ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಕೊರೋನಾ 2ನೇ ಅಲೆಯ ಅಬ್ಬರಿಸುತ್ತಿದೆ. ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ಏಪ್ರಿಲ್ 11ರಿಂದ 14ರವರೆಗೆ ಲಸಿಕಾ ಅಭಿಯಾನಕ್ಕೂ ಕೂಡ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ರಾಜ್ಯದ ಸಚಿವಾಲಯದ 45 ವರ್ಷ ಮೇಲ್ಪಟ್ಟ ಅಧಿಕಾರಿ, ನೌಕರರಿಗೆ ದಿನಾಂಕ 12-04-2021ರಂದು ಬ್ಯಾಂಕ್ವೆಟ್ ಹಾಲ್ ನಲ್ಲಿ ಕೊರೋನಾ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಸಿಆಸುಇ(ಕಾರ್ಯದರ್ಶಿ) …
Read More »ಬಿಎಂಟಿಸಿ ಎಂಡಿ ಹಾಗೂ ಕೋಡಿಹಳ್ಳಿಗೆ 10 ಲಕ್ಷ ಪರಿಹಾರ ಕೇಳಿ ನೋಟೀಸ್ ಜಾರಿ ಮಾಡಿದ ವಿದ್ಯಾರ್ಥಿನಿ
ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು ಕೆ ಎಸ್ ಆರ್ ಟಿ ಸಿ, ಬಿಎಂಟಿಸಿ ಬಸ್ ಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ವಿದ್ಯಾರ್ಥಿಗಳು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಈ ನಡುವೆ ಬಿಎಂಟಿಸಿ ಬಸ್ ಸಂಚಾರ ಬಂದ್ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬರು 10 ಲಕ್ಷ ಪರಿಹಾರ ಕೇಳಿ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹಾಗೂ ಬಿಎಂಟಿಸಿ ಎಂಡಿ ಶಿಖಾ ಅವರಿಗೆ ನೋಟೀಸ್ ಜಾರಿ ಮಾಡಿದ್ದಾಳೆ. ಜೆ.ಎಸ್.ಎಸ್. ಅಕಾಡೆಮಿ ಆಫ್ ಟೆಕ್ನಿಕಲ್ …
Read More »ಬ್ಯಾಂಕ್ ಗ್ರಾಹಕರೇ ಗಮನಿಸಿ : ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆ : ಇಂದೇ ಎಲ್ಲಾ ವ್ಯವಹಾರ ಮುಗಿಸಿಕೊಳ್ಳಿ
ಬೆಂಗಳೂರು : ಬ್ಯಾಂಕ್ ಗ್ರಾಹಕರೇ ನಾಳೆಯಿಂದ ಬ್ಯಾಂಕುಗಳಿಗೆ ಸಾಲು ಸಾಲು ರಜೆಗಳಿದ್ದು, ಗ್ರಾಹಕರು ತಮ್ಮ ಬ್ಯಾಂಕ್ ಗೆ ಸಂಬಂಧಿಸಿದ ಕೆಲಸಗಳಿದ್ದರೇ ಇಂದೇ ಮುಗಿಸಿಕೊಳ್ಳೊದು ಉತ್ತಮ. ಹೌದು, ಯುಗಾದಿ ಹಬ್ಬ, ಅಂಬೇಡ್ಕರ್ ಜಯಂತಿ ಸೇರಿದಂತೆ ನಾಳೆಯಿಂದ ಏಪ್ರಿಲ್ 14 ರವರಗೆ 4 ದಿನ ಬ್ಯಾಂಕುಗಳಿಗೆ ರಜೆ ಇರಲಿದ್ದು, ಬ್ಯಾಂಕ್ ಗೆ ಸಂಬಂಧಿಸಿದ ತಮ್ಮ ಕೆಲಸಗಳನ್ನು ಇದ್ದರೆ ಬೇಗ ಮುಗಿಸಿಕೊಳ್ಳಿ ಯಾವ್ಯಾವ ದಿನ ಬ್ಯಾಂಕುಗಳಿಗೆ ರಜೆ? ಇಲ್ಲಿದೆ ಮಾಹಿತಿ ಏಪ್ರಿಲ್ 10- ಎರಡನೇ …
Read More »ಬೈ-ಎಲೆಕ್ಷನ್ ಕ್ಷೇತ್ರಗಳಲ್ಲಿ ಹೊಸದಾಗಿ ಸೃಷ್ಟಿಯಾಯ್ತಾ ರೂಂ ಪಾಲಿಟಿಕ್ಸ್..?
ಬೆಂಗಳೂರು: ಮಸ್ಕಿ, ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಣ್ಣಿಗೆ ಕಾಣ್ತಿರೋದು ವೋಟ್ ಪಾಲಿಟಿಕ್ಸ್ ಜೊತೆಗೆ ರೂಂ ಪಾಲಿಟಿಕ್ಸ್ ಕೂಡ ನಡೆಯುತ್ತಿದೆ ಎನ್ನಲಾಗಿದೆ. ಪ್ರಚಾರಕ್ಕೆ ಹೋಗಿರೋ ಮೂರು ಕ್ಷೇತ್ರಗಳಲ್ಲೂ ಕಾಂಗ್ರೆಸ್ ನಾಯಕರು ರೂಂ ಸಿಕ್ಕದೇ ಒದ್ದಾಡ್ತಿದ್ದಾರಂತೆ. ಈ ಹಿನ್ನೆಲೆ ಬೈ ಎಲೆಕ್ಷನ್ ಕ್ಷೇತ್ರಗಳಲ್ಲಿ ರೂಂ ರಾಜಕೀಯ ನಡೆದಿದೆ ಎನ್ನಲಾಗ್ತಿದೆ. ಉಪಚುನಾವಣೆ ಘೋಷಣೆ ಆಗ್ತಿದ್ದಂತೆ ಅತ್ತ ಪ್ರಚಾರಕ್ಕೆ ಬರೋ ತಮ್ಮ ನಾಯಕರು ಹಾಗೂ …
Read More »ಅನ್ಯಾಯದ ಬ್ರಹ್ಮಾಸ್ತ್ರ ಬೇಡ: ಮಾತುಕತೆಗೆ ಮುಂದಾಗಿ -ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು: ‘ಸಾರಿಗೆ ನೌಕರರ ಮುಷ್ಕರವನ್ನು ಹತ್ತಿಕ್ಕಲು ಅನ್ಯಾಯದ ಬ್ರಹ್ಮಾಸ್ತ್ರದ ಮಾರ್ಗಗಳನ್ನು ಸರ್ಕಾರ ಅನುಸರಿಸುತ್ತಿದೆ. ಅದನ್ನು ಬಿಟ್ಟು ಮಾತುಕತೆಗೆ ಮುಂದಾಗಬೇಕು’ ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಒತ್ತಾಯಿಸಿದರು. ‘ಸಾರಿಗೆ ಸಿಬ್ಬಂದಿಗೆ ನೋಟಿಸ್ ನೀಡಲಾಗುತ್ತಿದೆ. ತರಬೇತಿ ಮತ್ತು ಪ್ರೊಬೇಷನರಿ ಅವಧಿಯಲ್ಲಿರುವ ಸಿಬ್ಬಂದಿಯನ್ನು ವಜಾಗೊಳಿಸಲಾಗುತ್ತಿದೆ. ನಿಗಮ ನೀಡಿರುವ ಮನೆಗಳನ್ನು ಖಾಲಿ ಮಾಡಿಸುವ ಪ್ರಯತ್ನಗಳೂ ನಡೆಯುತ್ತಿವೆ. ನೌಕರರನ್ನು ಮನೆಗಳಿಂದ ದಬ್ಬುವ ಪ್ರಯತ್ನ ಸರಿಯಲ್ಲ. ಇವೆಲ್ಲವೂ ಪ್ರಜಾಪ್ರಭುತ್ವ ವಿರೋಧಿ ನಡೆಗಳು’ ಎಂದು ಗುರುವಾರ …
Read More »ಏಪ್ರಿಲ್ 10ರಿಂದ ರಾಜ್ಯದಲ್ಲಿ ‘ಕೊರೊನಾ ಕರ್ಫ್ಯೂ’: ಸಿಎಂ ಬಿಎಸ್ವೈ
ಬೆಂಗಳೂರು: ಕೋವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಕಾರಣ ರಾಜಧಾನಿ ಬೆಂಗಳೂರು ನಗರ ಸೇರಿ ರಾಜ್ಯದ ಏಳು ಜಿಲ್ಲಾ ಕೇಂದ್ರ ಮತ್ತು ಮಣಿಪಾಲದಲ್ಲಿ ಏ. 10ರಿಂದ 20ರವರೆಗೆ ‘ಕೊರೊನಾ ಕರ್ಫ್ಯೂ’ (ರಾತ್ರಿ ಕರ್ಫ್ಯೂ) ವಿಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆ ಗುರುವಾರ ಸಂಜೆ ವಿಡಿಯೊ ಸಂವಾದದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ಬೆಂಗಳೂರು ನಗರ, ಮೈಸೂರು, ಮಂಗಳೂರು, ಕಲಬುರ್ಗಿ, ಬೀದರ್, ತುಮಕೂರು, ಉಡುಪಿ ನಗರದ ಜೊತೆಗೆ …
Read More »Covid-19 Karnataka Update: 50 ಸಾವಿರ ದಾಟಿದ ಸಕ್ರಿಯ ಪ್ರಕರಣ
ಬೆಂಗಳೂರು: ರಾಜ್ಯದಲ್ಲಿ ಸತತ ಮೂರನೇ ದಿನ ಕೂಡ ಆರು ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗಿದ್ದು, 24 ಗಂಟೆಗಳ ಅವಧಿಯಲ್ಲಿ 6,570 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 53,395ಕ್ಕೆ ತಲುಪಿದೆ. ಕಳೆದ ತಿಂಗಳು ರಾಜ್ಯದಲ್ಲಿ ಈ ವೇಳೆ ಕೇವಲ 6,815 ಸಕ್ರಿಯ ಪ್ರಕರಣಗಳಿದ್ದವು. ಬಳಿಕ ಹೊಸ ಪ್ರಕರಣಗಳು ಏರುಗತಿ ಪಡೆದುಕೊಂಡಿದ್ದು, ಈಗ ಕೇವಲ ಮೂರು ದಿನಗಳ ಅವಧಿಯಲ್ಲಿಯೇ 19,941 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ರಾಜ್ಯದ …
Read More »ಏಪ್ರಿಲ್ 10 ರಂದು ‘ಬೆಂಗಳೂರು ವಿವಿ’ ಪದವಿ ಪರೀಕ್ಷೆ ನಿಗದಿ
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಬೆಂಗಳೂರು ವಿಶ್ವ ವಿದ್ಯಾಲಯದ 1 ಮತ್ತು ಮೂರನೇ ವರ್ಷದ ಸ್ನಾತಕ ಪದ್ದತಿಯ ಬಿಕಾಂ, ಬಿಎ. ಬಿಎಸ್ಸಿ, ಬಿಬಿಎಂ, ಬಿಬಿಎ, ಬಿ ಹೆಚ್ ಎಂ ಹಾಗೂ ದೂರ ಶಿಕ್ಷಣ ಪರೀಕ್ಷೆಗಳು ಇದೇ ತಿಂಗಳ 10 ರಂದು ನಡೆಯಲಿದೆ. ಈ ಬಗ್ಗೆ ಬೆಂಗಳೂರು ವಿವಿ ಕುಲಸಚಿವರು ( ಮೌಲ್ಯಮಾಪನ) ಪ್ರಕಟಣೆ ಹೊರಡಿಸಿದ್ದು, ಇದೇ 7 ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಸಾರಿಗೆ ನೌಕರರ ಮುಷ್ಕರ …
Read More »ಹೈಕಮಾಂಡ್ ಎಲ್ಲವನ್ನ ಗಮನಿಸುತ್ತಿದೆ: ಯತ್ನಾಳ್ ವಿರುದ್ಧ ರಾಘವೇಂದ್ರ ಕಿಡಿ
ಚಿಕ್ಕಮಗಳೂರು: ಯಡಿಯೂರಪ್ಪನವರು ನನ್ನ ತಂದೆ, ವಿಜಯೇಂದ್ರ ನನ್ನ ತಮ್ಮನೇ ಆಗಿದ್ದರೂ ಕೂಡ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಗಳು, ವಿಜಯೇಂದ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಸಂಘಟನೆ ಕೆಲಸ ಮಾಡುತ್ತಿದ್ದಾರೆ. ವೈಯಕ್ತಿಕ ಅಲ್ಲದಿದ್ರು ಪಕ್ಷಕ್ಕೆ ಮುಜಗರವಾಗುವಂತಹ ಕೆಲಸ-ಕಾರ್ಯಗಳು ನಡೆಯುತ್ತಿದೆ. ಹೈಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ಸಮಯ-ಸಂದರ್ಭ ಬಂದಾಗ ಯಾರು-ಯಾವ ತೀರ್ಮಾನ ತೆಗೆದುಕೊಳ್ಳಬೇಕು ತೆಗೆದುಕೊಳ್ತಾರೆ ಎಂದು ಯತ್ನಾಳ್ ವಿರುದ್ಧ ಶಿವಮೊಗ್ಗ ಸಂಸದ ರಾಘವೇಂದ್ರ ಅಸಮಾಧಾನ ಹೊರಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ವೀರಶೈವ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, …
Read More »ಸಾರಿಗೆ ನೌಕರರ ಮುಷ್ಕರ ಎಫೆಕ್ಟ್ :ಖಾಸಗಿ ಬಸ್ಗಳ ಟಾಪ್ ನಲ್ಲಿ ಕುಳಿತು ಪ್ರಯಾಣ
ಬೆಂಗಳೂರು : ಗಂಡ ಹೆಂಡ್ತಿ ಜಗಳದಲ್ಲಿ ಕೂಸು ಬಡವಾಯ್ತು ಅನ್ನೋ ಮಾತು ಸದ್ಯ ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳೇ ಸಾಕ್ಷಿ. ಸಾರಿಗೆ ನೌಕರರು ಮತ್ತು ಸರ್ಕಾರದ ನಡುವಿನ ಜಟಾಪಟಿ ಎರಡನೇ ದಿನವೂ ಮುಂದುವರೆದಿದ್ದು, ಇವರಿಬ್ಬರ ಮಧ್ಯೆ ಸಿಲುಕಿರುವ ಸಾರ್ವಜನಿಕರು ಸಂಕಷ್ಟ ಎದುರಿಸುವಂತಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗಲೆಂದು ಸರ್ಕಾರವೇನೋ ಖಾಸಗಿ ಬಸ್, ಮ್ಯಾಕ್ಸಿಕ್ಯಾಬ್ಗಳ ಮೊರೆ ಹೋಗಿದೆ. ಆದರೆ, ಸರಿಯಾದ ಸಮಯಕ್ಕೆ ನಿಗದಿತ ಸ್ಥಳಕ್ಕೆ ತಲುಪಲಾಗದೇ ಸಾಮಾನ್ಯ ಜನರು ಹೈರಾಣಾಗಿದ್ದಾರೆ. ನಗರ ಸಾರಿಗೆ ಬಸ್ಗಳು …
Read More »