ಬೆಂಗಳೂರು, ಮೇ 28: ಕರ್ನಾಟಕದಲ್ಲಿ ಕೊರೊನಾವೈರಸ್ ಲಸಿಕೆಯ ವಿತರಿಸುವ ಖಾಸಗಿ ಆಸ್ಪತ್ರೆಗಳಲ್ಲಿ 200 ರೂಪಾಯಿ ಸೇವಾ ಶುಲ್ಕವನ್ನು ಮಾತ್ರ ವಿಧಿಸುವಂತೆ ಗುರುವಾರ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಕೊವಿಡ್-19 ಲಸಿಕೆ ಉತ್ಪಾದಕ ಕಂಪನಿಗಳು ಖಾಸಗಿ ಆಸ್ಪತ್ರೆಗಳಿಗೆ ನೀಡಿರುವ ಲಸಿಕೆ ದರದ ಮೇಲೆ ಸೇವಾಶುಲ್ಕ ವಿಧಿಸುವ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಕರ್ನಾಟಕ ಸರ್ಕಾರವು ಆರಂಭದಲ್ಲಿ 100 ರೂಪಾಯಿ ಸೇವಾ ಶುಲ್ಕ ವಿಧಿಸುವುದಕ್ಕೆ ಮಾತ್ರ ಅನುಮತಿ ನೀಡಿತ್ತು. ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ …
Read More »ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ B.S.Y.
ಬೆಂಗಳೂರು: ನಾಯಕತ್ವದ ಬದಲಾವಣೆಯ ವಿಷಯದಲ್ಲಿ ಮೌನ ಕಾಪಾಡಿಕೊಂಡಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರು ಈಗ ಮೌನ ಮುರಿದು ಕೊನೆಗೆ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ವಿಧಾನ ಸೌಧದಲ್ಲಿ ಮಾತನಾಡಿದ ಅವರು, “ಪ್ರಸ್ತುತ, ನನ್ನ ಆದ್ಯತೆಗಳು COVID-19 ಸೋಂಕುಗಳ ನಿಯಂತ್ರಣದಲ್ಲಿದೆ. ಜನರ ಕಲ್ಯಾಣಕ್ಕೆ ಒತ್ತು ನೀಡುವುದು ನನ್ನ ಆದ್ಯತೆ. ಬೇರೆ ಯಾವುದೇ ಸಮಸ್ಯೆಗಳು ನನ್ನ ಮುಂದೆ ಇಲ್ಲ “ಎಂದು ಅವರು ಪ್ರತಿಕ್ರಿಯಿಸಿದರು. “ಯಾರು ದೆಹಲಿಗೆ ಹೋಗಿ ಹಿಂದಿರುಗಿದರೂ ಅವರು ತಮ್ಮ ಉತ್ತರಗಳನ್ನು ಪಡೆದಿದ್ದಾರೆ. COVID …
Read More »ಜಿಂದಾಲ್ ಗೆ ನೀಡಿದ್ದ ಭೂಮಿ ವಾಪಸ್; ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ
ಬೆಂಗಳೂರು: ಜಿಂದಾಲ್ ಗೆ ಭೂಮಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಜಿಂದಾಲ್ ಗೆ ನೀಡಿದ್ದ ಭೂಮಿ ವಾಪಸ್ ಪಡೆಯಲು ನಿರ್ಧರಿಸಲಾಗಿದೆ. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಜಿಂದಾಲ್ ಗೆ ಭೂಮಿ ನೀಡುವ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡಲು ನಿರ್ಧರಿಸಲಾಗಿದೆ ಎಂದರು. ಜಿಂದಾಲ್ ಗೆ 3,667 ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಈ ಬಗ್ಗೆ …
Read More »ಜಿಂದಾಲ್ ಜಮೀನು : ಕೋರ್ಟ್ ತೀರ್ಪಿನ ನಂತರ ತೀರ್ಮಾನ : ಸಚಿವ ಬಸವರಾಜ್ ಬೊಮ್ಮಾಯಿ
ಬೆಂಗಳೂರು : ಜಿಂದಾಲ್ ಸಂಸ್ಥೆಗೆ ಜಮೀನು ನೀಡುವುದು ಹಿಂದಿನ ಸಂಪುಟದಲ್ಲಿ ತೆಗೆದುಕೊಂಡಿರುವ ತೀರ್ಮಾನ, ಈ ಸಂಪುಟ ಒಪ್ಪಿಗೆ ನೀಡಿಲ್ಲ ಎಂದು ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿ ಮಾತಾಡಿರುವ ಅವರು, ಜಿಂದಾಲ್ ಗೆ ಜಮೀನು ನೀಡಿರುವ ಕುರಿತು ಮುಂದೆ ಏನ್ ಆಗುತ್ತದೆ ಎನ್ನುವುದರ ಬಗ್ಗೆ ಗೊತ್ತಿಲ್ಲ. ಈ ಕುರಿತು ಹೈ ಕೋರ್ಟ್ ನಲ್ಲಿ ಪಿಐಎಲ್ ಇದೆ. ಸುಪ್ರೀಂ ಕೋರ್ಟ್ ನಲ್ಲಿಯೂ ಪ್ರಕರಣ ಇದೆ. ಅವತ್ತು ಕರ್ನಾಟಕ ಹೈಕೋರ್ಟ್ ಹೇಳಿತ್ತು. …
Read More »ರೈತರ ಹೋರಾಟಕ್ಕೆ 6 ತಿಂಗಳು: ಬೇಡಿಕೆ ಈಡೇರಿಸಿ, ಕಾಯಿದೆಗಳನ್ನು ವಾಪಸ್ ಪಡೆಯಲು ಸಿದ್ದು ಆಗ್ರಹ
ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರೈತರು ನಡೆಸುತ್ತಿರುವ ಹೋರಾಟಕ್ಕೆ ಆರು ತಿಂಗಳಾಗಿದ್ದು ಬೇಡಿಕೆಗಳನ್ನು ಪ್ರಜಾತಾಂತ್ರಿವಾಗಿ ಬಗೆಹರಿಸಿ, ಜನವಿರೋಧಿ ಕಾಯ್ದೆಗಳನ್ನು ವಾಪಸ್ಸು ಪಡೆಯಿರಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ದೇಶದ ಆರ್ಥಿಕ ಭದ್ರತೆಯನ್ನು ನಾಶ ಮಾಡುವ ಮತ್ತು ರೈತರ, ಕಾರ್ಮಿಕರ ಪಾಲಿಗೆ ಮಾರಣಾಂತಿಕವಾಗುವ ಕಾನೂನುಗಳನ್ನು ಸುಗ್ರೀವಾಜ್ಞೆ ಮೂಲಕ ಮೋದಿಯವರ ಸರ್ಕಾರ ಜಾರಿಗೆ ತಂದು ಒಂದು ವರ್ಷವಾಗುತ್ತಿದೆ. ಪ್ರತಿಭಟನೆಯ …
Read More »ಕರ್ನಾಟಕದ ಹೊಸ ಮುಖ್ಯಮಂತ್ರಿ ಹೆಸರು ಘೋಷಿಸಲಿರುವ ಪ್ರಧಾನಿ ಮೋದಿ!
ಬೆಂಗಳೂರು, ಮೇ. 26: ವಯೋ ಸಹಜ ಕಾರಣದಿಂದ ಬಿ.ಎಸ್.ಯಡಿಯೂರಪ್ಪ ಅವರ ಸಿಎಂ ಪಟ್ಟದಿಂದ ಕೆಳಗೆ ಇಳಿಯಲಿದ್ದಾರೆ. ಅಂದುಕೊಂಡಂತೆ ಆದಲ್ಲಿ ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ‘ಯಂಗ್ ಸಿಎಂ’ ಹೆಸರನ್ನು ಪ್ರಧಾನಿ ಮೋದಿ ಅವರೇ ಘೊಷಣೆ ಮಾಡಲಿದ್ದಾರೆ. ಆ ಅಚ್ಚರಿಯ ಹೊಸ ಸಿಎಂ ಯಾರು ಅಂತ ಈವರೆಗೂ ಯಾರಿಗೂ ಗುಟ್ಟು ಬಿಟ್ಟು ಕೊಟ್ಟಿಲ್ಲ! ಹೌದು. ಬಿಜೆಪಿ ವಲಯದಲ್ಲಿ ಬಹು ಚರ್ಚೆಗೆ ಕಾರಣವಾಗಿರುವ ವಿಚಾರವಿದು. ಬಿಜೆಪಿ ಪಕ್ಷದ ನೀತಿ ಸಂಹಿತೆ …
Read More »ಯಡಿಯೂರಪ್ಪ ಸಿಎಂ ಪಟ್ಟ ಬಿಟ್ಟರೆ ಈ ಸಚಿವರೂ ಬದಲಾಗುತ್ತಾರೆ
ಬೆಂಗಳೂರು, ಮೇ. 26: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬದಲು ಮಾಡುವ ಜತೆಗೆ ರಾಜ್ಯದಲ್ಲಿ ಸಚಿವರ ಖಾತೆಗಳು ಬದಲಾಗಲಿವೆ. ಕೆಲವರಿಗೆ ಸಚಿವ ಸಂಪುಟ ಭಾಗ್ಯ ಸಿಕ್ಕಿದರೆ, ಇನ್ನೂ ಕೆಲವರು ಸಚಿವ ಸ್ಥಾನ ಕಳೆದುಕೊಳ್ಳುವುದು ಗ್ಯಾರೆಂಟಿ ಎಂಬ ಮಹತ್ವದ ಸಂಗತಿಯೊಂದು ಬಿಜೆಪಿ ಪಾಳಯದಿಂದಲೇ ಹೊರಗೆ ಬಿದ್ದಿದೆ. ಆಪರೇಷನ್ ಕಮಲ ಮಾಡಿ ಪಕ್ಷಾಂತರಿಗಳಿಗೆ ಮಣೆ ಹಾಕಿ ಯಡಿಯೂರಪ್ಪ ಅವರು ಸಚಿವ ಸಂಪುಟ ರಚನೆ ಮಾಡಿದ್ದರು. ಮಹತ್ವದ ಖಾತೆಗಳನ್ನು ವಲಸೆ ನಾಯಕರಿಗೆ ಕೊಟ್ಟು ಮೂಲ …
Read More »ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ಮಾರಾಟ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ
ಬೆಂಗಳೂರು: ಜಿಂದಾಲ್ ಕಂಪನಿಗೆ 3,667 ಎಕರೆ ಜಮೀನು ಮಾರಾಟ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಇಂದಿನ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಜಿಂದಾಲ್ ಗೆ ಜಮೀನು ನೀಡಿದ ವಿಚಾರ ದೆಹಲಿವರೆಗೆ ತಲುಪಿದೆ. ಸಚಿವ ಆನಂದ್ ಸಿಂಗ್ ಸೇರಿದಂತೆ ಹಲವು ಪ್ರಮುಖರು ಜಿಂದಾಲ್ ಗೆ ಜಮೀನು ನೀಡಿದ ನಿರ್ಧಾರ ವಾಪಸ್ ಪಡೆಯುವಂತೆ ಒತ್ತಾಯಿಸುವ ಸಾಧ್ಯತೆ ಇದೆ. ಇದರಿಂದ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಿದೆ ಎಂದು ಹಲವು ಶಾಸಕರು ಹೇಳಿದ್ದು, ಹೈಕಮಾಂಡ್ ಗೂ ದೂರು …
Read More »ಮುಖ್ಯಮಂತ್ರಿ ಬದಲಾವಣೆ ವಿಚಾರ ಶೇ.100 ರಷ್ಟು ನಿಜ,: ಆರ್ ಅಶೋಕ್
ಬೆಂಗಳೂರು: ಕೊರೋನಾ ಅಬ್ಬರದ ನಡುವೆಯೇ ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಇನ್ನೆರಡು ವರ್ಷದ ಅಧಿಕಾರವದಿ ಪೂರೈಸಬೇಕಾಗಿದೆ. ಆದ್ರೆ, ಅವಧಿಗೂ ಮುನ್ನ ಅವರನ್ನ ಬದಲಿಸಿ ಬೇರೆಯವರಿಗೆ ಸಿಎಂ ಪಟ್ಟಕಟ್ಟುವ ಕಸರತ್ತು ನಡೆದಿವೆ. ಇದಕ್ಕೆ ಪೂರಕವೆಂಬಂತೆ ಬಿಜೆಪಿ ಶಾಸಕರು, ಸಚಿವರುಗಳು ದೆಹಲಿಗೆ ತೆರಳಿ ಹೈಕಮಾಂಡ್ ಜೊತೆ ಮಾತುಕತೆ ನಡೆಸಿದ್ದಾರೆ. ಇವೆಲ್ಲಾ ಬೆಳಗವಣಿಗೆಗಳು ನಡೆಯುತ್ತಿರುವುದು ನಿಜ ಎಂದು ಸ್ವತಃ ಕಂದಾಯ ಸಚಿವ ಆರ್. ಅಶೋಕ್ ಖಚಿತಪಡಿಸಿದ್ದಾರೆ. ಇದರೊಂದಿಗೆ …
Read More »ಗುಡ್ ನ್ಯೂಸ್: ಮಕ್ಕಳ ಶಾಲಾ ಶುಲ್ಕದಲ್ಲಿ ಶೇಕಡ 25 ರಷ್ಟು ವಿನಾಯಿತಿ
ಕೊರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮಕ್ಕಳ ಶಾಲಾ ಶುಲ್ಕ ಇಳಿಕೆ ಮಾಡಲು ಅನೇಕ ಶಾಲೆಗಳ ಆಡಳಿತ ಮಂಡಳಿಗಳು ತೀರ್ಮಾನ ಕೈಗೊಂಡಿವೆ. ಕಳೆದ ಬಾರಿ ರಾಜ್ಯ ಸರ್ಕಾರ ಸೂಚನೆ ನೀಡಿದ ನಂತರವೂ ಅನೇಕ ಶಾಲೆಗಳು ಶುಲ್ಕದಲ್ಲಿ ವಿನಾಯಿತಿ ನೀಡಿರಲಿಲ್ಲ. ಪೂರ್ಣ ಪ್ರಮಾಣದಲ್ಲಿ ಶುಲ್ಕ ಪಾವತಿಸಿದ ಪೋಷಕರಿಗೆ ಶೇಕಡ 30 ರಷ್ಟು ವಿನಾಯಿತಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ನೀಡುವುದಾಗಿ ಹೇಳಲಾಗಿತ್ತು. ಆದರೆ, ಈಗ ವಿನಾಯಿತಿಯನ್ನು ನೀಡುತ್ತಿಲ್ಲ. ಈ ವರ್ಷ ಅನೇಕ ಶಾಲೆಗಳು ಪೋಷಕರು ಮತ್ತು …
Read More »