ಬೆಂಗಳೂರು: ರವಿ ಬಸ್ರೂರು ಈಗಾಗಲೇ ‘ಕೆಜಿಎಫ್’ ಚಿತ್ರಗಳ ಮೂಲಕ ಬೇರೆ ಭಾಷೆಯ ಚಿತ್ರರಂಗಗಳಿಗೂ ಪರಿಚಿತರಾಗಿದ್ದಾರೆ. ಇನ್ನು, ಈಗಾಗಲೇ ತೆಲುಗು, ಮಲಯಾಳಂ ಚಿತ್ರಗಳಿಗೆ ಕೆಲಸ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಬಾಲಿವುಡ್ಗೂ ಕಾಲಿಟ್ಟಿದ್ದಾರೆ. ಬಾಲಿವುಡ್ನ ಜನಪ್ರಿಯ ನಟ-ನಿರ್ದೇಶಕ ಫರ್ಹಾನ್ ಅಖ್ತರ್, ‘ಯುದ್ರ’ ಎಂಬ ಚಿತ್ರವನ್ನು ನಿರ್ವಿುಸುತ್ತಿದ್ದು, ಈ ಚಿತ್ರಕ್ಕೆ ರವಿ ಬಸ್ರೂರು ಹಿನ್ನೆಲೆ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು, ಮತ್ತೊಬ್ಬ ಕನ್ನಡಿಗ ರವಿ ಉದ್ಯಾವರ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ. ಸೋಮವಾರ ಸೋಷಿಯಲ್ ಮೀಡಿಯಾ …
Read More »ಕೋವಿಡ್ ವಾರಿಯರ್ಸ್ ಗೆ ಸಿಗದ ವಿಮೆ ಪರಿಹಾರ: ಲೋಕಾಯುಕ್ತದಿಂದ ಸ್ವಯಂ ಪ್ರೇರಿತ ದೂರು ದಾಖಲು; ಸರ್ಕಾರಕ್ಕೆ ನೋಟಿಸ್
ಬೆಂಗಳೂರು: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಕರ್ತವ್ಯ ನಿರ್ವಹಿಸಿ ಮೃತಪಟ್ಟ ಕೋವಿಡ್ ವಾರಿಯರ್ಸ್ ಗೆ ಸರ್ಕಾರ ಘೋಷಣೆ ಮಾಡಿದ್ದ ವಿಮೆ ಪರಿಹಾರ ಪಾವತಿಯಾಗದ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಾಯುಕ್ತ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಂಡು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಕೋವಿಡ್ ಕರ್ತವ್ಯದಲ್ಲಿ ಭಾಗಿಯಾಗಿ ಮೃತಪಟ್ಟ ಕೋವಿಡ್ ವಾರಿಯರ್ಸ್ ಕುಟುಂಬಗಳಿಗೆ ವಿಮಾ ಪರಿಹಾರ ಪಾವತಿಯಾಗದ ವಿಷಯವನ್ನು ಕರ್ನಾಟಕ ಲೋಕಾಯುಕ್ತ ಗಂಭೀರವಾಗಿ ಪರಿಗಣಿಸಿದ್ದು, ಈ ಸಂಬಂಧ ಸ್ವಯಂ ಪ್ರೇರಿತ ಅರ್ಜಿ …
Read More »ಇಟ್ಟುಕೊಂಡವಳು ಇರೋ ತನಕ ಕಟ್ಟಿಕೊಂಡವಳು ಕೊನೇ ತನಕ
ಬೆಂಗಳೂರು, ಫೆಬ್ರವರಿ 15: ಚಿನ್ನಾ, ನೀನು ದುಡ್ಡು ಸಂಪಾದನೆ ಮಾಡಿಕೊಂಡು ಬಾ. ನಾವಿಬ್ಬರೂ ಎಲ್ಲಾದರೂ ಹೋಗಿ ರಾಯಲ್ ಲೈಫ್ ಲೀಡ್ ಮಾಡೋಣ ! ಎಟಿಎಂ ಗೆ ತುಂಬ ಬೇಕಿದ್ದ 64 ಲಕ್ಷ ರೂ. ಹಣ ಸಮೇತ ಎಸ್ಕೆಪ್ ಆಗಿ ಸಿಕ್ಕಿಬಿದ್ದ ಚಾಲಕ ಯೋಗೀಶ್ ಈ ಕೃತ್ಯ ಎಸಗಲು ಪ್ರೇರಣೆ ನೀಡಿದ್ದು ಅತ್ತೆಯ ಮಗಳು. ಮತ್ತು ಆಕೆಯ ಪ್ರೀತಿ ! ಅಪರಾಧ ಎಸಗಿ ಜೈಲು ಸೇರಿರುವ ಯೋಗೀಶ್ ಇದೀಗ ಹೆಂಡತಿ ಮಕ್ಕಳಿಗೆ …
Read More »ಜೈಲಿನಿಂದ ಬಿಡುಗಡೆಯಾದ ರಾಗಿಣಿ ದ್ವಿವೇದಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ?
ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಜೈಲಿನಿಂದ ಬಿಡುಗಡೆಯಾದ ನಟಿ ರಾಗಿಣಿ ದ್ವಿವೇದಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಾರಾ? ಹೀಗೊಂದು ಸುದ್ದಿ ಹಬ್ಬಿದೆ. ರಾಗಿಣಿ ದ್ವಿವೇದಿ ಬಿಗ್ ಬಾಸ್ ಸೀಸನ್ 8 ಗೆ ಹೋಗಲಿದ್ದಾರೆ ಎಂಬ ಸುದ್ದಿ ಹರಡಿದೆ. ಈಗಾಗಲೇ ವಾಹಿನಿ ಆಕೆಯನ್ನು ಸಂಪರ್ಕಿಸಿದೆ ಎನ್ನಲಾಗಿದೆ. ಜೈಲಿಗೆ ಹೋಗಿ ಇಮೇಜ್ ಕಳೆದುಕೊಂಡಿರುವ ರಾಗಿಣಿಗೆ ಈಗ ಮತ್ತೆ ತನ್ನನ್ನು ಸಾಬೀತುಪಡಿಸಲು ಬಿಗ್ ಬಾಸ್ ವೇದಿಕೆಯಾಗಬಹುದು. ಹೀಗಾಗಿ ಆಕೆ ತೆರಳಿದರೂ ಅಚ್ಚರಿಯಿಲ್ಲ.
Read More »SSLC ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪರೀಕ್ಷ ಶುಲ್ಕ ಕಟ್ಟುವ ದಿನಾಂಕ ವಿಸ್ತರಣೆ, ಇಲ್ಲಿದೆ ನೂತನ ದಿನಾಂಕ
ಬೆಂಗಳೂರು: 2021ನೇ ಜೂನ್ ಮಾಹೆಯಲ್ಲಿ ನಡೆಯುವ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಗೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ,ಅನುದಾನ ರಹಿತ ಶಾಲಾ/ ಕಾಲೇಜುಗಳಿಂದ ಹಾಜರಾಗುವ ಅರ್ಹ ಶಾಲ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್ಲೈನ್ ಮುಖಾಂತರ ನೋಂದಾಯಿಸಲು ಹಾಗೂ ಶುಲ್ಕ ಪಾವತಿಸಲು ದಿನಾಂಕವನ್ನು ವಿಸ್ತರಣೆ ಮಾಡಲು ಹೊಸ ಅಧಿಸೂಚನೆಯನ್ನು ಹೊರಡಿಸಲಾಗಿದೆ.
Read More »ಕೇಂದ್ರ ಆರೋಗ್ಯ ಇಲಾಖೆʼಯಿಂದ ʼಕಚೇರಿʼಗಳಿಗೆ ಹೊಸ ʼಗೈಡ್ ಲೈನ್ಸ್ʼ ಜಾರಿ: ಉದ್ಯೋಗಿಗಳೇ ನೀವು ಇವುಗಳನ್ನ ಪಾಲಿಸ್ಲೇಬೇಕು
ಬೆಂಗಳೂರು: ಕೇಂದ್ರ ಆರೋಗ್ಯ ಇಲಾಖೆ ಕಚೇರಿಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದ್ದು, ಉದ್ಯೋಗಿಗಳು ಕಡ್ಡಾಯವಾಗಿ ಇವುಗಳನ್ನ ಪಾಲಿಸಿಲೇ ಬೇಕು ಎಂದು ತಾಕೀತು ಮಾಡಿದೆ. ಕೇಂದ್ರ ಆರೋಗ್ಯ ಇಲಾಖೆ ಉದ್ಯೋಗಿಗಳಿಗೆ ನೀಡಿದ ಸಾಮಾನ್ಯ ಹಾಗೂ ನಿರ್ಧಿಷ್ಟ ಮಾರ್ಗಸೂಚಿಗಳು ಈ ಕೆಳಗಿನಂತಿವೆ. ಸಾಮಾನ್ಯ ಮಾರ್ಗಸೂಚಿಗಳು ಇಂತಿವೆ..! * ವ್ಯಕ್ತಿಯಿಂದ ವ್ಯಕ್ತಿಗೆ 6 ಅಡಿ ಅಂತರ ಕಾಯ್ದುಕೊಳ್ಳಬೇಕು. * ಕಚೇರಿಯಲ್ಲಿ ಇರುವಷ್ಟು ಸಮಯ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಬೇಕು. * ಸ್ಯಾನಿಟೈಸರ್ ಬಳಸಬೇಕು ಅಥವಾ ಸೋಪ್ ಬಳಸಿ …
Read More »ಇವರಿಗೆ ಕಾಮನ್ ಸೆನ್ಸ್ ಇದೆಯಾ? 10 ರೂ. ಪಾವತಿಸಿ ಅಂತ ತಿಳಿಸಲು ಈ ವಿ.ವಿ. ಖರ್ಚು ಮಾಡಿದ್ದು 22 ರೂ.!
ಧಾರವಾಡ: ಮಾಹಿತಿ ಹಕ್ಕು ಕಾಯ್ದೆ (ಆರ್ಟಿಐ) ಅಡಿಯಲ್ಲಿ ದೇಶದ ಯಾವುದೇ ಪ್ರಜೆ ಯಾವುದೇ ರೀತಿಯ ಮಾಹಿತಿಯನ್ನು ಪಡೆಯಬಹುದು. ಅದೇ ರೀತಿಯ ಮಾಹಿತಿಯನ್ನು ಕೇಳಿ ಒಬ್ಬರು ಸಲ್ಲಿಸಿದ್ದ ಅರ್ಜಿಗೆ ಕರ್ನಾಟಕ ವಿಶ್ವವಿದ್ಯಾಲಯದ ಆರ್ಟಿಐ ಉತ್ತರಿಸಿದ ಅಧಿಕಾರಿಗಳು ಉತ್ತರಿಸಿದ ರೀತಿಯೇ ನಗು ತರಿಸುವಂತಿದೆ. ಧಾರವಾಡದ ಕೆ.ಎಸ್. ಜಯಂತ್ ಕೆಲವು ಮಾಹಿತಿ ಕೋರಿ ಕರ್ನಾಟಕ ವಿಶ್ವವಿದ್ಯಾಲಯಕ್ಕೆ 2021ರ ಜನವರಿ 1ರಂದು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಫೆಬ್ರವರಿ 10ರಂದು ಉತ್ತರ ಬಂದಿದೆ. ‘ನೀವು ಕೇಳಿರುವ …
Read More »ವಿಚಿತ್ರ ಸಮಸ್ಯೆಯಿಂದ ಬಳಲುತ್ತಿರುವ 11ತಿಂಗಳ ಕಂದ; ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ಪ್ರಧಾನಿಗೆ ಪತ್ರ ಬರೆದ ಸಂಸದ
ಬೆಂಗಳೂರು: ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ ಸಮಸ್ಯೆಯಿಂದ ಬಳಲುತ್ತಿರುವ 11 ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗುವಂತೆ ರಾಜ್ಯಸಭಾ ಸದಸ್ಯ ಚಂದ್ರಶೇಖರ್ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದಾರೆ. 11 ತಿಂಗಳ ಮಗು ಜನೀಶ್ ಚಿಕಿತ್ಸೆಗೆ 16 ಕೋಟಿ ರೂ.ಇಂಜಕ್ಷನ್ ಅಗತ್ಯವಿದ್ದು, ಇದನ್ನು ಅಮೆರಿಕಾದಿಂದ ಆಮದು ಮಾಡಿಕೊಳ್ಳಬೇಕಿದೆ. ಹೀಗಾಗಿ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಆರ್ಥಿಕ ಸಹಾಯ ನೀಡುವಂತೆ ಮನವಿ ಮಾಡಿದ್ದು, ಔಷಧದ ಮೇಲಿನ ಎಲ್ಲಾ ತೆರಿಗೆಗಳನ್ನು ಮನ್ನಾ ಮಾಡುವ ಮೂಲಕ ಮಗುವಿಗೆ ನೆರವಾಗುವಂತೆ ಪತ್ರದಲ್ಲಿ …
Read More »ಬೆಲೆ ಏರಿಕೆ ಎಫೆಕ್ಟ್ , ಭಾರವಾಯ್ತು ಜನರ ಬದುಕು..!
ಬೆಂಗಳೂರು, ಫೆ.12- ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದಿನಸಿ, ತರಕಾರಿ ಬೆಲೆಗಳ ನಿರಂತರ ಏರಿಕೆಯಿಂದ ಜನರ ಬದುಕು ದುಸ್ತರವಾಗಿದೆ. ಕೊರೊನಾ ಸೋಂಕಿನಿಂದ ಆರ್ಥಿಕವಾಗಿ ಕಂಗೆಟ್ಟು ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದ ಜನ ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ. ಕೆಲವು ವಾರಗಳಿಂದ ಬೇಳೆಕಾಳು, ಆಹಾರ ಪದಾರ್ಥ, ಹಣ್ಣು-ತರಕಾರಿಗಳ ಬೆಲೆ ಗಗನ ಮುಖಿಯಾಗಿದ್ದು, ಜನ ತತ್ತರಗೊಂಡಿದ್ದಾರೆ. ಕೆಳ ಹಾಗೂ ಮಧ್ಯಮ ವರ್ಗದ ಜನರ ಬದುಕಂತೂ ಹೇಳತೀರದಾಗಿದೆ. ಬೆಲೆ ಏರಿಕೆಗಳ ಹುಚ್ಚಾಟದಿಂದ ಪ್ರತಿದಿನ ಬಡವರ ಪರದಾಟ ಹೆಚ್ಚಾಗಿದೆ. ಪೆಟ್ರೋಲ್, …
Read More »ಹೊಸ ಮದ್ಯದಂಗಡಿಗೆ ಲೈಸನ್ಸ್ ನೀಡುವ ಪ್ರಸ್ತಾವ ಇಲಾಖೆ ಮುಂದಿಲ್ಲ :ಸಚಿವ ಗೋಪಾಲಯ್ಯ
ಬೆಂಗಳೂರು : ರಾಜ್ಯದಲ್ಲಿ ಯಾವುದೇ ಹೊಸ ಲೈಸನ್ಸ್ ನೀಡುವ ಪ್ರಸ್ತಾವ ಇಲಾಖೆ ಮುಂದಿಲ್ಲ. ಈಗಾಗಲೇ ಹಳೆ ನಿಯಮದಂತೆ CL-07 ಲೈಸನ್ಸ್ ನೀಡುತ್ತಿದ್ದು, ಕಾನೂನು ಮೀರಿ ಲೈಸನ್ಸ್ ನೀಡಿದ್ದರೆ ಅದನ್ನು ರದ್ದು ಮಾಡಿ, ಅಧಿಕಾರಿಗಳನ್ನು ಅಮಾನತು ಮಾಡಲಾಗುತ್ತದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಾತನಾಡಿದ ಅವರು, ಒಂದು ಲೈಸನ್ಸ್ ಪಡೆದು ಮೂರ್ನಾಲ್ಕು ಬಾರ್ಗಳನ್ನು ನಡೆಸುತ್ತಿರುವ ವಿಚಾರದ ಬಗ್ಗೆ ಸಚಿವರ ಗಮನ ಸೆಳೆದಾಗ, ಆ ರೀತಿ ಯಾವುದೇ ದೂರುಗಳು ನನ್ನ ಗಮನಕ್ಕೆ …
Read More »