ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 2,298 ಜನರಲ್ಲಿ ಇಂದು ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಸರ್ಕಾರ ಹೊಸ ಮಾರ್ಗಸೂಚಿ ಜಾರಿ ಮಾಡಿದೆ. ಕೋವಿಡ್ ನಿಯಮ ಉಲ್ಲಂಘಿಸಿದವರಿಗೆ ಭಾರಿ ದಂಡದ ಬಿಸಿ ತಟ್ಟಲಿದೆ. ಸಭೆ, ಸಮಾರಂಭ, ರ್ಯಾಲಿ ಆಯೋಜಕರಿಗೆ ಹಾಗೂ ಹೋಟೆಲ್ ಗಳಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದರೆ 10,000 ರೂ ದಂಡ ವಿಧಿಸುವುದಾಗಿ ಸರ್ಕಾರ ಆದೇಶ ಹೊರಡಿಸಿದೆ. * …
Read More »ಕಮ್ಮರ್ ತೋಡ್, ಪಲ್ಲಂಗ್ ತೋಡ್ ಸರ್ಕಾರವೆಂದು ಕಾಂಗ್ರೆಸ್ ನ ಸಿ.ಎಂ.ಇಬ್ರಾಹಿಂ ಲೇವಡಿ
ಬೆಂಗಳೂರು: ಕಮ್ಮರ್ ತೋಡ್, ಪಲ್ಲಂಗ್ ತೋಡ್ ಸರ್ಕಾರವೆಂದು ಕಾಂಗ್ರೆಸ್ ನ ಸಿ.ಎಂ.ಇಬ್ರಾಹಿಂ ಲೇವಡಿ ಮಾಡಿದರೆ, ಪ್ರತಿಪಕ್ಷಗಳಿಗೆ ತಾಕತ್ತಿದ್ದರೆ ತಮ್ಮ ತಮ್ಮ ಕುಟುಂಬ ಸದಸ್ಯರನ್ನು ಸದನಕ್ಕೆ ಕರೆ ತಂದು ಸಿಡಿ ಪ್ರಕರಣದ ಬಗ್ಗೆ ಚರ್ಚಿಸಲಿ ಎಂದು ಬಿಜೆಪಿಯ ತೇಜಸ್ವಿನಿಗೌಡ ಸವಾಲೆಸೆದರು. ವಿಧಾನ ಪರಿಷತ್ ಅಧಿವೇಶನ ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗುವ ಮುನ್ನ ಈ ಪ್ರಹಸನ ನಡೆಯಿತು. ಭೋಜನ ವಿರಾಮದ ಬಳಿಕ ಸದನ ಮತ್ತೆ ಸೇರುತ್ತಿದ್ದಂತೆಯೇ ಸಭಾಪತಿ ಪೀಠದ ಮುಂದೆ ಪ್ರತಿಪಕ್ಷಗಳಾದ ಕಾಂಗ್ರೆಸ್, ಜೆಡಿಎಸ್ …
Read More »ಸುಧಾಕರ್ ಕಾಮಿಡಿ ಮಾಡ್ತಿದ್ದಾರಾ : ಸುಧಾಕರ್ ಗೆ ಸೌಮ್ಯ ರೆಡ್ಡಿ ಟಾಂಗ್
ಬೆಂಗಳೂರು : ಡಾ.ಕೆ.ಸುಧಾಕರ್ ಅವರಿಗೆ ಮಾಡೋಕೆ ಏನೂ ಕೆಲಸ ಇಲ್ವಾ. ಜನ ನಗ್ತಾ ಇದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಶಾಸಕ ಸೌಮ್ಯ ರೆಡ್ಡಿ ಟಾಂಗ್ ನೀಡಿದ್ದಾರೆ. ಇಂದು ಬೆಳಗ್ಗೆ ಸಚಿವ ಡಾ.ಕೆ.ಸುಧಾಕರ್, ಸಿದ್ದರಾಮಯ್ಯ, ಕುಮಾರಸ್ವಾಮಿ, ಮುನಿಯಪ್ಪ, ಡಿ.ಕೆ.ಶಿವಕುಮಾರ್ ಮತ್ತು ನನ್ನನ್ನು ಸೇರಿದಂತೆ ಎಲ್ಲ 224 ಶಾಸಕರ ವೈಯಕ್ತಿಕ ಜೀವನದ ಬಗ್ಗೆ ತನಿಖೆ ಆಗಲಿ. ಯಾರಿಗೆ ಅನೈತಿಕ ಸಂಬಂಧ ಇದೆ, ವಿವಾಹವೇತರ ಸಂಬಂಧ ಇದೆ ಎಂಬುವುದು ಗೊತ್ತಾಗಲಿ. ಸಿಎಂ ಆಗಿದ್ದಾಗ …
Read More »ಕಂಡವರ ಹೆಂಡಿರ ಲೆಕ್ಕ ಹಾಕುವ ಮೊದಲು ಏರುತ್ತಿರುವ ಕೊರೊನಾ ಕೇಸ್ ಲೆಕ್ಕ ಹಾಕಿ
ಬೆಂಗಳೂರು, ಮಾರ್ಚ್ 24: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆಯ ಸಚಿವ ಡಾ.ಸುಧಾಕರ್ ಅವರ ‘ಏಕಪತ್ನೀವ್ರತಸ್ಥ’ ಹೇಳಿಕೆ ರಂಪ ರಾಮಾಯಣವಾಗಿ, ಕೊನೆಗೆ ಸಚಿವರು ಕ್ಷಮೆಯಾಚನೆ ಮಾಡಿದ್ದಾರೆ. “ನನ್ನ ಹೇಳಿಕೆ ಯನ್ನು ಅರ್ಥ ಮಾಡಿಕೊಳ್ಳಬೇಕಾದ ಮಹಾನಾಯಕರುಗಳು ಅರ್ಥ ಮಾಡಿಕೊಂಡರೆ ಸಾಕು. ಇಡೀ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದು ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಮಹಾನಾಯಕರ ಮುಖವಾಡ ಕಳಚುವ ಉದ್ದೇಶ ನನ್ನ ಹೇಳಿಕೆಯ ಹಿಂದೆ ಇತ್ತು ಅಷ್ಟೇ. ನಮ್ಮಗಳ ತೇಜೋವಧೆ ಮಾಡಲು …
Read More »ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ..?
ಬೆಂಗಳೂರು, ಮಾ.24- ತೀವ್ರ ಹಣಾಹಣಿಗೆ ಸಾಕ್ಷಿಯಾಗಲಿರುವ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಇಂದು ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ. ಮಸ್ಕಿಯಿಂದ ಮಾಜಿ ಶಾಸಕ ಪ್ರತಾಪ್ಗೌಡ ಪಾಟೀಲ್, ಬಸವ ಕಲ್ಯಾಣದಿಂದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ, ಮಾಜಿ ಶಾಸಕ ಖೂಬಾ, ಸೂರ್ಯವಂಶಿ ನಾಗಮಾರಪಲ್ಲಿ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸಚಿವ ಜಗದೀಶ್ ಶೆಟ್ಟರ್, ಮಾಜಿ ಸಚಿವ ದಿ.ಸುರೇಶ್ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಇಲ್ಲವೆ ಅವರ ಪತ್ನಿ ಹೆಸರನ್ನು …
Read More »ಎಫ್ಡಿಐ ಆಕರ್ಷಣೆ: ಮೂರನೇ ಸ್ಥಾನದಲ್ಲಿ ರಾಜ್ಯ
ಬೆಂಗಳೂರು: ವಿದೇಶಿ ನೇರ ಬಂಡವಾಳ (ಎಫ್ಡಿಐ) ಆಕರ್ಷಣೆಯಲ್ಲಿ ಕರ್ನಾಟಕವು ದೇಶದಲ್ಲಿ ಮೂರನೇ ಸ್ಥಾನವನ್ನು ಉಳಿಸಿಕೊಂಡಿದೆ ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರು ಮಂಗಳವಾರ ವಿಧಾನ ಪರಿಷತ್ನಲ್ಲಿ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎFdಸ್ನ ಕೆ.ಎ. ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘2017-18ರಲ್ಲಿ ರಾಜ್ಯಕ್ಕೆ ₹55,334 ಕೋಟಿ ಎಫ್ಡಿಐ ಬಂದಿದ್ದು, ದೇಶದಲ್ಲಿ ಮೂರನೇ ಸ್ಥಾನದಲ್ಲಿತ್ತು. 2018-19ರಲ್ಲಿ ₹46,963 ಕೋಟಿ ಹೂಡಿಕೆ ಮತ್ತು 2019-20ರಲ್ಲಿ ₹ 63,177 ಕೋಟಿ ಹೂಡಿಕೆಯೊಂದಿಗೆ ಎರಡನೇ …
Read More »ಮಹಾರಾಷ್ಟ್ರದಲ್ಲಿ ‘ಸಾರ್ಸ್-ಕೋವ್-2′(SARS-CoV-2) ಕೊರೊನಾ ವೈರಸ್ನ ರೂಪಾಂತರ ತಳಿಗಳು ಪತ್ತೆ
ಬೆಂಗಳೂರು: ಮಹಾರಾಷ್ಟ್ರದಲ್ಲಿ ‘ಸಾರ್ಸ್-ಕೋವ್-2′(SARS-CoV-2) ಕೊರೊನಾ ವೈರಸ್ನ ರೂಪಾಂತರ ತಳಿಗಳು ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ. ‘ಮಹಾರಾಷ್ಟ್ರದಿಂದ ಕಳುಹಿಸಲಾದ ಕೋವಿಡ್-19 ದೃಢಪಟ್ಟ ಮಾದರಿಗಳ ವಂಶವಾಹಿ ರಚನೆಗಳ ವಿಶ್ಲೇಷಣೆ ನಡೆಸಲಾಗಿದ್ದು, 2020ರ ಡಿಸೆಂಬರ್ನಲ್ಲಿ ವೈರಸ್ ರಚನೆಗಳಿಗೂ ಈಗಿನ ಮಾದರಿಗಳಲ್ಲಿನ ರಚನೆಗಳಿಗೂ ಹೋಲಿಕೆ ಮಾಡಲಾಗಿದೆ. ಕೊರೊನಾ ವೈರಸ್ನ ಇ484ಕ್ಯು ಮತ್ತು ಎಲ್452ಆರ್ ರೂಪಾಂತರಗಳು ಹೆಚ್ಚಿರುವುದು ಪತ್ತೆಯಾಗಿದೆ. ವಿಶ್ಲೇಷಣೆಗೆ ಒಳಪಡಿಸಲಾದ ಮಾದರಿಗಳ ಪೈಕಿ ಶೇ 15ರಿಂದ 20ರಷ್ಟು ಮಾದರಿಗಳಲ್ಲಿ ಈ ಹೊಸ ರೂಪಾಂತರಿ ವೈರಸ್ಗಳು ಪತ್ತೆಯಾಗಿವೆ. ಈ …
Read More »ಎಲ್ಲರ ಮೇಲೆ ಆರೋಪ ಮಾಡೋದು ಸರಿಯಲ್ಲ; ಡಾ. ಸುಧಾಕರ್ ಹೇಳಿಕೆಗೆ ಸಚಿವೆ ಶಶಿಕಲಾ ಜೊಲ್ಲೆ ಕಿಡಿ
ಬೆಂಗಳೂರು (ಮಾ. 24): ಯಾವೆಲ್ಲ ಸಚಿವರು, ಶಾಸಕರು ಏಕಪತ್ನಿವ್ರತಸ್ಥರು ಎಂಬುದು ಗೊತ್ತಾಗಲಿ, ಎಲ್ಲ 224 ಶಾಸಕರದ್ದೂ ತನಿಖೆಯಾಗಲಿ ಎಂಬ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಯಾರಿಗೆಲ್ಲ ಅನೈತಿಕ ಸಂಬಂಧವಿದೆ, ಯಾವ ಮುಖ್ಯಮಂತ್ರಿಗಳು ತಮ್ಮ ಅಧಿಕಾರಾವಧಿಯಲ್ಲಿ ಏನೆಲ್ಲ ಮಾಡಿದ್ದರು ಎಂಬುದು ತನಿಖೆಯಾಗಲಿ ಎಂದು ಡಾ. ಸುಧಾಕರ್ ಹೇಳಿದ್ದರು. ಇದಕ್ಕೆ ಈಗಾಗಲೇ ಡಿ.ಕೆ. ಶಿವಕುಮಾರ್, ಸೌಮ್ಯಾ ರೆಡ್ಡಿ, ಹೆಚ್.ಡಿ. ರೇವಣ್ಣ ಸೇರಿದಂತೆ ವಿಪಕ್ಷಗಳ ಅನೇಕ …
Read More »ಸುಧಾಕರ್ ಹೇಳಿದಂತೆ ಎಲ್ಲಾ 225 ಶಾಸಕರ ತನಿಖೆ ಮಾಡಲಿ : ಸತೀಶ್ ಜಾರಕಿಹೊಳಿ
ಬೆಂಗಳೂರು : ಅನೈತಿಕ ಸಂಬಂಧ ವಿಚಾರವಾಗಿ ಎಲ್ಲಾ ಶಾಸಕರ ತನಿಖೆ ಆಗಲಿ ಎಂದು ಸಚಿವ ಸುಧಾಕರ್ ಸವಾಲು ವಿಚಾರಕ್ಕೆ ಕಾಂಗ್ರೆಸ್ ಶಾಸಕ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸುಧಾಕರ್ ಬೇಡಿಕೆಯಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ತನಿಖೆ ಮಾಡಲಿ, ಎಲ್ಲಾ 225 ಶಾಸಕರ ಮೇಲೂ ತನಿಖೆ ನಡೆಯಲಿ ಎಂದು ಹೇಳಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇದ್ದವರು ಹೇಳಿದ್ದಾರೆ. ಹಾಗಾದರೆ ಎಲ್ಲರ ಮೇಲೂ ತನಿಖೆ ನಡೆಯಲಿ, ಸತ್ಯ ಶೋಧನ ಕಮಿಟಿ …
Read More »ಬಾರ್ಬಿಕ್ಯೂ ನೇಷನ್ ಐಪಿಒ ಇಂದಿನಿಂದ ಶುರು: ಬೆಲೆ 498-500 ರೂಪಾಯಿ
ದೇಶಾದ್ಯಂತ ಅನೇಕ ರೆಸ್ಟೋರೆಂಟ್ಗಳನ್ನು ಹೊಂದಿರುವ ಬಾರ್ಬಿಕ್ಯೂ ನೇಷನ್ ಹಾಸ್ಪಿಟಲಿಟಿ ಐಪಿಒ ಬುಧವಾರದಿಂದ ಆರಂಭವಾಗಿದ್ದು, ಆರಂಭಿಕ ಪ್ರೈಸ್ ಬ್ಯಾಂಡ್ ಅನ್ನು 498-500 ರೂಪಾಯಿ ನಿಗದಿಪಡಿಸಲಾಗಿದೆ. ಮಾರ್ಚ್ 24ರಿಂದ ಆರಂಭಗೊಂಡಿರುವ ಐಪಿಒ, ಮಾರ್ಚ್ 26ರಂದು ಮುಕ್ತಾಯವಾಗಲಿದೆ. 15 ಪ್ರಮುಖ ಹೂಡಿಕೆದಾರರನ್ನು ಒಳಗೊಂಡಿರುವ ಬಾರ್ಬಿಕ್ಯೂ ನೇಷನ್ 202 ಕೋಟಿ ರೂಪಾಯಿ ಸಂಗ್ರಹಿಸಲು 40,57,861 ಷೇರುಗಳನ್ನು ಮಾರಾಟ ಮಾಡಲಿದೆ. ನವೆಂಬರ್ 30, 2019 ರ ಹೊತ್ತಿಗೆ ಬಾರ್ಬಿಕ್ಯೂ ನೇಷನ್ ಭಾರತದ 73 ನಗರಗಳಲ್ಲಿ ಮತ್ತು ವಿದೇಶದಲ್ಲಿ …
Read More »