ಬೆಂಗಳೂರು,ಡಿ.16- ವಿಧಾನಪರಿಷತ್ನಲ್ಲಿ ನಿನ್ನೆ ನಡೆದ ಕೋಲಾಹಲದ ಹಿನ್ನೆಲೆಯಲ್ಲಿ ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ ರಾಜೀನಾಮೆ ನೀಡಲು ಮುಂದಾಗಿದ್ದರಾದರೂ ಕಾಂಗ್ರೆಸ್ ಅವರನ್ನು ತಡೆದಿದೆ. ಸಭಾಪತಿ ಪ್ರತಾಪ್ಚಂದ್ರ ಶೆಟ್ಟಿ ಅವರು ಇಷ್ಟೆಲ್ಲಾ ರಂಪಾಟವಾದ ಮೇಲೂ ಹುದ್ದೆಯಲ್ಲಿ ಮುಂದುವರೆದರೆ ತಾವು ಅಧಿಕಾರಕ್ಕೆ ಅಂಟಿಕೊಂಡವರು ಎಂಬ ತಪ್ಪು ಸಂದೇಶ ರವಾನೆಯಾಗುತ್ತದೆ. ಸಭಾಪತಿ ಹುದ್ದೆಗೆ ಅದು ಘನತೆ ತರುವುದಿಲ್ಲ. ಹಾಗಾಗಿ ನಾನು ರಾಜೀನಾಮೆ ನೀಡುತ್ತೇನೆ ಎಂದು ಅವಿಶ್ವಾಸ ಮಂಡನೆಯಾದ ದಿನದಿಂದಲೂ ಆಂತರಿಕವಾಗಿ ಹೇಳುತ್ತಲೇ ಬಂದಿದ್ದಾರೆ. ಆದರೆ ಅದಕ್ಕೆ ಪ್ರತಿಪಕ್ಷದ …
Read More »ಗೋಹತ್ಯೆ ನಿಷೇಧ ಮಸೂದೆಗೆ ಸುಗ್ರೀವಾಜ್ಞೆ ಹೊರಡಿಸಲು ಬಿಜೆಪಿ ಸಿದ್ಧತೆ..!
ಬೆಂಗಳೂರು,ಡಿ.16- ಗೋಹತ್ಯೆ ನಿಷೇಧ ಮಸೂದೆಗೆ ವಿಧಾನಪರಿಷತ್ನಲ್ಲಿ ಅಂಗೀಕಾರ ಪಡೆಯುವಲ್ಲಿ ವಿಫಲವಾಗಿರುವ ಕಾರಣ ಸುಗ್ರೀವಾಜ್ಞೆ ಮೂಲಕ ಮಸೂದೆಯನ್ನು ಜಾರಿಗೊಳಿಸಲು ಆಡಳಿತಾರೂಢ ಬಿಜೆಪಿ ಮುಂದಾಗಿದೆ. ವಿಧಾನಪರಿಷತ್ತಿನಲ್ಲಿ ವಿಧೇಯಕ ಅಂಗೀಕಾರಕ್ಕೆ ಅಡ್ಡಿ ಉಂಟಾದ ಕಾರಣಕ್ಕೆ ಸುಗ್ರೀವಾಜ್ಞೆ ಮೂಲಕ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಹಸು, ಕರು ಮತ್ತು ಎಮ್ಮೆ ಸೇರಿದಂತೆ ದನಗಳನ್ನು ಅಕ್ರಮವಾಗಿ ಮಾರಾಟ ಮಾಡುವುದು, ಖರೀದಿಸುವುದು ಮತ್ತು ಸಾಗಿಸುವುದನ್ನು ನಿಷೇಧಿಸುವ ಮಸೂದೆಯನ್ನು ಕಳೆದ ವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿತ್ತು. ವಿಧಾನಸಭೆಯಲ್ಲಿ ಅಂಗೀಕಾರವಾಗಿರುವ ಗೋಹತ್ಯೆ …
Read More »ಬೆಳಗಾವಿಯ ಸಾಹುಕಾರ್ ಗೆ ಶಾಕ್ ನೀಡಿದ ಸಿಎಂ ಬಿಎಸ್ ವೈ
ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಅನುಪಸ್ಥಿತಿಯಲ್ಲಿ ಅವರ ಇಲಾಖೆಗೆ ಸೇರಿದ ಕೆಲ ಮಹತ್ವದ ಪ್ರಸ್ತಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ಅನುಮೋದನೆ ನೀಡಿದ್ದಾರೆ. ಬೆಳಗಾವಿ ಸಾಹುಕಾರ ಅವರ ರಾಜಕೀಯ ವೇಗಕ್ಕೆ ಕಡಿವಾಣ ಹಾಕಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಂದೇಶ ರವಾನಿಸುವ ಸಲುವಾಗಿಯೇ ಆ ಕೆಲಸ ನಿರ್ವಹಿಸಿದರಾ ಎಂಬುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆ ಹುಟ್ಟು ಹಾಕಿದೆ. ಡಿಸೆಂಬರ್ 2, ಬೆಳಗಾವಿಯಲ್ಲಿ ಬಿಜೆಪಿಯ ಕಾರ್ಯಕಾರಣಿ ಸಭೆ ನಡೆದಿತ್ತು. ರಮೇಶ ಜಾರಕಿಹೊಳಿ ಸಭೆಯಲ್ಲಿ …
Read More »ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ
ಬೆಂಗಳೂರು, – ಕೊರೊನಾ ಎರಡನೇ ಅಲೆಯ ಆತಂಕಕ್ಕೆ ಬೆಚ್ಚಿರುವ ಬಿಬಿಎಂಪಿ ಮತ್ತು ಸರ್ಕಾರ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ನಿಷೇಧಕ್ಕೆ ಮುಂದಾಗಿದೆ. ಎಂ.ಜಿ.ರೋಡ್, ಚರ್ಚ್ಸ್ಟ್ರೀಟ್, ಇಂದಿರಾನಗರ, ಕೋರಮಂಗಲ ಮುಂತಾದ ಕಡೆಗಳಲ್ಲಿ ಸಾರ್ವಜನಿಕವಾಗಿ ಹೊಸ ವರ್ಷಾಚರಣೆ ಮಾಡುವಂತಿಲ್ಲ. ಸಾರ್ವಜನಿಕವಾಗಿ ಹೊಸ ವರ್ಷಾಚಣೆ ಮಾಡಿದರೆ ದಂಡ ವಿಧಿಸಲು ನಿರ್ಧರಿಸಿದೆ. ಆ ಕಳೆದ ಒಂದು ವಾರದ ಹಿಂದೆ ಬಿಬಿಎಂಪಿಯಿಂದ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೊಸ ವರ್ಷಾಚರಣೆಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಸಿದ್ದಮಾಡಿದೆ. ನಿಯಮಗಳನ್ನು …
Read More »ಆಸ್ತಿ ತೆರಿಗೆ ಹೆಚ್ಚಳಕ್ಕೆ ಸದ್ದಿಲ್ಲದೆ ತಯಾರಿ
ಬೆಂಗಳೂರು, ಡಿ.- ಆಸ್ತಿ ತೆರಿಗೆ ಹೆಚ್ಚಳಕ್ಕೆ ಸದ್ದಿಲ್ಲದೆ ತಯಾರಿ ನಡೆದಿದೆ. ವಸತಿ ಕಟ್ಟಡಗಳಿಗೆ ಶೇ.25 ಹಾಗೂ ವಸತಿಯೇತರ ಕಟ್ಟಡಗಳಿಗೆ ಶೇ.30ರಷ್ಟು ಆಸ್ತಿ ತೆರಿಗೆ ಹೆಚ್ಚಳಕ್ಕೆ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಲಯವಾರು ಗೈಡ್ಲೈನ್ಸ್ ಆಧಾರದಲ್ಲಿ ಆಸ್ತಿ ತೆರಿಗೆ ವಿಧಿಸುವ ಕುರಿತಂತೆ ಟಿಪ್ಪಣಿ ತಯಾರಿಸಿ ನೀಡುವಂತೆ ಗೌರವ್ ಗುಪ್ತ ಆದೇಶ ನೀಡಿದ್ದು ಜನವರಿಯಿಂದ ಬೆಂಗಳೂರಿನ ನಾಗರಿಕರು ಹೆಚ್ಚುವರಿ ಆಸ್ತಿ ತೆರಿಗೆ ಪಾವತಿಸಬೇಕಾಗುವುದು ಬಹುತೇಕ ಖಚಿತಪಟ್ಟಿದೆ. …
Read More »ಸಭಾಪತಿ ರಾಜ್ಯಪಾಲರ ಮಾತು ಕೇಳಬೇಕೆಂದಿಲ್ಲ: ಬಿ.ಕೆ. ಹರಿಪ್ರಸಾದ್
ಬೆಂಗಳೂರು: ಸದನದಲ್ಲಿ ನಡೆದ ಘಟನೆ ಸರಿಯಲ್ಲ. ಈ ರೀತಿಯಾಗಿ ನಡೆಯಬಾರದಿತ್ತು ಅಂತಾ ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ. ವಿಧಾನ ಪರಿಷತ್ ನ ಕಲಾಪದಲ್ಲಿ ನಡೆದ ಗಲಾಟೆ, ನೂಕಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಭಾಪತಿಗಳು ಸದನಕ್ಕೆ ಬರುವ ಮೊದಲೇ ಬಾಗಿಲು ಹಾಕಿದ್ದು, ಕಾನೂನು ಬಾಹಿರ. ಸಭಾಪತಿಗಳಿಗೆ ಅಪಮಾನ ಇತಿಹಾಸದಲ್ಲಿಯೇ ಇಲ್ಲ. ಎಂದರು. ಸಭಾಪತಿ ಇರುವಾಗಲೇ ಉಪ ಸಭಾಪತಿ ಪೀಠ ಅಲಂಕರಿಸಿರುವುದು ತಪ್ಪು. ರಾಜಭವನದ ಗೌರವ ಹಾಳು ಮಾಡಿದ್ದಾರೆ. ರಾಜ್ಯಪಾಲರು ನಿರ್ದೇಶನ …
Read More »ಬಿಜೆಪಿಯವರೇ ನಿಯಮಾವಳಿ ಪಾಲಿಸದೇ ಗೂಂಡಾಗಿರಿ ಪ್ರದರ್ಶಿಸಿದ್ದಾರೆ: ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಕಾಂಗ್ರೆಸ್ ಗುಂಡಾವರ್ತನೆ ತೋರಿಲ್ಲ. ಬಿಜೆಪಿಯವರೇ ನಿಯಮಾವಳಿ ಪಾಲಿಸದೇ ಅವಿಶ್ವಾಸ ನಿರ್ಣಯಕ್ಕೆ ಮುಂದಾಗಿ ಗೂಂಡಾಗಿರಿಯನ್ನು ಸದನದಲ್ಲಿ ಪ್ರದರ್ಶಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ದ ಕಿಡಿ ಕಾರಿದ್ದಾರೆ. ವಿಧಾನಪರಿಷತ್ ನಲ್ಲಿನ ಗಲಾಟೆಯ ಕುರಿತಂತೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಇಂದಿನ ವಿಧಾನ ಪರಿಷತ್ ನಲ್ಲಿನ ಗಲಾಟೆಯ ಬಗ್ಗೆ ವಿಷಾದಿಸುತ್ತೇನೆ. ಆದ್ರೆ ಸಭಾಪತಿ ಇದ್ದಾಗ ಉಪಸಭಾಪತಿ ಹೇಗೆ ಬಂದ್ರು.? ಸಭಾಪತಿ ಬರುವ ಮೊದಲೇ ಉಪಸಭಾಪತಿ ಪೀಠ ಅಲಂಕಿರಿಸಿದ್ದೇಕೆ …
Read More »ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿರುವ ಘಟನೆ ನಡೆದಿದೆ.
ಬೆಂಗಳೂರು: ಇಂದು ಕರೆಯಲಾಗಿದ್ದ ವಿಧಾನ ಮಂಡಲದ ವಿಶೇಷ ಅಧಿವೇಶನದಲ್ಲಿ ಕಾಂಗ್ರೆಸ್-ಬಿಜೆಪಿ ಸದಸ್ಯರು ಕೈಕೈ ಮಿಲಾಯಿಸಿರುವ ಘಟನೆ ನಡೆದಿದೆ. ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಸಭಾಪತಿ ಕುರ್ಚಿಯಲ್ಲಿ ಉಪಸಭಾಪತಿ ಧರ್ಮೇಗೌಡ ಕುಳಿತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾಂಗ್ರೆಸ್ ಸದಸ್ಯರು ಗದ್ದಲ ಆರಂಭಿಸಿದ್ದಾರೆ. ಪರಿಷತ್ ಉಪಸಭಾಪತಿಯನ್ನು ಕುರ್ಚಿಯಿಂದ ಕೆಳಗೆಳೆದು ತಂದಿದ್ದಾರೆ. ಈ ವೇಳೆ ಬಿಜೆಪಿ ಸದಸ್ಯರು ಮಧ್ಯಪ್ರವೇಶಿಸಿದ್ದಾರೆ. ಒಂದು ಹಂತದಲ್ಲಿ ಕಾಂಗ್ರೆಸ್-ಬಿಜೆಪಿ-ಜೆಡಿಎಸ್ ಸದಸ್ಯರ ನಡುವೆ ನೂಕಾಟ-ತಳ್ಳಾಟ ನಡೆದಿದ್ದು, ಕೊರಳಪಟ್ಟಿ ಹಿಡಿದು ಎಳೆದಾಡಿಕೊಂಡಿದ್ದಾರೆ. ತಳ್ಳಾಟದ ವೇಳೆ …
Read More »ಗೋ ಹತ್ಯೆ ನಿಷೇಧ ಕಾಯ್ದೆಗೆ ಜೆಡಿಎಸ್ ವಿರೋಧ: ಹೆಚ್.ಡಿ.ದೇವೇಗೌಡ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೋಹತ್ಯೆ ನಿಷೇಧ ವಿಧೇಯಕವನ್ನು ಜಾತ್ಯಾತೀತ ಜನತಾದಳ ಪಕ್ಷವು ಸಂಪೂರ್ಣವಾಗಿ ವಿರೋಧಿಸುತ್ತದೆ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ದೇವೇಗೌಡ ಹೇಳಿದ್ದಾರೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಅವರು, 2010ರಲ್ಲಿ ಬಿಜೆಪಿ ಸರ್ಕಾರ ಈ ಕಾಯ್ದೆಯನ್ನು ತಂದಾಗ ನಾವು ವಿರೋಧಿಸಿದ್ದೆವು. ಇದೀಗ ಬಿಜೆಪಿ ಸರ್ಕಾರ ಮತ್ತೊಮ್ಮೆ ಮಸೂದೆಯನ್ನು ವಿಧಾನಮಂಡಲದಲ್ಲಿ ಮಂಡಿಸಿ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಮಾಡಲು ಹೊರಟಿದೆ. ಹೀಗಾಗಿ ಈ …
Read More »ಯಾವುದೇ ಶಾಲೆಗೆ ಮಕ್ಕಳ ಮರು ದಾಖಲಾತಿ ಕಡ್ಡಾಯ; ಸಚಿವ ಸುರೇಶ್ ಕುಮಾರ್
ಬೆಂಗಳೂರು: ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಹಾಗೂ ಕಡ್ಡಾಯ ಶಿಕ್ಷಣ ಕಾಯ್ದೆಯ ಆಶಯದಂತೆ ಮಕ್ಕಳನ್ನು ಮುಂದಿನ ತರಗತಿಗಳಿಗೆ ಮರು ದಾಖಲಾತಿ ಮಾಡುವುದು ಪೋಷಕರ ಕರ್ತವ್ಯವಾಗಿದ್ದು, ಪೋಷಕರು ತಮ್ಮ ಮಕ್ಕಳನ್ನು ಶಾಲೆಗಳಿಗೆ ದಾಖಲು ಮಾಡಲು ಮುಂದಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ರಾಜ್ಯದ ವಿವಿಧ ಖಾಸಗಿ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳೊಂದಿಗೆ ಶಾಲಾ ಮಂಡಳಿಗಳು, ರಾಜ್ಯದ ಮಕ್ಕಳ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಉಪಕ್ರಮಗಳ ಕುರಿತು …
Read More »