Breaking News

ಬೆಂಗಳೂರು

65 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ದೇವಸ್ಥಾನಗಳಲ್ಲಿ ನೇರ ದರ್ಶನ ವ್ಯವಸ್ಥೆ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು : ತಿರುಪತಿ – ತಿರುಮಲದ ಮಾದರಿಯಂತೆ ಇನ್ನು ಮುಂದೆ ರಾಜ್ಯದ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ 65 ವರ್ಷಕ್ಕಿಂತ ಮೇಲ್ಪಟ್ಟ ನಾಗರೀಕರು ಸರತಿಯಲ್ಲಿ ನಿಂತು ದೇವರ ದರ್ಶನ ಪಡೆಯುವ ಅಗತ್ಯವಿಲ್ಲ. ನೇರವಾಗಿ ದೇವರ ದರ್ಶನ ಪಡೆಯಲು ಅನುಕೂಲವಾಗುವಂತೆ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಹಿರಿಯ ನಾಗರೀಕರ ಬಹುದಿನಗಳ ಬೇಡಿಕೆಯಂತೆ 65 ವರ್ಷಕ್ಕಿಂತ ಮೇಲ್ಪಟ್ಟವರು ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ ನೇರ ದರ್ಶನಕ್ಕೆ …

Read More »

ನಿಧಾನವಾಗಿ ಚುರುಕುಗೊಂಡ ಮುಂಗಾರು; ರಾಜ್ಯದ ಹಲವೆಡೆ ಮಳೆ

ಬೆಂಗಳೂರು : ಆಕಾಶದತ್ತ ಮುಖ ಮಾಡಿ ಕುಳಿತಿದ್ದ ರೈತರ ಮುಖದಲ್ಲೀದ ಸಂತಸ ಮೂಡಿದೆ. ನಿಧಾನವಾಗಿ ಮುಂಗಾರು ಚುರುಕುಗೊಳ್ಳುತ್ತಿದೆ. ರಾಜ್ಯದ ಹಲವೆಡೆ ಬಿರುಸಾಗಿ ಮಳೆಯಾಗುತ್ತಿದೆ. ಬಿಪೊರ್‌ಜಾಯ್ ಚಂಡಮಾರುತವು ತೇವಾಂಶ ಭರಿತಮೋಡಗಳನ್ನು ಸೆಳೆದುಕೊಂಡಿದ್ದು ದುರ್ಬಲಗೊಂಡಿದ್ದ ಮುಂಗಾರು ಮಾರುತಗಳು ಈಗ ರಾಜ್ಯಾದ್ಯಂತ ಆವರಿಸುತ್ತಿವೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಾರುಗಳು ತುಸು ಪ್ರಬಲಗೊಂಡಿದ್ದು ಮೋಡ ಕವಿದ ವಾತಾವರಣದೊಂದಿಗೆ ಅಗಾಗ್ಗೆ ಮಳೆಯಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ಮುಂಗಾರು ಇನ್ನಷ್ಟು ಮುನ್ನಡೆಯಲು ಪೂರಕ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ಉತ್ತರ ಒಳನಾಡಿಗೂ …

Read More »

ಪಿಎಸ್‌ಐ ನೇಮಕಾತಿ ಅಕ್ರಮದ 52 ಆರೋಪಿ ಅಭ್ಯರ್ಥಿಗಳು ಡಿಬಾರ್ : ಉಳಿದ ಅಭ್ಯರ್ಥಿಗಳಿಗೆ ಹೊಸ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿದ್ದ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಹಗರಣದ 52 ಜನ ಆರೋಪಿತ ಅಭ್ಯರ್ಥಿಗಳನ್ನು ಪರೀಕ್ಷೆಯಿಂದ ಶಾಶ್ವತವಾಗಿ ಡಿಬಾರ್ ಮಾಡಿ ಪೊಲೀಸ್ ನೇಮಕಾತಿ ವಿಭಾಗ ಮಂಗಳವಾರ ಆದೇಶ ಪ್ರಕಟಿಸಿದೆ. ಆದ್ದರಿಂದ ಉಳಿದ ಅಭ್ಯರ್ಥಿಗಳಿಗೆ ನೌಕರಿ ಸಿಗುವ ವಿಶ್ವಾಸ ಮೂಡಿದ್ದು, ಪ್ರಕರಣದ ತೀರ್ಪಿನ ಮೇಲೆ ಅವಲಂಬನೆಯಾಗಲಿದೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ನಡೆದಿದ್ದ ಅಕ್ರಮದಲ್ಲಿ ಭಾಗಿಯಾದ ಆರೋಪಿಗಳ ವಿರುದ್ಧ ತನಿಖೆ ನಡೆಸಿದ್ದ ಸಿಐಡಿ ಅಧಿಕಾರಿಗಳು 52 …

Read More »

ಆಸ್ಪತ್ರೆಯಲ್ಲಿರುವ ಪತ್ನಿ ಆರೋಗ್ಯ ವಿಚಾರಿಸಿ, ದಿಲ್ಲಿಗೆ ಪ್ರಯಾಣ ಬೆಳೆಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪತ್ನಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿರುವ ಹಿನ್ನೆಲೆ ಅವರ ಆರೋಗ್ಯ ವಿಚಾರಿಸಿದ ಬಳಿಕ ಸಿಎಂ ಸಿದ್ದರಾಮಯ್ಯ ದೆಹಲಿ ಪ್ರಯಾಣ ಬೆಳೆಸಿದ್ದಾರೆ. ಪಕ್ಷದ ಹೈಕಮಾಂಡ್‌ ನಾಯಕರ ಭೇಟಿಗಾಗಿ ಸಿದ್ದರಾಮಯ್ಯ ನಿನ್ನೆಯೇ ತೆರಳಬೇಕಿತ್ತು. ಆದರೆ ನಿನ್ನೆ ವಿವಿಧ ಕಾರ್ಯಕ್ರಮ ಎದುರಾದ ಹಿನ್ನೆಲೆ ಇಂದಿಗೆ ಮುಂದೂಡಿದ್ದರು. ಬೆಳಗ್ಗೆ ಪ್ರಯಾಣ ಬೆಳೆಸಬೇಕಿತ್ತು. ಆದರೆ ತೀವ್ರ ಜ್ವರದ ಕಾರಣ ನಿನ್ನೆ ರಾತ್ರಿ ಸಿಎಂ ಪತ್ನಿ ಪಾರ್ವತಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪಾರ್ವತಿ ಸಿದ್ದರಾಮಯ್ಯ …

Read More »

ನೀರು ಬಿಡುವ ವಿಚಾರವಾಗಿ ಮಹಾರಾಷ್ಟ್ರ ಸಿಎಂ ಜತೆ ಮಾತನಾಡುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ನೀರು ಬಿಡುವುದಕ್ಕೆ ರೈತರಿಂದ ವ್ಯಕ್ತವಾಗಿರುವ ವಿರೋಧ ವಿಚಾರವಾಗಿ ಅಲ್ಲಿನ ಸರ್ಕಾರದ ಜತೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕಕ್ಕೆ ನೀರು ಬಿಡಲು ಮಹಾರಾಷ್ಟ್ರ ರೈತರ ವಿರೋಧ ವಿಚಾರ ಕೇಳಿದ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ಮಹಾರಾಷ್ಟ್ರದ ರೈತರ ಜೊತೆ ಮಾತನಾಡೋಕೆ ಆಗುತ್ತಾ? ಮಹಾರಾಷ್ಟ್ರ ಸಿಎಂ ಜೊತೆ ಮಾತನಾಡುತ್ತೇನೆ ಎಂದರು. ಇದೇ ವೇಳೆ, ಮಹದಾಯಿ ವಿಷಯದಲ್ಲಿ ಗೋವಾ …

Read More »

ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಗೆ ಸ್ವತಹ ತಾವೇ ಬೆಟ್ಟಿ ನೀಡಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದ ಸತೀಶ್ ಜಾರಕಿಹೊಳಿಯವರು

ದಿನಾಂಕ 17-06-2023 ರಂದು ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು ಬೆಂಗಳೂರಿನ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಗೆ ಸ್ವತಹ ತಾವೇ ಬೆಟ್ಟಿ ನೀಡಿ ಶಿಕ್ಷಕರ ಸಮಸ್ಯೆಗಳ ಬಗ್ಗೆ ವಿಚಾರಿಸಿದರು ಈ ಸಂದರ್ಭದಲ್ಲಿ ಅವರ ಬೆಂಬಲಿಗರಾದ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯ ಎಸ್ ಟಿ ಅಧ್ಯಕ್ಷರಾದ ಶ್ರೀ ಬಾಳೇಶ ದಾಸನಟ್ಟಿ. ಯಮಕನಮರಡಿ ಎಸ್ ಟಿ …

Read More »

GST ಕೌನ್ಸಿಲ್‌ ಸದಸ್ಯರಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ನೇಮಕ

ಬೆಂಗಳೂರು : ಜಿಎಸ್‌ಟಿ ಕೌನ್ಸಿಲ್​ಗೆ ರಾಜ್ಯ ಸರ್ಕಾರದ ಪರವಾಗಿ ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 2013 ರಿಂದ 2018ರವರೆಗೂ ಕೃಷ್ಣಭೈರೇಗೌಡ ಕೌನ್ಸಿಲ್‌ನ ಸದಸ್ಯರಾಗಿ ಕೆಲಸ ಮಾಡಿದ್ದರು. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರದಲ್ಲೂ ಸದಸ್ಯರಾಗಿದ್ದರು. ಇದೇ ಅನುಭವದ ಆಧಾರದ ಮೇಲೆ ಮತ್ತೊಮ್ಮೆ ಕೃಷ್ಣಭೈರೇಗೌಡರನ್ನೇ ಜಿಎಸ್‌ಟಿ ಕೌನ್ಸಿಲ್‌ಗೆ ನಾಮನಿರ್ದೇಶನ ಮಾಡಲಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಸವರಾಜ ಬೊಮ್ಮಾಯಿ ಸದಸ್ಯರಾಗಿದ್ದರು. …

Read More »

ಇಂಧನ ಸಚಿವರ ಹೇಳಿಕೆ ಆಶ್ಚರ್ಯ ತಂದಿದೆ: ಎಲ್ಲರಿಗೂ 200 ಯೂನಿಟ್ ವಿದ್ಯುತ್ ಕೊಡಬೇಕೆಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಗ್ರಹ

ಬೆಂಗಳೂರು: ”ಇಂಧನ ಸಚಿವ ಕೆ‌ ಜೆ ಜಾರ್ಜ್ ಹೇಳಿಕೆ ಬಹಳ ಆಶ್ಚರ್ಯ ಉಂಟುಮಾಡಿದೆ” ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ಹೊಸದಾಗಿ ಮನೆ ಕಟ್ಟಿದವರು ಹಾಗೂ ಹೊಸ ಬಾಡಿಗೆದಾರರಿಗೆ 58 ಯೂನಿಟ್ ಉಚಿತ ಅಂತ ಹೇಳಿದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವೆಂದು ಹೇಳಿದ್ದಾರೆ. ನೀವು ಕೊಟ್ಟಿರುವ ಭರವಸೆ ಹಿನ್ನೆಲೆಯಲ್ಲಿ ಜನರು ನಿಮಗೆ ವೋಟ್ ಕೊಟ್ಟಿದ್ದಾರೆ. …

Read More »

ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಇಂದು ಚಾಲನೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಐದು ಗ್ಯಾರಂಟಿಗಳಲ್ಲೊಂದಾದ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಇಂದು ಚಾಲನೆ ಸಿಗಲಿದೆ.‌ ವಿಧಾನಸೌಧದ ಮುಂಭಾಗ ಭಾನುವಾರ ಬೆಳಗ್ಗೆ 12 ಗಂಟೆಗೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿಯಾಗಿ ಚಾಲನೆ ನೀಡಲಿದ್ದಾರೆ. ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಶಕ್ತಿ ಯೋಜನೆಗೆ ಭಾನುವಾರ (ಜೂ. 11) ಚಾಲನೆ ಸಿಗಲಿದೆ. ಐದು ಗ್ಯಾರಂಟಿಗಳ ಪೈಕಿ ಮೊದಲನೆಯದಾಗಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ …

Read More »

ಇವರು ಲಿಂಗಾಯತ ಸಮುದಾಯ ಮುಗಿಸಬೇಕು ಎಂದುಕೊಂಡಿದ್ದಾರೆ: ಬಿಜೆಪಿ ಪ್ರಬಲ ನಾಯಕನ ಹೇಳಿಕೆ

ಬೆಂಗಳೂರು, ಏಪ್ರಿಲ್‌ 20: ಜಗದೀಶ್‌ ಶೆಟ್ಟರ್‌ ಸೇರಿದಂತೆ ಬಿಜೆಪಿಯ ಹಲವು ಪ್ರಬಲ ಲಿಂಗಾಯತ ನಾಯಕರಿಗೆ ಬಿಜೆಪಿ ಟಿಕೆಟ್‌ ನೀಡದ ಬೆನ್ನಲ್ಲೇ ಲಿಂಗಾಯತ ಸಮುದಾಯದ ಬಿಜೆಪಿಯಲ್ಲಿರುವ ಹಲವು ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದು ಕರ್ನಾಟಕದ ಬಹುದೊಡ್ಡ ಮತದಾರ ಸಮುದಾಯವಾದ ಯಾವುದೇ ಪಕ್ಷವಾದರೂ ಅದರಲ್ಲೂ ಬಿಜೆಪಿಗೆ ಮುಳುವಾಗಬಹುದು ಎನ್ನಲಾಗಿದೆ.   ಈಗಾಗಲೇ ಕರ್ನಾಟಕದ ಬಿಜೆಪಿ ಮುಖವೇ ಆಗಿದ್ದ ಬಿಎಸ್‌ ಯಡಿಯೂರಪ್ಪ ಅವರನ್ನು ರಾಜಕೀಯ ನಿವೃತ್ತಿಗೊಳಿಸಿದ್ದು, ಲಿಂಗಾಯತ ಸಮುದಾಯಕ್ಕೆ ನುಂಗಲಾರದ ತುತ್ತಾಗಿದೆ. ಇದರಿಂದ ಅನೇಕ …

Read More »