Breaking News

ಬೆಂಗಳೂರು

ಸಾಲ ಕೊಡಿಸ್ತೀವಿ, ಫೀಸ್ ಕಟ್ಟಿ ಎಂದ ಖಾಸಗಿ ಶಾಲೆ

ಬೆಂಗಳೂರು: ಶಾಲಾ ಶುಲ್ಕ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆಯೊಂದು ಸಾಲ ದಂಧೆ ಶುರು ಮಾಡಿಕೊಂಡಿದೆ. ಸಾಲ ಕೊಡಿಸ್ತೀವಿ, ನಮಗೆ ಫೀಸ್ ಕಟ್ಟಿ ಎಂದು ಲಗ್ಗೆರೆಯ ಖಾಸಗಿ ಶಾಲೆಯೊಂದು ಪೋಷಕರಿಗೆ ದುಂಬಾಲು ಬಿದ್ದಿದೆ. ಲಗ್ಗೆರೆಯ ಈ ಖಾಸಗಿ ಶಾಲೆ, ಫೈನಾನ್ಸ್ ಪೀರ್ ಎಂಬ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡಿದೆ. ವಿದ್ಯಾರ್ಥಿಯ ಟಿಸಿಯನ್ನು ಅಡಮಾನ ಇಟ್ಟುಕೊಂಡು ಪೊಷಕರಿಗೆ ಸಾಲ ವಿತರಣೆಗೆ ಈ ಫೈನಾನ್ಸ್ ಕಂಪನಿ ಮುಂದಾಗಿದೆ. ಸಾಲ ತೆಗೆದುಕೊಂಡ 6 ತಿಂಗಳವರೆಗೆ ಯಾವುದೇ ರೀತಿಯ …

Read More »

ಹಿರಿಯ ನಟ ಸುರೇಶ್ ಚಂದ್ರ ಕೊರೊನಾದಿಂದ ನಿಧನ

ಬೆಂಗಳೂರು: ಚೆಲುವಿನ ಚಿತ್ತಾರ ಚಿತ್ರದ ಮೂಲಕ ಜನಪ್ರಿಯತೆ ಪಡೆದಿದ್ದ ಸ್ಯಾಂಡಲ್​ವುಡ್​ನ ಹಿರಿಯ ನಟ ಸುರೇಶ್ ಚಂದ್ರ (69) ಇಂದು ವಿಧಿವಶರಾಗಿದ್ದಾರೆ. ಸುರೇಶ್ ಚಂದ್ರ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅನೇಕ ನಟ ದಿಗ್ಗಜರ ಜೊತೆ ನಟಿಸಿದ್ದ ಸುರೇಶ್​ ಚಂದ್ರ ಅವರು, ಗೋಲ್ಡ್​ನ್​ ಸ್ಟಾರ್​ ಗಣೇಶ್​ ಅಭಿನಯದ ಚೆಲುವಿನ ಚಿತ್ತಾರ ಚಿತ್ರದ ಮೂಲಕ ಹೆಚ್ಚು ಖ್ಯಾತಿ ಪಡೆದಿದ್ದರು.

Read More »

ಬೆಂಗಳೂರು : ಪರಪುರುಷನ ಸಂಗದಿಂದ ಮಕ್ಕಳಿಗೆ ವಿಲನ್ ಆದ ತಾಯಿ : ಸದ್ಯ ಪೊಲೀಸರ ಅತಿಥಿ

ಬೆಂಗಳೂರು : ನಗರದ ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಯಮ್ಮ ಎಂಬಾಕೆ ತನ್ನ ಇಬ್ಬರು ಮಕ್ಕಳ ಪಾಲಿಗೆ ವಿಲನ್ ಆಗಿದ್ದಾಳೆ.ಹೌದು ಜಯಮ್ಮಳದ್ದು ವಯಸ್ಸಲ್ಲ ವಯಸ್ಸಿನಲ್ಲಿ ಮದುವೆಯಾಗಿ ಎರಡು ಹೆಣ್ಣು ಮಕ್ಕಳನ್ನು ಹೊಂದಿದ್ದಾಳೆ. ಹೀಗೆ ಅಪ್ರಾಪ್ತಳನ್ನು ಮದುವೆಯಾಗಿದಕ್ಕೆ ಆಕೆಯ ಗಂಡ ಜೈಲು ಸೇರಿದ್ದಾನೆ. ಈ ಇಬ್ಬರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದ ಜಯಮ್ಮ ಜೀವನ ನಿರ್ವಹಣೆಗಾಗಿ ಆಸ್ಪತ್ರೆವೊಂದರಲ್ಲಿ ಕೆಲಸಕ್ಕೆ ಸೇರಿಕೊಂಡು ಅಲ್ಲಿ ಪರಿಚಯವಾದ ಮತ್ತೊಬ್ಬಳ ಗಂಡನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾಳೆ. ಆತನ ಹೆಸರು …

Read More »

ಗಮನಿಸಿ: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಯಲಿದೆ ಆನ್ ಲೈನ್ ಪರೀಕ್ಷೆ

ಬೆಂಗಳೂರು: ಕೋವಿಡ್ ಕಾರಣದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು ಮಾಡಿದ್ದ ಶಿಕ್ಷಣ ಇಲಾಖೆ ಇದೀಗ ಶಾಕ್ ನೀಡಿದೆ. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯಲ್ಲಿ ತೊಡಿಕೊಳ್ಳುವಂತೆ ಮಾಡುವ ಉದ್ದೇಶದಿಂದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ಎರಡು ಪ್ರಶ್ನೆ ಪತ್ರಿಕೆಗಳನ್ನು ಹಾಳೆಯಲ್ಲಿ ಉತ್ತರಿಸಿ ಸ್ಕ್ಯಾನ್ ಮಾಡಿ ವಾಟ್ಸಪ್ ಅಥವಾ ಇ ಮೇಲ್ ಅಥವಾ ಅಂಚೆ ಮೂಲಕ ಉಪನ್ಯಾಸಕರಿಗೆ ಕಳುಹಿಸಬೇಕು. ಇವುಗಳನ್ನು ಸಂಬಂಧಿಸಿದ ಉಪನ್ಯಾಸಕರು …

Read More »

ರಸ್ತೆಗೆ ಇಳಿಯಬೇಡಿ: ಸಾರ್ವಜನಿಕರಿಗೆ ಸಚಿವ ಬಸವರಾಜ ಬೊಮ್ಮಾಯಿ ಮನವಿ

ಬೆಂಗಳೂರು: ಲಾಕ್‌ಡೌನ್‌ನ ಕೆಲವು ವಿನಾಯ್ತಿಗಳು ಆರಂಭವಾಗುವುದು ಇದೇ 14 ರ ಬಳಿಕ. ಎಲ್ಲವು ಮುಗಿಯಿತು ಎಂದು ಇವತ್ತೇ ರಸ್ತೆಗೆ ಇಳಿಯುತ್ತಿರುವುದು ಸರಿಯಲ್ಲ. ಸ್ವಲ್ಪ ತಾಳ್ಮೆ ವಹಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಗುರುವಾರ ರಾತ್ರಿ ನಿರ್ಧಾರ ಪ್ರಕಟಿಸಿದ್ದರಿಂದ ಕೆಲವರು ಇವತ್ತಿನಿಂದಲೇ ಲಾಕ್‌ಡೌನ್‌ ತೆರವು ಮಾಡಲಾಗಿದೆ ಎಂದು ಭಾವಿಸಿ ರಸ್ತೆಗೆ ಇಳಿಯುತ್ತಿದ್ದಾರೆ. ಇದು ಸರಿಯಲ್ಲ ಎಂದರು. ಕೋವಿಡ್‌ ಈಗಷ್ಟೇ ನಿಯಂತ್ರಣಕ್ಕೆ …

Read More »

Lock down ; ಸೋಮವಾರದಿಂದ ಯಾವುದಕ್ಕೆ ಅವಕಾಶ? ಯಾವುದಕ್ಕೆ ನಿರ್ಬಂಧ?

ಬೆಂಗಳೂರು : ತಿಂಗಳಿಗೂ ಹೆಚ್ಚು ಸಮಯದಿಂದ ಕರ್ನಾಟಕದಲ್ಲಿ ಲಾಕ್​ಡೌನ್ ಜಾರಿಯಲ್ಲಿದೆ. ದಿನದಿಂದ ದಿನಕ್ಕೆ ಕೊರೋನಾ ಕೇಸುಗಳು ನಿಯಂತ್ರಣಕ್ಕೆ ಬರುತ್ತಿದ್ದರೂ ಸರ್ಕಾರ ನಿರೀಕ್ಷಿಸಿದ ಮಟ್ಟಿಗೆ ಕೋವಿಡ್ ಪ್ರಕರಣಗಳು ಕಡಿಮೆಯಾಗಿಲ್ಲ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಾಗಿರುವ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್​ಡೌನ್ ವಿಸ್ತರಣೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್​ಲಾಕ್​ ಘೋಷಿಸಲಾಗಿದೆ. ಆದರೆ, ಅನ್​ಲಾಕ್​ ಮಾಡಲಾಗಿರುವ ಜಿಲ್ಲೆಗಳಲ್ಲೂ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ? ಆ …

Read More »

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರ ಜೇಬಿಗೆ ಕನ್ನ ಹಾಕುತ್ತಿವೆ : ಡಿಕೆಶಿ ಆಕ್ರೋಶ

ಬೆಂಗಳೂರು, ಜೂ.11- ದರ ಏರಿಕೆಯ ಮೂಲಕ ಸರ್ಕಾರಗಳು ಜನರ ಜೋಬಿಗೆ ಕನ್ನ ಹಾಕಿವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ನಾಟ್‌ಔಟ್ 100, ಐದು ದಿನಗಳ ಪ್ರತಿಭಟನೆಯ ಆರಂಭದ ದಿನವಾದ ಇಂದು ಬೆಂಗಳೂರಿನ ಶಿವಾನಂದ ಸರ್ಕಲ್ ನ ರೆಡ್ಡಿ ಪೆಟ್ರೋಲ್ ಬಂಕ್ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ದೇಶದ 140 ಕೋಟಿ ಜನರಿಗೂ …

Read More »

ಆಟೋ ಸಂಚಾರ, ಪಾರ್ಕ್, 2 ಗಂಟೆವರೆಗೆ ಅಂಗಡಿ ಓಪನ್; ಲಾಕ್ಡೌನ್ ಸಡಿಲಿಕೆ -11 ಜಿಲ್ಲೆಗಳಲ್ಲಿ ಯಥಾಸ್ಥಿತಿ

ಬೆಂಗಳೂರು: ಕೊರೋನಾ ತಡೆಗೆ ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳ ಮೇರೆಗೆ ಈಗಿರುವ ನಿರ್ಬಂಧಗಳಲ್ಲಿ ಕೆಲವು ಮಾರ್ಪಾಡು, ಸಡಿಲಿಕೆ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳಿಗೆ ಅನ್ವಯವಾಗುವಂತೆ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಈ ಜಿಲ್ಲೆಗಳ ಜಿಲ್ಲಾಧಿಕಾರಿಗಳು, …

Read More »

ವಿಜಯೇಂದ್ರ ಮಠ ಸುತ್ತಾಟ ಗುಟ್ಟು?

ಬೆಂಗಳೂರು: ‘ಮುಖ್ಯಮಂತ್ರಿ ಸ್ಥಾನದಿಂದ ಯಡಿಯೂರಪ್ಪನವರ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ವರಿಷ್ಠರು ಭರವಸೆ ನೀಡಿದ್ದಾರೆ ಎಂದು ಸಚಿವರು, ಬಿಜೆಪಿ ನಾಯಕರು ಬಲವಾಗಿ ಪ್ರತಿಪಾದಿಸಿದ್ದರೂ ಪಕ್ಷದ ರಾಜ್ಯ ಉಪಾಧ್ಯಕ್ಷ ಹಾಗೂ ಮುಖ್ಯಮಂತ್ರಿ ಪುತ್ರ ಬಿ.ವೈ.ವಿಜಯೇಂದ್ರ ಅವರು ಮಠಗಳನ್ನು ಸುತ್ತಲಾರಂಭಿಸಿರುವುದು ರಾಜಕೀಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಯಡಿಯೂರಪ್ಪನವರ ವಿರೋಧಿ ಎಂದೇ ಗುರುತಿಸಿಕೊಂಡಿರುವ ಪ್ರವಾಸೋದ್ಯಮ ಸಚಿವ ಸಿ.ಪಿ. ಯೋಗೇಶ್ವರ್ ಅವರು ಇತ್ತೀಚೆಗೆ ಹಲವು ಮಠಗಳಿಗೆ ಭೇಟಿ ಕೊಟ್ಟಿದ್ದರು. ದೆಹಲಿ ಮಟ್ಟದಲ್ಲಿ ಬಿಜೆಪಿಯೊಳಗೆ ‘ಹಿಡಿತ’ ಹೊಂದಿರುವ …

Read More »

ತೈಲ ಬೆಲೆ: ಇಂದಿನಿಂದ ಕಾಂಗ್ರೆಸ್‌ ಪ್ರತಿಭಟನೆ

ಬೆಂಗಳೂರು: ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ವಿರೋಧಿಸಿ ಕಾಂಗ್ರೆಸ್‌ ಇಂದಿನಿಂದ ಐದು ದಿನ ರಾಜ್ಯಾದ್ಯಂತ ಐದು ಸಾವಿರ ಪೆಟ್ರೋಲ್‌ ಬಂಕ್‌ಗಳ ಮುಂದೆ ಹಮ್ಮಿಕೊಂಡಿರುವ ಸರಣಿ ಪ್ರತಿಭಟನೆ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೆಪಿಸಿಸಿಯಿಂದ ಜಿಲ್ಲಾವಾರು ಉಸ್ತುವಾರಿಗಳನ್ನು ನೇಮಿಸಲಾಗಿದೆ. ಶಾಸಕರು, ಮಾಜಿ ಸಚಿವರು ಮತ್ತು ಸಂಸದರು, ಮಾಜಿ ಸಂಸದರಿಗೆ ಜಿಲ್ಲಾವಾರು ಉಸ್ತುವಾರಿ ನೀಡಿದ್ದು, ಪ್ರತಿಯೊಬ್ಬರೂ ಪ್ರತಿಭಟನೆಯ ಮೇಲೆ ಜೂಮ್‌ ಮೂಲಕ ನಿಗಾ ಇರಿಸಿ ಕೆಪಿಸಿಸಿಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ. ಪ್ರತಿಭಟನೆಯ ಒಂದು …

Read More »