ಬೆಂಗಳೂರು/ಹೊಸದಿಲ್ಲಿ : ಕೃಷಿ ಕಾಯ್ದೆಗಳನ್ನು ಖಂಡಿಸಿ ಶನಿವಾರ ಕರ್ನಾಟಕ ಸಹಿತ ದೇಶವ್ಯಾಪಿಯಾಗಿ ರೈತ ಸಂಘಟನೆಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಬಂದ್ ನಡೆಸಲಿವೆ. ರಾಷ್ಟ್ರ ಮಟ್ಟದಲ್ಲಿ ಕಿಸಾನ್ ಮೋರ್ಚಾ ಸೇರಿ ಹಲವು ರೈತ ಸಂಘನೆಗಳು ಹೆದ್ದಾರಿ ಬಂದ್ನಲ್ಲಿ ಭಾಗಿ ಆಗಲಿದ್ದು, ರಾಜ್ಯದಲ್ಲಿ ಸಂಯುಕ್ತ ಹೋರಾಟ -ಕರ್ನಾಟಕ ವೇದಿಕೆ ಕಾರ್ಯಕರ್ತರು, ರೈತರ ಜತೆಗೂಡಿ ಹಲವು ಕಡೆ ರಸ್ತೆ ತಡೆ ನಡೆಸಲಿದ್ದಾರೆ. ಹಾಗೆಯೇ ರಸ್ತೆ ಮಧ್ಯೆ ಊಟ ಸಿದ್ಧಪಡಿಸಿ ಸೇವಿಸಲಿದ್ದಾರೆ. ಎಲ್ಲೆಲ್ಲಿ ಚಕ್ಕಾ …
Read More »ಪರಿಶಿಷ್ಟರಿಗೆ ಶೇ 75 ರಿಯಾಯ್ತಿ ದರದಲ್ಲಿ ಕೈಗಾರಿಕಾ ಜಮೀನು: ಜಗದೀಶ ಶೆಟ್ಟರ್
ಬೆಂಗಳೂರು: ಪರಿಶಿಷ್ಟಜಾತಿ ಮತ್ತು ಪಂಗಡದವರಿಗೆ ಕೈಗಾರಿಕೆಗಳನ್ನು ಸ್ಥಾಪಿಸಲು ಜಮೀನು ಅಥವಾ ಕೈಗಾರಿಕಾ ಶೆಡ್ಗಳನ್ನು ಶೇ 75 ರಷ್ಟು ರಿಯಾಯ್ತಿ ದರದಲ್ಲಿ ಹಂಚಿಕೆ ಮಾಡಲಾಗುವುದು ಎಂದು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಈಗ ಶೇ 50 ರಷ್ಟು ರಿಯಾಯ್ತಿ ದರದಲ್ಲಿ ಜಮೀನು ಮತ್ತು ಕೈಗಾರಿಕಾ ಶೆಡ್ಗಳನ್ನು ಹಂಚಿಕೆ ಮಾಡಲಾಗುತ್ತಿದೆ. ರಿಯಾಯ್ತಿ ಪ್ರಮಾಣವನ್ನು ಶೇ 75 ಕ್ಕೆ ಹೆಚ್ಚಿಸಲು ಮುಖ್ಯಮಂತ್ರಿಯವರು ಒಪ್ಪಿಕೊಂಡಿದ್ದಾರೆ ಎಂದು ಅವರು ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ನ …
Read More »ಕೋವಿಡ್ ಸಂದರ್ಭದಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ: ಎಚ್.ಕೆ. ಪಾಟೀಲ
ಬೆಂಗಳೂರು: ಕೋವಿಡ್-19 ಸಂದರ್ಭದಲ್ಲಿ ‘ನಂಬರ್ 1 ಭ್ರಷ್ಟ ರಾಜ್ಯ’ ಎಂಬ ಅಪಕೀರ್ತಿಗೆ ಕರ್ನಾಟಕ ಒಳಗಾಗಿದೆ. ಶೇ 63 ರಷ್ಟು ಜನ ಸರ್ಕಾರಿ ಸೇವೆಗೆ ಲಂಚ ನೀಡಬೇಕಾಗಿ ಬಂತು ಎಂದು ಸಮೀಕ್ಷೆಯೊಂದರಿಂದ ಬಯಲಿಗೆ ಬಂದಿದೆ ಎಂದು ಕಾಂಗ್ರೆಸ್ನ ಹಿರಿಯ ಶಾಸಕ ಎಚ್.ಕೆ.ಪಾಟೀಲ ವಿಧಾನಸಭೆಯಲ್ಲಿ ಹೇಳಿದರು. ರಾಜ್ಯಪಾಲರ ವಂದನಾ ನಿರ್ಣಯದ ಮೇಲೆ ಮಾತನಾಡಿದ ಪಾಟೀಲ, ಒಂದು ವರ್ಷದ ಹಿಂದೆ ಸರ್ಕಾರದಲ್ಲಿ ಭ್ರಷ್ಟಾಚಾರ ಇದೆ ಎನ್ನುವವರ ಸಂಖ್ಯೆ ಶೇ 43 ಇತ್ತು. ಕೇವಲ ಒಂದು …
Read More »ಎತ್ತಿನಹೊಳೆ ಯೋಜನೆಗೆ ₹ 7,721 ಕೋಟಿ ವೆಚ್ಚ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ 2020ರ ಡಿಸೆಂಬರ್ ಅಂತ್ಯದವರೆಗೆ ₹ 7,721.65 ಕೋಟಿ ವೆಚ್ಚ ಮಾಡಲಾಗಿದೆ ಎಂದು ಗೃಹ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಗುರುವಾರ ವಿಧಾನ ಪರಿಷತ್ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ವೈ.ಎ. ನಾರಾಯಣಸ್ವಾಮಿ ಪ್ರಶ್ನೆಗೆ ಜಲ ಸಂಪನ್ಮೂಲ ಸಚಿವರ ಪರವಾಗಿ ಉತ್ತರ ನೀಡಿದ ಅವರು, ‘2023ಕ್ಕೆ ಕಾಮಗಾರಿ ಪೂರ್ಣಗೊಳಿಸುವ ಗುರಿ ಇದೆ. ಕೆಲವು ಸ್ಥಳಗಳಲ್ಲಿ ರೈತರ ಅಸಹಕಾರದಿಂದ ಭೂಸ್ವಾಧೀನ ಪ್ರಕ್ರಿಯೆ …
Read More »ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ: ಬಸವರಾಜ ಹೊರಟ್ಟಿ
ಬೆಂಗಳೂರು: ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ. ನಮ್ಮ ಪಕ್ಷ ತೀರ್ಮಾನ ಮಾಡಿದೆ ಎಂದು ಜೆಡಿಎಸ್ನ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ವಿಧಾನಪರಿಷತ್ ಕಲಾಪ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ಫೆ. 8ರಿಂದ 19ರವರೆಗೆ ಮೂರು ದಿನಗಳ ಕಾಲ ವಿಧಾನಪರಿಷತ್ ಕಲಾಪ ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು. ಕಾರ್ಯಕಲಾಪ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಬೇಕಿದೆ. ಜೊತೆಗೆ ಸಭಾಪತಿ ಚುನಾವಣೆ ಪ್ರಕ್ರಿಯೆ ಕೂಡ ನಡೆಯಬೇಕಿದೆ. …
Read More »ಉಪಚುನಾವಣೆಯಲ್ಲೂ ಗೆಲುವು ನಮ್ಮದೇ : ಮತ್ತೊಮ್ಮೆ ಚಾಲೆಂಜ್ ಹಾಕಿದ ಸಿಎಂ
ಬೆಂಗಳೂರು,ಫೆ.5- ಬೆಂಗೂರು,ಫೆ.5- ಮುಂಬರುವ ಎರಡು ವಿಧಾನಸಭಾ ಕ್ಷೇತ್ರ ಹಾಗೂ ಒಂದು ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲೂ ಬಿಜೆಪಿ ಗೆಲ್ಲಲಿದೆ. ಇದನ್ನು ಇದಂದೇ ಬರೆದಿಟ್ಟುಕೊಳ್ಳಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸವಾಲು ಹಾಕಿದರು. ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದೇ ಗೆಲ್ಲುತ್ತದೆ. ಯಾವುದೇ ಕಾರಣಕ್ಕೂ ಕಾಂಗ್ರೆಸಿಗರು ಗೆಲ್ಲುವುದಿಲ್ಲ. ಇದನ್ನು ಈ ಸದನದಲ್ಲಿ ನಾನು ಹೇಳುತ್ತೇನೆ ಎಂದರು. ಜನರ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಮುಂದೆ ಯಾವ ಚುನಾವಣೆಯನ್ನು …
Read More »k.p.c.c. ಸಾಮಾಜಿಕ ಜಾಲತಾಣ ಮುಖ್ಯಸ್ಥರಾಗಿ ಬಿ.ಆರ್.ನಾಯ್ಡು ನೇಮಕ
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರಾಗಿ ಯುವ ಮುಖಂಡ ಬಿ.ಆರ್.ನಾಯ್ಡು ನೇಮಕಗೊಂಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಕರ್ನಾಟಕ ರಾಜ್ಯದ ಸಾಮಾಜಿಕ ಜಾಲತಾಣದ ಜವಾಬ್ದಾರಿಯನ್ನು ಬಿ.ಆರ್.ನಾಯ್ಡು ಅವರಿಗೆ ವಹಿಸಿದ್ದಾರೆ. ಈ ವರೆಗೆ ನಟರಾಜ ಗೌಡ ಈ ಹುದ್ದೆಯನ್ನು ನಿರ್ವಹಿಸುತ್ತಿದ್ದರು. ಇದೀಗ ಇವರನ್ನು ನೇಮಕ ಮಾಡಲಾಗಿದೆ.
Read More »ಅಸೆಂಬ್ಲಿ ನಡೆಸೋದು ಬೇಡ ನಡೀರಿ, ಎಲ್ಲರೂ ಪಿಕ್ನಿಕ್ಗೆ ಹೋಗೋಣ: ಸಿದ್ದರಾಮಯ್ಯ
ಬೆಂಗಳೂರು: ಕಲಾಪ ನಡೆಸೋದು ಬೇಡ ನಡೀರಿ, ಎಲ್ಲರೂ ಪಿಕ್ನಿಕ್ಗೆ ಹೋಗೋಣ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನಸಭಾ ಕಲಾಪದ ಸಂದರ್ಭದಲ್ಲಿ ಸಚಿವರು ಹಾಗೂ ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಗರಂ ಆದ ಸಿದ್ದರಾಮಯ್ಯ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೀತಿದೆ. ಇಂತಹ ಸಂದರ್ಭದಲ್ಲಿ ಸಚಿವರು, ಅಧಿಕಾರಿಗಳು ಇರಬೇಕು. ಇವರು ಇಲ್ಲದೆ ಚರ್ಚೆ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಸಿದ್ದರಾಮಯ್ಯ ಹೀಗಂದ ಕೂಡಲೇ ಡಿಸಿಎಂ ಗೋವಿಂದ ಕಾರಜೋಳ ಎದ್ದು ನಿಂತು …
Read More »ಕೋರ್ಟ್ ಆವರಣದಲ್ಲಿ ಸಾಹಿತಿ ಕೆ.ಎಸ್ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ
ಬೆಂಗಳೂರು, : ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆನ್ನಲಾದ ಚಿಂತಕ, ಹಿರಿಯ ಸಾಹಿತಿ ಕೆ.ಎಸ್ ಭಗವಾನ್ ಅವರ ಮುಖಕ್ಕೆ ಬಿಜೆಪಿ ಕಾರ್ಯಕರ್ತೆ, ವಕೀಲೆಯೊಬ್ಬರು ಮಸಿ ಬಳಿದ ಘಟನೆ ನಗರದ 2ನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಇಂದು ಮದ್ಯಾಹ್ನ ನಡೆದಿದೆ. ವಕೀಲೆ ಮೀರಾ ರಾಘವೇಂದ್ರ ಅವರು ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದು, ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಈ ಕೃತ್ಯ ಎಸಗಲಾಗಿದೆ ಎಂದು …
Read More »ಸಾಹಿತಿಗಳು, ನಟ-ನಟಿಯವರು ರೈತರ ಪ್ರತಿಭಟನೆ ಬೆಂಬಲಿಸಬೇಕು: ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರೈತರ ಪ್ರತಿಭಟನೆಗೆ ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ನಟ-ನಟಿಯರು ಬೆಂಬಲಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ರೈತರ ಪರವಾಗಿ ಬೆಂಬಲ ನೀಡುವಂತೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದೇಶಾದ್ಯಂತ ರೈತರು ನಡೆಸುತ್ತಿರುವ ಹೋರಾಟ ಕೇವಲ ರೈತ ಸಂಘಟನೆಗಳು ಇಲ್ಲವೇ ರಾಜಕೀಯ ಪಕ್ಷಗಳದ್ದಲ್ಲ. ಈ ಮಣ್ಣಿನ ಎಲ್ಲ ಸಾಹಿತಿಗಳು, ಕಲಾವಿದರು ವಿಶೇಷವಾಗಿ ಸಿನೆಮಾ ನಟ-ನಟಿಯರು ಬೀದಿಗಿಳಿದು ಹೋರಾಟ ನಿರತ ರೈತರನ್ನು ಬೆಂಬಲಿಸಬೇಕು. ನಾವೆಲ್ಲರೂ ರೈತರು ಬೆಳೆದ …
Read More »