Breaking News

ಬೆಂಗಳೂರು

ಸಿಡಿ ಪ್ರಕರಣ: ‘ಮಹಾನಾಯಕ’ನ ರಾಜೀನಾಮೆಯನ್ನು ರಾಷ್ಟ್ರೀಯ ‘ಮಹಾನಾಯಕಿ’ ತಕ್ಷಣವೇ ಪಡೆಯಬೇಕು; ಬಿಜೆಪಿ ಆಗ್ರಹ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದಲ್ಲಿ ಕೇಳಿ ಬಂದಿರುವ ಕಾಂಗ್ರೆಸ್ ‘ಮಹಾನಾಯಕ’ನ ರಾಜೀನಾಮೆಯನ್ನುಆ ಪಕ್ಷದ ಮಹಾನಾಯಕಿ ಕೂಡಲೇ ಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಆರಂಭದಿಂದಲೂ ಮಹಾನಾಯಕನ ಸುತ್ತಲೂ ಪ್ರಕರಣ ಗಿರಕಿ ಹೊಡೆಯುತ್ತಿತ್ತು. ಮಹಾನಾಯಕನ ಮನೆಯ ಬಳಿಗೆ ನಾನು ಬಂದಿದ್ದೇನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಮಹಾನಾಯಕನಿಗೂ ಪ್ರಕರಣದ ಮಾಸ್ಟರ್‌ ಮೈಂಡ್‌ ಗಳಿಗೂ ಇರುವ ಸಂಬಂಧವವನ್ನು ಕರ್ನಾಟಕ ಕಾಂಗ್ರೆಸ್ ಬಹಿರಂಗಗೊಳಿಸಬೇಕು. …

Read More »

ಬಿಜೆಪಿ ಟಿಕೆಟ್‌ ಹಂಚಿಕೆ: ತೇಜಸ್ವಿನಿ – ಮಂಗಲಾಗೆ ವಿಭಿನ್ನ ನಿಲುವು

ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ‌ ಅಂಗಡಿ ಆವರ ಪತ್ನಿ ಮಂಗಲಾ ಅಂಗಡಿಯವರಿಗೆ ಟಿಕೆಟ್‌ ನೀಡಿದ ವಿಚಾರ ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿದೆ. ಕೋವಿಡ್‌ನಿಂದ ಸುರೇಶ‌ ಅಂಗಡಿ ಮೃತಪಟ್ಟ ಕಾರಣ ಉಪಚುನಾವಣೆ ಎದುರಾಗಿದೆ. ಈ ಕ್ಷೇತ್ರವನ್ನು ಗೆಲ್ಲುವುದು ಬಿಜೆಪಿಗೆ ಪ್ರತಿಷ್ಠೆಯ ವಿಷಯ. ಆದರೆ, ಹಿಂದೆ ದಿವಂಗತ ಎಚ್.ಎನ್‌. ಅನಂತ್‌ ಕುಮಾರ್ ಪತ್ನಿಗೆ ಟಿಕೆಟ್‌ ತಪ್ಪಿಸಿದ್ದು ಎಷ್ಟು ಸರಿ ಎಂಬ ‘ಯಕ್ಷ ಪ್ರಶ್ನೆ’ ಚರ್ಚೆಯ …

Read More »

ವೈರಲ್ ಆಡಿಯೋ, ಎಫ್‌ಐಆರ್‌ಗೆ ಹೆದರಲ್ಲ ಎಂದ ರಮೇಶ್ ಜಾರಕಿಹೊಳಿ

ಬೆಂಗಳೂರು, ಮಾರ್ಚ್ 26: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಪೂರಕವಾಗಿ ಇಂದು ಆಡಿಯೋ ಸಂಭಾಷಣೆಯೊಂದು ಹೊರ ಬಂದಿದೆ. ಸಿಡಿಯಲ್ಲಿರುವ ಯುವತಿ ತಮ್ಮ ವಕೀಲ ಜಗದೀಶ್ ಕುಮಾರ್ ಮೂಲಕ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಮೇಶ್ ಜಾರಕಿಹೊಳಿ ವಿರುದ್ಧ ಎಫ್‌ಐಆರ್ ಹಾಕಿದ್ದಾರೆ. ಈ ಪ್ರಕರಣದ ಎಲ್ಲಾ ಬೆಳವಣಿಗೆ ಬಗ್ಗೆ ಮೂರು ಬಾರಿ ಮಾಧ್ಯಮಗಳ ಮುಂದೆ ಬಂದ ರಮೇಶ್ ಅವರು ಸಂಜೆ ವೇಳೆಗೆ ಆಡಿಯೋ ಹಾಗೂ …

Read More »

ನಾಳೆ 4-6 ಗಂಟೆವರೆಗೆ ರಮೇಶ್ ಜಾರಕಿಹೊಳಿ ಸಿಡಿಸುವ ಮಹಾ ಬಾಂಬ್ ಮೇಲೆ ಎಲ್ಲರ ಚಿತ್ತ

ಬೆಂಗಳೂರು: ಸಿಡಿ ಲೇಡಿ ಎನ್ನಲಾದ ಯುವತಿ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪಿಸಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಗೆ ಒಳ್ಳೆಯದಾಗಲಿ, ಆಡಿಯೋದಲ್ಲಿ ಅವರ ಹೆಸರಿದ್ದ ಮಾತ್ರಕ್ಕೆ ಅವರು ಅಪರಾಧಿಯಲ್ಲ ಎಂದು ಹೇಳಿದ್ದಾರೆ. ಸಿಡಿಯಲ್ಲಿದ್ದ ಯುವತಿ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ನನ್ನ ಹಳೇ ಸ್ನೇಹಿತ. ಅವರಿಗೆ ಒಳ್ಳೆಯದಾಗಲಿ. ಆಡಿಯೋದಲ್ಲಿ ಹೆಸರಿದ್ದ ಮಾತ್ರಕ್ಕೆ ಅವರು ಆರೋಪಿಯಲ್ಲ. ಅವರು ಕೆಪಿಸಿಸಿ ಅಧ್ಯಕ್ಷ …

Read More »

ಹ್ಯಾಕರ್ ಕೈಯಲ್ಲಿ ಜಾರಕಿಹೊಳಿ : ಸಾಹುಕಾರನಿಗೆ ಖೆಡ್ಡಾ ತೊಡಿದ ಶ್ರವಣ್..!

ಬೆಂಗಳೂರು : ಯುವತಿಯನ್ನು ಬಳಸಿಕೊಂಡು ಜಾರಕಿಹೊಳಿಗೆ ಖೆಡ್ಡಾ ತೊಡಿದ ಶಂಕಿತ ಕಿಂಗ್ ಪಿನ್ ಗಳು ಮಾಡಿದ ಖತರ್ನಾಕ್ ಪ್ಲ್ಯಾನ್ ನಿಜಕ್ಕೂ ಅಚ್ಚರಿ ಮೂಡಿಸಿದೆ. ಸಮರ್ಪಕವಾಗಿ ತಂತ್ರಜ್ಞಾನ ಬಳಸಿಕೊಂಡ ಪ್ರಕರಣದ ಶಂಕಿತ ಕಿಂಗ್ ಪಿನ್ ಗಳಲ್ಲಿ ಒಬ್ಬನಾದ ಶ್ರವಣ್, ಯುವತಿಯ ಮೊಬೈಲ್ ಹ್ಯಾಕ್ ಮಾಡಿ ರಮೇಶ ಮತ್ತು ಸಿಡಿ ಲೇಡಿ ಮಾತನಾಡಿದ ವಾಟ್ಸ್ ಆಯಪ್ ಕಾಲ್ ರೆಕಾರ್ಡ್ ಮಾಡಿದ್ದಾರೆ. ಯುವತಿಯ ಮೊಬೈಲ್ ಗೆ ಸಾಫ್ಟ್ ವೇರ್ ಟೂಲ್ ಅಳವಡಿಸಿದ್ದ. ಫೋನ್ ಕಾಲ್ …

Read More »

ತಮ್ಮ ವಿರುದ್ದ ‘ಸಿಡಿ ಲೇಡಿ’ ಪೋಲಿಸ್ರಿಗೆ ದೂರು ನೀಡಿದ ಬಳಿಕ ರಮೇಶ್ ಜಾರಕಿ ಹೇಳಿದ್ದೇನು ಗೊತ್ತಾ?

ಬೆಂಗಳೂರು: ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ನ ಯುವತಿ ಪರವಾಗಿ ವಕೀಲ ಜಗದೀಶ್​ ಎನ್ನುವವರು ಬೆಂಗಳೂರು ನಗರ ಪೊಲೀಸ್‌ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ನಡುವೆ ಇಂದು ಬೆಳಗ್ಗೆ ಮೂರನೇ ವಿಡಿಯೋವನ್ನು ಯುವತಿ ಬಿಡುಗಡೆ ಮಾಡಿದ್ದಳು ಈ ವೇಳೆ ಆಕೆ ನಾನು 24 ದಿನದಿಂದ ನನಗೆ ಜೀವ ಬೆದರಿಕೆ ಇತ್ತು. ಈವಾಗ ನನಗೆ ಧೈರ್ಯ ಬಂದಿದೆ. ರಾಜ್ಯದ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ ಇಂದು ರಮೇಶ್ ಜಾರಕಿಹೊಳಿ ವಿರುದ್ಧ ದೂರು …

Read More »

CD ಪ್ರಕರಣ’ : ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ : ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು ; ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸಿಡಿ ಲೇಡಿ ಇಂದು ಮೂರನೇ ವಿಡಿಯೋ ಬಿಡುಗಡೆ ಮಾಡಿದ್ದು, ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡುತ್ತೇನೆ ಎಂದು ಹೇಳಿದ್ದಾಳೆ.   ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ, ಯುವತಿಗೆ ಭದ್ರತೆ ಕೊಡಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ಹೇಳಿದ್ದಾರೆ. ಯುವತಿ ಕಾನೂನಾತ್ಮಕವಾಗಿ ದೂರು ಕೊಡಲಿ, ಯುವತಿಗೆ, …

Read More »

ಯುವತಿ, ಕೆಲಸ ಸಕ್ಸಸ್ ಆಗಿದೆ ಬಾ ಎಂದು ಶಂಕಿತ ಆರೋಪಿಯಾಗಿರುವ ಶ್ರವಣ್ ಗೆ ಹೇಳಿದ್ದಾರೆ. ಸದ್ಯ ಈ ವಿಡಿಯೋ ಎಸ್ ಐಟಿಗೆ ಲಭ್ಯವಾಗಿದೆ.

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾಗಿರುವ ರಾಸಲೀಲೆ ಸಿಡಿ ವಿಷಯಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಎಸ್ ಐಟಿ ತೀವ್ರಗೊಳಿಸಿದೆ. ಎಸ್ ಐಟಿಗೆ ಸಿಕ್ಕ ವಿಡಿಯೋ ತುಣುಕೊಂದರಲ್ಲಿ ಯುವತಿ, ಕೆಲಸ ಸಕ್ಸಸ್ ಆಗಿದೆ ಬಾ ಎಂದು ಶಂಕಿತ ಆರೋಪಿಯಾಗಿರುವ ಶ್ರವಣ್ ಗೆ ಹೇಳಿದ್ದಾರೆ. ಸದ್ಯ ಈ ವಿಡಿಯೋ ಎಸ್ ಐಟಿಗೆ ಲಭ್ಯವಾಗಿದೆ. ನಗರದ ಪ್ರಮುಖ ಪ್ರದೇಶದಲ್ಲಿರುವ ಅಪಾರ್ಟ್‌ ಮೆಂಟ್‌ ಕಟ್ಟಡದಲ್ಲಿ ಯುವತಿ ಇದ್ದಳು. ಅಲ್ಲಿಂದ ಸ್ವಲ್ಪ ದೂರದಲ್ಲಿ ಶ್ರವಣ್‌ …

Read More »

ಕರ್ನಾಟಕದ ದಶಕಗಳ ಬೇಡಿಕೆಗೆ ಒಪ್ಪಿದ ಕೇಂದ್ರ ಸರ್ಕಾರ

ಬೆಂಗಳೂರು, ಮಾರ್ಚ್ 26; ಕರ್ನಾಟಕ ರಾಜ್ಯದ ದಶಕಗಳ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ರಾಷ್ಟ್ರೀಯ ಯೋಜನೆ ಸ್ಥಾನಮಾನವನ್ನು ನೀಡಲು ಅನುಮೋದನೆ ಸಿಕ್ಕಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಟ್ವೀಟ್ ಮೂಲಕ ಈ ಕುರಿತು ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ. ರಾಷ್ಟ್ರೀಯ ಯೋಜನೆ ಸ್ಥಾನಮಾನ ಪಡೆದ ರಾಜ್ಯದ ಮೊದಲ ಯೋಜನೆ ಇದಾಗಿದೆ.   ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು ಜಿಲ್ಲೆಗಳ …

Read More »

ರೈತ ಪ್ರತಿಭಟನೆ : 4 ಶತಾಬ್ಧಿ ರೈಲು ಸಂಚಾರ ರದ್ದು

ನವದೆಹಲಿ,ಮಾ.26- ಪಂಜಾಬ್ ಮತ್ತು ಹರಿಯಾಣದಲ್ಲಿ ರೈತರು ರೈಲ್ವೇ ಹಳಿಗಳ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವುದರಿಂದ ನಾಲ್ಕು ಶತಾಬ್ದಿ ಎಕ್ಸ್‍ಪ್ರೆಸ್ ರೈಲುಗಳ ಸಂಚಾರ ರದ್ದುಗೊಂಡಿದೆ. ಭಾರತ್ ಬಂದ್ ಹಿನ್ನೆಲೆಯಲ್ಲಿ 32 ರೈಲ್ವೆ ನಿಲ್ದಾಣಗಳಲ್ಲಿ ರೈಲು ಹಳಿ ಮೇಲೆ ಕುಳಿತು ಪ್ರತಿಭಟನೆ ನಡೆಸುತ್ತಿರುವುದರಿಂದ ಹಲವಾರು ರೈಲುಗಳ ಸಂಚಾರಕ್ಕೆ ಅಡಚಣೆಯಾಗಿದೆ. ದೆಹಲಿ, ಅಂಬಾಲಾ, ಫೀರೋಜ್‍ಪುರ್ ವಿಭಾಗಗಳ ರೈಲು ಸಂಚಾರ ರದ್ದುಗೊಂಡಿದೆ. ಇದುವರೆಗೂ 31 ರೈಲುಗಳ ಸಂಚಾರಕ್ಕೆ ಆಡಚಣೆಯಾಗಿದ್ದು ನಾಲ್ಕು ಶತಾಬ್ದಿ ರೈಲು ಸಂಚಾರ ರದ್ದುಗೊಳಿಸಲಾಗಿದೆ …

Read More »