Breaking News

ಬೆಂಗಳೂರು

ಬೆಳಗಾವಿಯಲ್ಲಿ ಅಮಿತ್ ಶಾ ನೇತೃತ್ವದಲ್ಲಿ ಸಮಾವೇಶ: ಆಯೋಜಕರ ವಿರುದ್ಧ ಎಫ್‌ಐಆರ್ ಯಾಕಿಲ್ಲ; ಹೈಕೋರ್ಟ್ ಪ್ರಶ್ನೆ

ಬೆಂಗಳೂರು, : ಬೆಳಗಾವಿಯಲ್ಲಿ ಜ.17ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಮಾವೇಶದಲ್ಲಿ ಕೋವಿಡ್-19 ಮಾರ್ಗಸೂಚಿಗಳ ಉಲ್ಲಂಘನೆ ಕುರಿತು ಸಲ್ಲಿಸಿರುವ ಅರ್ಜಿ ಸಂಬಂಧ ಅಲ್ಲಿನ ನಗರ ಪೊಲೀಸ್ ಆಯುಕ್ತರು ಸಲ್ಲಿಸಿರುವ ಪ್ರಮಾಣ ಪತ್ರಕ್ಕೆ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆಯ ಅನುಸಾರ ಕ್ರಮ ಕೈಗೊಂಡಿಲ್ಲ. ತಪ್ಪಿತಸ್ಥರಿಗೆ ಕೇವಲ ದಂಡ ವಿಧಿಸಲಾಗಿದೆ. ಪೊಲೀಸ್ ಆಯುಕ್ತರಿಗೆ ಕಾಯ್ದೆಯ ಬಗ್ಗೆ ಅರಿವಿದ್ದಂತೆ ಕಾಣುತ್ತಿಲ್ಲ …

Read More »

ಜೂನ್ 7 ರ ನಂತರವೂ ಮುಗಿಯಲ್ಲ ಲಾಕ್ ಡೌನ್: ಇನ್ನೂ ಹಲವು ದಿನ ರಾಜ್ಯದ ಜನ ಮನೆಯೊಳಗೆ ಬಂಧಿ.?

ಬೆಂಗಳೂರು: ಜೂನ್ 7 ರ ವರೆಗೂ ಇರುವ ಲಾಕ್ಡೌನ್ ಮುಗಿಯಲ್ಲ. ಸದ್ಯಕ್ಕೆ ಲಾಕ್ಡೌನ್ ನಿಂದ ಮುಕ್ತಿ ಇಲ್ಲ. ಎರಡು ವಾರಗಳ ನಂತರ ರಾಜ್ಯದ ಜನರ ಮನೆ ವಾಸ ಮುಂದುವರೆಯಲಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಕೊರೋನಾ ತಡೆಗೆ ಲಾಕ್ಡೌನ್ ಜಾರಿ ಮಾಡಿದ ನಂತರ ಕೊರೋನಾ ಸಂಕು ಇಳಿಕೆಯಾಗುತ್ತಿದೆ. ರಾಜ್ಯ ಸರ್ಕಾರ ಮೇ 24 ರಿಂದ ಜೂನ್ 7 ರವರೆಗೆ ಎರಡನೇ ಹಂತದ ಲಾಕ್ಡೌನ್ ಜಾರಿ ಮಾಡಲಾಗಿದೆ. ರಾಜ್ಯಾದ್ಯಂತ ಕಠಿಣ ನಿರ್ಬಂಧ ಜಾರಿಗೊಳಿಸಿದೆ. …

Read More »

ರೈತರಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸಿ, ಮೋದಿಗೆ ಎಚ್ ಡಿ ದೇವೇಗೌಡರ ಪತ್ರ

ಬೆಂಗಳೂರು: ರೈತರ ತೋಟಗಾರಿಕೆ ಬೆಳೆಗಳಿಗೆ ಸರಿಯಾದ ಬೆಳೆ ಸಿಗ್ತಿಲ್ಲ ಹೀಗಾಗಿ ಸೂಕ್ತ ಮಾರುಕಟ್ಟೆ ಕಲ್ಪಿಸಿ ಎಂದು ಮಾಜಿ ಪ್ರಧಾನಿ ದೇವೇಗೌಡ ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಬೆಳೆಗಳಿಗೆ ಸೂಕ್ತ ಬೆಲೆ ಇಲ್ಲ. ಬೆಳೆಗಳನ್ನು ಮಾರುಕಟ್ಟೆಗೆ ಸಾಗಿಸುವುದು ಕಷ್ಟವಾಗಿದೆ. ಕೋಲಾರದಲ್ಲಿ ಅತಿ ಹೆಚ್ಚು ಟೊಮೊಟೋ ಬೆಳೆಯಲಾಗುತ್ತೆ. ಕೊಳ್ಳುವವರಿಲ್ಲದೆ ತಿಪ್ಪೆಗೆ ಎಸೆಯುತ್ತಿದ್ದಾರೆ. ಬೇರೆ ರಾಜ್ಯಗಳಲ್ಲೂ ಇದೇ ಪರಿಸ್ಥಿತಿಯಿದೆ. ಕಲ್ಲಂಗಡಿ ಬೆಳೆದ ರೈತರಿಗೂ ನಷ್ಟವಾಗಿದೆ. ಇನ್ನಿತರ ಬೆಳೆಗಳಿಗೂ …

Read More »

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಆಘಾತ; ಹಿರಿಯ ನಟ ಕೃಷ್ಣೇಗೌಡ ವಿಧಿವಶ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆ ಕನ್ನಡ ಚಿತ್ರರಂಗ ಒಬ್ಬರ ಹಿಂದೊಬ್ಬರಂತೆ ಹಿರಿಯ ಕಲಾವಿದರನ್ನು ಕಳೆದುಕೊಳ್ಳುತ್ತಿದೆ. ಇದೀಗ ಹಿರಿಯ ನಟ, ರಂಗಭೂಮಿ ಕಲಾವಿದ ಕೃಷ್ಣೇಗೌಡ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. 80 ವರ್ಷದ ಕೃಷ್ಣೇಗೌಡ ಅವರಿಗೆ ಕೆಲ ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದರು. ಇತ್ತೀಚೆಗೆ ಮತ್ತೆ ಅನಾರೋಗ್ಯಕ್ಕೀಡಾಗಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದು ಚಿತ್ರರಂಗಕ್ಕೆ ಕಾಲಿಟ್ಟಿದ್ದ ಕೃಷ್ಣೇಗೌಡ …

Read More »

ಸಬ್‌ ಇನ್ಸ್ ಪೆಕ್ಟರ್‌ ಅರ್ಜುನ್‌ ನ್ನು ಜೈಲಿಗೆ ಕಳಿಸಲು ಸಂಸದ ಹನುಮಂತಯ್ಯ ಒತ್ತಾಯ

ಬೆಂಗಳೂರು: ‘ವಿಚಾರಣೆ ನೆಪದಲ್ಲಿ ದಲಿತ ಯುವಕನನ್ನು ಠಾಣೆಗೆ ಕರೆದೊಯ್ದು ಮೂತ್ರ ನೆಕ್ಕಿಸಿರುವ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ಅರ್ಜುನ್‌ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಬೇಕು. ಜೊತೆಗೆ ಸೇವೆಯಿಂದಲೇ ವಜಾಗೊಳಿಸಬೇಕು’ ಎಂದು ರಾಜ್ಯಸಭಾ ಸದಸ್ಯ ಎಲ್‌.ಹನುಮಂತಯ್ಯ ಒತ್ತಾಯಿಸಿದ್ದಾರೆ. ‘ಕಿರುಗುಂದ ಗ್ರಾಮದ ಕೆ.ಎಲ್‌.ಪುನೀತ್‌ ಜೊತೆ ಅರ್ಜುನ್‌ ಅಮಾನುಷವಾಗಿ ನಡೆದುಕೊಂಡಿದ್ದಾರೆ. ಸರ್ಕಾರಿ ಅಧಿಕಾರಿಯಾಗಿ ಅವರು ನಡೆದುಕೊಂಡಿರುವ ರೀತಿ ಖಂಡನೀಯ. ಅವರ ಕ್ರೂರ ವರ್ತನೆಯ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾದರೂ ಸರ್ಕಾರವು ಆರಂಭದಲ್ಲಿ ಯಾವುದೇ …

Read More »

ಪ್ಯಾಕೇಜ್ ಪರಿಹಾರ ಸಿಗದವರಿಗೆ ಸಿಹಿ ಸುದ್ದಿ: 10 -12 ದಿನಗಳಲ್ಲಿ ಮತ್ತೊಂದು ವಿಶೇಷ ಪ್ಯಾಕೇಜ್; ಸಿಎಂ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾದಿಂದ ಸಂಕಷ್ಟದಲ್ಲಿರುವ ಜನರಿಗೆ ಅನುಕೂಲವಾಗುವಂತೆ ಮತ್ತೊಂದು ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗುವುದು. ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ಯಾಕೇಜ್ ನಲ್ಲಿ ಪರಿಹಾರಧನ ಸಿಗದವರಿಗೆ ಮುಂದಿನ 10 -12 ದಿನಗಳಲ್ಲಿ ಇನ್ನೊಂದು ಪ್ಯಾಕೇಜ್ ಮೂಲಕ ಪರಿಹಾರ ನೀಡಲು ಪ್ರಯತ್ನಿಸುವುದಾಗಿ ಹೇಳಿದ್ದಾರೆ. ಹಣಕಾಸಿನ ಇತಿಮಿತಿಯಲ್ಲಿ ಆರ್ಥಿಕ ಪ್ಯಾಕೇಜ್ ವಿಚಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ಹತ್ತರಿಂದ ಹನ್ನೆರಡು ದಿನಗಳಲ್ಲಿ ಪರಿಹಾರ ದಿನ ಸಿಗದವರಿಗೆ ಇನ್ನೊಂದು ಪ್ಯಾಕೇಜ್ ನೀಡಲು ಪ್ರಯತ್ನಿಸುತ್ತೇನೆ ಎಂದು …

Read More »

ವ್ಯರ್ಥವಾಯ್ತು ಸರ್ಕಾರದ ಕೋಟಿ ಕೋಟಿ ಹಣ..!

ಬೆಂಗಳೂರು: ಕರ್ನಾಟಕಕ್ಕೆ ಕೊರೊನಾ ಎರಡನೇ ಅಲೆ ರಾಕ್ಷಸನಂತೆ ಅಪ್ಪಳಿಸಿದೆ. ದಿನೇ ದಿನೇ ಸೋಂಕಿತರ ಪ್ರಮಾಣ ಸುನಾಮಿಯಂತೆ ಹೆಚ್ಚಳ ಆಗ್ತಿದೆ. ಮತ್ತೊಂದು ಕಡೆ ಸಾವಿನ ಪ್ರಮಾಣ ಭಯ ಹುಟ್ಟಿಸುವಂತೆ ನಿತ್ಯ ಹೆಚ್ಚಾಗುತ್ತಿದೆ. ಜನರಿಗೆ ಕೊರೊನಾ ಆತಂಕ ಒಂದು ಕಡೆಯಾದ್ರೆ ಸರಿಯಾಗಿ ಬೆಡ್ ಸಿಗುತ್ತಿಲ್ಲ, ಆಕ್ಸಿಜನ್, ಔಷಧಿ ಸಿಗುತ್ತಿಲ್ಲ ಅನ್ನೋದು ಮತ್ತೊಂದು ಆತಂಕ. ಇದೆರಲ್ಲದರ ಮಧ್ಯೆ ಕೊರೊನಾ ಮಣಿಸುವ ಕೆಲಸದಲ್ಲಿ ಸರ್ಕಾರ ಪದೇ ಪದೇ ಎಡವಟ್ಟಿನ ಕೆಲಸಗಳನ್ನೆ ಮುಂದುವರೆಸಿದೆ. ಕೊರೊನಾ ಕೇರ್ ಸೆಂಟರ್ …

Read More »

ಕೋವಿಡ್ ಪರೀಕ್ಷೆ ವಿಳಂಬ; ಕರ್ನಾಟಕದ 40 ಲ್ಯಾಬ್‌ಗಳಿಗೆ ದಂಡ

ಬೆಂಗಳೂರು, ಮೇ 25; ಕೋವಿಡ್ ಮಾದರಿಗಳ ಪರೀಕ್ಷೆ ವಿಳಂಬ ಮಾಡಿದ ಕರ್ನಾಟಕದ 40 ಲ್ಯಾಬ್‌ಗಳಿಗೆ ದಂಡ ಹಾಕಲಾಗಿದೆ. ಒಟ್ಟು 20.20 ಲಕ್ಷ ದಂಡವನ್ನು ವಿಧಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವಥ ನಾರಾಯಣ ಮಾಹಿತಿ ನೀಡಿದ್ದಾರೆ. 31 ಖಾಸಗಿ ಲ್ಯಾಬ್, 9 ಸರ್ಕಾರಿ ಲ್ಯಾಬ್‌ಗಳು ಸೇರಿ 40 ಪ್ರಯೋಗಾಲಯಗಳಿಗೆ ದಂಡ ಹಾಕಲಾಗಿದೆ. ರಾಜ್ಯದಲ್ಲಿ ಕೋವಿಡ್ ಪರೀಕ್ಷೆಯ ನೋಡೆಲ್ ಅಧಿಕಾರಿಯಾದ ಶಾಲಿನಿ ರಜನೀಶ್ ಸಚಿವರಿಗೆ ಈ ಕುರಿತು ವಿವರಗಳನ್ನು …

Read More »

ಗ್ರಾಮ‌ ಪಂಚಾಯತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ತೀರ್ಮಾನ: ಬೊಮ್ಮಾಯಿ

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ಕೋವಿಡ್ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ‌ ಪಂಚಾಯತಿ ವ್ಯಾಪ್ತಿಯಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಲು ತೀರ್ಮಾನ ಮಾಡಲಾಗಿದೆ. ಈ ಹಂತದಲ್ಲಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುತ್ತಿದ್ದೇವೆ‌ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಕ್ರೋ ಕಂಟೋನ್ಮೆಂಟ್ ಝೋನ್ ನಲ್ಲಿ ಸ್ಥಳೀಯ ಪೊಲೀಸರು, ಸ್ಥಳೀಯ ಅಧಿಕಾರಿಗಳ ಒಂದು ಸಮಿತಿ ರಚನೆ ಮಾಡುತ್ತೇವೆ‌‌. ಸೋಂಕಿತರಿಗೆ ಔಷಧ ವಿತರಣೆ ಮಾಡಲು ಮತ್ತು ಸೋಂಕು ಹರಡದಂತೆ …

Read More »

ಮೂರನೇ ಆಲೆ ಆತಂಕ: ಪರಿಷತ್‌ ಸಭಾಪತಿ ಹೊರಟ್ಟಿ ಸಲಹೆ

ಬೆಂಗಳೂರು: ಕರೊನಾ ಮೂರನೇ ಅಲೆ ಮಕ್ಕಳನ್ನು ಬಾಧಿಸುವ ಸಾಧ್ಯತೆ ಬಗ್ಗೆ ಪರಿಣಿತರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಸರ್ಕಾರ ಅಧ್ಯಯನ ನಡೆಸಿ ಸೂಕ್ತ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಸಲಹೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಬಿ.ಎಸ್‌.ಯಡಿಯೂರಪ್ಪ ಹಾಗೂ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌ ಅವರಿಗೆ ಪತ್ರ ಬರೆದಿರುವ ಅವರು, ಮೂರನೇ ಆಲೆಯು ಭವಿಷ್ಯದ ವಾರಸುದಾರರಾದ ಮಕ್ಕಳ ಮೇಲೆ ಬೀರಬಹುದ ಪರಿಣಾಮಗಳ ಬಗ್ಗೆ ತಿಳಿದುಕೊಂಡು ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದ್ದಾರೆ. …

Read More »