಳು ಯತ್ನಿಸಿದ್ದಾರೆ. ಈ ಸಂಬಂಧ ಸ್ವತಃ ಸಂತೋಷ್ ಹೆಗ್ಡೆ ಅವರು ದೂರು ನೀಡಿದ್ದಾರೆ. ದೂರು ಏನು?: ಜೂ.14ರ ಸಂಜೆ 6 ಗಂಟೆಗೆ ಸಂತೋಷ್ ಹೆಗ್ಡೆ ಅವರ ಮೊಬೈಲ್‍ಗೆ ಕರೆ …

Read More »

ಜುಲೈ ತಿಂಗಳಾಂತ್ಯಕ್ಕೆ ಬೆಂಗಳೂರು ನಗರಕ್ಕೆ ಹೊಸ ಕಮೀಷನರ್ ನೇಮಕ?

ಬೆಂಗಳೂರು,: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕೂಗು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಅದೇ ರೀತಿ ರಾಜಧಾನಿ ಬೆಂಗಳೂರಿನ ಪೊಲೀಸ್ ಆಯುಕ್ತರು ಕೂಡ ಬದಲಾಗುವ ಮಾಹಿತಿ ಚರ್ಚೆಗೆ ನಾಂದಿ ಹಾಡಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹುದ್ದೆಗಾಗಿ ಪೈಪೋಟಿ ಶುರುವಾಗಿದೆ. ನೂತನ ನಗರ ಪೊಲೀಸ್ ಆಯುಕ್ತರು ಯಾರಾಗಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಎರಡನೇ ಸಲ ಸದ್ದು ಮಾಡುತ್ತಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ …

Read More »

2023ರ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ , ಮತ್ತೆ ಸಿಎಂ ನಾವೇ: H.D.K.

ಮಂಡ್ಯ: 2023ರ ಚುನಾವಣೆಯಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಹೇಳುವ ಮೂಲಕ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಾವು ಪ್ರಾಮಾಣಿಕವಾಗಿ ಹೋರಾಟ ಮಾಡುತ್ತಿದ್ದೇವೆ. ಜೆಡಿಎಸ್ ಪಕ್ಷ ಹೋರಾಡುತ್ತಿರುವುದು ಅಧಿಕಾರಕ್ಕಾಗಿ ಅಲ್ಲ, ನಿಮ್ಮ ಗೌರವಯುತ ಬದುಕು, ನಾಡಿನ ಸಮಸ್ಯೆ ಬಗೆಹರಿಸಲು. ರಾಷ್ಟ್ರೀಯ ಪಕ್ಷಗಳು ಕಿತ್ತಾಟದಲ್ಲಿ ತೊಡಗಿದ್ದು, ರಾಜ್ಯದ ಸಂಪತ್ತು ಲೂಟಿ ಮಾಡಲು ಹೊರಟಿವೆ ಎಂದು ವಾಗ್ದಾಳಿ ನಡೆಸಿದರು.   ರಾಜ್ಯ ಬಿಜೆಪಿ …

Read More »

ಬಿ.ಎಸ್.ಯಡಿಯೂರಪ್ಪ ಅವರು ನಿವೃತ್ತಿ ಪಡೆಯುವ ಸಮಯ ಬಂದಿದೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ಅವರು ನಿವೃತ್ತಿ ಪಡೆಯುವ ಸಮಯ ಬಂದಿದೆ ಎಂದು ಕೂಡಲಸಂಗಮ ಪಂಚಮಸಾಲಿಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಹೇಳಿದ್ದಾರೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಆಗ್ರಹಿಸಿ ಈ ಹಿಂದೆ ಶ್ರೀಗಳು ಪಾದಯಾತ್ರೆ ಹಾಗೂ ಪ್ರತಿಭಟನೆ ನಡೆಸಿದ್ದರು. ಕೇಂದ್ರ ನಾಯಕತ್ವ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಕಿಳಿಸಿದರೆ, ಪಕ್ಷವನ್ನು ಹೃದಯಾಳದಿಂದ ಸ್ವಾಗತಿಸುತ್ತೇವೆ. ಯಡಿಯೂರಪ್ಪ ಅವರ ವಯಸ್ಸಿನಿಂದಾಗಿ ಹಲವರಿಗೆ ಅಧಿಕಾರ ತಪ್ಪಿ ಹೋಗುತ್ತಿದೆ. ಹೀಗಾಗಿ ಅವರು ನಿವೃತ್ತಿ ಪಡೆದುಕೊಳ್ಳಲು ಸಮಯ ಬಂದಿದೆ ಎಂದು …

Read More »

ನಾಯಕತ್ವ ಬದಲಾವಣೆ ಧ್ವನಿ ಎತ್ತಿ ಉಸ್ತುವಾರಿ ಬಂದ್ರೂ ಭೇಟಿಯಾಗದ ಯತ್ನಾಳ್

ಬೆಂಗಳೂರು: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರ ಭೇಟಿಗೆ ನಾನು ಅವಕಾಶ ಕೇಳಿಲ್ಲ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿರುವ ಅರುಣ್ ಸಿಂಗ್ ಬಿಜೆಪಿ ಕಚೇರಿಯಲ್ಲಿ ಪಕ್ಷದ ಶಾಸಕರು, ಸಚಿವರು, ನಾಯಕರ ಅಭಿಪ್ರಾಯ ಸಂಗ್ರಹಿಸುತ್ತಿದ್ದಾರೆ. ಅನೇಕರು ಅವರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯ ಹೇಳಿದ್ದು, ಬಸವನಗೌಡ ಪಾಟೀಲ್ ಯತ್ನಾಳ್ ಅವರು ಮಾತ್ರ ಅರುಣ್ ಸಿಂಗ್ ಭೇಟಿಗೆ ಸಮಯವನ್ನು ಕೇಳಿಲ್ಲ. ನಾಯಕತ್ವ ಬದಲಾವಣೆ …

Read More »

ಕಲಿಕೆ ಭಾಗ್ಯ’ ಯೋಜನೆಯಡಿ ಸಹಾಯಧನ -ಕಾರ್ಮಿಕರ ಮಕ್ಕಳಿಗೆ ನೆರವು

ಬೆಂಗಳೂರು: ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಕಲಿಕೆ ಭಾಗ್ಯ ಯೋಜನೆ(ವಿದ್ಯಾರ್ಥಿವೇತನ)ಯಡಿ ಕಟ್ಟಡ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸದಿಂದ ವಂಚಿತರಾಗದಂತೆ ತಡೆಯಲು ಮತ್ತು ಶೈಕ್ಷಣಿಕವಾಗಿ ಪ್ರೋತ್ಸಾಹಿಸಲು ವಿದ್ಯಾರ್ಥಿವೇತನಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್ ಲೈನ್ ಮೂಲಕ ವೆಬ್‌ಸೈಟ್ https://serviceonline.gov.in/karnataka ಇಲ್ಲಿ ಸಲ್ಲಿಸಲು 2021 ರ ಜುಲೈ 15 ಕೊನೆಯ‌ ದಿನವಾಗಿದೆ. ವಾರ್ಷಿಕ …

Read More »

ಸೋಮವಾರದಿಂದ ಸಾರಿಗೆ ಸಂಚಾರಕ್ಕೆ ಅನುಮತಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಬಹುತೇಕ ಕಡಿಮೆಯಾಗುತ್ತಿದ್ದು, ಸೋಮವಾರದಿಂದ ಮತ್ತಷ್ಟು ವಿನಾಯ್ತಿ ಸಿಗುವ ಸಾಧ‍್ಯತೆಯಿದೆ. ಸೋಮವಾರದಿಂದ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಸಂಚಾರಕ್ಕೆ ಶೇ. 50 ಪ್ರಯಾಣಿಕರೊಂದಿಗೆ ಅನುಮತಿ ಸಿಗಬಹುದು. ಕಳೆದ 70 ದಿನಗಳ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದಲ್ಲಿ 5 ಸಾವಿರಕ್ಕೂ ಕಡಿಮೆ ಪ್ರಕರಣ ದಾಖಲಾಗಿದೆ. ಈಗ ಜಾರಿಯಲ್ಲಿರುವ ಅನ್ ಲಾಕ್ ನಿಯಮಗಳು ಸೋಮವಾರಕ್ಕೆ ಮುಕ್ತಾಯವಾಗಲಿದೆ. ಅದಾದ ಬಳಿಕ ಪಾಸಿಟಿವಿಟಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾಲ್, …

Read More »

ಮುಂದಿನ ವಾರದಿಂದ 11 ಜಿಲ್ಲೆಗಳೂ ಅನ್ ಲಾಕ್ ಸಾಧ್ಯತೆ

ಬೆಂಗಳೂರು: ಪಾಸಿಟಿವಿಟಿ ಅಧಿಕವಿದ್ದ 11 ಜಿಲ್ಲೆಗಳಲ್ಲಿ ಈಗ ಲಾಕ್ ಡೌನ್ ಜಾರಿಯಲ್ಲಿದೆ. ಆದರೆ ಮುಂದಿನ ವಾರ ಈ ಜಿಲ್ಲೆಗಳೂ ಅನ್ ಲಾಕ್ ಆಗುವ ಸಾಧ‍್ಯತೆಯಿದೆ. ಈ ಪೈಕಿ ಬೆಳಗಾವಿಯಲ್ಲಿ ಪಾಸಿಟಿವಿಟಿ ದರ ಶೇ.6, ಶಿವಮೊಗ್ಗದಲ್ಲಿ ಶೇ.5.5, ಮಂಡ್ಯದಲ್ಲಿ ಶೇ.7, ಹಾಸನದಲ್ಲಿ ಶೇ.9 ಇದ್ದರೆ, ಮೈಸೂರಿನಲ್ಲಿ ಈಗಲೂ 13.5 ಶೇ. ಪಾಸಿಟಿವಿಟಿ ದರವಿದೆ. ಇನ್ನು ಎರಡು ದಿನಗಳಲ್ಲಿ ಈ ಜಿಲ್ಲೆಗಳಲ್ಲಿ ಕೊರೋನಾ ಸಂಪೂರ್‌ಐ ಹತೋಟಿಗೆ ಬರುವ ನಿರೀಕ್ಷೆಯಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ …

Read More »