Breaking News

ಬೆಂಗಳೂರು

ರಾಜ್ಯದ ಆಸ್ಪತ್ರೆಗಳಲ್ಲಿ ಗುತ್ತಿಗೆ ನೌಕರರ ಸೇವೆ 6 ತಿಂಗಳಿಗೆ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಸಿಬ್ಬಂದಿಯನ್ನು ಮುಂದಿನ 6 ತಿಂಗಳಿಗೆ ಮುಂದುವರೆಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.   ರಾಜ್ಯದ 18 ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೆ ತಾತ್ಕಾಲಿಕವಾಗಿ ವೈದ್ಯರು, ಶುಶ್ರೂಷಕರು, ಪ್ರಯೋಗಾಲಯ ತಜ್ಞರು ಸೇರಿ 45 ಮಂದಿ ನೇಮಕಕ್ಕೆ ಸೂಚಿಸಲಾಗಿತ್ತು. ಒಟ್ಟಾರೆ ರಾಜ್ಯದಲ್ಲಿ 810 ಸಿಬ್ಬಂದಿ ನೇಮಕಗೊಂಡಿದ್ದರು. ಸದ್ಯ ಅವರ ಸೇವಾವಧಿ ಮುಕ್ತವಾಗುತ್ತಿದೆ. ಕೊರೊನಾ …

Read More »

ಬಸವಕಲ್ಯಾಣ ಬೈಎಲೆಕ್ಷನ್ ಅಖಾಡಲ್ಲಿ ತೊಡೆತಟ್ಟುವರೇ ‘ಬಿಜೆಪಿ ಬಾಹುಬಲಿ’..?

ಬೆಂಗಳೂರು, ಮಾ.20- ಜಿದ್ದಾಜಿದ್ದಿನ ಕಣವಾಗಲಿರುವ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಕಣಕ್ಕಿಳಿಸಬೇಕೆಂಬ ಅಭಿಪ್ರಾಯ ಇಂದು ನಡೆದ ಕೋರ್‍ಕಮಿಟಿ ಸಭೆಯಲ್ಲಿ ವ್ಯಕ್ತವಾಗಿದೆ. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಕೋರ್‍ಕಮಿಟಿ ಸಭೆಯಲ್ಲಿ ಬಸವಕಲ್ಯಾಣದಿಂದ ಬಿ.ವೈ.ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ದಿ.ನಾರಾಯಣರಾವ್ ಅವರ ಪತ್ನಿಗೆ ಟಿಕೆಟ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅನುಕಂಪ ಸಿಕ್ಕರೆ ಬಿಜೆಪಿಗೆ ಹಿನ್ನಡೆಯಾಗಬಹುದೆಂಬ ಕಾರಣಕ್ಕಾಗಿ …

Read More »

1 ನಿಮಿಷದ ವಿಡಿಯೋ ತಯಾರಿಸಿ ಪ್ರತಿ ತಿಂಗಳು ಗಳಿಸಿ 20 ಸಾವಿರ ರೂ.

ಸಾಮಾಜಿಕ ಜಾಲತಾಣದ ಮೂಲಕ ಹಣ ಸಂಪಾದಿಸಲು ಬಯಸಿದರೆ ನಿಮಗೆ ಖುಷಿ ಸುದ್ದಿ ಇದೆ. ಮನೆಯಲ್ಲಿ ಕುಳಿತು ಗಳಿಸಲು ಇದು ಒಳ್ಳೆ ಅವಕಾಶ. ವಿಶ್ವದ ಅತಿದೊಡ್ಡ ಸಾಮಾಜಿಕ ಮಾಧ್ಯಮ ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ ಗಳಿಕೆಗೆ ಅವಕಾಶ ನೀಡ್ತಿದೆ. ಇತ್ತೀಚೆಗೆ ಫೇಸ್ಬುಕ್ ಇಂಕ್ ತನ್ನ ಪ್ಲಾಟ್‌ಫಾರ್ಮ್‌ನಲ್ಲಿ ಕಂಟೆಂಟ್ ಕ್ರಿಯೇಟರ್ ಗಳಿಗೆ ಸಣ್ಣ ವೀಡಿಯೊಗಳನ್ನು ಹಾಕಿ, ಜಾಹೀರಾತುಗಳ ಮೂಲಕ ಹಣ ಗಳಿಸಲು ಅನುಮತಿ ನೀಡಿದೆ. ಇದಲ್ಲದೆ ಜನರು ಯಾವ ರೀತಿ ಫೇಸ್ಬುಕ್‌ನಲ್ಲಿ ಸಂಪಾದಿಸಬಹುದು …

Read More »

ಬಿಗ್ ನ್ಯೂಸ್ : ರಾಜ್ಯದಲ್ಲಿ ಮತ್ತೆ ಎರಡು ವಾರ ‘ಶಾಲಾ-ಕಾಲೇಜು’ ಬಂದ್.?

ಬೆಂಗಳೂರು : ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಕೆಯನ್ನು ಕಂಡಿತು ಎನ್ನುವಾಗಲೇ, ಈಗ ಕೊರೋನಾ ಎರಡನೇ ಅಲೆಯ ಮುನ್ಸೂಚನೆ ರಾಜ್ಯದಲ್ಲಿ ಎದ್ದಿದೆ. ಇಂತಹ ಸಂದರ್ಭದಲ್ಲಿ ಕೊರೋನಾ ಸೋಂಕಿನ ನಿಯಂತ್ರಣದ ಸಲುವಾಗಿ ರಾಜ್ಯದಲ್ಲಿ ಮತ್ತೆ ಎರಡು ವಾರ ಶಾಲಾ-ಕಾಲೇಜು ಬಂದ್ ಆಗಲಿದೆ ಎನ್ನಲಾಗುತ್ತಿದೆ.   ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಹೆಚ್ಚು ಹೆಚ್ಚುಗೊಳ್ಳುತ್ತಿರುವ ಬೆನ್ನಲ್ಲೇ, ಆರೋಗ್ಯ ಇಲಾಖೆಯ ತಾಂತ್ರಿಕ ಸಲಹಾ ಸಮಿತಿ, ಮಹತ್ವದ ನಿರ್ಧಾರ ಕೈಗೊಳ್ಳೋದಕ್ಕೆ, ವೈದ್ಯಕೀಯ ಹಾಗೂ ಆರೋಗ್ಯ ಸಚಿವರಿಗೆ …

Read More »

ರಾಜ್ಯದಲ್ಲಿ ಮತ್ತೆ ಲಾಕ್​ಡೌನ್ ಫಿಕ್ಸ್..? ಸುಳಿವು ಕೊಟ್ಟ ಸಿಎಂ..!

ತುಮಕೂರು, ಮಾ.20- ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ನಿಯಂತ್ರಣಕ್ಕೆ ಬಾರದಿದ್ದರೆ ಲಾಕ್‍ಡೌನ್ ಹಾಗೂ ರಾತ್ರಿ ಕಫ್ರ್ಯೂ ವಿಧಿಸುವುದು ಸೇರಿದಂತೆ ಒಂದು ವಾರದೊಳಗೆ ನಿರ್ಧಾರ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ಈ ಮೂಲಕ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಜಾರಿಮಾಡುವ ಸುಳಿವನ್ನು ಸಿಎಂ ನೀಡಿದ್ದಾರೆ. ತಿಪಟೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಲಾಕ್‍ಡೌನ್ ಜಾರಿ ಇಲ್ಲವೆ ರಾತ್ರಿ ಕಫ್ರ್ಯೂ ವಿಸುವ ಕುರಿತಾಗಿ …

Read More »

ನಂಗೇನೂ ಗೊತ್ತಿಲ್ಲ, ಸಿಡಿ ನಂದಲ್ಲ, ಯುವತಿ ಯಾರು ಅಂತಾನೂ ಗೊತ್ತಿಲ್ಲ, ನೀವೇ ತನಿಖೆ ಮಾಡಿ: ಎಸ್​ಐಟಿ ತನಿಖೆಗೆ ರಮೇಶ್​ ಜಾರಕಿಹೊಳಿ ಉತ್ತರ

ಬೆಂಗಳೂರು: ರಾಜ್ಯದಲ್ಲಿ ಬಹುದೊಡ್ಡ ಸಂಚಲನಕ್ಕೆ ಕಾರಣವಾಗಿರುವ ಅಶ್ಲೀಲ ಸಿಡಿ ಪ್ರಕರಣ ದಿನೇ ದಿನೇ ಮಹತ್ವದ ತಿರುವು ಪಡೆದುಕೊಳ್ಳುತ್ತಿದ್ದು, ಎಸ್​ಐಟಿ ಅಧಿಕಾರಿಗಳು ಸಿಡಿ ಬಗ್ಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಡಿ ಹಾಗೂ ಆಡಿಯೋ ಕ್ಲಿಪ್​ ಜೊತೆಗೆ ಕೆಲ ಸಿಸಿಟಿವಿ ದೃಶ್ಯಾವಳಿಗಳ ಬಗ್ಗೆಯೂ ತನಿಖೆ ನಡೆಸುತ್ತಿರುವ ಎಸ್​ಐಟಿ ಅಧಿಕಾರಿಗಳು ಸತತ ನಾಲ್ಕು ಗಂಟೆ ವಿಚಾರಣೆ ನಡೆಸಿ ದಾಖಲೆಗಳನ್ನು ಮುಂದಿಟ್ಟು ಮಾಜಿ ಸಚಿವರಿಂದ …

Read More »

ಸಿಎಂ ಭೇಟಿ ಮಾಡಿದ ಜಾರಕಿಹೊಳಿ ಸಹೋದರರು..

ಬೆಂಗಳೂರು, ಮಾ.20- ಸಿಡಿ ವಿವಾದದಿಂದ ತೀವ್ರ ಮುಜುಗರಕ್ಕೆ ಸಿಲುಕಿರುವ ಜಾರಕಿಹೊಳಿ ಸಹೋದರರು ನಿನ್ನೆ ತಡರಾತ್ರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕಾವೇರಿಯಲ್ಲಿ ತಡರಾತ್ರಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರೊಂದಿಗೆ ತೆರಳಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಿಎಂ ಜತೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಸಿದಂತೆ ಸಿಎಂ ಹಾಗೂ ಗೃಹ ಸಚಿವರಿಗೆ ಎಲ್ಲ ಮಾಹಿತಿಯನ್ನು ನೀಡಿರುವ ಜಾರಕಿಹೊಳಿ ಸಹೋದರರು ಕಾನೂನಾತ್ಮಕವಾಗಿಯೇ …

Read More »

ಇಂದು ಮಸ್ಕಿಯಲ್ಲಿ ಸಿಎಂ ಬಿಎಸ್​ವೈ ಸಮಾವೇಶ-ಸಂಭಾವ್ಯ ಅಭ್ಯರ್ಥಿಗಳನ್ನೂ ವರಿಷ್ಠರಿಗೆ ಶಿಫಾರಸ್ಸು ಮಾಡುವ ನಿರೀಕ್ಷೆ|

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಉಪ ಚುನಾವಣೆಗಳ ಕಹಳೆ ಮೊಳಗಿದೆ. ಈಗಾಗಲೇ ಮಸ್ಕಿ ಉಪಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಅಂತಿಮವಾಗಿದ್ದು, ಬಿರುಸಿನ ಪ್ರಚಾರ ನಡೆದಿದೆ. ಉಪಚುನಾವಣೆಯಲ್ಲಿ ಗೆಲುವಿಗಾಗಿ ಉಭಯ ಪಕ್ಷಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಿವೆ. ಇಂದು ರಾಯಚೂರಿನ ಮಸ್ಕಿಯಲ್ಲಿ ಬೃಹತ್ ಸಮಾವೇಶ ನಡೆಸಲಿದೆ. ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಭಾಗವಹಿಸಿ ಪ್ರತಾಪಗೌಡ ಪಾಟೀಲ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಇತ್ತ ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ …

Read More »

ಹೆಚ್ಚಿದ ಕೊರೋನಾ: ಶಾಲಾ-ಕಾಲೇಜುಗಳಿಗೆ ರಜೆ, ಪರೀಕ್ಷೆ ಮುಂದೂಡಿಕೆ

ಅಹಮದಾಬಾದ್: ಗುಜರಾತ್ ನಲ್ಲಿ ಕೊರೋನಾ ಸೋಂಕು ತೀವ್ರ ಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 8 ಮಹಾನಗರಗಳ ವ್ಯಾಪ್ತಿಯಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದ್ದು, ಪರೀಕ್ಷೆಗಳನ್ನು ಮುಂದೂಡಲಾಗಿದೆ. ಅಹಮದಾಬಾದ್, ವಡೋದರಾ, ಸೂರತ್, ರಾಜಕೋಟ್ ಸೇರಿದಂತೆ 8 ಮಹಾನಗರಗಳ ವ್ಯಾಪ್ತಿಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಆನ್ಲೈನ್ ತರಗತಿ ನಡೆಯಲಿದ್ದು, ಶುಕ್ರವಾರದಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಏಪ್ರಿಲ್ ನಲ್ಲಿ ನಡೆಸಲಾಗುವುದು ಎಂದು ಗುಜರಾತ್ ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿ ವಿಜಯ ರೂಪಾನಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ …

Read More »

ಮುಂದುವರಿದ ಕೋಲಾಹಲ: ವಿಧಾನ ಪರಿಷತ್ ಕಲಾಪ‌ ಸೋಮವಾರಕ್ಕೆ ಮುಂದೂಡಿಕೆ

ಬೆಂಗಳೂರು: ಸಭಾಪತಿ‌ ನೇತೃತ್ವದಲ್ಲಿ ನಡೆದ ಸಂಧಾನ‌ ಸಭೆ ಸಫಲವಾಗಿಲ್ಲ. ಸದನ ಸಮಿತಿ ರಚನೆಗೆ ಸರ್ಕಾರ ನಿರಾಕರಿಸಿದ್ದು, ಜೆಡಿಎಸ್ ಧರಣಿಯಿಂದ ಸದನದಲ್ಲಿ ಕೋಲಾಹಲ‌ ಮುಂದುವರಿಯಿತು. ಕಲಾಪವನ್ನು ಮತ್ತೆ ಸೋಮವಾರಕ್ಕೆ ಮುಂದೂಡಲಾಯಿತು. ಸಂಧಾನ ಸಭೆಯ ಬಳಿಕ‌ ಮತ್ತೆ ಕಲಾಪ ಆರಂಭವಾದಾಗ ಸ್ಪಷ್ಟನೆ ನೀಡಿದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ‘ನಮ್ಮ ಅವಧಿಯಲ್ಲಿ ಯಾವುದೇ ಲೋಪ ಆಗಿಲ್ಲ.‌ 2002ರಲ್ಲಿ ಒಂದೇ ಬಾರಿಗೆ 300 ಕಾಲೇಜುಗಳಿಗೆ ಅನುಮತಿ ನೀಡಲಾಗಿತ್ತು. ಆಗ ಯಾರೂ …

Read More »