Breaking News

ಬೆಂಗಳೂರು

ರಸಗೊಬ್ಬರ ಬೆಲೆ ಏರಿಕೆ ರೈತರಿಗೆ ಗಾಯದ ಮೇಲೆ ಬರೆ : ಕುರುಬೂರು ಶಾಂತಕುಮಾರ್

ಬೆಂಗಳೂರು : ರಸಗೊಬ್ಬರ ಬೆಲೆ ಏರಿಕೆ ಕೇಂದ್ರ ರಾಜ್ಯ ಸರ್ಕಾರಗಳ ಗೋಮುಖ ವ್ಯಾಘ್ರ ನಡವಳಿಕೆ. ಯಾವುದೇ ಕಾರಣಕ್ಕೂ ರಸಗೊಬ್ಬರ ಬೆಲೆ ಏರಿಕೆ ಮಾಡುವುದಿಲ್ಲ ಹಳೆಯ ದರದಲ್ಲಿಯೇ ರಸಗೊಬ್ಬರಗಳು ಮಾರಾಟವಾಗುತ್ತದೆ. ರೈತರಿಗೆ ತೊಂದರೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಸದಾನಂದ ಗೌಡ ಹಾಗೂ ರಾಜ್ಯ ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳುತ್ತಲೇ ಬೆಲೆ ಏರಿಕೆ ಮಾಡಿ ರೈತರನ್ನು ಮೋಸಗೊಳಿಸಿದ್ದಾರೆ. ಹೊಸ ದರ ನಿಗದಿಯಾಗಿದೆ ಡಿಎಪಿ ಪ್ರತಿ ಚೀಲಕ್ಕೆ 1200 ರಿಂದ ಏರಿಕೆ …

Read More »

ಕೊರೊನಾ ಸಂಕಷ್ಟದಲ್ಲೂ 417 ಭೂಸ್ವಾಧೀನ ಪ್ರಕರಣ ಇತ್ಯರ್ಥ :ಡಿಸಿಎಂ ಗೋವಿಂದ ಕಾರಜೋಳ

ಬೆಂಗಳೂರು, ಮೇ 13-ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಕಳೆದ 8 ವರ್ಷಗಳಿಂದ ತಾಂತ್ರಿಕ ಸಮಸ್ಯೆಯಿಂದ ನೆನೆಗುದಿಗೆ ಬಿದ್ದಿದ್ದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 417 ಭೂ ಸ್ವಾಧೀನ ಪ್ರಕರಣಗಳನ್ನು ಇತ್ಯರ್ಥ ಪಡಿಸಿ, ಸಂಬಂಧಿಸಿದ ಜಮೀನಿನ ರೈತರಿಗೆ ನೇರವಾಗಿ ಪರಿಹಾರ ಧನವನ್ನು ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ತಿಳಿಸಿದ್ದಾರೆ. ಶಿವಮೊಗ್ಗ- ಚಿತ್ರದುರ್ಗ ಮಾರ್ಗದ ರಾಷ್ಟ್ರೀಯ ಹೆದ್ದಾರಿ -13, ಮುಧುಗಿರಿ- ಆಂಧ್ರಗಡಿ ಮಾರ್ಗದ ರಾಷ್ಟ್ರೀಯ ಹೆದ್ದಾರಿ 234, ಕೊಳ್ಳೆಗಾಲ- ಕೇರಳ …

Read More »

ಕೋವಿಡ್ ಕೇರ್ ಸೆಂಟರ್ ಗಳನ್ನಾಗಿ ಬದಲಾಯಿಸಲು ಸಿದ್ಧ: ಆದರೆ ಸಿಬ್ಬಂದಿ ಎಲ್ಲಿದೆ? ಹೋಟೆಲ್ ಮಾಲೀಕರ ಪ್ರಶ್ನೆ

ಬೆಂಗಳೂರು: ಹೋಟೆಲ್ ಗಳನ್ನು ಕೋವಿಡ್ ಕೇರ್ ಕೇಂದ್ರಗಳನ್ನು ಮಾರ್ಪಡಿಸಲು ತಾವು ಸಿದ್ದರಿದ್ದೇವೆ. ಅದರೆ ಅಲ್ಲಿಗೆ ಬೇಕಾದ ಸೌಲಭ್ಯ ಹಾಗೂ ಸಿಬ್ಬಂದಿಗೆ ಏನು ವ್ಯವಸ್ಥೆ ಮಾಡುವಿರಿ ಎಂದು ಹೋಟೆಲ್ ಮಾಲೀಕರು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಹೋಟೆಲ್ ಅಸೋಷಿಯೇಷನ್, ಜೊತೆ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿ ಅಧಿಕಾರಿಗಳು ನಡೆಸಿದ ವರ್ಚ್ಯೂವಲ್ ಸಭೆಯಲ್ಲಿ ಈ ಪ್ರಶ್ನೆ ಎತ್ತಲಾಯಿತು. 10 ಹೋಟೆಲ್ ಗಳ 1000 ರೂಂ ಗಳನ್ನು ಕೋವಿಡ್ ಕೇರ್ ಕೇಂದ್ರಗಳಾಗಿ ಬದಲಾಯಿಸುತ್ತೇವೆ, ಸರ್ಕಾರ 2000 …

Read More »

ರಾಜ್ಯದಲ್ಲಿ 18 ರಿಂದ 44 ವರ್ಷ ವಯೋಮಾನದವರಿಗೆ ಸದ್ಯಕ್ಕಿಲ್ಲ ಲಸಿಕೆ : ಅರೋಗ್ಯ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ 18 ರಿಂದ 44 ವರ್ಷ ವಯೋಮಾನದವರಿಗೆ ಮೊದಲ ಲಸಿಕೆ ನೀಡುವುದನ್ನು ಮೇ. 14 ರಿಂದ ತಾತ್ಕಾಲಿಕವಾಗಿ ಮುಂದೂಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ರಾಜ್ಯದ ಎಲ್ಲ ಲಸಿಕಾ ಕೇಂದ್ರಗಳು ಈ ಆದೇಶವನ್ನು ಪಾಲಿಸಲು ಅರೋಗ್ಯ ಇಲಾಖೆ ಸೂಚಿಸಿದೆ. ರಾಜ್ಯದಲ್ಲಿ ಈಗಾಗಲೇ ಲಸಿಕೆ ಪಡೆದಿರುವ 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಡೋಸ್‌ ಕೊಡಲು ಮೊದಲ ಆದ್ಯತೆಯನ್ನಾಗಿ ಮಾಡಿಕೊಳ್ಳಲಾಗಿದ್ದು, ಈಗ ರಾಜ್ಯದಲ್ಲಿ ಲಭ್ಯವಿರುವ ಲಸಿಕೆಯನ್ನು ಎರಡನೇ ಡೋಸ್‌ ನೀಡಲು ಮಾತ್ರ ಬಳಕೆ …

Read More »

ಲಸಿಕೆ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರ ಜನರಿಗೆ ದ್ರೋಹವೆಸಗಿದೆ : ಸಿದ್ದು ಆಕ್ರೋಶ

ಬೆಂಗಳೂರು : ಲಸಿಕೆ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನರಿಗೆ ದ್ರೋಹವೆಸಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಸಿಕೆ ಲಭ್ಯ ಇಲ್ಲ ಎಂದಾದರೆ ಎಲ್ಲರಿಗೂ ಹಾಕುವುದಾಗಿ ಏಕೆ ಹೇಳಬೇಕಿತ್ತು. ರಾಜ್ಯದಲ್ಲಿ ಅಭಿಯಾನಕ್ಕೆ ಚಾಲನೆ ನೀಡುವ ಅಗತ್ಯವಾದರೂ ಏನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ. ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಮತ್ತು ಸೋಂಕಿತರ ಪ್ರಾಣ ರಕ್ಷಣೆ ವಿಚಾರದಲ್ಲಿ ನಿರ್ಲಕ್ಸ್ಯ ವಹಿಸಿರುವ …

Read More »

ಬೆಂಗಳೂರು 1268 ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು !

ಬೆಂಗಳೂರು, ಮೇ. 12: ರೂಪಾಂತರಿ ಕೊರೊನಾ ವೈರೆಸ್ ಎರಡನೇ ಅಲೆಗೆ ಬೆಂಗಳೂರು ಪೊಲೀಸರು ಕೂಡ ಬೆಚ್ಚಿಬಿದ್ದಿದ್ದಾರೆ. ಬೆಂಗಳೂರಿನಲ್ಲಿ 1268 ಪೊಲೀಸ್ ಸಿಬ್ಬಂದಿ ಕೊರೊನಾ ಪಾಸಿಟಿವ್‌ಗೆ ಒಳಗಾಗಿದ್ದಾರೆ. ಅದರಲ್ಲಿ ಹನ್ನೆರಡು ಮಂದಿ ಪೊಲೀಸ್ ಸಿಬ್ಬಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಾರ್ಯಾಲಯದಿಂದ ಬಿಡುಗಡೆ ದಾಖಲೆಗಳ ಪ್ರಕಾರ ಬೆಂಗಳೂರಿನಲ್ಲಿ 1268 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಅದರಲ್ಲಿ 736 ಮಂದಿ ಮನೆಗಳಲ್ಲಿ ಕ್ವಾರೆಂಟೈನ್ ಒಳಗಾಗಿದ್ದಾರೆ. ಹದಿನಾಲ್ಕು …

Read More »

ಕೊರೋನಾಗೆ ಬಲಿಯಾದ ನಿವೃತ್ತ ಹಿರಿಯ ಐಪಿಎಸ್ ಅಧಿಕಾರಿ ಕೆ.ವಿ.ಆರ್.ಠಾಗೂರ್

ಬೆಂಗಳೂರು,ಮೇ.12- ದಕ್ಷತೆಗೆ ಹಾಗೂ ಪ್ರಾಮಾಣಿಕತೆಗೆ ಹೆಸರಾಗಿದ್ದ ನಿವೃತ್ತ ಹಿರಿಯ ಐಪಿಎಸ್ ಅಧಿಕಾರಿ ಕೆ.ವಿ.ಆರ್.ಠಾಗೂರ್(70) ಅವರು ಕೊರೊನಾಗೆ ಬಲಿಯಾಗಿದ್ದಾರೆ. ದಿ. ಮಾಜಿ ವಿಧಾನ ಪರಿಷತ್ ಸದಸ್ಯ ವೀರಣ್ಣ ಗೌಡ ಅವರ ಪುತ್ರರಾದ ಕೆ.ವಿ.ಆರ್. ಠಾಗೂರ್ ಅವರು ಸದಾ ಹಸನ್ಮುಖಿಯಾಗಿ, ಉತ್ಸಾಹದಿಂದಲೇ ಎಲ್ಲರನ್ನು ಬೆನ್ನುತಟ್ಟಿ ಬೆಳೆಸುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ವಿಧಿವಶರಾಗಿದ್ದಾರೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. ಸರಳ,ಸಜ್ಜನ ಅಧಿಕಾರಿಯೆಂದೇ ಗುರುತಿಸಿ ಕೊಂಡಿದ್ದ ಠಾಗೂರರು ಸಾಹಿತ್ಯ …

Read More »

ಮೈಸೂರು ತಲುಪಿದ ಆಮ್ಲಜನಕ ಟ್ಯಾಂಕ್‌

ಮೈಸೂರು: ಕೇಂದ್ರ ಸರ್ಕಾರವು ಆಮ್ಲಜನಕ ಎಕ್ಸ್‌ಪ್ರೆಸ್‌ನಲ್ಲಿ ಮಂಗಳವಾರ ಬೆಂಗಳೂರಿಗೆ ಸಾಗಿಸಿದ್ದ ಆಮ್ಲಜನಕದ ಒಂದು ಕಂಟೈನರ್‌ ಅನ್ನು (ಟ್ಯಾಂಕ್‌) ಬುಧವಾರ ಬೆಳಿಗ್ಗೆ ಮೈಸೂರಿಗೆ ತರಲಾಯಿತು. ಈ ಕಂಟೈನರ್‌ನಲ್ಲಿ 20 ಸಾವಿರ ಲೀಟರ್ ಆಮ್ಲಜನಕ ತುಂಬಿದೆ. ಈ ಆಮ್ಲಜನಕವನ್ನು ಸ್ಥಳೀಯವಾಗಿ ಶೇಖರಿಸಿ ಕೂಡಲೇ ಕಂಟೈನರ್‌ ಹಿಂದಿರುಗಿಸಬೇಕಿತ್ತು. ಆದರೆ, ಇಷ್ಟು ಆಮ್ಲಜನಕವನ್ನು ಸಂಗ್ರಹಿಸಲು ಬೇಕಾದ ಶೇಖರಣಾ ಘಟಕ ಮೈಸೂರು ಜಿಲ್ಲೆಯಲ್ಲಿ ಇರಲಿಲ್ಲ. ಹೀಗಾಗಿ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ವಿಕೋಪ ನಿರ್ವಹಣೆ ಕಾಯ್ದೆ ಪ್ರಯೋಗಿಸಿ …

Read More »

ಓಲಾ ಕ್ಯಾಬ್‌ ಮೂಲಕ ಮನೆ ಬಾಗಿಲಿಗೆ ಆಮ್ಲಜನಕ:

ಬೆಂಗಳೂರು, ಮೇ12-ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೋವಿಡ್‌ ಸೋಂಕಿತರಿಗೆ ಮನೆ ಬಾಗಿಲಿಗೇ ಓಲಾ ಕ್ಯಾಬ್‌ಗಳ ಮೂಲಕ ಆಮ್ಲಜನಕ ಸಾಂದ್ರಕಗಳನ್ನು (Oxygen Concentrator) ಒದಗಿಸುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಚಾಲನೆ ನೀಡಿದರು. ಮೊದಲು ಬೆಂಗಳೂರಿನಲ್ಲಿ ಈ ವ್ಯವಸ್ಥೆ ಆರಂಭವಾಗುತ್ತಿದ್ದು, ಕ್ರಮೇಣ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ. ಈ ಕೆಲಸದಲ್ಲಿ ಸರ್ಕಾರದ ಜತೆ ಗಿವ್‌ ಇಂಡಿಯಾ ಹಾಗೂ ಓಲಾ ಕ್ಯಾಬ್‌ ಕಂಪನಿಗಳು ಕೈಜೋಡಿಸಿವೆ.ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ, ಇಡೀ ರಾಜ್ಯದಲ್ಲಿಯೇ ಮೊತ್ತ …

Read More »

ಮಾಧ್ಯಮಗಳ ಮೇಲೆ ನಿರ್ಭಂಧ ಸಾದ್ಯವಿಲ್ಲ ಎಂದ ಕೋರ್ಟ್‌

ಬೆಂಗಳೂರು: ಕರೊನಾದ ಭೀಕರತೆಯ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿರುವುದರಿಂದ ಟಿ.ವಿ ಚಾನೆಲ್‌ಗಳನ್ನೇ ದೂಷಿಸಿ ದಿನನಿತ್ಯವೂ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳು ಹರಿದಾಡುವುದು ಹೊಸತೇನಲ್ಲ. ಯಾವುದೇ ವಿಷಯಗಳನ್ನು ಮಾಧ್ಯಮಗಳು ವರದಿ ಮಾಡಿದಾಗಲೂ ಇಂಥ ಟೀಕೆಗಳು ಬರುತ್ತವೆ.ಕರೊನಾದ ಕರಾಳ ಮುಖವನ್ನು ಬಿಚ್ಚಿಡುವ ಚಾನೆಲ್‌ಗಳನ್ನು ಎಡಬಿಡದೇ ನೋಡುತ್ತಾ ಅದರ ವಿರುದ್ಧ ದೂಷಿಸುವವರೇ ಹೆಚ್ಚಾಗಿ ಈ ರೀತಿಯ ಕಮೆಂಟ್‌ಗಳನ್ನು ಮಾಡುವುದು ತಿಳಿದ ವಿಷಯವೇ. ಹೀಗೆ ಮಾಧ್ಯಮಗಳನ್ನು ದೂಷಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಸಲಾಗಿತ್ತು. ಈ ರೀತಿಯ …

Read More »