Breaking News

ಬೆಂಗಳೂರು

ಮೂರನೇ ಆಲೆ ಆತಂಕ: ಪರಿಷತ್‌ ಸಭಾಪತಿ ಹೊರಟ್ಟಿ ಸಲಹೆ

ಬೆಂಗಳೂರು: ಕರೊನಾ ಮೂರನೇ ಅಲೆ ಮಕ್ಕಳನ್ನು ಬಾಧಿಸುವ ಸಾಧ್ಯತೆ ಬಗ್ಗೆ ಪರಿಣಿತರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಸರ್ಕಾರ ಅಧ್ಯಯನ ನಡೆಸಿ ಸೂಕ್ತ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಬಿ.ಎಸ್‌.ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಅವರಿಗೆ ಪತ್ರ ಬರೆದಿರುವ ಅವರು, ಮೂರನೇ ಆಲೆಯು ಭವಿಷ್ಯದ ವಾರಸುದಾರರಾದ ಮಕ್ಕಳ ಮೇಲೆ ಬೀರಬಹುದ ಪರಿಣಾಮಗಳ ಬಗ್ಗೆ ತಿಳಿದುಕೊಂಡು ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ. …

Read More »

ಸೋಂಕಿತರು ಇನ್ನು ಮುಂದೆ ಕಡ್ಡಾಯವಾಗಿ ಕೋವಿಡ್‌ ಕೇರ್‌ ಸೆಂಟರ್‌ ನಲ್ಲಿರಬೇಕು ; ಆರೋಗ್ಯ ಸಚಿವರು

ಬೆಂಗಳೂರು : ಸೋಂಕಿತರು ಇನ್ನು ಮುಂದೆ ಹೋಂ ಐಸೋಲೇಷನ್‌ ನಲ್ಲಿ ಇರುವಂತಿಲ್ಲ. ಅವರು ಕಡ್ಡಾಯವಾಗಿ ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯಬೇಕು. ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ. ಗದಗ ನಗರದ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕಿತರ ಸ್ವ್ಯಾಬ್ ಪರೀಕ್ಷೆ ವರದಿ 24 ರಿಂದ 36 ಗಂಟೆಯ ಒಳಗಾಗಿ ಸಿಗುವಂತೆ ಕ್ರಮ …

Read More »

ಬೆಂಗಳೂರಿಗೆ ಬರೋ ವ್ಯಕ್ತಿಗಳಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ?

ಬೆಂಗಳೂರು: ಲಾಕ್‍ಡೌನ್ ಮುಗಿದ ಬಳಿಕ ಬೆಂಗಳೂರಿಗೆ ಬರುವ ವ್ಯಕ್ತಿಗಳಿಗೆ ಸರ್ಕಾರ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡುತ್ತಾ ಎಂಬ ಪ್ರಶ್ನೆ ಈಗ ಎದ್ದಿದೆ. ಹೌದು. ಸದ್ಯ ಈಗ ಜೂನ್ 7ರವರೆಗೆ ಲಾಕ್‍ಡೌನ್ ಮುಂದುವರಿಯಲಿದ್ದು, ನಂತರ ಏನು ಎನ್ನುವುದು ತಿಳಿದು ಬಂದಿಲ್ಲ. ಲಾಕ್‍ಡೌನ್ ತೆರವಾದ ಕೂಡಲೇ ಮತ್ತೆ ಊರಿನಿಂದ ಬೆಂಗಳೂರಿಗೆ ವಲಸೆ ಆರಂಭವಾಗಲಿದೆ. ಲಾಕ್‍ಡೌನ್ ಹೇರಿದ ಬಳಿಕವೂ ಕೊರೊನಾ ನಿಯಂತ್ರಣಕ್ಕೆ ಬಾರದೇ ಇದ್ದಲ್ಲಿ ಜೂನ್ 7ರ ಬಳಿಕ ಬೆಂಗಳೂರಿಗೆ ಬರುವ ವ್ಯಕ್ತಿಗಳಿಗೆ …

Read More »

ಮಕ್ಕಳ ಮನೆಗೇ ಬರಲಿದೆ ಪಠ್ಯಪುಸ್ತಕ : ಆಗಸ್ಟ್‌ ಅಂತ್ಯದ ವೇಳೆಗೆ ಶಾಲೆಗಳಿಂದ ರವಾನೆ

ಬೆಂಗಳೂರು : ಕೊರೊನಾ ದಿಂದಾಗಿ ಮನೆಯಲ್ಲೇ ಇರುವ ವಿದ್ಯಾರ್ಥಿಗಳ ಸ್ವಯಂ ಅಧ್ಯಯನಕ್ಕೆ ಅನುಕೂಲವಾಗುವಂತೆ ಆಗಸ್ಟ್‌ ಅಂತ್ಯದೊಳಗೆ ಪಠ್ಯಪುಸ್ತಕ ಪೂರೈಕೆಗೆ ಶಿಕ್ಷಣ ಇಲಾಖೆ ಮುಂದಾಗಿದೆ. 2021-22ನೇ ಸಾಲಿನ ಪಠ್ಯಪುಸ್ತಕ ಮುದ್ರಣ ಸಂಬಂಧ ಕರ್ನಾಟಕ ಪಠ್ಯಪುಸ್ತಕ ಸಂಘವು ಎಲ್ಲ ಶಾಲೆಗಳಿಂದ ಈಗಾಗಲೇ ಪುಸ್ತಕದ ಮಾಹಿತಿ ಪಡೆದಿದೆ. ಪುಸ್ತಕ ಮುದ್ರಣ ಕ್ಕಾಗಿ ಟೆಂಡರ್‌ ಪ್ರಕ್ರಿಯೆ ಆರಂಭವಾಗಿದೆ. ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡು, ಕಾರ್ಯಾದೇಶ ನೀಡಿದ 100 ದಿನಗಳೊಳಗೆ ಟೆಂಡರ್‌ ಪಡೆದ ಸಂಸ್ಥೆ ಪುಸ್ತಕಗಳನ್ನು ಮುದ್ರಿಸಿ, ಕರ್ನಾಟಕ …

Read More »

ಕೋವಿಡ್ ಲಸಿಕೆಯ 2ನೇ ಡೋಸ್ ನೀಡಲು ತರ್ಕಬದ್ಧ ನೀತಿ ಜಾರಿಗೊಳಿಸಿ: ಹೈಕೋರ್ಟ್

ಬೆಂಗಳೂರು, ಮೇ 21: ರಾಜ್ಯದಲ್ಲಿ ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡಲು ತರ್ಕಬದ್ಧ ನೀತಿಯನ್ನು ಜಾರಿಗೊಳಿಸಿ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್‌ ಓಕಾ ಮತ್ತು ನ್ಯಾಯಮೂರ್ತಿ ಅರವಿಂದ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠವು ಮೇ 25ರಂದು ತರ್ಕಬದ್ಧವಾದ ಲಸಿಕೆ ನೀತಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ರಾಜ್ಯದಲ್ಲಿ ಕೋವಿಡ್‌ ಲಸಿಕೆಯ ವ್ಯಾಪಕ ಕೊರತೆಯಿದೆ ಎಂಬ ವಿಚಾರವನ್ನು ಮನಗಂಡ ಮೇಲೆ ನ್ಯಾಯಾಲಯವು …

Read More »

ಕೋವಿಡ್ ಕಾರಣಕ್ಕೆ ಎಲ್ಲಾ ತಪ್ಪಿಗೂ ಕ್ಷಮೆ ಸಿಗದು: ಹೈಕೋರ್ಟ್

ಬೆಂಗಳೂರು: ಎಲ್ಲಾ ಲೋಪಕ್ಕೂ ಕೋವಿಡ್ ಕಾರಣ ನೀಡಲು ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್‌, ನಿರೀಕ್ಷಣಾ ಜಾಮೀನು ಆದೇಶದಲ್ಲಿದ್ದ ನಿರ್ಬಂಧ ಸಡಿಲಿಕೆ ಕೋರಿದ್ದ ಅರ್ಜಿಯೊಂದನ್ನು ವಜಾಗೊಳಿಸಿದೆ. 10 ದಿನಗಳಲ್ಲಿ ಪೊಲೀಸ್ ಮುಂದೆ ಹಾಜರಾಗುವಂತೆ ಅರ್ಜಿದಾರರಿಗೆ ನಿರ್ದೇಶನ ನೀಡಿದೆ. ಮಂಡ್ಯ ನಿವಾಸಿ ದೇವರಾಜ್ ಎಂಬುವರ ವಿರುದ್ಧ ನಾಗಮಂಗಲ ಗ್ರಾಮಾಂತರ ಪೊಲೀಸರು ಸ್ಪೋಟಕ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣವನ್ನು 2019ರ ನವೆಂಬರ್‌ 4ರಂದು ದಾಖಲಿಸಿದ್ದರು. ಟೈಫಾಯಿಡ್‌ನಿಂದ ಬಳಲುತ್ತಿದ್ದ ಕಾರಣ ನೀಡಿದ್ದಕ್ಕಾಗಿ ನಿರೀಕ್ಷಣಾ ಜಾಮೀನನ್ನು ನ್ಯಾಯಾಲಯ ನೀಡಿತ್ತು. …

Read More »

ದೇಶದಲ್ಲಿ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ

ಬೆಂಗಳೂರು: ಕೊರೊನಾ ಭೀಕರತೆ ನಡುವೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಟ್ಟಹಾಸ ಹೆಚ್ಚುತ್ತಿದ್ದು, ಬ್ಲ್ಯಾಕ್ ಫಂಗಸ್ ಚಿಕಿತ್ಸೆಗಾಗಿ ಇದೀಗ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕಕ್ಕೆ ಬ್ಲ್ಯಾಕ್ ಫಂಗಸ್ ಗೆ ಇಂಜಕ್ಷನ್ ಹಂಚಿಕೆ ಮಾಡಲಾಗಿದೆ. ಆಂಫೊಟೆರಿಸಿನ್ ಬಿ 1,270 ವಯಲ್ಸ್ ಗಳನ್ನು ರಾಜ್ಯಕ್ಕೆ ನೀಡಲಾಗಿದೆ ಎಂದು ಹೇಳಿದರು. ದೇಶದಲ್ಲಿ 8,840 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ …

Read More »

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಲಾಕ್ ಡೌನ್ ಕಠಿಣ ನಿಯಮ: ಖಾಕಿಪಡೆ ಹೈ ಅಲರ್ಟ್, ಹಲವರು ವಶಕ್ಕೆ

ಬೆಂಗಳೂರು: ಕೋವಿಡ್ ಎರಡನೇ ಅಲೆಯ ತೀವ್ರ ಅಬ್ಬರವನ್ನು ನಿಯಂತ್ರಿಸಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರ ಮತ್ತೆ 14 ದಿನಗಳ ಕಾಲ ಲಾಕ್ ಡೌನ್ ನ್ನು ನಿನ್ನೆ ವಿಸ್ತರಿಸಿ ಪೊಲೀಸರಿಗೆ ಸಂಪೂರ್ಣ ಅಧಿಕಾರ ನೀಡಿತು. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮನೆಯ ಹತ್ತಿರದ ಅಂಗಡಿಗಳಿಗೆ, ಸ್ಥಳಗಳಿಗೆ ನಾಗರಿಕರಿಗೆ ಅಗತ್ಯ ಕೆಲಸಗಳಿಗೆ ಹೋಗಲು ಮಾತ್ರ ಸರ್ಕಾರ ಅವಕಾಶ ನೀಡಿದ್ದು ಅನಗತ್ಯವಾಗಿ ರಸ್ತೆಯಲ್ಲಿ ನಡೆದುಕೊಂಡು, ವಾಹನಗಳಲ್ಲಿ ಓಡಾಡುವವರನ್ನು ವಶಕ್ಕೆ ಪಡೆದು …

Read More »

ಸಂವಾದ ; ಕಣ್ಣೀರು ಹೇಡಿಯ ಅಸ್ತ್ರ ಎಂದ ಕಾಂಗ್ರೆಸ್‌

ಬೆಂಗಳೂರು, : ಆರೋಗ್ಯ ಕಾರ್ಯಕರ್ತರೊಂದಿಗೆ ಸಂವಾದದ ವೇಳೆ ಪ್ರಧಾನಿ ಮೋದಿ ಗದ್ಗಿತರಾದ ಬಗ್ಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ವ್ಯಂಗ್ಯವಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕೆಪಿಸಿಸಿ, “ಕಣ್ಣೀರು ಹೇಡಿಯ ಪ್ರಮುಖ ಅಸ್ತ್ರ. ಎದುರಿಗಿದ್ದ ಕ್ಯಾಮೆರಾ ಹಾಗೂ ಟೆಲಿಪ್ರಾಂಪ್ಟರ್‌ ನೋಡಿಕೊಂಡು ಕಣ್ಣೀರು ಸುರಿಸುವುದು ಅದ್ಬುತ ನಟನಾ ಕೌಶಲ್ಯ! @narendramodi ಅವರೇ, ಜನತೆಗೆ ಬೇಕಿರುವುದು ನಿಮ್ಮ ಕಣ್ಣೀರಲ್ಲ””ಆಕ್ಸಿಜನ್, ಲಸಿಕೆ, ವೈದ್ಯಕೀಯ ವ್ಯವಸ್ಥೆ, ಚಿಕಿತ್ಸೆ, ಆರ್ಥಿಕ ನೆರವು. ಇದ್ಯಾವುದನ್ನೂ ನೀಡದೆ ಎರಡು …

Read More »

ಎಸ್‌ಆರ್‌ಎಸ್ ಟ್ರಾವೆಲ್ಸ್ ಮಾಲೀಕ ರಾಜಶೇಖರ್ ವಿಧಿವಶ: ಕೋವಿಡ್-19 ಸೋಂಕಿಗೆ ಬಲಿ

ಬೆಂಗಳೂರು: ದೇಶದ ಸಾರಿಗೆ ಉದ್ಯಮದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೆ.ಟಿ. ರಾಜಶೇಖರ್ (78) ಶುಕ್ರವಾರ ನಿಧನರಾದರು. ಮಾಗಡಿ ಮೂಲದ ರಾಜಶೇಖರ್ ಅವರು ದೇಶದ ಪ್ರಮುಖ ಸಾರಿಗೆ ಸಂಸ್ಥೆಗಳಲ್ಲಿ ಒಂದು ಎಂದೇ ಗುರುತಿಸಿಕೊಂಡಿದ್ದ ಎಸ್‌ಆರ್‌ಎಸ್ ಟ್ರಾವೆಲ್ಸ್ ಮತ್ತು ಲಾಜಿಸ್ಟಿಕ್ಸ್ ಸಂಸ್ಥೆ ಸ್ಥಾಪಿಸಿದ್ದರು. ಇದಕ್ಕೂ ಮುನ್ನ ಹಲವು ರೀತಿಯ ಸವಾಲುಗಳನ್ನು ಎದುರಿಸಿದ್ದರು. ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿದ್ದ ರಾಜಶೇಖರ್, ಆರಂಭದಲ್ಲಿ ಟೂರಿಸ್ಟ್ …

Read More »