Breaking News

ಬೆಂಗಳೂರು

ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತಹಂತವಾಗಿ ಲಾಕ್ ಡೌನ್ ಸಡಿಲಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.   ಇಂದು ಸೂರ್ಯಗ್ರಹಣ : ದೇಶದಲ್ಲಿ ಎಲ್ಲೆಲ್ಲಿ ಸೂರ್ಯಗ್ರಹಣ ಗೋಚರ?   ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಹತ್ವದ ಸಭೆ ನಡೆಯಲಿದ್ದು, ಸೋಮವಾರದಿಂದ ಹಂತ ಹಂತವಾಗಿ …

Read More »

ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಇಂದು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.   ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಕೃಷ್ಣ ಭೈರೇಗೌಡ ಸೇರಿ ‌ಇನ್ನಿತರ ಮುಖಂಡರು ಇದ್ದರು.   ಅನಾರೋಗ್ಯದಿಂದ ಚೇತರಿಸಿಕೊಂಡ ಸಿದ್ದರಾಮಯ್ಯ:   ಕಳೆದ ವಾರ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ …

Read More »

ಶಾಲಾರಂಭಕ್ಕೆ ದಿನ ನಿಗದಿ, ನಿರ್ಧಾರವಾಗದ ಶುಲ್ಕ : ಜೂ. 15ರಿಂದ ದಾಖಲಾತಿ; ಜು.1ರಿಂದ ತರಗತಿ

ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿ, ದಾಖಲಾತಿ, ಶಾಲಾರಂಭದ ದಿನಾಂಕ ಪ್ರಕಟಿಸಿದ್ದರೂ ಶುಲ್ಕದ ಗೊಂದಲವನ್ನು ಮಾತ್ರ ಸರಕಾರ ಬಗೆಹರಿಸಿಲ್ಲ. 2020-21ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ ಬೋಧನ ಶುಲ್ಕದಲ್ಲಿ ಶೇ. 30ರಷ್ಟು ಕಡಿತ ಮಾಡಿ ಆದೇಶ ಹೊರಡಿಸಲಾಗಿದೆ. ಜೂ. 15ರಿಂದ ದಾಖಲಾತಿ ಆರಂಭವಾಗಿ, ಜು. 1ರಿಂದ ತರಗತಿಗಳು ಪ್ರಾರಂಭ ವಾಗಲಿವೆ. ಆದರೆ ಹೆತ್ತವರು ಶುಲ್ಕ ಪಾವತಿಗೆ ಹಿಂದೇಟು ಹಾಕುತ್ತಿದ್ದಾರೆ. ಪ್ರತ್ಯಕ್ಷ ತರಗತಿಗಳು ನಡೆಯದೆ ಇರುವುದರಿಂದ ಪೂರ್ಣ ಶುಲ್ಕ …

Read More »

ಸುಪ್ರೀಂ ಕೋರ್ಟ್‌ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೃಷಿ ಪ್ರೀತಿ

ಬೆಂಗಳೂರು: ಸುಪ್ರೀಂ ಕೋರ್ಟ್‌ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿರುವ ಕೆ.ಎಂ. ನಟರಾಜ್ ಅವರು ಉನ್ನತ ಹುದ್ದೆಯಲ್ಲಿದ್ದರೂ ತಮ್ಮ ಜಮೀನಿನಲ್ಲಿ ಕೃಷಿ ಮಾಡುವ ಕಾಯಕ ಮರೆತಿಲ್ಲ. ಸುಪ್ರೀಂ ಕೋರ್ಟ್‌ ರಜೆ ಅವಧಿಯಲ್ಲಿ ತಮ್ಮ ಕೃಷಿ ಪ್ರೀತಿ ಮುಂದುವರಿಸಿದ್ದಾರೆ. ಪುತ್ತೂರು ತಾಲ್ಲೂಕಿನ ಈಶ್ವರಮಂಗಲದ ಕೊನೆತೋಟ ಮಹಾಬಲೇಶ್ವರ ನಟರಾಜ್ ಅವರು ಕೃಷಿ ಕುಟುಂಬದಲ್ಲಿ ಹುಟ್ಟಿ ಬೆಳೆದು ವಕೀಲ ವೃತ್ತಿಯಲ್ಲಿ ದೇಶದಲ್ಲೇ ಹೆಸರು ಮಾಡಿದ್ದಾರೆ. ಮಂಗಳೂರಿನ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಪಡೆದ ಇವರು …

Read More »

ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ‌ ತೆರಿಗೆ ತಗ್ಗಿಸುವುದು : ಡಿ. ಕೆ. ಶಿ

ಬೆಂಗಳೂರು : ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ‌ ತೆರಿಗೆ ತಗ್ಗಿಸುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತೈಲ ಬೆಲೆ ಏರಿಕೆ ಖಂಡಿಸಿ ಟ್ವೀಟ್ ಮಾಡಿರುವ ಡಿಕೆಶಿ, ಬಿಜೆಪಿ ಸರ್ಕಾರ ನೀಡಬಹುದಾದ ಅತಿದೊಡ್ಡ ಪರಿಹಾರ ಪ್ಯಾಕೇಜ್ ಎಂದರೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ‌ ತೆರಿಗೆ ತಗ್ಗಿಸುವುದು. ನಿರುದ್ಯೋಗ ಹೆಚ್ಚುತ್ತಿರುವ ಸಂದರ್ಭದಲ್ಲಿ ಇಂಧನ ತೆರಿಗೆಯ ಭಾರದಿಂದಾಗಿ ಮಧ್ಯಮ ವರ್ಗದ ಜನರು …

Read More »

ಅನ್ ಲಾಕ್ ಗೆ ಸಿದ್ಧತೆ: ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಕೆಗೆ ಕೌಂಟ್ ಡೌನ್

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಬೆನ್ನಲ್ಲೇ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ಒಂದೂವರೆ ತಿಂಗಳಿಂದ ಮನೆಯಲ್ಲೇ ಬಂಧಿಯಾದಂತಾಗಿದ್ದ ಜನರಿಗೆ ಬಿಡುಗಡೆ ಸಿಗಲಿದೆ. ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಪ್ರಸ್ತುತ ರಾಜ್ಯ ಸರ್ಕಾರ ಜಾರಿ ಮಾಡಿರುವ ಲಾಕ್ ಡೌನ್ ಜೂನ್ 14ಕ್ಕೆ ಮುಗಿಯಲಿದ್ದು, ಜೂನ್ 14ರ ಬಳಿಕ ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾಗಲಿದೆ. ಈ …

Read More »

ಬಿಜೆಪಿ ಬಗ್ಗು ಬಡಿಯಲು ಇಬ್ರಾಹಿಂ ಹೊಸ ಅಸ್ತ್ರ.. ‘ಮೌನವೇ ಜಾಣ್ಮೆ’ಯೆಂದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬಿಜೆಪಿ ವಿರುದ್ಧ ಹೋರಾಟಕ್ಕೆ ಸನ್ನದ್ಧವಾಗಿರೋ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ಸಿಎಂ ಇಬ್ರಾಹಿಂ ಜಾತ್ಯಾತೀತ ಸಲಹೆ ನೀಡಿದ್ದಾರೆ. ಇಬ್ರಾಹಿಂ ಅವರ ಈ ಸಲಹೆಯನ್ನ ಮಾಜಿ ಸಿಎಂ ಸ್ವೀಕರಿಸಿ, ಮತ್ತೊಂದು ಹೊಸ ಅಧ್ಯಾಯ ಬರೆಯುತ್ತಾರೆ ಅನ್ನೋ ಚರ್ಚೆ ರಾಜಕೀಯ ವಲಯದಲ್ಲಿ ಇದೀಗ ಶುರುವಾಗಿದೆ.     ಕಾಂಗ್ರೆಸ್ ಪಕ್ಷದ ಶಾಸಕರ ವೀಡಿಯೋ ‌ಕಾನ್ಪರೆನ್ಸ್ ಸಭೆಯಲ್ಲೇ ಸಿದ್ದರಾಮಯ್ಯಗೆ ಇಬ್ರಾಹಿಂ ಈ ಸಲಹೆಯನ್ನ ನೀಡಿದ್ದಾರೆ. ಕೋವಿಡ್ ನಿರ್ವಹಣೆಯಲ್ಲಿ ವಿಫಲವಾಗಿರೋ ರಾಜ್ಯ ಸರ್ಕಾರಕ್ಕೆ …

Read More »

ಸಚಿವರ ವಿರುದ್ಧ ಭ್ರಷ್ಟಾಚಾರದ ದೂರು ಇದ್ದರು ಎಸಿಬಿ ನಿಷ್ಕ್ರಿಯ: ಸಿದ್ದರಾಮಯ್ಯ

ಬೆಂಗಳೂರು, ಜೂ.9- ಹಲವಾರು ಸಚಿವರುಗಳ ವಿರದ್ಧ ಭ್ರಷ್ಟಚಾರದ ದೂರುಗಳಿರುವುದರಿಂದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಭ್ರಷ್ಟಚಾರ ನಿಗ್ರಹ ದಳವನ್ನು ನಿಷ್ಕ್ರಿಯ ಮಾಡುತ್ತಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದಾಗ ನಮ್ಮ ಸರ್ಕಾರ ಎಸಿಬಿ ರಚನೆ ಮಾಡುವಾಗಲೇ ಬಿಜೆಪಿಯವರು ವಿರೋಧಿಸಿದ್ದರು ಎಂದು ಸ್ಮರಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರದ ಹಲವಾರು ಸಚಿವರುಗಳ ವಿರುದ್ಧ ಭ್ರಷ್ಟಾಚಾರದ ದೂರುಗಳನ್ನು ನೀಡಿದರೂ ತನಿಖಾ ಸಂಸ್ಥೆಗಳು ಕ್ರಮ ಕೈಗೊಳ್ಳುತ್ತಿಲ್ಲ. ಎ.ಸಿ.ಬಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಷ್ಕ್ರಿಯವಾಗಿದೆ. ಎಸಿಬಿಯನ್ನು ಬಿಜೆಪಿಯವರು …

Read More »

ವೃತ್ತಿಪರ ಕೋರ್ಸ್ ಸೇರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಸಿಇಟಿ ಅಂಕ ಮಾತ್ರ ಪರಿಗಣನೆ

ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸದೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಆಗಸ್ಟ್ 28, 29 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಆಗಸ್ಟ್ 28 ರಂದು ಜೀವಶಾಸ್ತ್ರ, ಗಣಿತ, ಆಗಸ್ಟ್ 29 ರಂದು ಭೌತಶಾಸ್ತ್ರ, ರಸಾಯನಶಾಸ್ತ್ರ ಹಾಗೂ ಆಗಸ್ಟ್ 30 ರಂದು ಗಡಿನಾಡು, ಹೊರನಾಡು ಕನ್ನಡಿಗರಿಗೆ ಕನ್ನಡ ಪರೀಕ್ಷೆ ನಡೆಯಲಿದೆ. ಈ ವರ್ಷ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಿಯಮ ಸಡಿಲಿಕೆ …

Read More »

ಲಾಕ್ಡೌನ್ ವೇಳೆ ಸೀಜ್ ಆಗಿದ್ದ ವಾಹನಗಳ ಮಾಲೀಕರಿಗೆ ಸಿಹಿ ಸುದ್ದಿ

ಬೆಂಗಳೂರು: ಲಾಕ್ಡೌನ್ ಸಂದರ್ಭದಲ್ಲಿ ಸೀಜ್ ಮಾಡಲಾಗಿದ್ದ ವಾಹನಗಳ ಬಿಡುಗಡೆಗೆ ಹೈಕೋರ್ಟ್ ಆದೇಶ ನೀಡಿದೆ. ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ ಸಂದರ್ಭದಲ್ಲಿ ಮಾರ್ಗಸೂಚಿ ಉಲ್ಲಂಘಿಸಿದವರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಲಾಕ್ ಡೌನ್ ವೇಳೆ ವಾಹನಗಳ ಪರಿಶೀಲನೆ, ತಪಾಸಣೆ ಸಂದರ್ಭದಲ್ಲಿ ಅನಗತ್ಯವಾಗಿ ಓಡಾಡುವವರನ್ನು ನಿಯಂತ್ರಿಸಲು ವಾಹನಗಳನ್ನು ಸೀಜ್ ಮಾಡಲಾಗಿತ್ತು. ಹೀಗೆ ನಿಯಮ ಉಲ್ಲಂಘಿಸಿದವರ ಲಕ್ಷಾಂತರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಅವುಗಳನ್ನು ಪೊಲೀಸ್ ಠಾಣೆ ಆವರಣದಲ್ಲಿ ನಿಲುಗಡೆ …

Read More »